Homeಕರ್ನಾಟಕಮಸ್ಕಿ ಉಪಚುನಾವಣೆ| ಅಭ್ಯರ್ಥಿಗಳು ಅದಲು-ಬದಲು: ಮೀಸಲು ಕ್ಷೇತ್ರದಲ್ಲಿ ‘ಗೌಡರ’ ಸ್ಪರ್ಧೆ!

ಮಸ್ಕಿ ಉಪಚುನಾವಣೆ| ಅಭ್ಯರ್ಥಿಗಳು ಅದಲು-ಬದಲು: ಮೀಸಲು ಕ್ಷೇತ್ರದಲ್ಲಿ ‘ಗೌಡರ’ ಸ್ಪರ್ಧೆ!

- Advertisement -
- Advertisement -

ಮಸ್ಕಿ ಉಪಚುನಾವಣೆ ಎಲ್ಲ ಚುನಾವಣೆಗಳಂತೆ ಜಾತಿ ಲೆಕ್ಕಾಚಾರ, ಆಡಳಿತ ಪಕ್ಷದ ಲಾಭಕರ ಅಂಶ, ಅಭ್ಯರ್ಥಿಗಳ ‘ಜನಪ್ರಿಯತೆ’ ಆಧರಿಸಿಯೇ ನಡೆಯಲಿದೆ. ಆದರೆ ಈ ಸಲ ಇಲ್ಲಿ ಒಂದಿಷ್ಟು ಟ್ವಿಸ್ಟ್‌ಗಳು ಈ ಚುನಾವಣೆಯ ಅಂತಿಮ ಫಲಿತಾಂಶವನ್ನು ನಿರ್ಧರಿಸಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ.

ಅಂದಂತೆ ಮೀಸಲು ಕ್ಷೇತ್ರವಾದ ಇಲ್ಲಿ ‘ಗೌಡರ’ ಸ್ಪರ್ಧೆ ನಡೆಯುತ್ತಿದೆ, ಇದೇನೂ ಆಶ್ಚರ್ಯಕರವಲ್ಲ ಇಲ್ಲಿನ ಜನರಿಗೆ!

ಇಲ್ಲಿ ಈಗ ಮತದಾರರು ಮೇಲ್ನೋಟಕ್ಕೆ ತಟಸ್ಥರಂತೆ ಕಾಣುತ್ತಿದ್ದಾರೆ. ಆದರೆ ಅಭ್ಯರ್ಥಿಗಳು ಅದಲ್-ಬದಲ್ ಆಗಿರುವುದು ಅವರಿಗೇನೂ ಗೊಂದಲ ಮೂಡಿಸಿದಂತೆ ಕಾಣುತ್ತಿಲ್ಲ. ಕಳೆದ ಸಲ ಕಾಂಗ್ರೆಸ್‌ನಿಂದ ಗೆದ್ದಿದ್ದ ಪ್ರತಾಪಗೌಡ ಪಾಟೀಲರು ಆಪರೇಷಮ್ ಕಮಲಕ್ಕೆ ಒಳಗಾದ ಕಾರಣ ‘ಸಾಂವಿಧಾನಿಕ ಪ್ರಕ್ರಿಯೆ’ ಮೂಲಕ ಬಿಜೆಪಿ ಸೇರಿ ಅನರ್ಹಗೊಂಡವರು. ಈ ಅನರ್ಹತೆ ತೊಳೆದು ಹಾಕಲು-ಸುಪ್ರೀಂಕೋರ್ಟ್ ಅಭಿಮತದಂತೆ- ಅವರೀಗ ಉಪ ಚುನಾವಣೆ ಗೆಲ್ಲಬೇಕಿದೆ. ಈಗ ಅವರು ಬಿಜೆಪಿ ಅಭ್ಯರ್ಥಿ. ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಅವರ ವಿರುದ್ಧ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ತುರವಿಹಾಳ ಬಸನಗೌಡ ಈಗ ಕಾಂಗ್ರೆಸ್ ಅಭ್ಯರ್ಥಿ… ಈಗ ಇವರಿಬ್ಬರ ಹಿಂಬಾಲಕರು ತಮ್ಮ ನಾಯಕರ ಹಿಂದೆಯೇ ನಿಂತಿದ್ದಾರೆಯೇ ಹೊರತು ಅವರಿಗೆ ಪಕ್ಷ ಮುಖ್ಯವಾಗಿಲ್ಲ.

