Homeಕರ್ನಾಟಕಮಸ್ಕಿ: ಒಂದು ಕಡೆ ಜೆಡಿಎಸ್ ಶಾಸಕ ವೆಂಕಟಪ್ಪ ನಾಯಕ್, ಇನ್ನೊಂದು ಕಡೆ ಅದೇ ಪಾರ್ಟಿ MLA...

ಮಸ್ಕಿ: ಒಂದು ಕಡೆ ಜೆಡಿಎಸ್ ಶಾಸಕ ವೆಂಕಟಪ್ಪ ನಾಯಕ್, ಇನ್ನೊಂದು ಕಡೆ ಅದೇ ಪಾರ್ಟಿ MLA ನಾಡಗೌಡ: ಮಧ್ಯದಲ್ಲಿ ಜೆಡಿಎಸ್ ಕ್ಯಾಂಡಿಡೇಟೇ ಇಲ್ಲ!

ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಿಂಧನೂರು ಐಬಿಯಲ್ಲಿ ವಿಶೇಷವಾಗಿ ಭೇಟಿ ಮಾಡಿದ ಸಿಂಧನೂರು ಶಾಸಕ ನಾಡಗೌಡರು ಮರುದಿನವೇ, ಮಸ್ಕಿಯಲ್ಲಿ ಕ್ಯಾಂಡಿಡೇಟ್ ಹಾಕಲ್ಲ ಎಂದಿದ್ದರು.

- Advertisement -
- Advertisement -

ಸಂಪನ್ಮೂಲದ ಅಭಾವ ಎನ್ನುತ್ತಿರುವ ಜೆಡಿಎಸ್ ಪಕ್ಷ ಬಸವಕಲ್ಯಾಣದಲ್ಲಿ ಮುಸ್ಲಿಂ ಕ್ಯಾಂಡಿಡೇಟ್ ಹಾಕಿದೆ. ಆದರೆ ಅಕ್ಕ ಪಕ್ಕದಲ್ಲೇ ಇಬ್ಬರು ಎಂಎಲ್‌ಎ ಇದ್ದರೂ ಮಸ್ಕಿ ಉಪಚುನಾವಣೆಗೆ ಅಭ್ಯರ್ಥಿ ಹಾಕಿಲ್ಲ.

ಈಗ ರಾಯಚೂರು ಜಿಲ್ಲೆಯ ಮಸ್ಕಿಗೆ ಉಪ ಚುನಾವಣೆ ನಡೀತಾ ಇದೆ. ವಿಶೇಷ ಅಂದರೆ ಇಲ್ಲಿ ಕಳೆದ ಸಲದ ಕಾಂಗ್ರೆಸ್ ಅಭ್ಯರ್ಥಿ ಈಗ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ, ಕಳೆದ ಸಲದ ಬಿಜೆಪಿಯ ಕ್ಯಾಂಡಿಡೇಟ್ ಈ ಸಲ ಕಾಂಗ್ರೆಸ್ ಕ್ಯಾಂಡಿಡೇಟ್. ಇವುಗಳ ನಡುವೆ ಜೆಡಿಎಸ್ ಇಲ್ಲಿ ಬೆಳೆಯುವ ಅಪೂರ್ವ ಅವಕಾಶವನ್ನು ಕೈ ಚೆಲ್ಲಿತೆ..?

