Homeಕರ್ನಾಟಕಮಸ್ಕಿ: ಒಂದು ಕಡೆ ಜೆಡಿಎಸ್ ಶಾಸಕ ವೆಂಕಟಪ್ಪ ನಾಯಕ್, ಇನ್ನೊಂದು ಕಡೆ ಅದೇ ಪಾರ್ಟಿ MLA...

ಮಸ್ಕಿ: ಒಂದು ಕಡೆ ಜೆಡಿಎಸ್ ಶಾಸಕ ವೆಂಕಟಪ್ಪ ನಾಯಕ್, ಇನ್ನೊಂದು ಕಡೆ ಅದೇ ಪಾರ್ಟಿ MLA ನಾಡಗೌಡ: ಮಧ್ಯದಲ್ಲಿ ಜೆಡಿಎಸ್ ಕ್ಯಾಂಡಿಡೇಟೇ ಇಲ್ಲ!

ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಿಂಧನೂರು ಐಬಿಯಲ್ಲಿ ವಿಶೇಷವಾಗಿ ಭೇಟಿ ಮಾಡಿದ ಸಿಂಧನೂರು ಶಾಸಕ ನಾಡಗೌಡರು ಮರುದಿನವೇ, ಮಸ್ಕಿಯಲ್ಲಿ ಕ್ಯಾಂಡಿಡೇಟ್ ಹಾಕಲ್ಲ ಎಂದಿದ್ದರು.

- Advertisement -
- Advertisement -

ಸಂಪನ್ಮೂಲದ ಅಭಾವ ಎನ್ನುತ್ತಿರುವ ಜೆಡಿಎಸ್ ಪಕ್ಷ ಬಸವಕಲ್ಯಾಣದಲ್ಲಿ ಮುಸ್ಲಿಂ ಕ್ಯಾಂಡಿಡೇಟ್ ಹಾಕಿದೆ. ಆದರೆ ಅಕ್ಕ ಪಕ್ಕದಲ್ಲೇ ಇಬ್ಬರು ಎಂಎಲ್‌ಎ ಇದ್ದರೂ ಮಸ್ಕಿ ಉಪಚುನಾವಣೆಗೆ ಅಭ್ಯರ್ಥಿ ಹಾಕಿಲ್ಲ.

ಈಗ ರಾಯಚೂರು ಜಿಲ್ಲೆಯ ಮಸ್ಕಿಗೆ ಉಪ ಚುನಾವಣೆ ನಡೀತಾ ಇದೆ. ವಿಶೇಷ ಅಂದರೆ ಇಲ್ಲಿ ಕಳೆದ ಸಲದ ಕಾಂಗ್ರೆಸ್ ಅಭ್ಯರ್ಥಿ ಈಗ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ, ಕಳೆದ ಸಲದ ಬಿಜೆಪಿಯ ಕ್ಯಾಂಡಿಡೇಟ್ ಈ ಸಲ ಕಾಂಗ್ರೆಸ್ ಕ್ಯಾಂಡಿಡೇಟ್. ಇವುಗಳ ನಡುವೆ ಜೆಡಿಎಸ್ ಇಲ್ಲಿ ಬೆಳೆಯುವ ಅಪೂರ್ವ ಅವಕಾಶವನ್ನು ಕೈ ಚೆಲ್ಲಿತೆ..?