ಅಂದಂತೆ ಎರಡೂ ಕಡೆ ‘ಗೌಡರು’ ನಿಂತಿದ್ದಾರೆ ಎಂದರೆ ಸಹಜವಾಗಿ ಅದು ಲಿಂಗಾಯತ ರೆಡ್ಡಿ ಗೌಡರೇ, ಒಕ್ಕಲಿಗ ಗೌಡರೆ ಅಂತಾ ನಿಮಗೆ ಅನಿಸಬಹುದು. ಸಾರಿ, ಇದು ಪರಿಶಿಷ್ಟ ಪಂಗಡ ಮೀಸಲು ಕೇತ್ರ. ಎಸ್‌ಟಿ ಪಂಗಡದವರು ಗೌಡ ಪದ ಸೇರಿಸಿಕೊಂಡಿದ್ದಾರೆ. ಹಾಗಾಗಿ ಅವರ ಹೆಸರುಗಳು ಗೌಡ ಎಂಬಲ್ಲಿಗೆ ಅಂತ್ಯವಾಗುತ್ತವೆ.

ಆದರೆ ಮತದಾರ ‘ಪೊಸಿಷನ್’ ಚೇಂಜ್ ಮಾಡಿದ್ದಾನೋ, ಅಥವಾ ಏಟು ಕೊಡಲು ಕಾಯ್ತಾ ಇದ್ದಾನೋ ಎಂಬುದು ಗೊತ್ತಿಲ್ಲ. ಸುತ್ತಮುತ್ತಲ ಕ್ಷೇತ್ರಗಳಲ್ಲಿ ಪ್ರಭಾವ ಇರುವ, ಕೆಲ ಜನಪ್ರತಿನಿಧಿಗಳನ್ನೂ ಹೊಂದಿರುವ ಜೆಡಿಎಸ್ ಇಲ್ಲಿ ಕ್ಯಾಂಡಿಡೇಟ್ ಹಾಕಿಲ್ಲ! ಫೆಬ್ರವರಿ 14 ರಂದು ಮಾಜಿ ಸಿಎಂ ಕುಮಾರಸ್ವಾಮಿಯವರು ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತೇವೆ, ಬಿಜೆಪಿಗೆ ಅನುಕೂಲ ಮಾಡಿಕೊಡುವುದಿಲ್ಲ ಎಂದಿದ್ದರು. ಆದರೆ ಈಗ ಇಲ್ಲಿ ಅಭ್ಯರ್ಥಿ ಹಾಕದೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ. ಯಾರ ಜೊತೆ ಎಂಬುದನ್ನು ವಿವರಿಸಬೇಕಿಲ್ಲ! ಅದು ಯಡಿಯೂರಪ್ಪರ ಜೊತೆ ಎಂದು ಪ್ರಾಸಂಗಿಕವಾಗಿ ಹೇಳಬಹುದಾದರೂ, ಇಲ್ಲಿನ ಎರಡೂ ಪಕ್ಷಗಳ ಕೆಲವು ನಾಯಕರು ಇದು ವಿಜಯೇಂದ್ರ ಮತ್ತು ಎಚ್‌ಡಿಕೆ ನಡುವಿನ ಒಪ್ಪಂದವೆಂದು ಮಾತನಾಡಿಕೊಳ್ಳುತ್ತಿದ್ದಾರೆ.

ರಾಜಕೀಯದ ಈ ಮಜಲಿನಾಚೆಗೆ ಇಲ್ಲಿ ಕೆಲವು ಪ್ರಮುಖ ಅಂಶಗಳು ಈ ಚುನಾವಣೆಯ ಫಲಿತಾಂಶದ ದಿಕ್ಕನ್ನೇ ಬದಲಿಸಬಲ್ಲವು. ಅದರಲ್ಲಿ 100 ದಿನ ದಾಟಿದ NRBC_5A ನೀರಾವರಿ ಹೋರಾಟವೂ ಒಂದು. 58 ಗ್ರಾಮಗಳ ಜನ ನೀರಾವರಿ ವ್ಯವಸ್ಥೆಗೆ ಆಗ್ರಹಿಸಿ ಸರ್ಕಾರದ ವಿರುದ್ಧ ಸೆಟೆದು ನಿಂತಿದ್ದಾರೆ.

ಇದನ್ನೂ ಓದಿ: NRBC_5A ಜಾರಿಗಾಗಿ 4 ಗ್ರಾ.ಪಂ ಚುನಾವಣೆ ಬಹಿಷ್ಕಾರ: ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲರನ್ನು ಸೋಲಿಸಲು ರೈತರ ನಿರ್ಧಾರ

  • ಮಲ್ಲನಗೌಡರ್ ಪಿ.ಕೆ

ಇದನ್ನೂ ಓದಿ: ಕರ್ನಾಟಕ ಉಪಚುನಾವಣೆ: ಮೂರೂ ಪಕ್ಷಗಳಿಂದ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...