Homeಕರ್ನಾಟಕಮಸ್ಕಿಯಲ್ಲಿ ಮಟಮಟ ಮಧ್ಯಾಹ್ನವೇ ಕಾಂಚಾಣ ಝಣಝಣ: ಬಿಜೆಪಿ ಪರ ಪ್ರಚಾರಕ್ಕಿಳಿದ ಗಾಯಕಿ ಮಂಗ್ಲಿ

ಮಸ್ಕಿಯಲ್ಲಿ ಮಟಮಟ ಮಧ್ಯಾಹ್ನವೇ ಕಾಂಚಾಣ ಝಣಝಣ: ಬಿಜೆಪಿ ಪರ ಪ್ರಚಾರಕ್ಕಿಳಿದ ಗಾಯಕಿ ಮಂಗ್ಲಿ

- Advertisement -
- Advertisement -

ನೀವು ಇದನ್ನು ಓದಿ ಮುಗಿಸುವ ಹೊತ್ತಿಗೆ ಮಸ್ಕಿ ಕ್ಷೇತ್ರದ ವಟಗಲ್‌ನಿಂದ ಒಂದು ರೊಕ್ಕ ಹಂಚುವ ವಿಡಿಯೋ ವೈರಲ್ ಆಗಬಹುದು. ಇಂದು ವಟಗಲ್‌ನಲ್ಲಿ ವೋಟಿಗೆ ಸಾವಿರ ರೂಪಾಯಿ ಕೊಡುವ ‘ಕಾರ್ಯಕ್ರಮ’ವನ್ನು ಬಿಜೆಪಿ ಹಮ್ಮಿಕೊಂಡಿದೆ ಮತ್ತು ಬೇರೆ ಊರುಗಳಲ್ಲಿ ಇದು ನಡೆಯುತ್ತಿದೆ ಎಂಬ ವಿಷಯ ಕ್ಷೇತ್ರದಲ್ಲಿ ಹರಿದಾಡುತ್ತಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ 5-ಎ ಕಾಲುವೆ ನೀರಾವರಿ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ನಾಗರಡ್ಡೆಪ್ಪ ದೇವರಮನಿ, ‘ಹಿಂದೆಲ್ಲ ಮತದಾನದ ಹಿಂದಿನ ದಿನ ಹಣ-ಹೆಂಡ ಹಂಚಲಾಗುತ್ತಿತ್ತು. ಆದರೆ ಈಗ ಇಲ್ಲಿ ಚುನಾವಣೆಗೆ ವಾರ ಮೊದಲೇ ಮಟಮಟ ಮಧ್ಯಾಹ್ನವೇ ವೋಟಿಗೆ ಒಂದು ಸಾವಿರ ರೂಪಾಯಿ ಹಂಚಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. ವಟಗಲ್‌ನಲ್ಲಿ ಈಗಾಗಲೇ ಇದು ಶುರು ಆಗಿರಬಹುದು. ಯಾವ ಕ್ಷಣದಲ್ಲಾದರೂ ವಿಡಿಯೋಗಳು ಹೊರ ಬೀಳಬಹುದು’ ಎಂದರು.

ನಿನ್ನೆ ಬಿಜೆಪಿ ಇಲ್ಲಿನ ಮೂರು ತಾಂಡಾಗಳಲ್ಲಿ ಬಂಜಾರಾ ಸಮುದಾಯದ ಪ್ರತಿಭಾನ್ವಿತ ಗಾಯಕಿ ಮಂಗ್ಲಿ ಅವರಿಂದ ಗಾಯನ ಕಾರ್ಯಕ್ರಮ ನಡೆಸಿತು. ಬಿಜೆಪಿಯ ಸ್ಥಳೀಯ ನಾಯಕರ ಜೊತೆಗೆ ಕಲಬುರ್ಗಿ ಸಂಸದ ಉಮೇಶ ಜಾಧವ್ ಕೂಡ ಇದ್ದರು. ಕೊವಿಡ್ ಪೀಡಿತ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಕ್ವಾರಂಟೈನ್‌ನಲ್ಲಿ ಇದ್ದ ಕಾರಣ ಬಂದಿರಲಿಲ್ಲ ಅಷ್ಟೇ.