ಉಪ ಚುನಾವಣೆಯಲ್ಲಿ ಕ್ಯಾಂಡಿಡೇಟ್ ಹಾಕಲ್ಲ ಅಂತ ದೇವೇಗೌಡರು ಹೇಳಿದರು. ಕುಮಾರಸ್ವಾಮಿ ಕೂಡ ಅದನ್ನೆ ಹೇಳಿದ್ದರು. ಆದರೆ, ಭೂಕಾಯ್ದೆ ಪರ ಮತ್ತು ಸ್ಪೀಕರ್ ವಿಷಯದಲ್ಲಿ ಜೆಡಿಎಸ್ ನಿಲುವನ್ನು ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡು, ಜೆಡಿಎಸ್ ಬಿಜೆಪಿ ಪರ ನಿಲ್ತಾ ಇದೆ ಎಂದ ಕೂಡಲೇ ಎಚ್ಚೆತ್ತುಕೊಂಡ ಕುಮಾರಸ್ವಾಮಿ, ಉಪ ಚಹುನಾವಣೆಗಳಲ್ಲಿ ಎಲ್ಲ ಕಡೆ ಕ್ಯಾಂಡಿಡೇಟ್ ಹಾಕುವುದಾಗಿ ಹೇಳಿದ್ದರು.

ಆದರೆ ಈಗ ಸಂಪನ್ಮೂಲದ ಕೊರತೆಯ ಕಾರಣದಿಂದ ಅವರು ಎಲ್ಲ ಕಡೆ ಅಭ್ಯರ್ಥಿ ಹಾಕಿಲ್ಲ! 3 ಉಪ ಚುನಾವಣೆ ಪೈಕಿ ಬಸವಕಲ್ಯಾಣದಲ್ಲಿ ಮುಸ್ಲಿಂ ಅಭ್ಯರ್ಥಿ ಹಾಕಲು ಅವರಿಗೆ ಸಂಪನ್ಮೂಲದ ಕೊರತೆ ಕಾಣಲಿಲ್ಲವೇ ಎಂಬ ಪ್ರಶ್ನೆ ಎದುರಾಗಿದೆ.

ಇದನ್ನೂ ಓದಿ: ಮಸ್ಕಿ ಉಪಚುನಾವಣೆ| ಅಭ್ಯರ್ಥಿಗಳು ಅದಲು-ಬದಲು: ಮೀಸಲು ಕ್ಷೇತ್ರದಲ್ಲಿ ‘ಗೌಡರ’ ಸ್ಪರ್ಧೆ!

ಆದರೆ ಒಳ್ಳೇ ಫೈಟ್ ಕೊಡುವ ಸಾಧ್ಯತೆಯಿದ್ದ ಮಸ್ಕಿಯಲ್ಲಿ ಜೆಡಿಎಸ್ ಕ್ಯಾಂಡಿಡೇಟ್ ಹಾಕಿಲ್ಲ. ಸಂಪನ್ಮೂಲದ ಕೊರತೆಯೇ? ಸಂಪನ್ಮೂಲ ಅಂದರೆ ಏನು? ಅದು ನೂರಾರು ಕೋಟಿ ರೊಕ್ಕವೇ? ಅಥವಾ ಅಲ್ಲಿರುವ ಮತದಾರರರೇ? ಈ ನಿಟ್ಟಿನಲ್ಲಿ ಯೋಚಿಸಿದಾಗ ಒಕ್ಕಲಿಗರ ಪಾರ್ಟಿ ಎಂಬ ಹಣೆಪಟ್ಟಿ ಅಚಿಟಿಸಿಕೊಂಡಿರುವ ಜೆಡಿಎಸ್‌ಗೆ ಹೈದರಾಬಾದ್ ಕರ್ನಾಟಕದಲ್ಲಿ ನೆಲೆ ವಿಸ್ತರಿಸುವ ಸಾಕಷ್ಟು ಸಾಧ್ಯತೆ ಇವೆ. ಇಲ್ಲಿ ಇನ್ನೂ ಜನತಾ ಪರಿವಾರದ ಬೇರುಗಳಿವೆ.

