Homeಕರ್ನಾಟಕಮಸ್ಕಿ ಉಪಚುನಾವಣೆ| ಅಭ್ಯರ್ಥಿಗಳು ಅದಲು-ಬದಲು: ಮೀಸಲು ಕ್ಷೇತ್ರದಲ್ಲಿ ‘ಗೌಡರ’ ಸ್ಪರ್ಧೆ!

ಮಸ್ಕಿ ಉಪಚುನಾವಣೆ| ಅಭ್ಯರ್ಥಿಗಳು ಅದಲು-ಬದಲು: ಮೀಸಲು ಕ್ಷೇತ್ರದಲ್ಲಿ ‘ಗೌಡರ’ ಸ್ಪರ್ಧೆ!

- Advertisement -
- Advertisement -

ಮಸ್ಕಿ ಉಪಚುನಾವಣೆ ಎಲ್ಲ ಚುನಾವಣೆಗಳಂತೆ ಜಾತಿ ಲೆಕ್ಕಾಚಾರ, ಆಡಳಿತ ಪಕ್ಷದ ಲಾಭಕರ ಅಂಶ, ಅಭ್ಯರ್ಥಿಗಳ ‘ಜನಪ್ರಿಯತೆ’ ಆಧರಿಸಿಯೇ ನಡೆಯಲಿದೆ. ಆದರೆ ಈ ಸಲ ಇಲ್ಲಿ ಒಂದಿಷ್ಟು ಟ್ವಿಸ್ಟ್‌ಗಳು ಈ ಚುನಾವಣೆಯ ಅಂತಿಮ ಫಲಿತಾಂಶವನ್ನು ನಿರ್ಧರಿಸಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ.

ಅಂದಂತೆ ಮೀಸಲು ಕ್ಷೇತ್ರವಾದ ಇಲ್ಲಿ ‘ಗೌಡರ’ ಸ್ಪರ್ಧೆ ನಡೆಯುತ್ತಿದೆ, ಇದೇನೂ ಆಶ್ಚರ್ಯಕರವಲ್ಲ ಇಲ್ಲಿನ ಜನರಿಗೆ!

ಇಲ್ಲಿ ಈಗ ಮತದಾರರು ಮೇಲ್ನೋಟಕ್ಕೆ ತಟಸ್ಥರಂತೆ ಕಾಣುತ್ತಿದ್ದಾರೆ. ಆದರೆ ಅಭ್ಯರ್ಥಿಗಳು ಅದಲ್-ಬದಲ್ ಆಗಿರುವುದು ಅವರಿಗೇನೂ ಗೊಂದಲ ಮೂಡಿಸಿದಂತೆ ಕಾಣುತ್ತಿಲ್ಲ. ಕಳೆದ ಸಲ ಕಾಂಗ್ರೆಸ್‌ನಿಂದ ಗೆದ್ದಿದ್ದ ಪ್ರತಾಪಗೌಡ ಪಾಟೀಲರು ಆಪರೇಷಮ್ ಕಮಲಕ್ಕೆ ಒಳಗಾದ ಕಾರಣ ‘ಸಾಂವಿಧಾನಿಕ ಪ್ರಕ್ರಿಯೆ’ ಮೂಲಕ ಬಿಜೆಪಿ ಸೇರಿ ಅನರ್ಹಗೊಂಡವರು. ಈ ಅನರ್ಹತೆ ತೊಳೆದು ಹಾಕಲು-ಸುಪ್ರೀಂಕೋರ್ಟ್ ಅಭಿಮತದಂತೆ- ಅವರೀಗ ಉಪ ಚುನಾವಣೆ ಗೆಲ್ಲಬೇಕಿದೆ. ಈಗ ಅವರು ಬಿಜೆಪಿ ಅಭ್ಯರ್ಥಿ. ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಅವರ ವಿರುದ್ಧ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ತುರವಿಹಾಳ ಬಸನಗೌಡ ಈಗ ಕಾಂಗ್ರೆಸ್ ಅಭ್ಯರ್ಥಿ… ಈಗ ಇವರಿಬ್ಬರ ಹಿಂಬಾಲಕರು ತಮ್ಮ ನಾಯಕರ ಹಿಂದೆಯೇ ನಿಂತಿದ್ದಾರೆಯೇ ಹೊರತು ಅವರಿಗೆ ಪಕ್ಷ ಮುಖ್ಯವಾಗಿಲ್ಲ.

