Homeಕರ್ನಾಟಕಮಸ್ಕಿಯಲ್ಲಿ ಮಟಮಟ ಮಧ್ಯಾಹ್ನವೇ ಕಾಂಚಾಣ ಝಣಝಣ: ಬಿಜೆಪಿ ಪರ ಪ್ರಚಾರಕ್ಕಿಳಿದ ಗಾಯಕಿ ಮಂಗ್ಲಿ

ಮಸ್ಕಿಯಲ್ಲಿ ಮಟಮಟ ಮಧ್ಯಾಹ್ನವೇ ಕಾಂಚಾಣ ಝಣಝಣ: ಬಿಜೆಪಿ ಪರ ಪ್ರಚಾರಕ್ಕಿಳಿದ ಗಾಯಕಿ ಮಂಗ್ಲಿ

- Advertisement -
- Advertisement -

ನೀವು ಇದನ್ನು ಓದಿ ಮುಗಿಸುವ ಹೊತ್ತಿಗೆ ಮಸ್ಕಿ ಕ್ಷೇತ್ರದ ವಟಗಲ್‌ನಿಂದ ಒಂದು ರೊಕ್ಕ ಹಂಚುವ ವಿಡಿಯೋ ವೈರಲ್ ಆಗಬಹುದು. ಇಂದು ವಟಗಲ್‌ನಲ್ಲಿ ವೋಟಿಗೆ ಸಾವಿರ ರೂಪಾಯಿ ಕೊಡುವ ‘ಕಾರ್ಯಕ್ರಮ’ವನ್ನು ಬಿಜೆಪಿ ಹಮ್ಮಿಕೊಂಡಿದೆ ಮತ್ತು ಬೇರೆ ಊರುಗಳಲ್ಲಿ ಇದು ನಡೆಯುತ್ತಿದೆ ಎಂಬ ವಿಷಯ ಕ್ಷೇತ್ರದಲ್ಲಿ ಹರಿದಾಡುತ್ತಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ 5-ಎ ಕಾಲುವೆ ನೀರಾವರಿ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ನಾಗರಡ್ಡೆಪ್ಪ ದೇವರಮನಿ, ‘ಹಿಂದೆಲ್ಲ ಮತದಾನದ ಹಿಂದಿನ ದಿನ ಹಣ-ಹೆಂಡ ಹಂಚಲಾಗುತ್ತಿತ್ತು. ಆದರೆ ಈಗ ಇಲ್ಲಿ ಚುನಾವಣೆಗೆ ವಾರ ಮೊದಲೇ ಮಟಮಟ ಮಧ್ಯಾಹ್ನವೇ ವೋಟಿಗೆ ಒಂದು ಸಾವಿರ ರೂಪಾಯಿ ಹಂಚಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. ವಟಗಲ್‌ನಲ್ಲಿ ಈಗಾಗಲೇ ಇದು ಶುರು ಆಗಿರಬಹುದು. ಯಾವ ಕ್ಷಣದಲ್ಲಾದರೂ ವಿಡಿಯೋಗಳು ಹೊರ ಬೀಳಬಹುದು’ ಎಂದರು.

ನಿನ್ನೆ ಬಿಜೆಪಿ ಇಲ್ಲಿನ ಮೂರು ತಾಂಡಾಗಳಲ್ಲಿ ಬಂಜಾರಾ ಸಮುದಾಯದ ಪ್ರತಿಭಾನ್ವಿತ ಗಾಯಕಿ ಮಂಗ್ಲಿ ಅವರಿಂದ ಗಾಯನ ಕಾರ್ಯಕ್ರಮ ನಡೆಸಿತು. ಬಿಜೆಪಿಯ ಸ್ಥಳೀಯ ನಾಯಕರ ಜೊತೆಗೆ ಕಲಬುರ್ಗಿ ಸಂಸದ ಉಮೇಶ ಜಾಧವ್ ಕೂಡ ಇದ್ದರು. ಕೊವಿಡ್ ಪೀಡಿತ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಕ್ವಾರಂಟೈನ್‌ನಲ್ಲಿ ಇದ್ದ ಕಾರಣ ಬಂದಿರಲಿಲ್ಲ ಅಷ್ಟೇ.

