Homeಕರ್ನಾಟಕಮಸ್ಕಿ: ಒಂದು ಕಡೆ ಜೆಡಿಎಸ್ ಶಾಸಕ ವೆಂಕಟಪ್ಪ ನಾಯಕ್, ಇನ್ನೊಂದು ಕಡೆ ಅದೇ ಪಾರ್ಟಿ MLA...

ಮಸ್ಕಿ: ಒಂದು ಕಡೆ ಜೆಡಿಎಸ್ ಶಾಸಕ ವೆಂಕಟಪ್ಪ ನಾಯಕ್, ಇನ್ನೊಂದು ಕಡೆ ಅದೇ ಪಾರ್ಟಿ MLA ನಾಡಗೌಡ: ಮಧ್ಯದಲ್ಲಿ ಜೆಡಿಎಸ್ ಕ್ಯಾಂಡಿಡೇಟೇ ಇಲ್ಲ!

ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಿಂಧನೂರು ಐಬಿಯಲ್ಲಿ ವಿಶೇಷವಾಗಿ ಭೇಟಿ ಮಾಡಿದ ಸಿಂಧನೂರು ಶಾಸಕ ನಾಡಗೌಡರು ಮರುದಿನವೇ, ಮಸ್ಕಿಯಲ್ಲಿ ಕ್ಯಾಂಡಿಡೇಟ್ ಹಾಕಲ್ಲ ಎಂದಿದ್ದರು.

- Advertisement -
- Advertisement -

ಸಂಪನ್ಮೂಲದ ಅಭಾವ ಎನ್ನುತ್ತಿರುವ ಜೆಡಿಎಸ್ ಪಕ್ಷ ಬಸವಕಲ್ಯಾಣದಲ್ಲಿ ಮುಸ್ಲಿಂ ಕ್ಯಾಂಡಿಡೇಟ್ ಹಾಕಿದೆ. ಆದರೆ ಅಕ್ಕ ಪಕ್ಕದಲ್ಲೇ ಇಬ್ಬರು ಎಂಎಲ್‌ಎ ಇದ್ದರೂ ಮಸ್ಕಿ ಉಪಚುನಾವಣೆಗೆ ಅಭ್ಯರ್ಥಿ ಹಾಕಿಲ್ಲ.

ಈಗ ರಾಯಚೂರು ಜಿಲ್ಲೆಯ ಮಸ್ಕಿಗೆ ಉಪ ಚುನಾವಣೆ ನಡೀತಾ ಇದೆ. ವಿಶೇಷ ಅಂದರೆ ಇಲ್ಲಿ ಕಳೆದ ಸಲದ ಕಾಂಗ್ರೆಸ್ ಅಭ್ಯರ್ಥಿ ಈಗ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ, ಕಳೆದ ಸಲದ ಬಿಜೆಪಿಯ ಕ್ಯಾಂಡಿಡೇಟ್ ಈ ಸಲ ಕಾಂಗ್ರೆಸ್ ಕ್ಯಾಂಡಿಡೇಟ್. ಇವುಗಳ ನಡುವೆ ಜೆಡಿಎಸ್ ಇಲ್ಲಿ ಬೆಳೆಯುವ ಅಪೂರ್ವ ಅವಕಾಶವನ್ನು ಕೈ ಚೆಲ್ಲಿತೆ..?

