Homeಕರ್ನಾಟಕಮಸ್ಕಿಯಲ್ಲಿ ಮಟಮಟ ಮಧ್ಯಾಹ್ನವೇ ಕಾಂಚಾಣ ಝಣಝಣ: ಬಿಜೆಪಿ ಪರ ಪ್ರಚಾರಕ್ಕಿಳಿದ ಗಾಯಕಿ ಮಂಗ್ಲಿ

ಮಸ್ಕಿಯಲ್ಲಿ ಮಟಮಟ ಮಧ್ಯಾಹ್ನವೇ ಕಾಂಚಾಣ ಝಣಝಣ: ಬಿಜೆಪಿ ಪರ ಪ್ರಚಾರಕ್ಕಿಳಿದ ಗಾಯಕಿ ಮಂಗ್ಲಿ

- Advertisement -
- Advertisement -

ನೀವು ಇದನ್ನು ಓದಿ ಮುಗಿಸುವ ಹೊತ್ತಿಗೆ ಮಸ್ಕಿ ಕ್ಷೇತ್ರದ ವಟಗಲ್‌ನಿಂದ ಒಂದು ರೊಕ್ಕ ಹಂಚುವ ವಿಡಿಯೋ ವೈರಲ್ ಆಗಬಹುದು. ಇಂದು ವಟಗಲ್‌ನಲ್ಲಿ ವೋಟಿಗೆ ಸಾವಿರ ರೂಪಾಯಿ ಕೊಡುವ ‘ಕಾರ್ಯಕ್ರಮ’ವನ್ನು ಬಿಜೆಪಿ ಹಮ್ಮಿಕೊಂಡಿದೆ ಮತ್ತು ಬೇರೆ ಊರುಗಳಲ್ಲಿ ಇದು ನಡೆಯುತ್ತಿದೆ ಎಂಬ ವಿಷಯ ಕ್ಷೇತ್ರದಲ್ಲಿ ಹರಿದಾಡುತ್ತಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ 5-ಎ ಕಾಲುವೆ ನೀರಾವರಿ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ನಾಗರಡ್ಡೆಪ್ಪ ದೇವರಮನಿ, ‘ಹಿಂದೆಲ್ಲ ಮತದಾನದ ಹಿಂದಿನ ದಿನ ಹಣ-ಹೆಂಡ ಹಂಚಲಾಗುತ್ತಿತ್ತು. ಆದರೆ ಈಗ ಇಲ್ಲಿ ಚುನಾವಣೆಗೆ ವಾರ ಮೊದಲೇ ಮಟಮಟ ಮಧ್ಯಾಹ್ನವೇ ವೋಟಿಗೆ ಒಂದು ಸಾವಿರ ರೂಪಾಯಿ ಹಂಚಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. ವಟಗಲ್‌ನಲ್ಲಿ ಈಗಾಗಲೇ ಇದು ಶುರು ಆಗಿರಬಹುದು. ಯಾವ ಕ್ಷಣದಲ್ಲಾದರೂ ವಿಡಿಯೋಗಳು ಹೊರ ಬೀಳಬಹುದು’ ಎಂದರು.

ನಿನ್ನೆ ಬಿಜೆಪಿ ಇಲ್ಲಿನ ಮೂರು ತಾಂಡಾಗಳಲ್ಲಿ ಬಂಜಾರಾ ಸಮುದಾಯದ ಪ್ರತಿಭಾನ್ವಿತ ಗಾಯಕಿ ಮಂಗ್ಲಿ ಅವರಿಂದ ಗಾಯನ ಕಾರ್ಯಕ್ರಮ ನಡೆಸಿತು. ಬಿಜೆಪಿಯ ಸ್ಥಳೀಯ ನಾಯಕರ ಜೊತೆಗೆ ಕಲಬುರ್ಗಿ ಸಂಸದ ಉಮೇಶ ಜಾಧವ್ ಕೂಡ ಇದ್ದರು. ಕೊವಿಡ್ ಪೀಡಿತ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಕ್ವಾರಂಟೈನ್‌ನಲ್ಲಿ ಇದ್ದ ಕಾರಣ ಬಂದಿರಲಿಲ್ಲ ಅಷ್ಟೇ.

