Homeಕರ್ನಾಟಕಮಸ್ಕಿ: ಒಂದು ಕಡೆ ಜೆಡಿಎಸ್ ಶಾಸಕ ವೆಂಕಟಪ್ಪ ನಾಯಕ್, ಇನ್ನೊಂದು ಕಡೆ ಅದೇ ಪಾರ್ಟಿ MLA...

ಮಸ್ಕಿ: ಒಂದು ಕಡೆ ಜೆಡಿಎಸ್ ಶಾಸಕ ವೆಂಕಟಪ್ಪ ನಾಯಕ್, ಇನ್ನೊಂದು ಕಡೆ ಅದೇ ಪಾರ್ಟಿ MLA ನಾಡಗೌಡ: ಮಧ್ಯದಲ್ಲಿ ಜೆಡಿಎಸ್ ಕ್ಯಾಂಡಿಡೇಟೇ ಇಲ್ಲ!

ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಿಂಧನೂರು ಐಬಿಯಲ್ಲಿ ವಿಶೇಷವಾಗಿ ಭೇಟಿ ಮಾಡಿದ ಸಿಂಧನೂರು ಶಾಸಕ ನಾಡಗೌಡರು ಮರುದಿನವೇ, ಮಸ್ಕಿಯಲ್ಲಿ ಕ್ಯಾಂಡಿಡೇಟ್ ಹಾಕಲ್ಲ ಎಂದಿದ್ದರು.

- Advertisement -
- Advertisement -

ಸಂಪನ್ಮೂಲದ ಅಭಾವ ಎನ್ನುತ್ತಿರುವ ಜೆಡಿಎಸ್ ಪಕ್ಷ ಬಸವಕಲ್ಯಾಣದಲ್ಲಿ ಮುಸ್ಲಿಂ ಕ್ಯಾಂಡಿಡೇಟ್ ಹಾಕಿದೆ. ಆದರೆ ಅಕ್ಕ ಪಕ್ಕದಲ್ಲೇ ಇಬ್ಬರು ಎಂಎಲ್‌ಎ ಇದ್ದರೂ ಮಸ್ಕಿ ಉಪಚುನಾವಣೆಗೆ ಅಭ್ಯರ್ಥಿ ಹಾಕಿಲ್ಲ.

ಈಗ ರಾಯಚೂರು ಜಿಲ್ಲೆಯ ಮಸ್ಕಿಗೆ ಉಪ ಚುನಾವಣೆ ನಡೀತಾ ಇದೆ. ವಿಶೇಷ ಅಂದರೆ ಇಲ್ಲಿ ಕಳೆದ ಸಲದ ಕಾಂಗ್ರೆಸ್ ಅಭ್ಯರ್ಥಿ ಈಗ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ, ಕಳೆದ ಸಲದ ಬಿಜೆಪಿಯ ಕ್ಯಾಂಡಿಡೇಟ್ ಈ ಸಲ ಕಾಂಗ್ರೆಸ್ ಕ್ಯಾಂಡಿಡೇಟ್. ಇವುಗಳ ನಡುವೆ ಜೆಡಿಎಸ್ ಇಲ್ಲಿ ಬೆಳೆಯುವ ಅಪೂರ್ವ ಅವಕಾಶವನ್ನು ಕೈ ಚೆಲ್ಲಿತೆ..?

