Homeಕರ್ನಾಟಕಮಸ್ಕಿಯಲ್ಲಿ ಮಟಮಟ ಮಧ್ಯಾಹ್ನವೇ ಕಾಂಚಾಣ ಝಣಝಣ: ಬಿಜೆಪಿ ಪರ ಪ್ರಚಾರಕ್ಕಿಳಿದ ಗಾಯಕಿ ಮಂಗ್ಲಿ

ಮಸ್ಕಿಯಲ್ಲಿ ಮಟಮಟ ಮಧ್ಯಾಹ್ನವೇ ಕಾಂಚಾಣ ಝಣಝಣ: ಬಿಜೆಪಿ ಪರ ಪ್ರಚಾರಕ್ಕಿಳಿದ ಗಾಯಕಿ ಮಂಗ್ಲಿ

- Advertisement -
- Advertisement -

ನೀವು ಇದನ್ನು ಓದಿ ಮುಗಿಸುವ ಹೊತ್ತಿಗೆ ಮಸ್ಕಿ ಕ್ಷೇತ್ರದ ವಟಗಲ್‌ನಿಂದ ಒಂದು ರೊಕ್ಕ ಹಂಚುವ ವಿಡಿಯೋ ವೈರಲ್ ಆಗಬಹುದು. ಇಂದು ವಟಗಲ್‌ನಲ್ಲಿ ವೋಟಿಗೆ ಸಾವಿರ ರೂಪಾಯಿ ಕೊಡುವ ‘ಕಾರ್ಯಕ್ರಮ’ವನ್ನು ಬಿಜೆಪಿ ಹಮ್ಮಿಕೊಂಡಿದೆ ಮತ್ತು ಬೇರೆ ಊರುಗಳಲ್ಲಿ ಇದು ನಡೆಯುತ್ತಿದೆ ಎಂಬ ವಿಷಯ ಕ್ಷೇತ್ರದಲ್ಲಿ ಹರಿದಾಡುತ್ತಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ 5-ಎ ಕಾಲುವೆ ನೀರಾವರಿ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ನಾಗರಡ್ಡೆಪ್ಪ ದೇವರಮನಿ, ‘ಹಿಂದೆಲ್ಲ ಮತದಾನದ ಹಿಂದಿನ ದಿನ ಹಣ-ಹೆಂಡ ಹಂಚಲಾಗುತ್ತಿತ್ತು. ಆದರೆ ಈಗ ಇಲ್ಲಿ ಚುನಾವಣೆಗೆ ವಾರ ಮೊದಲೇ ಮಟಮಟ ಮಧ್ಯಾಹ್ನವೇ ವೋಟಿಗೆ ಒಂದು ಸಾವಿರ ರೂಪಾಯಿ ಹಂಚಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. ವಟಗಲ್‌ನಲ್ಲಿ ಈಗಾಗಲೇ ಇದು ಶುರು ಆಗಿರಬಹುದು. ಯಾವ ಕ್ಷಣದಲ್ಲಾದರೂ ವಿಡಿಯೋಗಳು ಹೊರ ಬೀಳಬಹುದು’ ಎಂದರು.

ನಿನ್ನೆ ಬಿಜೆಪಿ ಇಲ್ಲಿನ ಮೂರು ತಾಂಡಾಗಳಲ್ಲಿ ಬಂಜಾರಾ ಸಮುದಾಯದ ಪ್ರತಿಭಾನ್ವಿತ ಗಾಯಕಿ ಮಂಗ್ಲಿ ಅವರಿಂದ ಗಾಯನ ಕಾರ್ಯಕ್ರಮ ನಡೆಸಿತು. ಬಿಜೆಪಿಯ ಸ್ಥಳೀಯ ನಾಯಕರ ಜೊತೆಗೆ ಕಲಬುರ್ಗಿ ಸಂಸದ ಉಮೇಶ ಜಾಧವ್ ಕೂಡ ಇದ್ದರು. ಕೊವಿಡ್ ಪೀಡಿತ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಕ್ವಾರಂಟೈನ್‌ನಲ್ಲಿ ಇದ್ದ ಕಾರಣ ಬಂದಿರಲಿಲ್ಲ ಅಷ್ಟೇ.