ಅಂದಂತೆ ಎರಡೂ ಕಡೆ ‘ಗೌಡರು’ ನಿಂತಿದ್ದಾರೆ ಎಂದರೆ ಸಹಜವಾಗಿ ಅದು ಲಿಂಗಾಯತ ರೆಡ್ಡಿ ಗೌಡರೇ, ಒಕ್ಕಲಿಗ ಗೌಡರೆ ಅಂತಾ ನಿಮಗೆ ಅನಿಸಬಹುದು. ಸಾರಿ, ಇದು ಪರಿಶಿಷ್ಟ ಪಂಗಡ ಮೀಸಲು ಕೇತ್ರ. ಎಸ್‌ಟಿ ಪಂಗಡದವರು ಗೌಡ ಪದ ಸೇರಿಸಿಕೊಂಡಿದ್ದಾರೆ. ಹಾಗಾಗಿ ಅವರ ಹೆಸರುಗಳು ಗೌಡ ಎಂಬಲ್ಲಿಗೆ ಅಂತ್ಯವಾಗುತ್ತವೆ.

ಆದರೆ ಮತದಾರ ‘ಪೊಸಿಷನ್’ ಚೇಂಜ್ ಮಾಡಿದ್ದಾನೋ, ಅಥವಾ ಏಟು ಕೊಡಲು ಕಾಯ್ತಾ ಇದ್ದಾನೋ ಎಂಬುದು ಗೊತ್ತಿಲ್ಲ. ಸುತ್ತಮುತ್ತಲ ಕ್ಷೇತ್ರಗಳಲ್ಲಿ ಪ್ರಭಾವ ಇರುವ, ಕೆಲ ಜನಪ್ರತಿನಿಧಿಗಳನ್ನೂ ಹೊಂದಿರುವ ಜೆಡಿಎಸ್ ಇಲ್ಲಿ ಕ್ಯಾಂಡಿಡೇಟ್ ಹಾಕಿಲ್ಲ! ಫೆಬ್ರವರಿ 14 ರಂದು ಮಾಜಿ ಸಿಎಂ ಕುಮಾರಸ್ವಾಮಿಯವರು ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತೇವೆ, ಬಿಜೆಪಿಗೆ ಅನುಕೂಲ ಮಾಡಿಕೊಡುವುದಿಲ್ಲ ಎಂದಿದ್ದರು. ಆದರೆ ಈಗ ಇಲ್ಲಿ ಅಭ್ಯರ್ಥಿ ಹಾಕದೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ. ಯಾರ ಜೊತೆ ಎಂಬುದನ್ನು ವಿವರಿಸಬೇಕಿಲ್ಲ! ಅದು ಯಡಿಯೂರಪ್ಪರ ಜೊತೆ ಎಂದು ಪ್ರಾಸಂಗಿಕವಾಗಿ ಹೇಳಬಹುದಾದರೂ, ಇಲ್ಲಿನ ಎರಡೂ ಪಕ್ಷಗಳ ಕೆಲವು ನಾಯಕರು ಇದು ವಿಜಯೇಂದ್ರ ಮತ್ತು ಎಚ್‌ಡಿಕೆ ನಡುವಿನ ಒಪ್ಪಂದವೆಂದು ಮಾತನಾಡಿಕೊಳ್ಳುತ್ತಿದ್ದಾರೆ.

ರಾಜಕೀಯದ ಈ ಮಜಲಿನಾಚೆಗೆ ಇಲ್ಲಿ ಕೆಲವು ಪ್ರಮುಖ ಅಂಶಗಳು ಈ ಚುನಾವಣೆಯ ಫಲಿತಾಂಶದ ದಿಕ್ಕನ್ನೇ ಬದಲಿಸಬಲ್ಲವು. ಅದರಲ್ಲಿ 100 ದಿನ ದಾಟಿದ NRBC_5A ನೀರಾವರಿ ಹೋರಾಟವೂ ಒಂದು. 58 ಗ್ರಾಮಗಳ ಜನ ನೀರಾವರಿ ವ್ಯವಸ್ಥೆಗೆ ಆಗ್ರಹಿಸಿ ಸರ್ಕಾರದ ವಿರುದ್ಧ ಸೆಟೆದು ನಿಂತಿದ್ದಾರೆ.

ಇದನ್ನೂ ಓದಿ: NRBC_5A ಜಾರಿಗಾಗಿ 4 ಗ್ರಾ.ಪಂ ಚುನಾವಣೆ ಬಹಿಷ್ಕಾರ: ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲರನ್ನು ಸೋಲಿಸಲು ರೈತರ ನಿರ್ಧಾರ

  • ಮಲ್ಲನಗೌಡರ್ ಪಿ.ಕೆ

ಇದನ್ನೂ ಓದಿ: ಕರ್ನಾಟಕ ಉಪಚುನಾವಣೆ: ಮೂರೂ ಪಕ್ಷಗಳಿಂದ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...