Homeಕರ್ನಾಟಕಮಸ್ಕಿ ಉಪಚುನಾವಣೆ| ಅಭ್ಯರ್ಥಿಗಳು ಅದಲು-ಬದಲು: ಮೀಸಲು ಕ್ಷೇತ್ರದಲ್ಲಿ ‘ಗೌಡರ’ ಸ್ಪರ್ಧೆ!

ಮಸ್ಕಿ ಉಪಚುನಾವಣೆ| ಅಭ್ಯರ್ಥಿಗಳು ಅದಲು-ಬದಲು: ಮೀಸಲು ಕ್ಷೇತ್ರದಲ್ಲಿ ‘ಗೌಡರ’ ಸ್ಪರ್ಧೆ!

- Advertisement -
- Advertisement -

ಮಸ್ಕಿ ಉಪಚುನಾವಣೆ ಎಲ್ಲ ಚುನಾವಣೆಗಳಂತೆ ಜಾತಿ ಲೆಕ್ಕಾಚಾರ, ಆಡಳಿತ ಪಕ್ಷದ ಲಾಭಕರ ಅಂಶ, ಅಭ್ಯರ್ಥಿಗಳ ‘ಜನಪ್ರಿಯತೆ’ ಆಧರಿಸಿಯೇ ನಡೆಯಲಿದೆ. ಆದರೆ ಈ ಸಲ ಇಲ್ಲಿ ಒಂದಿಷ್ಟು ಟ್ವಿಸ್ಟ್‌ಗಳು ಈ ಚುನಾವಣೆಯ ಅಂತಿಮ ಫಲಿತಾಂಶವನ್ನು ನಿರ್ಧರಿಸಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ.

ಅಂದಂತೆ ಮೀಸಲು ಕ್ಷೇತ್ರವಾದ ಇಲ್ಲಿ ‘ಗೌಡರ’ ಸ್ಪರ್ಧೆ ನಡೆಯುತ್ತಿದೆ, ಇದೇನೂ ಆಶ್ಚರ್ಯಕರವಲ್ಲ ಇಲ್ಲಿನ ಜನರಿಗೆ!

ಇಲ್ಲಿ ಈಗ ಮತದಾರರು ಮೇಲ್ನೋಟಕ್ಕೆ ತಟಸ್ಥರಂತೆ ಕಾಣುತ್ತಿದ್ದಾರೆ. ಆದರೆ ಅಭ್ಯರ್ಥಿಗಳು ಅದಲ್-ಬದಲ್ ಆಗಿರುವುದು ಅವರಿಗೇನೂ ಗೊಂದಲ ಮೂಡಿಸಿದಂತೆ ಕಾಣುತ್ತಿಲ್ಲ. ಕಳೆದ ಸಲ ಕಾಂಗ್ರೆಸ್‌ನಿಂದ ಗೆದ್ದಿದ್ದ ಪ್ರತಾಪಗೌಡ ಪಾಟೀಲರು ಆಪರೇಷಮ್ ಕಮಲಕ್ಕೆ ಒಳಗಾದ ಕಾರಣ ‘ಸಾಂವಿಧಾನಿಕ ಪ್ರಕ್ರಿಯೆ’ ಮೂಲಕ ಬಿಜೆಪಿ ಸೇರಿ ಅನರ್ಹಗೊಂಡವರು. ಈ ಅನರ್ಹತೆ ತೊಳೆದು ಹಾಕಲು-ಸುಪ್ರೀಂಕೋರ್ಟ್ ಅಭಿಮತದಂತೆ- ಅವರೀಗ ಉಪ ಚುನಾವಣೆ ಗೆಲ್ಲಬೇಕಿದೆ. ಈಗ ಅವರು ಬಿಜೆಪಿ ಅಭ್ಯರ್ಥಿ. ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಅವರ ವಿರುದ್ಧ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ತುರವಿಹಾಳ ಬಸನಗೌಡ ಈಗ ಕಾಂಗ್ರೆಸ್ ಅಭ್ಯರ್ಥಿ… ಈಗ ಇವರಿಬ್ಬರ ಹಿಂಬಾಲಕರು ತಮ್ಮ ನಾಯಕರ ಹಿಂದೆಯೇ ನಿಂತಿದ್ದಾರೆಯೇ ಹೊರತು ಅವರಿಗೆ ಪಕ್ಷ ಮುಖ್ಯವಾಗಿಲ್ಲ.

