Homeಕರ್ನಾಟಕಮಸ್ಕಿ: ಒಂದು ಕಡೆ ಜೆಡಿಎಸ್ ಶಾಸಕ ವೆಂಕಟಪ್ಪ ನಾಯಕ್, ಇನ್ನೊಂದು ಕಡೆ ಅದೇ ಪಾರ್ಟಿ MLA...

ಮಸ್ಕಿ: ಒಂದು ಕಡೆ ಜೆಡಿಎಸ್ ಶಾಸಕ ವೆಂಕಟಪ್ಪ ನಾಯಕ್, ಇನ್ನೊಂದು ಕಡೆ ಅದೇ ಪಾರ್ಟಿ MLA ನಾಡಗೌಡ: ಮಧ್ಯದಲ್ಲಿ ಜೆಡಿಎಸ್ ಕ್ಯಾಂಡಿಡೇಟೇ ಇಲ್ಲ!

ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಿಂಧನೂರು ಐಬಿಯಲ್ಲಿ ವಿಶೇಷವಾಗಿ ಭೇಟಿ ಮಾಡಿದ ಸಿಂಧನೂರು ಶಾಸಕ ನಾಡಗೌಡರು ಮರುದಿನವೇ, ಮಸ್ಕಿಯಲ್ಲಿ ಕ್ಯಾಂಡಿಡೇಟ್ ಹಾಕಲ್ಲ ಎಂದಿದ್ದರು.

- Advertisement -
- Advertisement -

ಸಂಪನ್ಮೂಲದ ಅಭಾವ ಎನ್ನುತ್ತಿರುವ ಜೆಡಿಎಸ್ ಪಕ್ಷ ಬಸವಕಲ್ಯಾಣದಲ್ಲಿ ಮುಸ್ಲಿಂ ಕ್ಯಾಂಡಿಡೇಟ್ ಹಾಕಿದೆ. ಆದರೆ ಅಕ್ಕ ಪಕ್ಕದಲ್ಲೇ ಇಬ್ಬರು ಎಂಎಲ್‌ಎ ಇದ್ದರೂ ಮಸ್ಕಿ ಉಪಚುನಾವಣೆಗೆ ಅಭ್ಯರ್ಥಿ ಹಾಕಿಲ್ಲ.

ಈಗ ರಾಯಚೂರು ಜಿಲ್ಲೆಯ ಮಸ್ಕಿಗೆ ಉಪ ಚುನಾವಣೆ ನಡೀತಾ ಇದೆ. ವಿಶೇಷ ಅಂದರೆ ಇಲ್ಲಿ ಕಳೆದ ಸಲದ ಕಾಂಗ್ರೆಸ್ ಅಭ್ಯರ್ಥಿ ಈಗ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ, ಕಳೆದ ಸಲದ ಬಿಜೆಪಿಯ ಕ್ಯಾಂಡಿಡೇಟ್ ಈ ಸಲ ಕಾಂಗ್ರೆಸ್ ಕ್ಯಾಂಡಿಡೇಟ್. ಇವುಗಳ ನಡುವೆ ಜೆಡಿಎಸ್ ಇಲ್ಲಿ ಬೆಳೆಯುವ ಅಪೂರ್ವ ಅವಕಾಶವನ್ನು ಕೈ ಚೆಲ್ಲಿತೆ..?

