Homeಕರ್ನಾಟಕಮಸ್ಕಿ ಉಪಚುನಾವಣೆ| ಅಭ್ಯರ್ಥಿಗಳು ಅದಲು-ಬದಲು: ಮೀಸಲು ಕ್ಷೇತ್ರದಲ್ಲಿ ‘ಗೌಡರ’ ಸ್ಪರ್ಧೆ!

ಮಸ್ಕಿ ಉಪಚುನಾವಣೆ| ಅಭ್ಯರ್ಥಿಗಳು ಅದಲು-ಬದಲು: ಮೀಸಲು ಕ್ಷೇತ್ರದಲ್ಲಿ ‘ಗೌಡರ’ ಸ್ಪರ್ಧೆ!

- Advertisement -
- Advertisement -

ಮಸ್ಕಿ ಉಪಚುನಾವಣೆ ಎಲ್ಲ ಚುನಾವಣೆಗಳಂತೆ ಜಾತಿ ಲೆಕ್ಕಾಚಾರ, ಆಡಳಿತ ಪಕ್ಷದ ಲಾಭಕರ ಅಂಶ, ಅಭ್ಯರ್ಥಿಗಳ ‘ಜನಪ್ರಿಯತೆ’ ಆಧರಿಸಿಯೇ ನಡೆಯಲಿದೆ. ಆದರೆ ಈ ಸಲ ಇಲ್ಲಿ ಒಂದಿಷ್ಟು ಟ್ವಿಸ್ಟ್‌ಗಳು ಈ ಚುನಾವಣೆಯ ಅಂತಿಮ ಫಲಿತಾಂಶವನ್ನು ನಿರ್ಧರಿಸಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ.

ಅಂದಂತೆ ಮೀಸಲು ಕ್ಷೇತ್ರವಾದ ಇಲ್ಲಿ ‘ಗೌಡರ’ ಸ್ಪರ್ಧೆ ನಡೆಯುತ್ತಿದೆ, ಇದೇನೂ ಆಶ್ಚರ್ಯಕರವಲ್ಲ ಇಲ್ಲಿನ ಜನರಿಗೆ!

ಇಲ್ಲಿ ಈಗ ಮತದಾರರು ಮೇಲ್ನೋಟಕ್ಕೆ ತಟಸ್ಥರಂತೆ ಕಾಣುತ್ತಿದ್ದಾರೆ. ಆದರೆ ಅಭ್ಯರ್ಥಿಗಳು ಅದಲ್-ಬದಲ್ ಆಗಿರುವುದು ಅವರಿಗೇನೂ ಗೊಂದಲ ಮೂಡಿಸಿದಂತೆ ಕಾಣುತ್ತಿಲ್ಲ. ಕಳೆದ ಸಲ ಕಾಂಗ್ರೆಸ್‌ನಿಂದ ಗೆದ್ದಿದ್ದ ಪ್ರತಾಪಗೌಡ ಪಾಟೀಲರು ಆಪರೇಷಮ್ ಕಮಲಕ್ಕೆ ಒಳಗಾದ ಕಾರಣ ‘ಸಾಂವಿಧಾನಿಕ ಪ್ರಕ್ರಿಯೆ’ ಮೂಲಕ ಬಿಜೆಪಿ ಸೇರಿ ಅನರ್ಹಗೊಂಡವರು. ಈ ಅನರ್ಹತೆ ತೊಳೆದು ಹಾಕಲು-ಸುಪ್ರೀಂಕೋರ್ಟ್ ಅಭಿಮತದಂತೆ- ಅವರೀಗ ಉಪ ಚುನಾವಣೆ ಗೆಲ್ಲಬೇಕಿದೆ. ಈಗ ಅವರು ಬಿಜೆಪಿ ಅಭ್ಯರ್ಥಿ. ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಅವರ ವಿರುದ್ಧ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ತುರವಿಹಾಳ ಬಸನಗೌಡ ಈಗ ಕಾಂಗ್ರೆಸ್ ಅಭ್ಯರ್ಥಿ… ಈಗ ಇವರಿಬ್ಬರ ಹಿಂಬಾಲಕರು ತಮ್ಮ ನಾಯಕರ ಹಿಂದೆಯೇ ನಿಂತಿದ್ದಾರೆಯೇ ಹೊರತು ಅವರಿಗೆ ಪಕ್ಷ ಮುಖ್ಯವಾಗಿಲ್ಲ.