ಉಪ ಚುನಾವಣೆಯಲ್ಲಿ ಕ್ಯಾಂಡಿಡೇಟ್ ಹಾಕಲ್ಲ ಅಂತ ದೇವೇಗೌಡರು ಹೇಳಿದರು. ಕುಮಾರಸ್ವಾಮಿ ಕೂಡ ಅದನ್ನೆ ಹೇಳಿದ್ದರು. ಆದರೆ, ಭೂಕಾಯ್ದೆ ಪರ ಮತ್ತು ಸ್ಪೀಕರ್ ವಿಷಯದಲ್ಲಿ ಜೆಡಿಎಸ್ ನಿಲುವನ್ನು ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡು, ಜೆಡಿಎಸ್ ಬಿಜೆಪಿ ಪರ ನಿಲ್ತಾ ಇದೆ ಎಂದ ಕೂಡಲೇ ಎಚ್ಚೆತ್ತುಕೊಂಡ ಕುಮಾರಸ್ವಾಮಿ, ಉಪ ಚಹುನಾವಣೆಗಳಲ್ಲಿ ಎಲ್ಲ ಕಡೆ ಕ್ಯಾಂಡಿಡೇಟ್ ಹಾಕುವುದಾಗಿ ಹೇಳಿದ್ದರು.

ಆದರೆ ಈಗ ಸಂಪನ್ಮೂಲದ ಕೊರತೆಯ ಕಾರಣದಿಂದ ಅವರು ಎಲ್ಲ ಕಡೆ ಅಭ್ಯರ್ಥಿ ಹಾಕಿಲ್ಲ! 3 ಉಪ ಚುನಾವಣೆ ಪೈಕಿ ಬಸವಕಲ್ಯಾಣದಲ್ಲಿ ಮುಸ್ಲಿಂ ಅಭ್ಯರ್ಥಿ ಹಾಕಲು ಅವರಿಗೆ ಸಂಪನ್ಮೂಲದ ಕೊರತೆ ಕಾಣಲಿಲ್ಲವೇ ಎಂಬ ಪ್ರಶ್ನೆ ಎದುರಾಗಿದೆ.

ಇದನ್ನೂ ಓದಿ: ಮಸ್ಕಿ ಉಪಚುನಾವಣೆ| ಅಭ್ಯರ್ಥಿಗಳು ಅದಲು-ಬದಲು: ಮೀಸಲು ಕ್ಷೇತ್ರದಲ್ಲಿ ‘ಗೌಡರ’ ಸ್ಪರ್ಧೆ!

ಆದರೆ ಒಳ್ಳೇ ಫೈಟ್ ಕೊಡುವ ಸಾಧ್ಯತೆಯಿದ್ದ ಮಸ್ಕಿಯಲ್ಲಿ ಜೆಡಿಎಸ್ ಕ್ಯಾಂಡಿಡೇಟ್ ಹಾಕಿಲ್ಲ. ಸಂಪನ್ಮೂಲದ ಕೊರತೆಯೇ? ಸಂಪನ್ಮೂಲ ಅಂದರೆ ಏನು? ಅದು ನೂರಾರು ಕೋಟಿ ರೊಕ್ಕವೇ? ಅಥವಾ ಅಲ್ಲಿರುವ ಮತದಾರರರೇ? ಈ ನಿಟ್ಟಿನಲ್ಲಿ ಯೋಚಿಸಿದಾಗ ಒಕ್ಕಲಿಗರ ಪಾರ್ಟಿ ಎಂಬ ಹಣೆಪಟ್ಟಿ ಅಚಿಟಿಸಿಕೊಂಡಿರುವ ಜೆಡಿಎಸ್‌ಗೆ ಹೈದರಾಬಾದ್ ಕರ್ನಾಟಕದಲ್ಲಿ ನೆಲೆ ವಿಸ್ತರಿಸುವ ಸಾಕಷ್ಟು ಸಾಧ್ಯತೆ ಇವೆ. ಇಲ್ಲಿ ಇನ್ನೂ ಜನತಾ ಪರಿವಾರದ ಬೇರುಗಳಿವೆ.