ಇನ್ನು ಮೊದಲಿಗೆ ‘ನೀರಾವರಿ ಹೋರಾಟ ಬೆಂಬಲಿಸಿ, ಪ್ರತಾಪಗೌಡರನ್ನು ಸೋಲಿಸಿ’ ಎಂಬ ಧ್ಯೇಯ ಹೊಂದಿದ್ದ ನೀರಾವರಿ ಹೋರಾಟ ಸಮಿತಿ ಈಗ ನೇರವಾಗಿ ಪ್ರಚಾರಕ್ಕೆ ಇಳಿದಿದ್ದು ಕಾಂಗ್ರೆಸ್ ಗೆಲ್ಲಿಸಿ ಎಂದು 5-ಎ ಕಾಲುವೆ ವ್ಯಾಪ್ತಿಗೆ ಬರುವ 58 ಹಳ್ಳಿಗಳಲ್ಲಿ ಪ್ರಚಾರ ಮಾಡುತ್ತಿದೆ.

‘ಈಗ ನಾವು ನೇರವಾಗಿಯೇ ಕಣಕ್ಕೆ ಧುಮುಕಿದ್ದೇವೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಹೋರಾಟದ ಸ್ಥಳಕ್ಕೆ ಬಂದು ಸ್ಪಷ್ಟ ಭರವಸೆ ನೀಡಿದ ನಂತರ ನಾವು ನೇರವಾಗಿಯೇ ಕಾಂಗ್ರೆಸ್ ಗೆಲ್ಲಿಸಿ ಎಂದು ಪ್ರಚಾರ ನಡೆಸಿದ್ದೇವೆ. ಜನ ಕೂಡ ನಮ್ಮ ಮನವಿಯನ್ನು ಬೆಂಬಲಿಸುತ್ತಿದ್ದಾರೆ’ ಎನ್ನುವ ದೇವರಮನಿಯವರು, ‘ಹಣದಿಂದಲೇ ಎಲ್ಲವನ್ನೂ ಗೆಲ್ಲುತ್ತೇವೆ ಎಂದು ಭಾವಿಸಿರುವ ಬಿಜೆಪಿಗೆ ಇಲ್ಲಿ ದೊಡ್ಡ ನಿರಾಶೆ ಕಾದಿದೆ. ಪೊಲೀಸ್ ಮತ್ತು ಆಡಳಿತಯಂತ್ರದ ರಕ್ಷಣೆ ಇರುವ ಕಾರಣ ಅವರು ಮಟಮಟ ಮಧ್ಯಾಹ್ನವೇ ಹಣ ಹಂಚುವ ಹೀನ ಕ್ರಿಯೆಗೆ ಇಳಿದಿದ್ದಾರೆ. ಇದು ಬಿಜೆಪಿಯ ಹತಾಶೆಗೆ ಸಾಕ್ಷಿಯಾಗಿದೆ’ ಎಂದರು.

ಆರಂಭದಲ್ಲಿ ಇಲ್ಲಿ ಜೋರಾಗಿಯೇ ಸಭೆಗಳನ್ನು ಮಾಡುತ್ತ, ಜಾತಿವಾರು ಸಭೆಗಳನ್ನು ಮಾಡಿ, ಸ್ಥಳೀಯ ನಾಯಕರನ್ನು ‘ಒಲಿಸಿಕೊಳ್ಳಲು’ ಯತ್ನಿಸಿದ್ದ ವಿಜಯೇಂದ್ರ ಸದ್ಯ ಕ್ಷೇತ್ರದಲ್ಲಿ ಕಾಣುತ್ತಿಲ್ಲ. ನಾಳೆ ರಾತ್ರಿಯವರೆಗೆ ಬಹಿರಂಗ ಪ್ರಚಾರ ಇರಲಿದ್ದು ನಂತರ ಇನ್ನಷ್ಟು ಹಣದ ಹೊಳೆ ಹರಿಯಲಿದೆ ಎಂದು ರೈತರು ಅನುಮಾನ ವ್ಯಕ್ತಪಡಿಸಿದ್ದಾರೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಮಸ್ಕಿ: ಬಿಜೆಪಿ ಹಣ ಹಂಚಿಕೆ ಆರೋಪದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...