ಇನ್ನು ಮೊದಲಿಗೆ ‘ನೀರಾವರಿ ಹೋರಾಟ ಬೆಂಬಲಿಸಿ, ಪ್ರತಾಪಗೌಡರನ್ನು ಸೋಲಿಸಿ’ ಎಂಬ ಧ್ಯೇಯ ಹೊಂದಿದ್ದ ನೀರಾವರಿ ಹೋರಾಟ ಸಮಿತಿ ಈಗ ನೇರವಾಗಿ ಪ್ರಚಾರಕ್ಕೆ ಇಳಿದಿದ್ದು ಕಾಂಗ್ರೆಸ್ ಗೆಲ್ಲಿಸಿ ಎಂದು 5-ಎ ಕಾಲುವೆ ವ್ಯಾಪ್ತಿಗೆ ಬರುವ 58 ಹಳ್ಳಿಗಳಲ್ಲಿ ಪ್ರಚಾರ ಮಾಡುತ್ತಿದೆ.

‘ಈಗ ನಾವು ನೇರವಾಗಿಯೇ ಕಣಕ್ಕೆ ಧುಮುಕಿದ್ದೇವೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಹೋರಾಟದ ಸ್ಥಳಕ್ಕೆ ಬಂದು ಸ್ಪಷ್ಟ ಭರವಸೆ ನೀಡಿದ ನಂತರ ನಾವು ನೇರವಾಗಿಯೇ ಕಾಂಗ್ರೆಸ್ ಗೆಲ್ಲಿಸಿ ಎಂದು ಪ್ರಚಾರ ನಡೆಸಿದ್ದೇವೆ. ಜನ ಕೂಡ ನಮ್ಮ ಮನವಿಯನ್ನು ಬೆಂಬಲಿಸುತ್ತಿದ್ದಾರೆ’ ಎನ್ನುವ ದೇವರಮನಿಯವರು, ‘ಹಣದಿಂದಲೇ ಎಲ್ಲವನ್ನೂ ಗೆಲ್ಲುತ್ತೇವೆ ಎಂದು ಭಾವಿಸಿರುವ ಬಿಜೆಪಿಗೆ ಇಲ್ಲಿ ದೊಡ್ಡ ನಿರಾಶೆ ಕಾದಿದೆ. ಪೊಲೀಸ್ ಮತ್ತು ಆಡಳಿತಯಂತ್ರದ ರಕ್ಷಣೆ ಇರುವ ಕಾರಣ ಅವರು ಮಟಮಟ ಮಧ್ಯಾಹ್ನವೇ ಹಣ ಹಂಚುವ ಹೀನ ಕ್ರಿಯೆಗೆ ಇಳಿದಿದ್ದಾರೆ. ಇದು ಬಿಜೆಪಿಯ ಹತಾಶೆಗೆ ಸಾಕ್ಷಿಯಾಗಿದೆ’ ಎಂದರು.

ಆರಂಭದಲ್ಲಿ ಇಲ್ಲಿ ಜೋರಾಗಿಯೇ ಸಭೆಗಳನ್ನು ಮಾಡುತ್ತ, ಜಾತಿವಾರು ಸಭೆಗಳನ್ನು ಮಾಡಿ, ಸ್ಥಳೀಯ ನಾಯಕರನ್ನು ‘ಒಲಿಸಿಕೊಳ್ಳಲು’ ಯತ್ನಿಸಿದ್ದ ವಿಜಯೇಂದ್ರ ಸದ್ಯ ಕ್ಷೇತ್ರದಲ್ಲಿ ಕಾಣುತ್ತಿಲ್ಲ. ನಾಳೆ ರಾತ್ರಿಯವರೆಗೆ ಬಹಿರಂಗ ಪ್ರಚಾರ ಇರಲಿದ್ದು ನಂತರ ಇನ್ನಷ್ಟು ಹಣದ ಹೊಳೆ ಹರಿಯಲಿದೆ ಎಂದು ರೈತರು ಅನುಮಾನ ವ್ಯಕ್ತಪಡಿಸಿದ್ದಾರೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಮಸ್ಕಿ: ಬಿಜೆಪಿ ಹಣ ಹಂಚಿಕೆ ಆರೋಪದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...