Homeಕರ್ನಾಟಕಮಸ್ಕಿ: ಒಂದು ಕಡೆ ಜೆಡಿಎಸ್ ಶಾಸಕ ವೆಂಕಟಪ್ಪ ನಾಯಕ್, ಇನ್ನೊಂದು ಕಡೆ ಅದೇ ಪಾರ್ಟಿ MLA...

ಮಸ್ಕಿ: ಒಂದು ಕಡೆ ಜೆಡಿಎಸ್ ಶಾಸಕ ವೆಂಕಟಪ್ಪ ನಾಯಕ್, ಇನ್ನೊಂದು ಕಡೆ ಅದೇ ಪಾರ್ಟಿ MLA ನಾಡಗೌಡ: ಮಧ್ಯದಲ್ಲಿ ಜೆಡಿಎಸ್ ಕ್ಯಾಂಡಿಡೇಟೇ ಇಲ್ಲ!

ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಿಂಧನೂರು ಐಬಿಯಲ್ಲಿ ವಿಶೇಷವಾಗಿ ಭೇಟಿ ಮಾಡಿದ ಸಿಂಧನೂರು ಶಾಸಕ ನಾಡಗೌಡರು ಮರುದಿನವೇ, ಮಸ್ಕಿಯಲ್ಲಿ ಕ್ಯಾಂಡಿಡೇಟ್ ಹಾಕಲ್ಲ ಎಂದಿದ್ದರು.

- Advertisement -
- Advertisement -

ಸಂಪನ್ಮೂಲದ ಅಭಾವ ಎನ್ನುತ್ತಿರುವ ಜೆಡಿಎಸ್ ಪಕ್ಷ ಬಸವಕಲ್ಯಾಣದಲ್ಲಿ ಮುಸ್ಲಿಂ ಕ್ಯಾಂಡಿಡೇಟ್ ಹಾಕಿದೆ. ಆದರೆ ಅಕ್ಕ ಪಕ್ಕದಲ್ಲೇ ಇಬ್ಬರು ಎಂಎಲ್‌ಎ ಇದ್ದರೂ ಮಸ್ಕಿ ಉಪಚುನಾವಣೆಗೆ ಅಭ್ಯರ್ಥಿ ಹಾಕಿಲ್ಲ.

ಈಗ ರಾಯಚೂರು ಜಿಲ್ಲೆಯ ಮಸ್ಕಿಗೆ ಉಪ ಚುನಾವಣೆ ನಡೀತಾ ಇದೆ. ವಿಶೇಷ ಅಂದರೆ ಇಲ್ಲಿ ಕಳೆದ ಸಲದ ಕಾಂಗ್ರೆಸ್ ಅಭ್ಯರ್ಥಿ ಈಗ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ, ಕಳೆದ ಸಲದ ಬಿಜೆಪಿಯ ಕ್ಯಾಂಡಿಡೇಟ್ ಈ ಸಲ ಕಾಂಗ್ರೆಸ್ ಕ್ಯಾಂಡಿಡೇಟ್. ಇವುಗಳ ನಡುವೆ ಜೆಡಿಎಸ್ ಇಲ್ಲಿ ಬೆಳೆಯುವ ಅಪೂರ್ವ ಅವಕಾಶವನ್ನು ಕೈ ಚೆಲ್ಲಿತೆ..?

