Homeಕರ್ನಾಟಕಮಸ್ಕಿ: ಬಿಜೆಪಿ ಹಣ ಹಂಚಿಕೆ ಆರೋಪದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್

ಮಸ್ಕಿ: ಬಿಜೆಪಿ ಹಣ ಹಂಚಿಕೆ ಆರೋಪದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್

"ಹಿಂದೆ ನಾನು ಮೋದಿ ಅಭಿಮಾನಿಯಾಗಿದ್ದೆ. ಆದರೆ ಈಗ ಆ ಭ್ರಮೆ ಕಳಚಿದೆ. ಈಗ ಇಲ್ಲಿ ಬಿಜೆಪಿ ಸೋಲಿಸಲು ನಾವು ತೀರ್ಮಾನಿಸಿದ್ದೇವೆ"

- Advertisement -
- Advertisement -

ಹೊರಗಿಂದ ಬಂದವರು ಮಸ್ಕಿಯಲ್ಲಿ ಬಿಜೆಪಿ ಪರವಾಗಿ ಸಿಕ್ಕಾಪಟ್ಟೆ ಹಣ ಹಂಚುತ್ತಿದ್ದಾರೆ ಎಂಬ ಆರೋಪ ಇಲ್ಲಿ ಕೇಳಿ ಬರುತ್ತಿದೆ. ಬಿಜೆಪಿ ಯುವ ಮುಖಂಡ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ಇದರ ನೇತೃತ್ವ ವಹಿಸಿದ್ದಾರೆ ಎಂದು ಕಾಂಗ್ರೆಸ್ ಮತ್ತು NRBC-5-ಎ ಕಾಲುವೆ ನೀರಾವರಿ ಹೋರಾಟದ ಮುಖಂಡರು ಆಪಾದಿಸಿದ್ದಾರೆ.

ಬಿಜೆಪಿ ಬೆಂಬಲಿಗರು ಹಣ ಹಂಚುವ ವಿಡಿಯೋ ಕೂಡ ವೈರಲ್ ಆಗಿತ್ತು. ಮಸ್ಕಿ ಕ್ಷೇತ್ರದ ಕವಿತಾಳ್ ಪಟ್ಟಣದಲ್ಲಿ ಈ ಕುರಿತು ಎಫ್‌ಐಆರ್ ಕೂಡ ದಾಖಲಾಗಿದೆ.

“ದಾವಣಗೆರೆ, ಮೈಸೂರು, ಬೆಂಗಳೂರು, ಹಾಸನ, ಮಂಡ್ಯ ಕಡೆಯ ಆರ್‌ಎಸ್‌ಎಸ್ ಕಾರ್ಯಕರ್ತರು ಹಣ ಹಂಚಲೆಂದೇ ನೂರಾರು ಸಂಖ್ಯೆಯಲ್ಲಿ ಬಂದಿದ್ದಾರೆ. ಅವರು ಮಸ್ಕಿ ವ್ಯಾಪ್ತಿಯ ಹೊರಗಡೆ ವಾಸ್ತವ್ಯ ಹೂಡಿದ್ದು, ದಿನವೂ ಮಸ್ಕಿ ಕ್ಷೇತ್ರದಲ್ಲಿ ಹಣ ಹಂಚುವ ಕೆಲಸದಲ್ಲಿ ನಿರತರಾಗಿದ್ದಾರೆ” ಎಂದು ನೀರಾವರಿ ಹೋರಾಟಗಾರರು ಮತ್ತು ಜನಸಾಮಾನ್ಯರು ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಮಸ್ಕಿ ಬೆವರು ಬೆಂಗಳೂರಿನಲ್ಲಿ: ಬಸವಕಲ್ಯಾಣದಲ್ಲಿ ನಾರಾಯಣರಾವ್ ಸರಳತೆ ಉಳಿಯುವುದೇ?

ಮಸ್ಕಿ ಕ್ಷೇತ್ರಕ್ಕೆ ಹೊಂದಿಕೊಂಡ ಮುದಗಲ್, ಲಿಂಗಸೂಗುರು ಮತ್ತು ಸಿಂಧನೂರಿನಲ್ಲಿ ಇವರೆಲ್ಲ ವಾಸ್ತವ್ಯ ಮಾಡಿದ್ದಾರೆ ಎಂಬುದು ಕಾಂಗ್ರೆಸ್ ಕಾರ್ಯಕರ್ತರು ಮತ್ತು ರೈತ ಹೋರಾಟಗಾರರ ಆರೋಪವಾಗಿದೆ.