ಉಪ ಚುನಾವಣೆಯಲ್ಲಿ ಕ್ಯಾಂಡಿಡೇಟ್ ಹಾಕಲ್ಲ ಅಂತ ದೇವೇಗೌಡರು ಹೇಳಿದರು. ಕುಮಾರಸ್ವಾಮಿ ಕೂಡ ಅದನ್ನೆ ಹೇಳಿದ್ದರು. ಆದರೆ, ಭೂಕಾಯ್ದೆ ಪರ ಮತ್ತು ಸ್ಪೀಕರ್ ವಿಷಯದಲ್ಲಿ ಜೆಡಿಎಸ್ ನಿಲುವನ್ನು ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡು, ಜೆಡಿಎಸ್ ಬಿಜೆಪಿ ಪರ ನಿಲ್ತಾ ಇದೆ ಎಂದ ಕೂಡಲೇ ಎಚ್ಚೆತ್ತುಕೊಂಡ ಕುಮಾರಸ್ವಾಮಿ, ಉಪ ಚಹುನಾವಣೆಗಳಲ್ಲಿ ಎಲ್ಲ ಕಡೆ ಕ್ಯಾಂಡಿಡೇಟ್ ಹಾಕುವುದಾಗಿ ಹೇಳಿದ್ದರು.

ಆದರೆ ಈಗ ಸಂಪನ್ಮೂಲದ ಕೊರತೆಯ ಕಾರಣದಿಂದ ಅವರು ಎಲ್ಲ ಕಡೆ ಅಭ್ಯರ್ಥಿ ಹಾಕಿಲ್ಲ! 3 ಉಪ ಚುನಾವಣೆ ಪೈಕಿ ಬಸವಕಲ್ಯಾಣದಲ್ಲಿ ಮುಸ್ಲಿಂ ಅಭ್ಯರ್ಥಿ ಹಾಕಲು ಅವರಿಗೆ ಸಂಪನ್ಮೂಲದ ಕೊರತೆ ಕಾಣಲಿಲ್ಲವೇ ಎಂಬ ಪ್ರಶ್ನೆ ಎದುರಾಗಿದೆ.

ಇದನ್ನೂ ಓದಿ: ಮಸ್ಕಿ ಉಪಚುನಾವಣೆ| ಅಭ್ಯರ್ಥಿಗಳು ಅದಲು-ಬದಲು: ಮೀಸಲು ಕ್ಷೇತ್ರದಲ್ಲಿ ‘ಗೌಡರ’ ಸ್ಪರ್ಧೆ!

ಆದರೆ ಒಳ್ಳೇ ಫೈಟ್ ಕೊಡುವ ಸಾಧ್ಯತೆಯಿದ್ದ ಮಸ್ಕಿಯಲ್ಲಿ ಜೆಡಿಎಸ್ ಕ್ಯಾಂಡಿಡೇಟ್ ಹಾಕಿಲ್ಲ. ಸಂಪನ್ಮೂಲದ ಕೊರತೆಯೇ? ಸಂಪನ್ಮೂಲ ಅಂದರೆ ಏನು? ಅದು ನೂರಾರು ಕೋಟಿ ರೊಕ್ಕವೇ? ಅಥವಾ ಅಲ್ಲಿರುವ ಮತದಾರರರೇ? ಈ ನಿಟ್ಟಿನಲ್ಲಿ ಯೋಚಿಸಿದಾಗ ಒಕ್ಕಲಿಗರ ಪಾರ್ಟಿ ಎಂಬ ಹಣೆಪಟ್ಟಿ ಅಚಿಟಿಸಿಕೊಂಡಿರುವ ಜೆಡಿಎಸ್‌ಗೆ ಹೈದರಾಬಾದ್ ಕರ್ನಾಟಕದಲ್ಲಿ ನೆಲೆ ವಿಸ್ತರಿಸುವ ಸಾಕಷ್ಟು ಸಾಧ್ಯತೆ ಇವೆ. ಇಲ್ಲಿ ಇನ್ನೂ ಜನತಾ ಪರಿವಾರದ ಬೇರುಗಳಿವೆ.

