Homeಕರ್ನಾಟಕಮಸ್ಕಿ: ಒಂದು ಕಡೆ ಜೆಡಿಎಸ್ ಶಾಸಕ ವೆಂಕಟಪ್ಪ ನಾಯಕ್, ಇನ್ನೊಂದು ಕಡೆ ಅದೇ ಪಾರ್ಟಿ MLA...

ಮಸ್ಕಿ: ಒಂದು ಕಡೆ ಜೆಡಿಎಸ್ ಶಾಸಕ ವೆಂಕಟಪ್ಪ ನಾಯಕ್, ಇನ್ನೊಂದು ಕಡೆ ಅದೇ ಪಾರ್ಟಿ MLA ನಾಡಗೌಡ: ಮಧ್ಯದಲ್ಲಿ ಜೆಡಿಎಸ್ ಕ್ಯಾಂಡಿಡೇಟೇ ಇಲ್ಲ!

ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಿಂಧನೂರು ಐಬಿಯಲ್ಲಿ ವಿಶೇಷವಾಗಿ ಭೇಟಿ ಮಾಡಿದ ಸಿಂಧನೂರು ಶಾಸಕ ನಾಡಗೌಡರು ಮರುದಿನವೇ, ಮಸ್ಕಿಯಲ್ಲಿ ಕ್ಯಾಂಡಿಡೇಟ್ ಹಾಕಲ್ಲ ಎಂದಿದ್ದರು.

- Advertisement -
- Advertisement -

ಸಂಪನ್ಮೂಲದ ಅಭಾವ ಎನ್ನುತ್ತಿರುವ ಜೆಡಿಎಸ್ ಪಕ್ಷ ಬಸವಕಲ್ಯಾಣದಲ್ಲಿ ಮುಸ್ಲಿಂ ಕ್ಯಾಂಡಿಡೇಟ್ ಹಾಕಿದೆ. ಆದರೆ ಅಕ್ಕ ಪಕ್ಕದಲ್ಲೇ ಇಬ್ಬರು ಎಂಎಲ್‌ಎ ಇದ್ದರೂ ಮಸ್ಕಿ ಉಪಚುನಾವಣೆಗೆ ಅಭ್ಯರ್ಥಿ ಹಾಕಿಲ್ಲ.

ಈಗ ರಾಯಚೂರು ಜಿಲ್ಲೆಯ ಮಸ್ಕಿಗೆ ಉಪ ಚುನಾವಣೆ ನಡೀತಾ ಇದೆ. ವಿಶೇಷ ಅಂದರೆ ಇಲ್ಲಿ ಕಳೆದ ಸಲದ ಕಾಂಗ್ರೆಸ್ ಅಭ್ಯರ್ಥಿ ಈಗ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ, ಕಳೆದ ಸಲದ ಬಿಜೆಪಿಯ ಕ್ಯಾಂಡಿಡೇಟ್ ಈ ಸಲ ಕಾಂಗ್ರೆಸ್ ಕ್ಯಾಂಡಿಡೇಟ್. ಇವುಗಳ ನಡುವೆ ಜೆಡಿಎಸ್ ಇಲ್ಲಿ ಬೆಳೆಯುವ ಅಪೂರ್ವ ಅವಕಾಶವನ್ನು ಕೈ ಚೆಲ್ಲಿತೆ..?

