Homeಕರ್ನಾಟಕಮಸ್ಕಿಯಲ್ಲಿ ಮಟಮಟ ಮಧ್ಯಾಹ್ನವೇ ಕಾಂಚಾಣ ಝಣಝಣ: ಬಿಜೆಪಿ ಪರ ಪ್ರಚಾರಕ್ಕಿಳಿದ ಗಾಯಕಿ ಮಂಗ್ಲಿ

ಮಸ್ಕಿಯಲ್ಲಿ ಮಟಮಟ ಮಧ್ಯಾಹ್ನವೇ ಕಾಂಚಾಣ ಝಣಝಣ: ಬಿಜೆಪಿ ಪರ ಪ್ರಚಾರಕ್ಕಿಳಿದ ಗಾಯಕಿ ಮಂಗ್ಲಿ

- Advertisement -
- Advertisement -

ನೀವು ಇದನ್ನು ಓದಿ ಮುಗಿಸುವ ಹೊತ್ತಿಗೆ ಮಸ್ಕಿ ಕ್ಷೇತ್ರದ ವಟಗಲ್‌ನಿಂದ ಒಂದು ರೊಕ್ಕ ಹಂಚುವ ವಿಡಿಯೋ ವೈರಲ್ ಆಗಬಹುದು. ಇಂದು ವಟಗಲ್‌ನಲ್ಲಿ ವೋಟಿಗೆ ಸಾವಿರ ರೂಪಾಯಿ ಕೊಡುವ ‘ಕಾರ್ಯಕ್ರಮ’ವನ್ನು ಬಿಜೆಪಿ ಹಮ್ಮಿಕೊಂಡಿದೆ ಮತ್ತು ಬೇರೆ ಊರುಗಳಲ್ಲಿ ಇದು ನಡೆಯುತ್ತಿದೆ ಎಂಬ ವಿಷಯ ಕ್ಷೇತ್ರದಲ್ಲಿ ಹರಿದಾಡುತ್ತಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ 5-ಎ ಕಾಲುವೆ ನೀರಾವರಿ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ನಾಗರಡ್ಡೆಪ್ಪ ದೇವರಮನಿ, ‘ಹಿಂದೆಲ್ಲ ಮತದಾನದ ಹಿಂದಿನ ದಿನ ಹಣ-ಹೆಂಡ ಹಂಚಲಾಗುತ್ತಿತ್ತು. ಆದರೆ ಈಗ ಇಲ್ಲಿ ಚುನಾವಣೆಗೆ ವಾರ ಮೊದಲೇ ಮಟಮಟ ಮಧ್ಯಾಹ್ನವೇ ವೋಟಿಗೆ ಒಂದು ಸಾವಿರ ರೂಪಾಯಿ ಹಂಚಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. ವಟಗಲ್‌ನಲ್ಲಿ ಈಗಾಗಲೇ ಇದು ಶುರು ಆಗಿರಬಹುದು. ಯಾವ ಕ್ಷಣದಲ್ಲಾದರೂ ವಿಡಿಯೋಗಳು ಹೊರ ಬೀಳಬಹುದು’ ಎಂದರು.

ನಿನ್ನೆ ಬಿಜೆಪಿ ಇಲ್ಲಿನ ಮೂರು ತಾಂಡಾಗಳಲ್ಲಿ ಬಂಜಾರಾ ಸಮುದಾಯದ ಪ್ರತಿಭಾನ್ವಿತ ಗಾಯಕಿ ಮಂಗ್ಲಿ ಅವರಿಂದ ಗಾಯನ ಕಾರ್ಯಕ್ರಮ ನಡೆಸಿತು. ಬಿಜೆಪಿಯ ಸ್ಥಳೀಯ ನಾಯಕರ ಜೊತೆಗೆ ಕಲಬುರ್ಗಿ ಸಂಸದ ಉಮೇಶ ಜಾಧವ್ ಕೂಡ ಇದ್ದರು. ಕೊವಿಡ್ ಪೀಡಿತ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಕ್ವಾರಂಟೈನ್‌ನಲ್ಲಿ ಇದ್ದ ಕಾರಣ ಬಂದಿರಲಿಲ್ಲ ಅಷ್ಟೇ.