ಮಸ್ಕಿ ಕ್ಷೇತ್ರದ ವ್ಯಾಪ್ತಿಗೆ ಬರುವ ಸಿಂಧನೂರು ತಾಲೂಕಿನ ಮಾಟೂರಿನ ಯುವರೈತ ಬಸು ಸಂಜಿ ಫೇಸ್‌ಬುಕ್‌ನಲ್ಲಿ ಹಣ ಹಂಚುವಿಕೆ ಕುರಿತಾದ ವಿವರ ಹಾಕಿಕೊಂಡಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬಸು ಸಂಜಿ, “ಹಿಂದೆ ನಾನು ಮೋದಿ ಅಭಿಮಾನಿಯಾಗಿದ್ದೆ. ಆದರೆ ಈಗ ಆ ಭ್ರಮೆ ಕಳಚಿದೆ. ಈಗ ಇಲ್ಲಿ ಬಿಜೆಪಿ ಸೋಲಿಸಲು ನಾವು ತೀರ್ಮಾನಿಸಿದ್ದೇವೆ” ಎಂದರು.

ಇದನ್ನೂ ಓದಿ: ಬಿಜೆಪಿ ತೊರೆದು ಜೆಡಿಎಸ್ ಸೇರಿದ್ದ ಮಾಜಿ ಶಾಸಕ ಪ್ರಕಾಶ್ ಖಂಡ್ರೆ ಮತ್ತೆ ಬಿಜೆಪಿಗೆ!

ಮಸ್ಕಿಯಲ್ಲಿ ಬಿಜೆಪಿಯವರು ರಂದು ಆರೋಪಿಸಲಾಗಿರುವ ಹಲವರು ಹಣ ಹಂಚಿ ಬಿಜೆಪಿಗೇ ಮತ ಹಾಕಬೇಕು ಎಂದು ಪ್ರಮಾಣ ಮಾಡಿಸಿಕೊಂಡ ಕನಿಷ್ಠ ಮೂರು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ನಿನ್ನೆಯಷ್ಟೇ ಬಿಜೆಪಿ ನಾಯಕ ನಂದೀಶರೆಡ್ಡಿ ಹಣ ಹಂಚಿದರು ಎನ್ನಲಾದ ವಿಡಿಯೋ ವೈರಲ್ ಆಗಿದೆ.

ಚುನಾವಣಾ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ಮಸ್ಕಿಯಲ್ಲಿ 40-50 ಕೋಟಿ ರೂಪಾಯಿ ಖರ್ಚು ಮಾಡಲು ಹೊರಟಿದೆ ಎಂದು ಆರೋಪಿಸಿದ್ದರು. ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ ಎಂದು ಹೇಳಲಾಗಿದೆ.

“ಹಣ ಹಂಚಿಕೆ ಕುರಿತು ನಮ್ಮ ರಾಜ್ಯ ನಾಯಕರು ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿದ್ದಾರೆ. ವಿಜಯೇಂದ್ರ ಅವರು ದುಡ್ಡು ಹಂಚಲು ಹಾಸನ, ಶಿರಾ, ಶಿಮೊಗ್ಗದವರನ್ನು ಕರೆ ತಂದಿದ್ದಾರೆ” ಎಂದು ಮಸ್ಕಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ ತಿಳಿಸಿದ್ದಾರೆ.


ಇದನ್ನೂ ಓದಿ: ಮಸ್ಕಿ: ಒಂದು ಕಡೆ ಜೆಡಿಎಸ್ ಶಾಸಕ ವೆಂಕಟಪ್ಪ ನಾಯಕ್, ಇನ್ನೊಂದು ಕಡೆ ಅದೇ ಪಾರ್ಟಿ MLA ನಾಡಗೌಡ: ಮಧ್ಯದಲ್ಲಿ ಜೆಡಿಎಸ್ ಕ್ಯಾಂಡಿಡೇಟೇ ಇಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...