ಇನ್ನು ಮಸ್ಕಿಗೇ ಬರೋಣ. ಮಸ್ಕಿಗೆ ಅಂಟಿಕೊಂಡ ಸಿಂಧನೂರಲ್ಲಿ ಜೆಡಿಎಸ್‌ನಿಂದ ವೆಂಕಟರಾವ್ ನಾಡಗೌಡ ಶಾಸಕರು, ಇನ್ನೊಂದು ಕಡೆ ಮಸ್ಕಿಗೆ ಅಂಟಿಕೊಂಡ ರಾಯಚೂರು ಜಿಲ್ಲೆಯ ಮಾನ್ವಿ ಕ್ಷೇತ್ರದಲ್ಲಿ ರಾಜಾ ವೆಂಕಟಪ್ಪ ನಾಯಕ್ ಜೆಡಿಎಸ್‌ನ ಶಾಸಕರು. ಜೆಡಿಎಸ್‌ಗೆ ಇದಕ್ಕಿಂತ ಸಂಪನ್ಮೂಲ ಬೇಕಿತ್ತೆ..? ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರವಾದ ಮಸ್ಕಿಯಲ್ಲಿ ನಾಯಕರು ಮತ್ತು ಲಿಂಗಾಯತರ ಮತಗಳು ನಿರ್ಣಾಯಕ. ಸಿಂಧನೂರಿನ ಎಂಎಲ್‌ಎ ಲಿಂಗಾಯತ, ಮಾನ್ವಿಯ ಎಂಎಲ್‌ಎ ನಾಯಕ ಜನಾಂಗದವರು. ಇದು ಸಂಪನ್ಮೂಲ ಅಲ್ಲವೇ..? ಎಂಬ ಪ್ರಶ್ನೆಗಳು ಮೂಡಿವೆ.

ಮಸ್ಕಿಗೆ ಅಂಟಿಕೊಂಡ ಲಿಂಗಸೂಗುರು ಕ್ಷೇತ್ರದಲ್ಲೂ ಜೆಡಿಎಸ್ ಪ್ರಭಾವ ಇದೆ. 2013 ರಲ್ಲಿ ಮಾನಪ್ಪ ವಜ್ಜಲ ಇಲ್ಲಿಂದ ಜೆಡಿಎಸ್‌ನಿಂದ ಗೆದ್ದಿದ್ದರು. 2018 ರಲ್ಲಿ ಜೆಡಿಎಸ್ ಕೆಲವೇ ಸಾವಿರ ಮತಗಳಲ್ಲಿ ಸೋತು ಎರಡೆನೇ ಸ್ಥಾನದಲ್ಲಿ ಇತ್ತು.

ಅಂದರೆ ಅಂಟಿಕೊಂಡ ಮೂರು ಕ್ಷೇತ್ರಗಳಲ್ಲಿ ಪ್ರಭಾವ ಇದ್ದರೂ ಸಂಪನ್ಮೂಲದ ಕೊರತೆಯಿಂದ ಜೆಡಿಎಸ್ ಇಲ್ಲಿ ಕ್ಯಾಂಡಿಡೇಟ್ ಹಾಕಿಲ್ಲ! ಆದರೆ ಬಸವಕಲ್ಯಾಣದಲ್ಲಿ ಅದು ಮುಸ್ಲಿಂ ಅಭ್ಯರ್ಥಿಯನ್ನು ಹಾಕಿದೆ. ಇತ್ತ ಬೆಳಗಾವಿಯಲ್ಲಿ ಅಪಾರ ಸಂಪನ್ಮೂಲದ ಜಾರಕಿಹೊಳಿ ಎದುರೂ ಕ್ಯಾಂಡಿಡೇಟ್ ಹಾಕಿಲ್ಲ.

ಇದನ್ನೂ ಓದಿ: ಬಸವ ಕಲ್ಯಾಣ ಉಪಚುನಾವಣೆ: ವಿಜಯೇಂದ್ರಗೆ ಟಿಕೆಟ್ ಇಲ್ಲ, ಈಗ್ಲೂ ‘ಹೊರಗಿನವರಿಗೇ’ ಟಿಕೆಟ್: ನಾರಾಯಣರಾವ್ ನೆನಪೇ ಕಾಂಗ್ರೆಸ್ ಶಕ್ತಿ!