ಉಪ ಚುನಾವಣೆಯಲ್ಲಿ ಕ್ಯಾಂಡಿಡೇಟ್ ಹಾಕಲ್ಲ ಅಂತ ದೇವೇಗೌಡರು ಹೇಳಿದರು. ಕುಮಾರಸ್ವಾಮಿ ಕೂಡ ಅದನ್ನೆ ಹೇಳಿದ್ದರು. ಆದರೆ, ಭೂಕಾಯ್ದೆ ಪರ ಮತ್ತು ಸ್ಪೀಕರ್ ವಿಷಯದಲ್ಲಿ ಜೆಡಿಎಸ್ ನಿಲುವನ್ನು ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡು, ಜೆಡಿಎಸ್ ಬಿಜೆಪಿ ಪರ ನಿಲ್ತಾ ಇದೆ ಎಂದ ಕೂಡಲೇ ಎಚ್ಚೆತ್ತುಕೊಂಡ ಕುಮಾರಸ್ವಾಮಿ, ಉಪ ಚಹುನಾವಣೆಗಳಲ್ಲಿ ಎಲ್ಲ ಕಡೆ ಕ್ಯಾಂಡಿಡೇಟ್ ಹಾಕುವುದಾಗಿ ಹೇಳಿದ್ದರು.

ಆದರೆ ಈಗ ಸಂಪನ್ಮೂಲದ ಕೊರತೆಯ ಕಾರಣದಿಂದ ಅವರು ಎಲ್ಲ ಕಡೆ ಅಭ್ಯರ್ಥಿ ಹಾಕಿಲ್ಲ! 3 ಉಪ ಚುನಾವಣೆ ಪೈಕಿ ಬಸವಕಲ್ಯಾಣದಲ್ಲಿ ಮುಸ್ಲಿಂ ಅಭ್ಯರ್ಥಿ ಹಾಕಲು ಅವರಿಗೆ ಸಂಪನ್ಮೂಲದ ಕೊರತೆ ಕಾಣಲಿಲ್ಲವೇ ಎಂಬ ಪ್ರಶ್ನೆ ಎದುರಾಗಿದೆ.

ಇದನ್ನೂ ಓದಿ: ಮಸ್ಕಿ ಉಪಚುನಾವಣೆ| ಅಭ್ಯರ್ಥಿಗಳು ಅದಲು-ಬದಲು: ಮೀಸಲು ಕ್ಷೇತ್ರದಲ್ಲಿ ‘ಗೌಡರ’ ಸ್ಪರ್ಧೆ!

ಆದರೆ ಒಳ್ಳೇ ಫೈಟ್ ಕೊಡುವ ಸಾಧ್ಯತೆಯಿದ್ದ ಮಸ್ಕಿಯಲ್ಲಿ ಜೆಡಿಎಸ್ ಕ್ಯಾಂಡಿಡೇಟ್ ಹಾಕಿಲ್ಲ. ಸಂಪನ್ಮೂಲದ ಕೊರತೆಯೇ? ಸಂಪನ್ಮೂಲ ಅಂದರೆ ಏನು? ಅದು ನೂರಾರು ಕೋಟಿ ರೊಕ್ಕವೇ? ಅಥವಾ ಅಲ್ಲಿರುವ ಮತದಾರರರೇ? ಈ ನಿಟ್ಟಿನಲ್ಲಿ ಯೋಚಿಸಿದಾಗ ಒಕ್ಕಲಿಗರ ಪಾರ್ಟಿ ಎಂಬ ಹಣೆಪಟ್ಟಿ ಅಚಿಟಿಸಿಕೊಂಡಿರುವ ಜೆಡಿಎಸ್‌ಗೆ ಹೈದರಾಬಾದ್ ಕರ್ನಾಟಕದಲ್ಲಿ ನೆಲೆ ವಿಸ್ತರಿಸುವ ಸಾಕಷ್ಟು ಸಾಧ್ಯತೆ ಇವೆ. ಇಲ್ಲಿ ಇನ್ನೂ ಜನತಾ ಪರಿವಾರದ ಬೇರುಗಳಿವೆ.