ಉಪ ಚುನಾವಣೆಯಲ್ಲಿ ಕ್ಯಾಂಡಿಡೇಟ್ ಹಾಕಲ್ಲ ಅಂತ ದೇವೇಗೌಡರು ಹೇಳಿದರು. ಕುಮಾರಸ್ವಾಮಿ ಕೂಡ ಅದನ್ನೆ ಹೇಳಿದ್ದರು. ಆದರೆ, ಭೂಕಾಯ್ದೆ ಪರ ಮತ್ತು ಸ್ಪೀಕರ್ ವಿಷಯದಲ್ಲಿ ಜೆಡಿಎಸ್ ನಿಲುವನ್ನು ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡು, ಜೆಡಿಎಸ್ ಬಿಜೆಪಿ ಪರ ನಿಲ್ತಾ ಇದೆ ಎಂದ ಕೂಡಲೇ ಎಚ್ಚೆತ್ತುಕೊಂಡ ಕುಮಾರಸ್ವಾಮಿ, ಉಪ ಚಹುನಾವಣೆಗಳಲ್ಲಿ ಎಲ್ಲ ಕಡೆ ಕ್ಯಾಂಡಿಡೇಟ್ ಹಾಕುವುದಾಗಿ ಹೇಳಿದ್ದರು.

ಆದರೆ ಈಗ ಸಂಪನ್ಮೂಲದ ಕೊರತೆಯ ಕಾರಣದಿಂದ ಅವರು ಎಲ್ಲ ಕಡೆ ಅಭ್ಯರ್ಥಿ ಹಾಕಿಲ್ಲ! 3 ಉಪ ಚುನಾವಣೆ ಪೈಕಿ ಬಸವಕಲ್ಯಾಣದಲ್ಲಿ ಮುಸ್ಲಿಂ ಅಭ್ಯರ್ಥಿ ಹಾಕಲು ಅವರಿಗೆ ಸಂಪನ್ಮೂಲದ ಕೊರತೆ ಕಾಣಲಿಲ್ಲವೇ ಎಂಬ ಪ್ರಶ್ನೆ ಎದುರಾಗಿದೆ.

ಇದನ್ನೂ ಓದಿ: ಮಸ್ಕಿ ಉಪಚುನಾವಣೆ| ಅಭ್ಯರ್ಥಿಗಳು ಅದಲು-ಬದಲು: ಮೀಸಲು ಕ್ಷೇತ್ರದಲ್ಲಿ ‘ಗೌಡರ’ ಸ್ಪರ್ಧೆ!

ಆದರೆ ಒಳ್ಳೇ ಫೈಟ್ ಕೊಡುವ ಸಾಧ್ಯತೆಯಿದ್ದ ಮಸ್ಕಿಯಲ್ಲಿ ಜೆಡಿಎಸ್ ಕ್ಯಾಂಡಿಡೇಟ್ ಹಾಕಿಲ್ಲ. ಸಂಪನ್ಮೂಲದ ಕೊರತೆಯೇ? ಸಂಪನ್ಮೂಲ ಅಂದರೆ ಏನು? ಅದು ನೂರಾರು ಕೋಟಿ ರೊಕ್ಕವೇ? ಅಥವಾ ಅಲ್ಲಿರುವ ಮತದಾರರರೇ? ಈ ನಿಟ್ಟಿನಲ್ಲಿ ಯೋಚಿಸಿದಾಗ ಒಕ್ಕಲಿಗರ ಪಾರ್ಟಿ ಎಂಬ ಹಣೆಪಟ್ಟಿ ಅಚಿಟಿಸಿಕೊಂಡಿರುವ ಜೆಡಿಎಸ್‌ಗೆ ಹೈದರಾಬಾದ್ ಕರ್ನಾಟಕದಲ್ಲಿ ನೆಲೆ ವಿಸ್ತರಿಸುವ ಸಾಕಷ್ಟು ಸಾಧ್ಯತೆ ಇವೆ. ಇಲ್ಲಿ ಇನ್ನೂ ಜನತಾ ಪರಿವಾರದ ಬೇರುಗಳಿವೆ.

