Homeಕರ್ನಾಟಕಮಸ್ಕಿ: ಬಿಜೆಪಿ ಹಣ ಹಂಚಿಕೆ ಆರೋಪದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್

ಮಸ್ಕಿ: ಬಿಜೆಪಿ ಹಣ ಹಂಚಿಕೆ ಆರೋಪದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್

"ಹಿಂದೆ ನಾನು ಮೋದಿ ಅಭಿಮಾನಿಯಾಗಿದ್ದೆ. ಆದರೆ ಈಗ ಆ ಭ್ರಮೆ ಕಳಚಿದೆ. ಈಗ ಇಲ್ಲಿ ಬಿಜೆಪಿ ಸೋಲಿಸಲು ನಾವು ತೀರ್ಮಾನಿಸಿದ್ದೇವೆ"

- Advertisement -
- Advertisement -

ಹೊರಗಿಂದ ಬಂದವರು ಮಸ್ಕಿಯಲ್ಲಿ ಬಿಜೆಪಿ ಪರವಾಗಿ ಸಿಕ್ಕಾಪಟ್ಟೆ ಹಣ ಹಂಚುತ್ತಿದ್ದಾರೆ ಎಂಬ ಆರೋಪ ಇಲ್ಲಿ ಕೇಳಿ ಬರುತ್ತಿದೆ. ಬಿಜೆಪಿ ಯುವ ಮುಖಂಡ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ಇದರ ನೇತೃತ್ವ ವಹಿಸಿದ್ದಾರೆ ಎಂದು ಕಾಂಗ್ರೆಸ್ ಮತ್ತು NRBC-5-ಎ ಕಾಲುವೆ ನೀರಾವರಿ ಹೋರಾಟದ ಮುಖಂಡರು ಆಪಾದಿಸಿದ್ದಾರೆ.

ಬಿಜೆಪಿ ಬೆಂಬಲಿಗರು ಹಣ ಹಂಚುವ ವಿಡಿಯೋ ಕೂಡ ವೈರಲ್ ಆಗಿತ್ತು. ಮಸ್ಕಿ ಕ್ಷೇತ್ರದ ಕವಿತಾಳ್ ಪಟ್ಟಣದಲ್ಲಿ ಈ ಕುರಿತು ಎಫ್‌ಐಆರ್ ಕೂಡ ದಾಖಲಾಗಿದೆ.

“ದಾವಣಗೆರೆ, ಮೈಸೂರು, ಬೆಂಗಳೂರು, ಹಾಸನ, ಮಂಡ್ಯ ಕಡೆಯ ಆರ್‌ಎಸ್‌ಎಸ್ ಕಾರ್ಯಕರ್ತರು ಹಣ ಹಂಚಲೆಂದೇ ನೂರಾರು ಸಂಖ್ಯೆಯಲ್ಲಿ ಬಂದಿದ್ದಾರೆ. ಅವರು ಮಸ್ಕಿ ವ್ಯಾಪ್ತಿಯ ಹೊರಗಡೆ ವಾಸ್ತವ್ಯ ಹೂಡಿದ್ದು, ದಿನವೂ ಮಸ್ಕಿ ಕ್ಷೇತ್ರದಲ್ಲಿ ಹಣ ಹಂಚುವ ಕೆಲಸದಲ್ಲಿ ನಿರತರಾಗಿದ್ದಾರೆ” ಎಂದು ನೀರಾವರಿ ಹೋರಾಟಗಾರರು ಮತ್ತು ಜನಸಾಮಾನ್ಯರು ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಮಸ್ಕಿ ಬೆವರು ಬೆಂಗಳೂರಿನಲ್ಲಿ: ಬಸವಕಲ್ಯಾಣದಲ್ಲಿ ನಾರಾಯಣರಾವ್ ಸರಳತೆ ಉಳಿಯುವುದೇ?

ಮಸ್ಕಿ ಕ್ಷೇತ್ರಕ್ಕೆ ಹೊಂದಿಕೊಂಡ ಮುದಗಲ್, ಲಿಂಗಸೂಗುರು ಮತ್ತು ಸಿಂಧನೂರಿನಲ್ಲಿ ಇವರೆಲ್ಲ ವಾಸ್ತವ್ಯ ಮಾಡಿದ್ದಾರೆ ಎಂಬುದು ಕಾಂಗ್ರೆಸ್ ಕಾರ್ಯಕರ್ತರು ಮತ್ತು ರೈತ ಹೋರಾಟಗಾರರ ಆರೋಪವಾಗಿದೆ.