ಇನ್ನು ಮಸ್ಕಿಗೇ ಬರೋಣ. ಮಸ್ಕಿಗೆ ಅಂಟಿಕೊಂಡ ಸಿಂಧನೂರಲ್ಲಿ ಜೆಡಿಎಸ್‌ನಿಂದ ವೆಂಕಟರಾವ್ ನಾಡಗೌಡ ಶಾಸಕರು, ಇನ್ನೊಂದು ಕಡೆ ಮಸ್ಕಿಗೆ ಅಂಟಿಕೊಂಡ ರಾಯಚೂರು ಜಿಲ್ಲೆಯ ಮಾನ್ವಿ ಕ್ಷೇತ್ರದಲ್ಲಿ ರಾಜಾ ವೆಂಕಟಪ್ಪ ನಾಯಕ್ ಜೆಡಿಎಸ್‌ನ ಶಾಸಕರು. ಜೆಡಿಎಸ್‌ಗೆ ಇದಕ್ಕಿಂತ ಸಂಪನ್ಮೂಲ ಬೇಕಿತ್ತೆ..? ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರವಾದ ಮಸ್ಕಿಯಲ್ಲಿ ನಾಯಕರು ಮತ್ತು ಲಿಂಗಾಯತರ ಮತಗಳು ನಿರ್ಣಾಯಕ. ಸಿಂಧನೂರಿನ ಎಂಎಲ್‌ಎ ಲಿಂಗಾಯತ, ಮಾನ್ವಿಯ ಎಂಎಲ್‌ಎ ನಾಯಕ ಜನಾಂಗದವರು. ಇದು ಸಂಪನ್ಮೂಲ ಅಲ್ಲವೇ..? ಎಂಬ ಪ್ರಶ್ನೆಗಳು ಮೂಡಿವೆ.

ಮಸ್ಕಿಗೆ ಅಂಟಿಕೊಂಡ ಲಿಂಗಸೂಗುರು ಕ್ಷೇತ್ರದಲ್ಲೂ ಜೆಡಿಎಸ್ ಪ್ರಭಾವ ಇದೆ. 2013 ರಲ್ಲಿ ಮಾನಪ್ಪ ವಜ್ಜಲ ಇಲ್ಲಿಂದ ಜೆಡಿಎಸ್‌ನಿಂದ ಗೆದ್ದಿದ್ದರು. 2018 ರಲ್ಲಿ ಜೆಡಿಎಸ್ ಕೆಲವೇ ಸಾವಿರ ಮತಗಳಲ್ಲಿ ಸೋತು ಎರಡೆನೇ ಸ್ಥಾನದಲ್ಲಿ ಇತ್ತು.

ಅಂದರೆ ಅಂಟಿಕೊಂಡ ಮೂರು ಕ್ಷೇತ್ರಗಳಲ್ಲಿ ಪ್ರಭಾವ ಇದ್ದರೂ ಸಂಪನ್ಮೂಲದ ಕೊರತೆಯಿಂದ ಜೆಡಿಎಸ್ ಇಲ್ಲಿ ಕ್ಯಾಂಡಿಡೇಟ್ ಹಾಕಿಲ್ಲ! ಆದರೆ ಬಸವಕಲ್ಯಾಣದಲ್ಲಿ ಅದು ಮುಸ್ಲಿಂ ಅಭ್ಯರ್ಥಿಯನ್ನು ಹಾಕಿದೆ. ಇತ್ತ ಬೆಳಗಾವಿಯಲ್ಲಿ ಅಪಾರ ಸಂಪನ್ಮೂಲದ ಜಾರಕಿಹೊಳಿ ಎದುರೂ ಕ್ಯಾಂಡಿಡೇಟ್ ಹಾಕಿಲ್ಲ.

ಇದನ್ನೂ ಓದಿ: ಬಸವ ಕಲ್ಯಾಣ ಉಪಚುನಾವಣೆ: ವಿಜಯೇಂದ್ರಗೆ ಟಿಕೆಟ್ ಇಲ್ಲ, ಈಗ್ಲೂ ‘ಹೊರಗಿನವರಿಗೇ’ ಟಿಕೆಟ್: ನಾರಾಯಣರಾವ್ ನೆನಪೇ ಕಾಂಗ್ರೆಸ್ ಶಕ್ತಿ!