ಇನ್ನು ಮೊದಲಿಗೆ ‘ನೀರಾವರಿ ಹೋರಾಟ ಬೆಂಬಲಿಸಿ, ಪ್ರತಾಪಗೌಡರನ್ನು ಸೋಲಿಸಿ’ ಎಂಬ ಧ್ಯೇಯ ಹೊಂದಿದ್ದ ನೀರಾವರಿ ಹೋರಾಟ ಸಮಿತಿ ಈಗ ನೇರವಾಗಿ ಪ್ರಚಾರಕ್ಕೆ ಇಳಿದಿದ್ದು ಕಾಂಗ್ರೆಸ್ ಗೆಲ್ಲಿಸಿ ಎಂದು 5-ಎ ಕಾಲುವೆ ವ್ಯಾಪ್ತಿಗೆ ಬರುವ 58 ಹಳ್ಳಿಗಳಲ್ಲಿ ಪ್ರಚಾರ ಮಾಡುತ್ತಿದೆ.

‘ಈಗ ನಾವು ನೇರವಾಗಿಯೇ ಕಣಕ್ಕೆ ಧುಮುಕಿದ್ದೇವೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಹೋರಾಟದ ಸ್ಥಳಕ್ಕೆ ಬಂದು ಸ್ಪಷ್ಟ ಭರವಸೆ ನೀಡಿದ ನಂತರ ನಾವು ನೇರವಾಗಿಯೇ ಕಾಂಗ್ರೆಸ್ ಗೆಲ್ಲಿಸಿ ಎಂದು ಪ್ರಚಾರ ನಡೆಸಿದ್ದೇವೆ. ಜನ ಕೂಡ ನಮ್ಮ ಮನವಿಯನ್ನು ಬೆಂಬಲಿಸುತ್ತಿದ್ದಾರೆ’ ಎನ್ನುವ ದೇವರಮನಿಯವರು, ‘ಹಣದಿಂದಲೇ ಎಲ್ಲವನ್ನೂ ಗೆಲ್ಲುತ್ತೇವೆ ಎಂದು ಭಾವಿಸಿರುವ ಬಿಜೆಪಿಗೆ ಇಲ್ಲಿ ದೊಡ್ಡ ನಿರಾಶೆ ಕಾದಿದೆ. ಪೊಲೀಸ್ ಮತ್ತು ಆಡಳಿತಯಂತ್ರದ ರಕ್ಷಣೆ ಇರುವ ಕಾರಣ ಅವರು ಮಟಮಟ ಮಧ್ಯಾಹ್ನವೇ ಹಣ ಹಂಚುವ ಹೀನ ಕ್ರಿಯೆಗೆ ಇಳಿದಿದ್ದಾರೆ. ಇದು ಬಿಜೆಪಿಯ ಹತಾಶೆಗೆ ಸಾಕ್ಷಿಯಾಗಿದೆ’ ಎಂದರು.

ಆರಂಭದಲ್ಲಿ ಇಲ್ಲಿ ಜೋರಾಗಿಯೇ ಸಭೆಗಳನ್ನು ಮಾಡುತ್ತ, ಜಾತಿವಾರು ಸಭೆಗಳನ್ನು ಮಾಡಿ, ಸ್ಥಳೀಯ ನಾಯಕರನ್ನು ‘ಒಲಿಸಿಕೊಳ್ಳಲು’ ಯತ್ನಿಸಿದ್ದ ವಿಜಯೇಂದ್ರ ಸದ್ಯ ಕ್ಷೇತ್ರದಲ್ಲಿ ಕಾಣುತ್ತಿಲ್ಲ. ನಾಳೆ ರಾತ್ರಿಯವರೆಗೆ ಬಹಿರಂಗ ಪ್ರಚಾರ ಇರಲಿದ್ದು ನಂತರ ಇನ್ನಷ್ಟು ಹಣದ ಹೊಳೆ ಹರಿಯಲಿದೆ ಎಂದು ರೈತರು ಅನುಮಾನ ವ್ಯಕ್ತಪಡಿಸಿದ್ದಾರೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಮಸ್ಕಿ: ಬಿಜೆಪಿ ಹಣ ಹಂಚಿಕೆ ಆರೋಪದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...