ಇನ್ನು ಮೊದಲಿಗೆ ‘ನೀರಾವರಿ ಹೋರಾಟ ಬೆಂಬಲಿಸಿ, ಪ್ರತಾಪಗೌಡರನ್ನು ಸೋಲಿಸಿ’ ಎಂಬ ಧ್ಯೇಯ ಹೊಂದಿದ್ದ ನೀರಾವರಿ ಹೋರಾಟ ಸಮಿತಿ ಈಗ ನೇರವಾಗಿ ಪ್ರಚಾರಕ್ಕೆ ಇಳಿದಿದ್ದು ಕಾಂಗ್ರೆಸ್ ಗೆಲ್ಲಿಸಿ ಎಂದು 5-ಎ ಕಾಲುವೆ ವ್ಯಾಪ್ತಿಗೆ ಬರುವ 58 ಹಳ್ಳಿಗಳಲ್ಲಿ ಪ್ರಚಾರ ಮಾಡುತ್ತಿದೆ.

‘ಈಗ ನಾವು ನೇರವಾಗಿಯೇ ಕಣಕ್ಕೆ ಧುಮುಕಿದ್ದೇವೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಹೋರಾಟದ ಸ್ಥಳಕ್ಕೆ ಬಂದು ಸ್ಪಷ್ಟ ಭರವಸೆ ನೀಡಿದ ನಂತರ ನಾವು ನೇರವಾಗಿಯೇ ಕಾಂಗ್ರೆಸ್ ಗೆಲ್ಲಿಸಿ ಎಂದು ಪ್ರಚಾರ ನಡೆಸಿದ್ದೇವೆ. ಜನ ಕೂಡ ನಮ್ಮ ಮನವಿಯನ್ನು ಬೆಂಬಲಿಸುತ್ತಿದ್ದಾರೆ’ ಎನ್ನುವ ದೇವರಮನಿಯವರು, ‘ಹಣದಿಂದಲೇ ಎಲ್ಲವನ್ನೂ ಗೆಲ್ಲುತ್ತೇವೆ ಎಂದು ಭಾವಿಸಿರುವ ಬಿಜೆಪಿಗೆ ಇಲ್ಲಿ ದೊಡ್ಡ ನಿರಾಶೆ ಕಾದಿದೆ. ಪೊಲೀಸ್ ಮತ್ತು ಆಡಳಿತಯಂತ್ರದ ರಕ್ಷಣೆ ಇರುವ ಕಾರಣ ಅವರು ಮಟಮಟ ಮಧ್ಯಾಹ್ನವೇ ಹಣ ಹಂಚುವ ಹೀನ ಕ್ರಿಯೆಗೆ ಇಳಿದಿದ್ದಾರೆ. ಇದು ಬಿಜೆಪಿಯ ಹತಾಶೆಗೆ ಸಾಕ್ಷಿಯಾಗಿದೆ’ ಎಂದರು.

ಆರಂಭದಲ್ಲಿ ಇಲ್ಲಿ ಜೋರಾಗಿಯೇ ಸಭೆಗಳನ್ನು ಮಾಡುತ್ತ, ಜಾತಿವಾರು ಸಭೆಗಳನ್ನು ಮಾಡಿ, ಸ್ಥಳೀಯ ನಾಯಕರನ್ನು ‘ಒಲಿಸಿಕೊಳ್ಳಲು’ ಯತ್ನಿಸಿದ್ದ ವಿಜಯೇಂದ್ರ ಸದ್ಯ ಕ್ಷೇತ್ರದಲ್ಲಿ ಕಾಣುತ್ತಿಲ್ಲ. ನಾಳೆ ರಾತ್ರಿಯವರೆಗೆ ಬಹಿರಂಗ ಪ್ರಚಾರ ಇರಲಿದ್ದು ನಂತರ ಇನ್ನಷ್ಟು ಹಣದ ಹೊಳೆ ಹರಿಯಲಿದೆ ಎಂದು ರೈತರು ಅನುಮಾನ ವ್ಯಕ್ತಪಡಿಸಿದ್ದಾರೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಮಸ್ಕಿ: ಬಿಜೆಪಿ ಹಣ ಹಂಚಿಕೆ ಆರೋಪದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...