ಉಪ ಚುನಾವಣೆಯಲ್ಲಿ ಕ್ಯಾಂಡಿಡೇಟ್ ಹಾಕಲ್ಲ ಅಂತ ದೇವೇಗೌಡರು ಹೇಳಿದರು. ಕುಮಾರಸ್ವಾಮಿ ಕೂಡ ಅದನ್ನೆ ಹೇಳಿದ್ದರು. ಆದರೆ, ಭೂಕಾಯ್ದೆ ಪರ ಮತ್ತು ಸ್ಪೀಕರ್ ವಿಷಯದಲ್ಲಿ ಜೆಡಿಎಸ್ ನಿಲುವನ್ನು ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡು, ಜೆಡಿಎಸ್ ಬಿಜೆಪಿ ಪರ ನಿಲ್ತಾ ಇದೆ ಎಂದ ಕೂಡಲೇ ಎಚ್ಚೆತ್ತುಕೊಂಡ ಕುಮಾರಸ್ವಾಮಿ, ಉಪ ಚಹುನಾವಣೆಗಳಲ್ಲಿ ಎಲ್ಲ ಕಡೆ ಕ್ಯಾಂಡಿಡೇಟ್ ಹಾಕುವುದಾಗಿ ಹೇಳಿದ್ದರು.

ಆದರೆ ಈಗ ಸಂಪನ್ಮೂಲದ ಕೊರತೆಯ ಕಾರಣದಿಂದ ಅವರು ಎಲ್ಲ ಕಡೆ ಅಭ್ಯರ್ಥಿ ಹಾಕಿಲ್ಲ! 3 ಉಪ ಚುನಾವಣೆ ಪೈಕಿ ಬಸವಕಲ್ಯಾಣದಲ್ಲಿ ಮುಸ್ಲಿಂ ಅಭ್ಯರ್ಥಿ ಹಾಕಲು ಅವರಿಗೆ ಸಂಪನ್ಮೂಲದ ಕೊರತೆ ಕಾಣಲಿಲ್ಲವೇ ಎಂಬ ಪ್ರಶ್ನೆ ಎದುರಾಗಿದೆ.

ಇದನ್ನೂ ಓದಿ: ಮಸ್ಕಿ ಉಪಚುನಾವಣೆ| ಅಭ್ಯರ್ಥಿಗಳು ಅದಲು-ಬದಲು: ಮೀಸಲು ಕ್ಷೇತ್ರದಲ್ಲಿ ‘ಗೌಡರ’ ಸ್ಪರ್ಧೆ!

ಆದರೆ ಒಳ್ಳೇ ಫೈಟ್ ಕೊಡುವ ಸಾಧ್ಯತೆಯಿದ್ದ ಮಸ್ಕಿಯಲ್ಲಿ ಜೆಡಿಎಸ್ ಕ್ಯಾಂಡಿಡೇಟ್ ಹಾಕಿಲ್ಲ. ಸಂಪನ್ಮೂಲದ ಕೊರತೆಯೇ? ಸಂಪನ್ಮೂಲ ಅಂದರೆ ಏನು? ಅದು ನೂರಾರು ಕೋಟಿ ರೊಕ್ಕವೇ? ಅಥವಾ ಅಲ್ಲಿರುವ ಮತದಾರರರೇ? ಈ ನಿಟ್ಟಿನಲ್ಲಿ ಯೋಚಿಸಿದಾಗ ಒಕ್ಕಲಿಗರ ಪಾರ್ಟಿ ಎಂಬ ಹಣೆಪಟ್ಟಿ ಅಚಿಟಿಸಿಕೊಂಡಿರುವ ಜೆಡಿಎಸ್‌ಗೆ ಹೈದರಾಬಾದ್ ಕರ್ನಾಟಕದಲ್ಲಿ ನೆಲೆ ವಿಸ್ತರಿಸುವ ಸಾಕಷ್ಟು ಸಾಧ್ಯತೆ ಇವೆ. ಇಲ್ಲಿ ಇನ್ನೂ ಜನತಾ ಪರಿವಾರದ ಬೇರುಗಳಿವೆ.