ಇನ್ನು ಮಸ್ಕಿಗೇ ಬರೋಣ. ಮಸ್ಕಿಗೆ ಅಂಟಿಕೊಂಡ ಸಿಂಧನೂರಲ್ಲಿ ಜೆಡಿಎಸ್‌ನಿಂದ ವೆಂಕಟರಾವ್ ನಾಡಗೌಡ ಶಾಸಕರು, ಇನ್ನೊಂದು ಕಡೆ ಮಸ್ಕಿಗೆ ಅಂಟಿಕೊಂಡ ರಾಯಚೂರು ಜಿಲ್ಲೆಯ ಮಾನ್ವಿ ಕ್ಷೇತ್ರದಲ್ಲಿ ರಾಜಾ ವೆಂಕಟಪ್ಪ ನಾಯಕ್ ಜೆಡಿಎಸ್‌ನ ಶಾಸಕರು. ಜೆಡಿಎಸ್‌ಗೆ ಇದಕ್ಕಿಂತ ಸಂಪನ್ಮೂಲ ಬೇಕಿತ್ತೆ..? ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರವಾದ ಮಸ್ಕಿಯಲ್ಲಿ ನಾಯಕರು ಮತ್ತು ಲಿಂಗಾಯತರ ಮತಗಳು ನಿರ್ಣಾಯಕ. ಸಿಂಧನೂರಿನ ಎಂಎಲ್‌ಎ ಲಿಂಗಾಯತ, ಮಾನ್ವಿಯ ಎಂಎಲ್‌ಎ ನಾಯಕ ಜನಾಂಗದವರು. ಇದು ಸಂಪನ್ಮೂಲ ಅಲ್ಲವೇ..? ಎಂಬ ಪ್ರಶ್ನೆಗಳು ಮೂಡಿವೆ.

ಮಸ್ಕಿಗೆ ಅಂಟಿಕೊಂಡ ಲಿಂಗಸೂಗುರು ಕ್ಷೇತ್ರದಲ್ಲೂ ಜೆಡಿಎಸ್ ಪ್ರಭಾವ ಇದೆ. 2013 ರಲ್ಲಿ ಮಾನಪ್ಪ ವಜ್ಜಲ ಇಲ್ಲಿಂದ ಜೆಡಿಎಸ್‌ನಿಂದ ಗೆದ್ದಿದ್ದರು. 2018 ರಲ್ಲಿ ಜೆಡಿಎಸ್ ಕೆಲವೇ ಸಾವಿರ ಮತಗಳಲ್ಲಿ ಸೋತು ಎರಡೆನೇ ಸ್ಥಾನದಲ್ಲಿ ಇತ್ತು.

ಅಂದರೆ ಅಂಟಿಕೊಂಡ ಮೂರು ಕ್ಷೇತ್ರಗಳಲ್ಲಿ ಪ್ರಭಾವ ಇದ್ದರೂ ಸಂಪನ್ಮೂಲದ ಕೊರತೆಯಿಂದ ಜೆಡಿಎಸ್ ಇಲ್ಲಿ ಕ್ಯಾಂಡಿಡೇಟ್ ಹಾಕಿಲ್ಲ! ಆದರೆ ಬಸವಕಲ್ಯಾಣದಲ್ಲಿ ಅದು ಮುಸ್ಲಿಂ ಅಭ್ಯರ್ಥಿಯನ್ನು ಹಾಕಿದೆ. ಇತ್ತ ಬೆಳಗಾವಿಯಲ್ಲಿ ಅಪಾರ ಸಂಪನ್ಮೂಲದ ಜಾರಕಿಹೊಳಿ ಎದುರೂ ಕ್ಯಾಂಡಿಡೇಟ್ ಹಾಕಿಲ್ಲ.

ಇದನ್ನೂ ಓದಿ: ಬಸವ ಕಲ್ಯಾಣ ಉಪಚುನಾವಣೆ: ವಿಜಯೇಂದ್ರಗೆ ಟಿಕೆಟ್ ಇಲ್ಲ, ಈಗ್ಲೂ ‘ಹೊರಗಿನವರಿಗೇ’ ಟಿಕೆಟ್: ನಾರಾಯಣರಾವ್ ನೆನಪೇ ಕಾಂಗ್ರೆಸ್ ಶಕ್ತಿ!