ಸಂಪನ್ಮೂಲ ಹುಡುಕುತ್ತ ಬೈ ಎಲೆಕ್ಷನ ಬಂಧನದಲ್ಲಿ ಅನ್ನಬಹುದು. ಸಂಪನ್ಮೂಲದ ಕೊರತೆ ಬೈ ಎಲೆಕ್ಷನ್ ಮೂಲಕ ನೀಗಿದೆಯೇ ಎಂಬ ಪ್ರಶ್ನೆ ಮಾತ್ರ ಹಾಗೇ ಉಳಿದಿದೆ.

ನಿನ್ನೆ ಮಸ್ಕಿಯ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡರು ಸಿಂಧನೂರಿನ ಜೆಡಿಎಸ್ ಶಾಸಕ ವೆಂಕಟರಾವ್ ನಾಡಗೌಡರ ಮನೆಗೆ ಹೋಗಿ ಬೆಂಬಲ ಕೇಳಿದರೆಂದು ಇಲ್ಲಿನ ಎಲ್ಲ ದಿನಪತ್ರಿಕೆಗಳಲ್ಲಿ ಬಂದಿದೆ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ.

ಇತ್ತ, ಸುಮಾರು 12 ದಿನದ ಹಿಂದೆ ಮಸ್ಕಿ ಚುನಾವಣೆ ನಿಮಿತ್ತ ಸಿಂಧನೂರಿಗೆ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಿಂಧನೂರು ಐಬಿಯಲ್ಲಿ ವಿಶೇಷವಾಗಿ ಭೇಟಿ ಮಾಡಿದ ಸಿಂಧನೂರು ಶಾಸಕ ನಾಡಗೌಡರು ಮರುದಿನವೇ, ಮಸ್ಕಿಯಲ್ಲಿ ಕ್ಯಾಂಡಿಡೇಟ್ ಹಾಕಲ್ಲ ಎಂದಿದ್ದರು. ಅಷ್ಟೊತ್ತಿಗೆ ವಿಜಯೇಂದ್ರ ಮತ್ತು ಕುಮಾರಸ್ವಾಮಿ ಡಿಸ್ಕಸ್ ಮಾಡಿರಬಹುದು ಎಂದು ಇಲ್ಲಿನ ರೈತ ಹೋರಾಟಗಾರರು ಹೇಳುತ್ತಾರೆ. ಜೊತೆಗೆ ಒಳ ಒಪ್ಪಂದ ಆಗಿರಬಹುದು ಎಂಬ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ.

‘ನಾನು ಒಬ್ಬ ಶಾಸಕನಾಗಿ ಸಿಎಂ ಭೇಟಿ ಮಾಡಿದ್ದೇನೆ ಅಷ್ಟೇ… ನಮ್ಮ ಕಾರ್ಯಕರ್ತರು ಬೇಡ ಅಂದಿದ್ದಕ್ಕೆ ಕ್ಯಾಂಡಿಡೇಟ್ ಹಾಕಿಲ್ಲ. ನೀರಾವರಿ ಹೋರಾಟ ಫಲಿತಾಂಶದ ಮ್ಯಾಲ ಪ್ರಭಾವ ಬೀರುತ್ತದೆ ‘ವೆಂಕಟ ರಾವ್ ನಾಡಗೌಡ, ಸಿಂಧನೂರು ಶಾಸಕ


ಇದನ್ನೂ ಓದಿ: ಬೆಳಗಾವಿ ಲಿಂಗಾಯತರ ಕೋಟೆಯಲ್ಲಿ ಸತೀಶ್ ಜಾರಕಿಹೊಳಿ ಹೋರಾಟ: ಅಹಿಂದ ಒಟ್ಟುಗೂಡುವುದೇ? ಗೆದ್ರೆ ಯಮಕನಮರಡಿಯಲ್ಲಿ ಪ್ರಿಯಾಂಕಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...