ಇನ್ನು ಮಸ್ಕಿಗೇ ಬರೋಣ. ಮಸ್ಕಿಗೆ ಅಂಟಿಕೊಂಡ ಸಿಂಧನೂರಲ್ಲಿ ಜೆಡಿಎಸ್‌ನಿಂದ ವೆಂಕಟರಾವ್ ನಾಡಗೌಡ ಶಾಸಕರು, ಇನ್ನೊಂದು ಕಡೆ ಮಸ್ಕಿಗೆ ಅಂಟಿಕೊಂಡ ರಾಯಚೂರು ಜಿಲ್ಲೆಯ ಮಾನ್ವಿ ಕ್ಷೇತ್ರದಲ್ಲಿ ರಾಜಾ ವೆಂಕಟಪ್ಪ ನಾಯಕ್ ಜೆಡಿಎಸ್‌ನ ಶಾಸಕರು. ಜೆಡಿಎಸ್‌ಗೆ ಇದಕ್ಕಿಂತ ಸಂಪನ್ಮೂಲ ಬೇಕಿತ್ತೆ..? ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರವಾದ ಮಸ್ಕಿಯಲ್ಲಿ ನಾಯಕರು ಮತ್ತು ಲಿಂಗಾಯತರ ಮತಗಳು ನಿರ್ಣಾಯಕ. ಸಿಂಧನೂರಿನ ಎಂಎಲ್‌ಎ ಲಿಂಗಾಯತ, ಮಾನ್ವಿಯ ಎಂಎಲ್‌ಎ ನಾಯಕ ಜನಾಂಗದವರು. ಇದು ಸಂಪನ್ಮೂಲ ಅಲ್ಲವೇ..? ಎಂಬ ಪ್ರಶ್ನೆಗಳು ಮೂಡಿವೆ.

ಮಸ್ಕಿಗೆ ಅಂಟಿಕೊಂಡ ಲಿಂಗಸೂಗುರು ಕ್ಷೇತ್ರದಲ್ಲೂ ಜೆಡಿಎಸ್ ಪ್ರಭಾವ ಇದೆ. 2013 ರಲ್ಲಿ ಮಾನಪ್ಪ ವಜ್ಜಲ ಇಲ್ಲಿಂದ ಜೆಡಿಎಸ್‌ನಿಂದ ಗೆದ್ದಿದ್ದರು. 2018 ರಲ್ಲಿ ಜೆಡಿಎಸ್ ಕೆಲವೇ ಸಾವಿರ ಮತಗಳಲ್ಲಿ ಸೋತು ಎರಡೆನೇ ಸ್ಥಾನದಲ್ಲಿ ಇತ್ತು.

ಅಂದರೆ ಅಂಟಿಕೊಂಡ ಮೂರು ಕ್ಷೇತ್ರಗಳಲ್ಲಿ ಪ್ರಭಾವ ಇದ್ದರೂ ಸಂಪನ್ಮೂಲದ ಕೊರತೆಯಿಂದ ಜೆಡಿಎಸ್ ಇಲ್ಲಿ ಕ್ಯಾಂಡಿಡೇಟ್ ಹಾಕಿಲ್ಲ! ಆದರೆ ಬಸವಕಲ್ಯಾಣದಲ್ಲಿ ಅದು ಮುಸ್ಲಿಂ ಅಭ್ಯರ್ಥಿಯನ್ನು ಹಾಕಿದೆ. ಇತ್ತ ಬೆಳಗಾವಿಯಲ್ಲಿ ಅಪಾರ ಸಂಪನ್ಮೂಲದ ಜಾರಕಿಹೊಳಿ ಎದುರೂ ಕ್ಯಾಂಡಿಡೇಟ್ ಹಾಕಿಲ್ಲ.

ಇದನ್ನೂ ಓದಿ: ಬಸವ ಕಲ್ಯಾಣ ಉಪಚುನಾವಣೆ: ವಿಜಯೇಂದ್ರಗೆ ಟಿಕೆಟ್ ಇಲ್ಲ, ಈಗ್ಲೂ ‘ಹೊರಗಿನವರಿಗೇ’ ಟಿಕೆಟ್: ನಾರಾಯಣರಾವ್ ನೆನಪೇ ಕಾಂಗ್ರೆಸ್ ಶಕ್ತಿ!