ಅಂದಂತೆ ಎರಡೂ ಕಡೆ ‘ಗೌಡರು’ ನಿಂತಿದ್ದಾರೆ ಎಂದರೆ ಸಹಜವಾಗಿ ಅದು ಲಿಂಗಾಯತ ರೆಡ್ಡಿ ಗೌಡರೇ, ಒಕ್ಕಲಿಗ ಗೌಡರೆ ಅಂತಾ ನಿಮಗೆ ಅನಿಸಬಹುದು. ಸಾರಿ, ಇದು ಪರಿಶಿಷ್ಟ ಪಂಗಡ ಮೀಸಲು ಕೇತ್ರ. ಎಸ್‌ಟಿ ಪಂಗಡದವರು ಗೌಡ ಪದ ಸೇರಿಸಿಕೊಂಡಿದ್ದಾರೆ. ಹಾಗಾಗಿ ಅವರ ಹೆಸರುಗಳು ಗೌಡ ಎಂಬಲ್ಲಿಗೆ ಅಂತ್ಯವಾಗುತ್ತವೆ.

ಆದರೆ ಮತದಾರ ‘ಪೊಸಿಷನ್’ ಚೇಂಜ್ ಮಾಡಿದ್ದಾನೋ, ಅಥವಾ ಏಟು ಕೊಡಲು ಕಾಯ್ತಾ ಇದ್ದಾನೋ ಎಂಬುದು ಗೊತ್ತಿಲ್ಲ. ಸುತ್ತಮುತ್ತಲ ಕ್ಷೇತ್ರಗಳಲ್ಲಿ ಪ್ರಭಾವ ಇರುವ, ಕೆಲ ಜನಪ್ರತಿನಿಧಿಗಳನ್ನೂ ಹೊಂದಿರುವ ಜೆಡಿಎಸ್ ಇಲ್ಲಿ ಕ್ಯಾಂಡಿಡೇಟ್ ಹಾಕಿಲ್ಲ! ಫೆಬ್ರವರಿ 14 ರಂದು ಮಾಜಿ ಸಿಎಂ ಕುಮಾರಸ್ವಾಮಿಯವರು ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತೇವೆ, ಬಿಜೆಪಿಗೆ ಅನುಕೂಲ ಮಾಡಿಕೊಡುವುದಿಲ್ಲ ಎಂದಿದ್ದರು. ಆದರೆ ಈಗ ಇಲ್ಲಿ ಅಭ್ಯರ್ಥಿ ಹಾಕದೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ. ಯಾರ ಜೊತೆ ಎಂಬುದನ್ನು ವಿವರಿಸಬೇಕಿಲ್ಲ! ಅದು ಯಡಿಯೂರಪ್ಪರ ಜೊತೆ ಎಂದು ಪ್ರಾಸಂಗಿಕವಾಗಿ ಹೇಳಬಹುದಾದರೂ, ಇಲ್ಲಿನ ಎರಡೂ ಪಕ್ಷಗಳ ಕೆಲವು ನಾಯಕರು ಇದು ವಿಜಯೇಂದ್ರ ಮತ್ತು ಎಚ್‌ಡಿಕೆ ನಡುವಿನ ಒಪ್ಪಂದವೆಂದು ಮಾತನಾಡಿಕೊಳ್ಳುತ್ತಿದ್ದಾರೆ.

ರಾಜಕೀಯದ ಈ ಮಜಲಿನಾಚೆಗೆ ಇಲ್ಲಿ ಕೆಲವು ಪ್ರಮುಖ ಅಂಶಗಳು ಈ ಚುನಾವಣೆಯ ಫಲಿತಾಂಶದ ದಿಕ್ಕನ್ನೇ ಬದಲಿಸಬಲ್ಲವು. ಅದರಲ್ಲಿ 100 ದಿನ ದಾಟಿದ NRBC_5A ನೀರಾವರಿ ಹೋರಾಟವೂ ಒಂದು. 58 ಗ್ರಾಮಗಳ ಜನ ನೀರಾವರಿ ವ್ಯವಸ್ಥೆಗೆ ಆಗ್ರಹಿಸಿ ಸರ್ಕಾರದ ವಿರುದ್ಧ ಸೆಟೆದು ನಿಂತಿದ್ದಾರೆ.

ಇದನ್ನೂ ಓದಿ: NRBC_5A ಜಾರಿಗಾಗಿ 4 ಗ್ರಾ.ಪಂ ಚುನಾವಣೆ ಬಹಿಷ್ಕಾರ: ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲರನ್ನು ಸೋಲಿಸಲು ರೈತರ ನಿರ್ಧಾರ

  • ಮಲ್ಲನಗೌಡರ್ ಪಿ.ಕೆ

ಇದನ್ನೂ ಓದಿ: ಕರ್ನಾಟಕ ಉಪಚುನಾವಣೆ: ಮೂರೂ ಪಕ್ಷಗಳಿಂದ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...