ಇನ್ನು ಮಸ್ಕಿಗೇ ಬರೋಣ. ಮಸ್ಕಿಗೆ ಅಂಟಿಕೊಂಡ ಸಿಂಧನೂರಲ್ಲಿ ಜೆಡಿಎಸ್‌ನಿಂದ ವೆಂಕಟರಾವ್ ನಾಡಗೌಡ ಶಾಸಕರು, ಇನ್ನೊಂದು ಕಡೆ ಮಸ್ಕಿಗೆ ಅಂಟಿಕೊಂಡ ರಾಯಚೂರು ಜಿಲ್ಲೆಯ ಮಾನ್ವಿ ಕ್ಷೇತ್ರದಲ್ಲಿ ರಾಜಾ ವೆಂಕಟಪ್ಪ ನಾಯಕ್ ಜೆಡಿಎಸ್‌ನ ಶಾಸಕರು. ಜೆಡಿಎಸ್‌ಗೆ ಇದಕ್ಕಿಂತ ಸಂಪನ್ಮೂಲ ಬೇಕಿತ್ತೆ..? ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರವಾದ ಮಸ್ಕಿಯಲ್ಲಿ ನಾಯಕರು ಮತ್ತು ಲಿಂಗಾಯತರ ಮತಗಳು ನಿರ್ಣಾಯಕ. ಸಿಂಧನೂರಿನ ಎಂಎಲ್‌ಎ ಲಿಂಗಾಯತ, ಮಾನ್ವಿಯ ಎಂಎಲ್‌ಎ ನಾಯಕ ಜನಾಂಗದವರು. ಇದು ಸಂಪನ್ಮೂಲ ಅಲ್ಲವೇ..? ಎಂಬ ಪ್ರಶ್ನೆಗಳು ಮೂಡಿವೆ.

ಮಸ್ಕಿಗೆ ಅಂಟಿಕೊಂಡ ಲಿಂಗಸೂಗುರು ಕ್ಷೇತ್ರದಲ್ಲೂ ಜೆಡಿಎಸ್ ಪ್ರಭಾವ ಇದೆ. 2013 ರಲ್ಲಿ ಮಾನಪ್ಪ ವಜ್ಜಲ ಇಲ್ಲಿಂದ ಜೆಡಿಎಸ್‌ನಿಂದ ಗೆದ್ದಿದ್ದರು. 2018 ರಲ್ಲಿ ಜೆಡಿಎಸ್ ಕೆಲವೇ ಸಾವಿರ ಮತಗಳಲ್ಲಿ ಸೋತು ಎರಡೆನೇ ಸ್ಥಾನದಲ್ಲಿ ಇತ್ತು.

ಅಂದರೆ ಅಂಟಿಕೊಂಡ ಮೂರು ಕ್ಷೇತ್ರಗಳಲ್ಲಿ ಪ್ರಭಾವ ಇದ್ದರೂ ಸಂಪನ್ಮೂಲದ ಕೊರತೆಯಿಂದ ಜೆಡಿಎಸ್ ಇಲ್ಲಿ ಕ್ಯಾಂಡಿಡೇಟ್ ಹಾಕಿಲ್ಲ! ಆದರೆ ಬಸವಕಲ್ಯಾಣದಲ್ಲಿ ಅದು ಮುಸ್ಲಿಂ ಅಭ್ಯರ್ಥಿಯನ್ನು ಹಾಕಿದೆ. ಇತ್ತ ಬೆಳಗಾವಿಯಲ್ಲಿ ಅಪಾರ ಸಂಪನ್ಮೂಲದ ಜಾರಕಿಹೊಳಿ ಎದುರೂ ಕ್ಯಾಂಡಿಡೇಟ್ ಹಾಕಿಲ್ಲ.

ಇದನ್ನೂ ಓದಿ: ಬಸವ ಕಲ್ಯಾಣ ಉಪಚುನಾವಣೆ: ವಿಜಯೇಂದ್ರಗೆ ಟಿಕೆಟ್ ಇಲ್ಲ, ಈಗ್ಲೂ ‘ಹೊರಗಿನವರಿಗೇ’ ಟಿಕೆಟ್: ನಾರಾಯಣರಾವ್ ನೆನಪೇ ಕಾಂಗ್ರೆಸ್ ಶಕ್ತಿ!