ಇನ್ನು ಮಸ್ಕಿಗೇ ಬರೋಣ. ಮಸ್ಕಿಗೆ ಅಂಟಿಕೊಂಡ ಸಿಂಧನೂರಲ್ಲಿ ಜೆಡಿಎಸ್‌ನಿಂದ ವೆಂಕಟರಾವ್ ನಾಡಗೌಡ ಶಾಸಕರು, ಇನ್ನೊಂದು ಕಡೆ ಮಸ್ಕಿಗೆ ಅಂಟಿಕೊಂಡ ರಾಯಚೂರು ಜಿಲ್ಲೆಯ ಮಾನ್ವಿ ಕ್ಷೇತ್ರದಲ್ಲಿ ರಾಜಾ ವೆಂಕಟಪ್ಪ ನಾಯಕ್ ಜೆಡಿಎಸ್‌ನ ಶಾಸಕರು. ಜೆಡಿಎಸ್‌ಗೆ ಇದಕ್ಕಿಂತ ಸಂಪನ್ಮೂಲ ಬೇಕಿತ್ತೆ..? ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರವಾದ ಮಸ್ಕಿಯಲ್ಲಿ ನಾಯಕರು ಮತ್ತು ಲಿಂಗಾಯತರ ಮತಗಳು ನಿರ್ಣಾಯಕ. ಸಿಂಧನೂರಿನ ಎಂಎಲ್‌ಎ ಲಿಂಗಾಯತ, ಮಾನ್ವಿಯ ಎಂಎಲ್‌ಎ ನಾಯಕ ಜನಾಂಗದವರು. ಇದು ಸಂಪನ್ಮೂಲ ಅಲ್ಲವೇ..? ಎಂಬ ಪ್ರಶ್ನೆಗಳು ಮೂಡಿವೆ.

ಮಸ್ಕಿಗೆ ಅಂಟಿಕೊಂಡ ಲಿಂಗಸೂಗುರು ಕ್ಷೇತ್ರದಲ್ಲೂ ಜೆಡಿಎಸ್ ಪ್ರಭಾವ ಇದೆ. 2013 ರಲ್ಲಿ ಮಾನಪ್ಪ ವಜ್ಜಲ ಇಲ್ಲಿಂದ ಜೆಡಿಎಸ್‌ನಿಂದ ಗೆದ್ದಿದ್ದರು. 2018 ರಲ್ಲಿ ಜೆಡಿಎಸ್ ಕೆಲವೇ ಸಾವಿರ ಮತಗಳಲ್ಲಿ ಸೋತು ಎರಡೆನೇ ಸ್ಥಾನದಲ್ಲಿ ಇತ್ತು.

ಅಂದರೆ ಅಂಟಿಕೊಂಡ ಮೂರು ಕ್ಷೇತ್ರಗಳಲ್ಲಿ ಪ್ರಭಾವ ಇದ್ದರೂ ಸಂಪನ್ಮೂಲದ ಕೊರತೆಯಿಂದ ಜೆಡಿಎಸ್ ಇಲ್ಲಿ ಕ್ಯಾಂಡಿಡೇಟ್ ಹಾಕಿಲ್ಲ! ಆದರೆ ಬಸವಕಲ್ಯಾಣದಲ್ಲಿ ಅದು ಮುಸ್ಲಿಂ ಅಭ್ಯರ್ಥಿಯನ್ನು ಹಾಕಿದೆ. ಇತ್ತ ಬೆಳಗಾವಿಯಲ್ಲಿ ಅಪಾರ ಸಂಪನ್ಮೂಲದ ಜಾರಕಿಹೊಳಿ ಎದುರೂ ಕ್ಯಾಂಡಿಡೇಟ್ ಹಾಕಿಲ್ಲ.

ಇದನ್ನೂ ಓದಿ: ಬಸವ ಕಲ್ಯಾಣ ಉಪಚುನಾವಣೆ: ವಿಜಯೇಂದ್ರಗೆ ಟಿಕೆಟ್ ಇಲ್ಲ, ಈಗ್ಲೂ ‘ಹೊರಗಿನವರಿಗೇ’ ಟಿಕೆಟ್: ನಾರಾಯಣರಾವ್ ನೆನಪೇ ಕಾಂಗ್ರೆಸ್ ಶಕ್ತಿ!