ಅಂದಂತೆ ಎರಡೂ ಕಡೆ ‘ಗೌಡರು’ ನಿಂತಿದ್ದಾರೆ ಎಂದರೆ ಸಹಜವಾಗಿ ಅದು ಲಿಂಗಾಯತ ರೆಡ್ಡಿ ಗೌಡರೇ, ಒಕ್ಕಲಿಗ ಗೌಡರೆ ಅಂತಾ ನಿಮಗೆ ಅನಿಸಬಹುದು. ಸಾರಿ, ಇದು ಪರಿಶಿಷ್ಟ ಪಂಗಡ ಮೀಸಲು ಕೇತ್ರ. ಎಸ್‌ಟಿ ಪಂಗಡದವರು ಗೌಡ ಪದ ಸೇರಿಸಿಕೊಂಡಿದ್ದಾರೆ. ಹಾಗಾಗಿ ಅವರ ಹೆಸರುಗಳು ಗೌಡ ಎಂಬಲ್ಲಿಗೆ ಅಂತ್ಯವಾಗುತ್ತವೆ.

ಆದರೆ ಮತದಾರ ‘ಪೊಸಿಷನ್’ ಚೇಂಜ್ ಮಾಡಿದ್ದಾನೋ, ಅಥವಾ ಏಟು ಕೊಡಲು ಕಾಯ್ತಾ ಇದ್ದಾನೋ ಎಂಬುದು ಗೊತ್ತಿಲ್ಲ. ಸುತ್ತಮುತ್ತಲ ಕ್ಷೇತ್ರಗಳಲ್ಲಿ ಪ್ರಭಾವ ಇರುವ, ಕೆಲ ಜನಪ್ರತಿನಿಧಿಗಳನ್ನೂ ಹೊಂದಿರುವ ಜೆಡಿಎಸ್ ಇಲ್ಲಿ ಕ್ಯಾಂಡಿಡೇಟ್ ಹಾಕಿಲ್ಲ! ಫೆಬ್ರವರಿ 14 ರಂದು ಮಾಜಿ ಸಿಎಂ ಕುಮಾರಸ್ವಾಮಿಯವರು ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತೇವೆ, ಬಿಜೆಪಿಗೆ ಅನುಕೂಲ ಮಾಡಿಕೊಡುವುದಿಲ್ಲ ಎಂದಿದ್ದರು. ಆದರೆ ಈಗ ಇಲ್ಲಿ ಅಭ್ಯರ್ಥಿ ಹಾಕದೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ. ಯಾರ ಜೊತೆ ಎಂಬುದನ್ನು ವಿವರಿಸಬೇಕಿಲ್ಲ! ಅದು ಯಡಿಯೂರಪ್ಪರ ಜೊತೆ ಎಂದು ಪ್ರಾಸಂಗಿಕವಾಗಿ ಹೇಳಬಹುದಾದರೂ, ಇಲ್ಲಿನ ಎರಡೂ ಪಕ್ಷಗಳ ಕೆಲವು ನಾಯಕರು ಇದು ವಿಜಯೇಂದ್ರ ಮತ್ತು ಎಚ್‌ಡಿಕೆ ನಡುವಿನ ಒಪ್ಪಂದವೆಂದು ಮಾತನಾಡಿಕೊಳ್ಳುತ್ತಿದ್ದಾರೆ.

ರಾಜಕೀಯದ ಈ ಮಜಲಿನಾಚೆಗೆ ಇಲ್ಲಿ ಕೆಲವು ಪ್ರಮುಖ ಅಂಶಗಳು ಈ ಚುನಾವಣೆಯ ಫಲಿತಾಂಶದ ದಿಕ್ಕನ್ನೇ ಬದಲಿಸಬಲ್ಲವು. ಅದರಲ್ಲಿ 100 ದಿನ ದಾಟಿದ NRBC_5A ನೀರಾವರಿ ಹೋರಾಟವೂ ಒಂದು. 58 ಗ್ರಾಮಗಳ ಜನ ನೀರಾವರಿ ವ್ಯವಸ್ಥೆಗೆ ಆಗ್ರಹಿಸಿ ಸರ್ಕಾರದ ವಿರುದ್ಧ ಸೆಟೆದು ನಿಂತಿದ್ದಾರೆ.

ಇದನ್ನೂ ಓದಿ: NRBC_5A ಜಾರಿಗಾಗಿ 4 ಗ್ರಾ.ಪಂ ಚುನಾವಣೆ ಬಹಿಷ್ಕಾರ: ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲರನ್ನು ಸೋಲಿಸಲು ರೈತರ ನಿರ್ಧಾರ

  • ಮಲ್ಲನಗೌಡರ್ ಪಿ.ಕೆ

ಇದನ್ನೂ ಓದಿ: ಕರ್ನಾಟಕ ಉಪಚುನಾವಣೆ: ಮೂರೂ ಪಕ್ಷಗಳಿಂದ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...