ಸಂಪನ್ಮೂಲ ಹುಡುಕುತ್ತ ಬೈ ಎಲೆಕ್ಷನ ಬಂಧನದಲ್ಲಿ ಅನ್ನಬಹುದು. ಸಂಪನ್ಮೂಲದ ಕೊರತೆ ಬೈ ಎಲೆಕ್ಷನ್ ಮೂಲಕ ನೀಗಿದೆಯೇ ಎಂಬ ಪ್ರಶ್ನೆ ಮಾತ್ರ ಹಾಗೇ ಉಳಿದಿದೆ.

ನಿನ್ನೆ ಮಸ್ಕಿಯ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡರು ಸಿಂಧನೂರಿನ ಜೆಡಿಎಸ್ ಶಾಸಕ ವೆಂಕಟರಾವ್ ನಾಡಗೌಡರ ಮನೆಗೆ ಹೋಗಿ ಬೆಂಬಲ ಕೇಳಿದರೆಂದು ಇಲ್ಲಿನ ಎಲ್ಲ ದಿನಪತ್ರಿಕೆಗಳಲ್ಲಿ ಬಂದಿದೆ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ.

ಇತ್ತ, ಸುಮಾರು 12 ದಿನದ ಹಿಂದೆ ಮಸ್ಕಿ ಚುನಾವಣೆ ನಿಮಿತ್ತ ಸಿಂಧನೂರಿಗೆ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಿಂಧನೂರು ಐಬಿಯಲ್ಲಿ ವಿಶೇಷವಾಗಿ ಭೇಟಿ ಮಾಡಿದ ಸಿಂಧನೂರು ಶಾಸಕ ನಾಡಗೌಡರು ಮರುದಿನವೇ, ಮಸ್ಕಿಯಲ್ಲಿ ಕ್ಯಾಂಡಿಡೇಟ್ ಹಾಕಲ್ಲ ಎಂದಿದ್ದರು. ಅಷ್ಟೊತ್ತಿಗೆ ವಿಜಯೇಂದ್ರ ಮತ್ತು ಕುಮಾರಸ್ವಾಮಿ ಡಿಸ್ಕಸ್ ಮಾಡಿರಬಹುದು ಎಂದು ಇಲ್ಲಿನ ರೈತ ಹೋರಾಟಗಾರರು ಹೇಳುತ್ತಾರೆ. ಜೊತೆಗೆ ಒಳ ಒಪ್ಪಂದ ಆಗಿರಬಹುದು ಎಂಬ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ.

‘ನಾನು ಒಬ್ಬ ಶಾಸಕನಾಗಿ ಸಿಎಂ ಭೇಟಿ ಮಾಡಿದ್ದೇನೆ ಅಷ್ಟೇ… ನಮ್ಮ ಕಾರ್ಯಕರ್ತರು ಬೇಡ ಅಂದಿದ್ದಕ್ಕೆ ಕ್ಯಾಂಡಿಡೇಟ್ ಹಾಕಿಲ್ಲ. ನೀರಾವರಿ ಹೋರಾಟ ಫಲಿತಾಂಶದ ಮ್ಯಾಲ ಪ್ರಭಾವ ಬೀರುತ್ತದೆ ‘ವೆಂಕಟ ರಾವ್ ನಾಡಗೌಡ, ಸಿಂಧನೂರು ಶಾಸಕ


ಇದನ್ನೂ ಓದಿ: ಬೆಳಗಾವಿ ಲಿಂಗಾಯತರ ಕೋಟೆಯಲ್ಲಿ ಸತೀಶ್ ಜಾರಕಿಹೊಳಿ ಹೋರಾಟ: ಅಹಿಂದ ಒಟ್ಟುಗೂಡುವುದೇ? ಗೆದ್ರೆ ಯಮಕನಮರಡಿಯಲ್ಲಿ ಪ್ರಿಯಾಂಕಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...