ಸಂಪನ್ಮೂಲ ಹುಡುಕುತ್ತ ಬೈ ಎಲೆಕ್ಷನ ಬಂಧನದಲ್ಲಿ ಅನ್ನಬಹುದು. ಸಂಪನ್ಮೂಲದ ಕೊರತೆ ಬೈ ಎಲೆಕ್ಷನ್ ಮೂಲಕ ನೀಗಿದೆಯೇ ಎಂಬ ಪ್ರಶ್ನೆ ಮಾತ್ರ ಹಾಗೇ ಉಳಿದಿದೆ.

ನಿನ್ನೆ ಮಸ್ಕಿಯ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡರು ಸಿಂಧನೂರಿನ ಜೆಡಿಎಸ್ ಶಾಸಕ ವೆಂಕಟರಾವ್ ನಾಡಗೌಡರ ಮನೆಗೆ ಹೋಗಿ ಬೆಂಬಲ ಕೇಳಿದರೆಂದು ಇಲ್ಲಿನ ಎಲ್ಲ ದಿನಪತ್ರಿಕೆಗಳಲ್ಲಿ ಬಂದಿದೆ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ.

ಇತ್ತ, ಸುಮಾರು 12 ದಿನದ ಹಿಂದೆ ಮಸ್ಕಿ ಚುನಾವಣೆ ನಿಮಿತ್ತ ಸಿಂಧನೂರಿಗೆ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಿಂಧನೂರು ಐಬಿಯಲ್ಲಿ ವಿಶೇಷವಾಗಿ ಭೇಟಿ ಮಾಡಿದ ಸಿಂಧನೂರು ಶಾಸಕ ನಾಡಗೌಡರು ಮರುದಿನವೇ, ಮಸ್ಕಿಯಲ್ಲಿ ಕ್ಯಾಂಡಿಡೇಟ್ ಹಾಕಲ್ಲ ಎಂದಿದ್ದರು. ಅಷ್ಟೊತ್ತಿಗೆ ವಿಜಯೇಂದ್ರ ಮತ್ತು ಕುಮಾರಸ್ವಾಮಿ ಡಿಸ್ಕಸ್ ಮಾಡಿರಬಹುದು ಎಂದು ಇಲ್ಲಿನ ರೈತ ಹೋರಾಟಗಾರರು ಹೇಳುತ್ತಾರೆ. ಜೊತೆಗೆ ಒಳ ಒಪ್ಪಂದ ಆಗಿರಬಹುದು ಎಂಬ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ.

‘ನಾನು ಒಬ್ಬ ಶಾಸಕನಾಗಿ ಸಿಎಂ ಭೇಟಿ ಮಾಡಿದ್ದೇನೆ ಅಷ್ಟೇ… ನಮ್ಮ ಕಾರ್ಯಕರ್ತರು ಬೇಡ ಅಂದಿದ್ದಕ್ಕೆ ಕ್ಯಾಂಡಿಡೇಟ್ ಹಾಕಿಲ್ಲ. ನೀರಾವರಿ ಹೋರಾಟ ಫಲಿತಾಂಶದ ಮ್ಯಾಲ ಪ್ರಭಾವ ಬೀರುತ್ತದೆ ‘ವೆಂಕಟ ರಾವ್ ನಾಡಗೌಡ, ಸಿಂಧನೂರು ಶಾಸಕ


ಇದನ್ನೂ ಓದಿ: ಬೆಳಗಾವಿ ಲಿಂಗಾಯತರ ಕೋಟೆಯಲ್ಲಿ ಸತೀಶ್ ಜಾರಕಿಹೊಳಿ ಹೋರಾಟ: ಅಹಿಂದ ಒಟ್ಟುಗೂಡುವುದೇ? ಗೆದ್ರೆ ಯಮಕನಮರಡಿಯಲ್ಲಿ ಪ್ರಿಯಾಂಕಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....