ಉಪ ಚುನಾವಣೆಯಲ್ಲಿ ಕ್ಯಾಂಡಿಡೇಟ್ ಹಾಕಲ್ಲ ಅಂತ ದೇವೇಗೌಡರು ಹೇಳಿದರು. ಕುಮಾರಸ್ವಾಮಿ ಕೂಡ ಅದನ್ನೆ ಹೇಳಿದ್ದರು. ಆದರೆ, ಭೂಕಾಯ್ದೆ ಪರ ಮತ್ತು ಸ್ಪೀಕರ್ ವಿಷಯದಲ್ಲಿ ಜೆಡಿಎಸ್ ನಿಲುವನ್ನು ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡು, ಜೆಡಿಎಸ್ ಬಿಜೆಪಿ ಪರ ನಿಲ್ತಾ ಇದೆ ಎಂದ ಕೂಡಲೇ ಎಚ್ಚೆತ್ತುಕೊಂಡ ಕುಮಾರಸ್ವಾಮಿ, ಉಪ ಚಹುನಾವಣೆಗಳಲ್ಲಿ ಎಲ್ಲ ಕಡೆ ಕ್ಯಾಂಡಿಡೇಟ್ ಹಾಕುವುದಾಗಿ ಹೇಳಿದ್ದರು.

ಆದರೆ ಈಗ ಸಂಪನ್ಮೂಲದ ಕೊರತೆಯ ಕಾರಣದಿಂದ ಅವರು ಎಲ್ಲ ಕಡೆ ಅಭ್ಯರ್ಥಿ ಹಾಕಿಲ್ಲ! 3 ಉಪ ಚುನಾವಣೆ ಪೈಕಿ ಬಸವಕಲ್ಯಾಣದಲ್ಲಿ ಮುಸ್ಲಿಂ ಅಭ್ಯರ್ಥಿ ಹಾಕಲು ಅವರಿಗೆ ಸಂಪನ್ಮೂಲದ ಕೊರತೆ ಕಾಣಲಿಲ್ಲವೇ ಎಂಬ ಪ್ರಶ್ನೆ ಎದುರಾಗಿದೆ.

ಇದನ್ನೂ ಓದಿ: ಮಸ್ಕಿ ಉಪಚುನಾವಣೆ| ಅಭ್ಯರ್ಥಿಗಳು ಅದಲು-ಬದಲು: ಮೀಸಲು ಕ್ಷೇತ್ರದಲ್ಲಿ ‘ಗೌಡರ’ ಸ್ಪರ್ಧೆ!

ಆದರೆ ಒಳ್ಳೇ ಫೈಟ್ ಕೊಡುವ ಸಾಧ್ಯತೆಯಿದ್ದ ಮಸ್ಕಿಯಲ್ಲಿ ಜೆಡಿಎಸ್ ಕ್ಯಾಂಡಿಡೇಟ್ ಹಾಕಿಲ್ಲ. ಸಂಪನ್ಮೂಲದ ಕೊರತೆಯೇ? ಸಂಪನ್ಮೂಲ ಅಂದರೆ ಏನು? ಅದು ನೂರಾರು ಕೋಟಿ ರೊಕ್ಕವೇ? ಅಥವಾ ಅಲ್ಲಿರುವ ಮತದಾರರರೇ? ಈ ನಿಟ್ಟಿನಲ್ಲಿ ಯೋಚಿಸಿದಾಗ ಒಕ್ಕಲಿಗರ ಪಾರ್ಟಿ ಎಂಬ ಹಣೆಪಟ್ಟಿ ಅಚಿಟಿಸಿಕೊಂಡಿರುವ ಜೆಡಿಎಸ್‌ಗೆ ಹೈದರಾಬಾದ್ ಕರ್ನಾಟಕದಲ್ಲಿ ನೆಲೆ ವಿಸ್ತರಿಸುವ ಸಾಕಷ್ಟು ಸಾಧ್ಯತೆ ಇವೆ. ಇಲ್ಲಿ ಇನ್ನೂ ಜನತಾ ಪರಿವಾರದ ಬೇರುಗಳಿವೆ.