ಇನ್ನು ಮೊದಲಿಗೆ ‘ನೀರಾವರಿ ಹೋರಾಟ ಬೆಂಬಲಿಸಿ, ಪ್ರತಾಪಗೌಡರನ್ನು ಸೋಲಿಸಿ’ ಎಂಬ ಧ್ಯೇಯ ಹೊಂದಿದ್ದ ನೀರಾವರಿ ಹೋರಾಟ ಸಮಿತಿ ಈಗ ನೇರವಾಗಿ ಪ್ರಚಾರಕ್ಕೆ ಇಳಿದಿದ್ದು ಕಾಂಗ್ರೆಸ್ ಗೆಲ್ಲಿಸಿ ಎಂದು 5-ಎ ಕಾಲುವೆ ವ್ಯಾಪ್ತಿಗೆ ಬರುವ 58 ಹಳ್ಳಿಗಳಲ್ಲಿ ಪ್ರಚಾರ ಮಾಡುತ್ತಿದೆ.

‘ಈಗ ನಾವು ನೇರವಾಗಿಯೇ ಕಣಕ್ಕೆ ಧುಮುಕಿದ್ದೇವೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಹೋರಾಟದ ಸ್ಥಳಕ್ಕೆ ಬಂದು ಸ್ಪಷ್ಟ ಭರವಸೆ ನೀಡಿದ ನಂತರ ನಾವು ನೇರವಾಗಿಯೇ ಕಾಂಗ್ರೆಸ್ ಗೆಲ್ಲಿಸಿ ಎಂದು ಪ್ರಚಾರ ನಡೆಸಿದ್ದೇವೆ. ಜನ ಕೂಡ ನಮ್ಮ ಮನವಿಯನ್ನು ಬೆಂಬಲಿಸುತ್ತಿದ್ದಾರೆ’ ಎನ್ನುವ ದೇವರಮನಿಯವರು, ‘ಹಣದಿಂದಲೇ ಎಲ್ಲವನ್ನೂ ಗೆಲ್ಲುತ್ತೇವೆ ಎಂದು ಭಾವಿಸಿರುವ ಬಿಜೆಪಿಗೆ ಇಲ್ಲಿ ದೊಡ್ಡ ನಿರಾಶೆ ಕಾದಿದೆ. ಪೊಲೀಸ್ ಮತ್ತು ಆಡಳಿತಯಂತ್ರದ ರಕ್ಷಣೆ ಇರುವ ಕಾರಣ ಅವರು ಮಟಮಟ ಮಧ್ಯಾಹ್ನವೇ ಹಣ ಹಂಚುವ ಹೀನ ಕ್ರಿಯೆಗೆ ಇಳಿದಿದ್ದಾರೆ. ಇದು ಬಿಜೆಪಿಯ ಹತಾಶೆಗೆ ಸಾಕ್ಷಿಯಾಗಿದೆ’ ಎಂದರು.

ಆರಂಭದಲ್ಲಿ ಇಲ್ಲಿ ಜೋರಾಗಿಯೇ ಸಭೆಗಳನ್ನು ಮಾಡುತ್ತ, ಜಾತಿವಾರು ಸಭೆಗಳನ್ನು ಮಾಡಿ, ಸ್ಥಳೀಯ ನಾಯಕರನ್ನು ‘ಒಲಿಸಿಕೊಳ್ಳಲು’ ಯತ್ನಿಸಿದ್ದ ವಿಜಯೇಂದ್ರ ಸದ್ಯ ಕ್ಷೇತ್ರದಲ್ಲಿ ಕಾಣುತ್ತಿಲ್ಲ. ನಾಳೆ ರಾತ್ರಿಯವರೆಗೆ ಬಹಿರಂಗ ಪ್ರಚಾರ ಇರಲಿದ್ದು ನಂತರ ಇನ್ನಷ್ಟು ಹಣದ ಹೊಳೆ ಹರಿಯಲಿದೆ ಎಂದು ರೈತರು ಅನುಮಾನ ವ್ಯಕ್ತಪಡಿಸಿದ್ದಾರೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಮಸ್ಕಿ: ಬಿಜೆಪಿ ಹಣ ಹಂಚಿಕೆ ಆರೋಪದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...