ಸಂಪನ್ಮೂಲ ಹುಡುಕುತ್ತ ಬೈ ಎಲೆಕ್ಷನ ಬಂಧನದಲ್ಲಿ ಅನ್ನಬಹುದು. ಸಂಪನ್ಮೂಲದ ಕೊರತೆ ಬೈ ಎಲೆಕ್ಷನ್ ಮೂಲಕ ನೀಗಿದೆಯೇ ಎಂಬ ಪ್ರಶ್ನೆ ಮಾತ್ರ ಹಾಗೇ ಉಳಿದಿದೆ.

ನಿನ್ನೆ ಮಸ್ಕಿಯ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡರು ಸಿಂಧನೂರಿನ ಜೆಡಿಎಸ್ ಶಾಸಕ ವೆಂಕಟರಾವ್ ನಾಡಗೌಡರ ಮನೆಗೆ ಹೋಗಿ ಬೆಂಬಲ ಕೇಳಿದರೆಂದು ಇಲ್ಲಿನ ಎಲ್ಲ ದಿನಪತ್ರಿಕೆಗಳಲ್ಲಿ ಬಂದಿದೆ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ.

ಇತ್ತ, ಸುಮಾರು 12 ದಿನದ ಹಿಂದೆ ಮಸ್ಕಿ ಚುನಾವಣೆ ನಿಮಿತ್ತ ಸಿಂಧನೂರಿಗೆ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಿಂಧನೂರು ಐಬಿಯಲ್ಲಿ ವಿಶೇಷವಾಗಿ ಭೇಟಿ ಮಾಡಿದ ಸಿಂಧನೂರು ಶಾಸಕ ನಾಡಗೌಡರು ಮರುದಿನವೇ, ಮಸ್ಕಿಯಲ್ಲಿ ಕ್ಯಾಂಡಿಡೇಟ್ ಹಾಕಲ್ಲ ಎಂದಿದ್ದರು. ಅಷ್ಟೊತ್ತಿಗೆ ವಿಜಯೇಂದ್ರ ಮತ್ತು ಕುಮಾರಸ್ವಾಮಿ ಡಿಸ್ಕಸ್ ಮಾಡಿರಬಹುದು ಎಂದು ಇಲ್ಲಿನ ರೈತ ಹೋರಾಟಗಾರರು ಹೇಳುತ್ತಾರೆ. ಜೊತೆಗೆ ಒಳ ಒಪ್ಪಂದ ಆಗಿರಬಹುದು ಎಂಬ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ.

‘ನಾನು ಒಬ್ಬ ಶಾಸಕನಾಗಿ ಸಿಎಂ ಭೇಟಿ ಮಾಡಿದ್ದೇನೆ ಅಷ್ಟೇ… ನಮ್ಮ ಕಾರ್ಯಕರ್ತರು ಬೇಡ ಅಂದಿದ್ದಕ್ಕೆ ಕ್ಯಾಂಡಿಡೇಟ್ ಹಾಕಿಲ್ಲ. ನೀರಾವರಿ ಹೋರಾಟ ಫಲಿತಾಂಶದ ಮ್ಯಾಲ ಪ್ರಭಾವ ಬೀರುತ್ತದೆ ‘ವೆಂಕಟ ರಾವ್ ನಾಡಗೌಡ, ಸಿಂಧನೂರು ಶಾಸಕ


ಇದನ್ನೂ ಓದಿ: ಬೆಳಗಾವಿ ಲಿಂಗಾಯತರ ಕೋಟೆಯಲ್ಲಿ ಸತೀಶ್ ಜಾರಕಿಹೊಳಿ ಹೋರಾಟ: ಅಹಿಂದ ಒಟ್ಟುಗೂಡುವುದೇ? ಗೆದ್ರೆ ಯಮಕನಮರಡಿಯಲ್ಲಿ ಪ್ರಿಯಾಂಕಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...