ಸಂಪನ್ಮೂಲ ಹುಡುಕುತ್ತ ಬೈ ಎಲೆಕ್ಷನ ಬಂಧನದಲ್ಲಿ ಅನ್ನಬಹುದು. ಸಂಪನ್ಮೂಲದ ಕೊರತೆ ಬೈ ಎಲೆಕ್ಷನ್ ಮೂಲಕ ನೀಗಿದೆಯೇ ಎಂಬ ಪ್ರಶ್ನೆ ಮಾತ್ರ ಹಾಗೇ ಉಳಿದಿದೆ.

ನಿನ್ನೆ ಮಸ್ಕಿಯ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡರು ಸಿಂಧನೂರಿನ ಜೆಡಿಎಸ್ ಶಾಸಕ ವೆಂಕಟರಾವ್ ನಾಡಗೌಡರ ಮನೆಗೆ ಹೋಗಿ ಬೆಂಬಲ ಕೇಳಿದರೆಂದು ಇಲ್ಲಿನ ಎಲ್ಲ ದಿನಪತ್ರಿಕೆಗಳಲ್ಲಿ ಬಂದಿದೆ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ.

ಇತ್ತ, ಸುಮಾರು 12 ದಿನದ ಹಿಂದೆ ಮಸ್ಕಿ ಚುನಾವಣೆ ನಿಮಿತ್ತ ಸಿಂಧನೂರಿಗೆ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಿಂಧನೂರು ಐಬಿಯಲ್ಲಿ ವಿಶೇಷವಾಗಿ ಭೇಟಿ ಮಾಡಿದ ಸಿಂಧನೂರು ಶಾಸಕ ನಾಡಗೌಡರು ಮರುದಿನವೇ, ಮಸ್ಕಿಯಲ್ಲಿ ಕ್ಯಾಂಡಿಡೇಟ್ ಹಾಕಲ್ಲ ಎಂದಿದ್ದರು. ಅಷ್ಟೊತ್ತಿಗೆ ವಿಜಯೇಂದ್ರ ಮತ್ತು ಕುಮಾರಸ್ವಾಮಿ ಡಿಸ್ಕಸ್ ಮಾಡಿರಬಹುದು ಎಂದು ಇಲ್ಲಿನ ರೈತ ಹೋರಾಟಗಾರರು ಹೇಳುತ್ತಾರೆ. ಜೊತೆಗೆ ಒಳ ಒಪ್ಪಂದ ಆಗಿರಬಹುದು ಎಂಬ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ.

‘ನಾನು ಒಬ್ಬ ಶಾಸಕನಾಗಿ ಸಿಎಂ ಭೇಟಿ ಮಾಡಿದ್ದೇನೆ ಅಷ್ಟೇ… ನಮ್ಮ ಕಾರ್ಯಕರ್ತರು ಬೇಡ ಅಂದಿದ್ದಕ್ಕೆ ಕ್ಯಾಂಡಿಡೇಟ್ ಹಾಕಿಲ್ಲ. ನೀರಾವರಿ ಹೋರಾಟ ಫಲಿತಾಂಶದ ಮ್ಯಾಲ ಪ್ರಭಾವ ಬೀರುತ್ತದೆ ‘ವೆಂಕಟ ರಾವ್ ನಾಡಗೌಡ, ಸಿಂಧನೂರು ಶಾಸಕ


ಇದನ್ನೂ ಓದಿ: ಬೆಳಗಾವಿ ಲಿಂಗಾಯತರ ಕೋಟೆಯಲ್ಲಿ ಸತೀಶ್ ಜಾರಕಿಹೊಳಿ ಹೋರಾಟ: ಅಹಿಂದ ಒಟ್ಟುಗೂಡುವುದೇ? ಗೆದ್ರೆ ಯಮಕನಮರಡಿಯಲ್ಲಿ ಪ್ರಿಯಾಂಕಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...