ಇನ್ನು ಮಸ್ಕಿಗೇ ಬರೋಣ. ಮಸ್ಕಿಗೆ ಅಂಟಿಕೊಂಡ ಸಿಂಧನೂರಲ್ಲಿ ಜೆಡಿಎಸ್‌ನಿಂದ ವೆಂಕಟರಾವ್ ನಾಡಗೌಡ ಶಾಸಕರು, ಇನ್ನೊಂದು ಕಡೆ ಮಸ್ಕಿಗೆ ಅಂಟಿಕೊಂಡ ರಾಯಚೂರು ಜಿಲ್ಲೆಯ ಮಾನ್ವಿ ಕ್ಷೇತ್ರದಲ್ಲಿ ರಾಜಾ ವೆಂಕಟಪ್ಪ ನಾಯಕ್ ಜೆಡಿಎಸ್‌ನ ಶಾಸಕರು. ಜೆಡಿಎಸ್‌ಗೆ ಇದಕ್ಕಿಂತ ಸಂಪನ್ಮೂಲ ಬೇಕಿತ್ತೆ..? ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರವಾದ ಮಸ್ಕಿಯಲ್ಲಿ ನಾಯಕರು ಮತ್ತು ಲಿಂಗಾಯತರ ಮತಗಳು ನಿರ್ಣಾಯಕ. ಸಿಂಧನೂರಿನ ಎಂಎಲ್‌ಎ ಲಿಂಗಾಯತ, ಮಾನ್ವಿಯ ಎಂಎಲ್‌ಎ ನಾಯಕ ಜನಾಂಗದವರು. ಇದು ಸಂಪನ್ಮೂಲ ಅಲ್ಲವೇ..? ಎಂಬ ಪ್ರಶ್ನೆಗಳು ಮೂಡಿವೆ.

ಮಸ್ಕಿಗೆ ಅಂಟಿಕೊಂಡ ಲಿಂಗಸೂಗುರು ಕ್ಷೇತ್ರದಲ್ಲೂ ಜೆಡಿಎಸ್ ಪ್ರಭಾವ ಇದೆ. 2013 ರಲ್ಲಿ ಮಾನಪ್ಪ ವಜ್ಜಲ ಇಲ್ಲಿಂದ ಜೆಡಿಎಸ್‌ನಿಂದ ಗೆದ್ದಿದ್ದರು. 2018 ರಲ್ಲಿ ಜೆಡಿಎಸ್ ಕೆಲವೇ ಸಾವಿರ ಮತಗಳಲ್ಲಿ ಸೋತು ಎರಡೆನೇ ಸ್ಥಾನದಲ್ಲಿ ಇತ್ತು.

ಅಂದರೆ ಅಂಟಿಕೊಂಡ ಮೂರು ಕ್ಷೇತ್ರಗಳಲ್ಲಿ ಪ್ರಭಾವ ಇದ್ದರೂ ಸಂಪನ್ಮೂಲದ ಕೊರತೆಯಿಂದ ಜೆಡಿಎಸ್ ಇಲ್ಲಿ ಕ್ಯಾಂಡಿಡೇಟ್ ಹಾಕಿಲ್ಲ! ಆದರೆ ಬಸವಕಲ್ಯಾಣದಲ್ಲಿ ಅದು ಮುಸ್ಲಿಂ ಅಭ್ಯರ್ಥಿಯನ್ನು ಹಾಕಿದೆ. ಇತ್ತ ಬೆಳಗಾವಿಯಲ್ಲಿ ಅಪಾರ ಸಂಪನ್ಮೂಲದ ಜಾರಕಿಹೊಳಿ ಎದುರೂ ಕ್ಯಾಂಡಿಡೇಟ್ ಹಾಕಿಲ್ಲ.

ಇದನ್ನೂ ಓದಿ: ಬಸವ ಕಲ್ಯಾಣ ಉಪಚುನಾವಣೆ: ವಿಜಯೇಂದ್ರಗೆ ಟಿಕೆಟ್ ಇಲ್ಲ, ಈಗ್ಲೂ ‘ಹೊರಗಿನವರಿಗೇ’ ಟಿಕೆಟ್: ನಾರಾಯಣರಾವ್ ನೆನಪೇ ಕಾಂಗ್ರೆಸ್ ಶಕ್ತಿ!