ಮಸ್ಕಿ ಕ್ಷೇತ್ರದ ವ್ಯಾಪ್ತಿಗೆ ಬರುವ ಸಿಂಧನೂರು ತಾಲೂಕಿನ ಮಾಟೂರಿನ ಯುವರೈತ ಬಸು ಸಂಜಿ ಫೇಸ್‌ಬುಕ್‌ನಲ್ಲಿ ಹಣ ಹಂಚುವಿಕೆ ಕುರಿತಾದ ವಿವರ ಹಾಕಿಕೊಂಡಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬಸು ಸಂಜಿ, “ಹಿಂದೆ ನಾನು ಮೋದಿ ಅಭಿಮಾನಿಯಾಗಿದ್ದೆ. ಆದರೆ ಈಗ ಆ ಭ್ರಮೆ ಕಳಚಿದೆ. ಈಗ ಇಲ್ಲಿ ಬಿಜೆಪಿ ಸೋಲಿಸಲು ನಾವು ತೀರ್ಮಾನಿಸಿದ್ದೇವೆ” ಎಂದರು.

ಇದನ್ನೂ ಓದಿ: ಬಿಜೆಪಿ ತೊರೆದು ಜೆಡಿಎಸ್ ಸೇರಿದ್ದ ಮಾಜಿ ಶಾಸಕ ಪ್ರಕಾಶ್ ಖಂಡ್ರೆ ಮತ್ತೆ ಬಿಜೆಪಿಗೆ!

ಮಸ್ಕಿಯಲ್ಲಿ ಬಿಜೆಪಿಯವರು ರಂದು ಆರೋಪಿಸಲಾಗಿರುವ ಹಲವರು ಹಣ ಹಂಚಿ ಬಿಜೆಪಿಗೇ ಮತ ಹಾಕಬೇಕು ಎಂದು ಪ್ರಮಾಣ ಮಾಡಿಸಿಕೊಂಡ ಕನಿಷ್ಠ ಮೂರು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ನಿನ್ನೆಯಷ್ಟೇ ಬಿಜೆಪಿ ನಾಯಕ ನಂದೀಶರೆಡ್ಡಿ ಹಣ ಹಂಚಿದರು ಎನ್ನಲಾದ ವಿಡಿಯೋ ವೈರಲ್ ಆಗಿದೆ.

ಚುನಾವಣಾ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ಮಸ್ಕಿಯಲ್ಲಿ 40-50 ಕೋಟಿ ರೂಪಾಯಿ ಖರ್ಚು ಮಾಡಲು ಹೊರಟಿದೆ ಎಂದು ಆರೋಪಿಸಿದ್ದರು. ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ ಎಂದು ಹೇಳಲಾಗಿದೆ.

“ಹಣ ಹಂಚಿಕೆ ಕುರಿತು ನಮ್ಮ ರಾಜ್ಯ ನಾಯಕರು ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿದ್ದಾರೆ. ವಿಜಯೇಂದ್ರ ಅವರು ದುಡ್ಡು ಹಂಚಲು ಹಾಸನ, ಶಿರಾ, ಶಿಮೊಗ್ಗದವರನ್ನು ಕರೆ ತಂದಿದ್ದಾರೆ” ಎಂದು ಮಸ್ಕಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ ತಿಳಿಸಿದ್ದಾರೆ.


ಇದನ್ನೂ ಓದಿ: ಮಸ್ಕಿ: ಒಂದು ಕಡೆ ಜೆಡಿಎಸ್ ಶಾಸಕ ವೆಂಕಟಪ್ಪ ನಾಯಕ್, ಇನ್ನೊಂದು ಕಡೆ ಅದೇ ಪಾರ್ಟಿ MLA ನಾಡಗೌಡ: ಮಧ್ಯದಲ್ಲಿ ಜೆಡಿಎಸ್ ಕ್ಯಾಂಡಿಡೇಟೇ ಇಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...