ಸಂಪನ್ಮೂಲ ಹುಡುಕುತ್ತ ಬೈ ಎಲೆಕ್ಷನ ಬಂಧನದಲ್ಲಿ ಅನ್ನಬಹುದು. ಸಂಪನ್ಮೂಲದ ಕೊರತೆ ಬೈ ಎಲೆಕ್ಷನ್ ಮೂಲಕ ನೀಗಿದೆಯೇ ಎಂಬ ಪ್ರಶ್ನೆ ಮಾತ್ರ ಹಾಗೇ ಉಳಿದಿದೆ.

ನಿನ್ನೆ ಮಸ್ಕಿಯ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡರು ಸಿಂಧನೂರಿನ ಜೆಡಿಎಸ್ ಶಾಸಕ ವೆಂಕಟರಾವ್ ನಾಡಗೌಡರ ಮನೆಗೆ ಹೋಗಿ ಬೆಂಬಲ ಕೇಳಿದರೆಂದು ಇಲ್ಲಿನ ಎಲ್ಲ ದಿನಪತ್ರಿಕೆಗಳಲ್ಲಿ ಬಂದಿದೆ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ.

ಇತ್ತ, ಸುಮಾರು 12 ದಿನದ ಹಿಂದೆ ಮಸ್ಕಿ ಚುನಾವಣೆ ನಿಮಿತ್ತ ಸಿಂಧನೂರಿಗೆ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಿಂಧನೂರು ಐಬಿಯಲ್ಲಿ ವಿಶೇಷವಾಗಿ ಭೇಟಿ ಮಾಡಿದ ಸಿಂಧನೂರು ಶಾಸಕ ನಾಡಗೌಡರು ಮರುದಿನವೇ, ಮಸ್ಕಿಯಲ್ಲಿ ಕ್ಯಾಂಡಿಡೇಟ್ ಹಾಕಲ್ಲ ಎಂದಿದ್ದರು. ಅಷ್ಟೊತ್ತಿಗೆ ವಿಜಯೇಂದ್ರ ಮತ್ತು ಕುಮಾರಸ್ವಾಮಿ ಡಿಸ್ಕಸ್ ಮಾಡಿರಬಹುದು ಎಂದು ಇಲ್ಲಿನ ರೈತ ಹೋರಾಟಗಾರರು ಹೇಳುತ್ತಾರೆ. ಜೊತೆಗೆ ಒಳ ಒಪ್ಪಂದ ಆಗಿರಬಹುದು ಎಂಬ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ.

‘ನಾನು ಒಬ್ಬ ಶಾಸಕನಾಗಿ ಸಿಎಂ ಭೇಟಿ ಮಾಡಿದ್ದೇನೆ ಅಷ್ಟೇ… ನಮ್ಮ ಕಾರ್ಯಕರ್ತರು ಬೇಡ ಅಂದಿದ್ದಕ್ಕೆ ಕ್ಯಾಂಡಿಡೇಟ್ ಹಾಕಿಲ್ಲ. ನೀರಾವರಿ ಹೋರಾಟ ಫಲಿತಾಂಶದ ಮ್ಯಾಲ ಪ್ರಭಾವ ಬೀರುತ್ತದೆ ‘ವೆಂಕಟ ರಾವ್ ನಾಡಗೌಡ, ಸಿಂಧನೂರು ಶಾಸಕ


ಇದನ್ನೂ ಓದಿ: ಬೆಳಗಾವಿ ಲಿಂಗಾಯತರ ಕೋಟೆಯಲ್ಲಿ ಸತೀಶ್ ಜಾರಕಿಹೊಳಿ ಹೋರಾಟ: ಅಹಿಂದ ಒಟ್ಟುಗೂಡುವುದೇ? ಗೆದ್ರೆ ಯಮಕನಮರಡಿಯಲ್ಲಿ ಪ್ರಿಯಾಂಕಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...