ಸಂಪನ್ಮೂಲ ಹುಡುಕುತ್ತ ಬೈ ಎಲೆಕ್ಷನ ಬಂಧನದಲ್ಲಿ ಅನ್ನಬಹುದು. ಸಂಪನ್ಮೂಲದ ಕೊರತೆ ಬೈ ಎಲೆಕ್ಷನ್ ಮೂಲಕ ನೀಗಿದೆಯೇ ಎಂಬ ಪ್ರಶ್ನೆ ಮಾತ್ರ ಹಾಗೇ ಉಳಿದಿದೆ.

ನಿನ್ನೆ ಮಸ್ಕಿಯ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡರು ಸಿಂಧನೂರಿನ ಜೆಡಿಎಸ್ ಶಾಸಕ ವೆಂಕಟರಾವ್ ನಾಡಗೌಡರ ಮನೆಗೆ ಹೋಗಿ ಬೆಂಬಲ ಕೇಳಿದರೆಂದು ಇಲ್ಲಿನ ಎಲ್ಲ ದಿನಪತ್ರಿಕೆಗಳಲ್ಲಿ ಬಂದಿದೆ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ.

ಇತ್ತ, ಸುಮಾರು 12 ದಿನದ ಹಿಂದೆ ಮಸ್ಕಿ ಚುನಾವಣೆ ನಿಮಿತ್ತ ಸಿಂಧನೂರಿಗೆ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಿಂಧನೂರು ಐಬಿಯಲ್ಲಿ ವಿಶೇಷವಾಗಿ ಭೇಟಿ ಮಾಡಿದ ಸಿಂಧನೂರು ಶಾಸಕ ನಾಡಗೌಡರು ಮರುದಿನವೇ, ಮಸ್ಕಿಯಲ್ಲಿ ಕ್ಯಾಂಡಿಡೇಟ್ ಹಾಕಲ್ಲ ಎಂದಿದ್ದರು. ಅಷ್ಟೊತ್ತಿಗೆ ವಿಜಯೇಂದ್ರ ಮತ್ತು ಕುಮಾರಸ್ವಾಮಿ ಡಿಸ್ಕಸ್ ಮಾಡಿರಬಹುದು ಎಂದು ಇಲ್ಲಿನ ರೈತ ಹೋರಾಟಗಾರರು ಹೇಳುತ್ತಾರೆ. ಜೊತೆಗೆ ಒಳ ಒಪ್ಪಂದ ಆಗಿರಬಹುದು ಎಂಬ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ.

‘ನಾನು ಒಬ್ಬ ಶಾಸಕನಾಗಿ ಸಿಎಂ ಭೇಟಿ ಮಾಡಿದ್ದೇನೆ ಅಷ್ಟೇ… ನಮ್ಮ ಕಾರ್ಯಕರ್ತರು ಬೇಡ ಅಂದಿದ್ದಕ್ಕೆ ಕ್ಯಾಂಡಿಡೇಟ್ ಹಾಕಿಲ್ಲ. ನೀರಾವರಿ ಹೋರಾಟ ಫಲಿತಾಂಶದ ಮ್ಯಾಲ ಪ್ರಭಾವ ಬೀರುತ್ತದೆ ‘ವೆಂಕಟ ರಾವ್ ನಾಡಗೌಡ, ಸಿಂಧನೂರು ಶಾಸಕ


ಇದನ್ನೂ ಓದಿ: ಬೆಳಗಾವಿ ಲಿಂಗಾಯತರ ಕೋಟೆಯಲ್ಲಿ ಸತೀಶ್ ಜಾರಕಿಹೊಳಿ ಹೋರಾಟ: ಅಹಿಂದ ಒಟ್ಟುಗೂಡುವುದೇ? ಗೆದ್ರೆ ಯಮಕನಮರಡಿಯಲ್ಲಿ ಪ್ರಿಯಾಂಕಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...