Homeಕರ್ನಾಟಕಮಸ್ಕಿ: ಬಿಜೆಪಿ ಪರ ಹಣ ಹಂಚಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಹಾಸನದ ಯುವಕರ ಬಂಧನ; 81...

ಮಸ್ಕಿ: ಬಿಜೆಪಿ ಪರ ಹಣ ಹಂಚಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಹಾಸನದ ಯುವಕರ ಬಂಧನ; 81 ಸಾವಿರ ರೂ. ವಶ!

- Advertisement -
- Advertisement -

ಬಿಜೆಪಿ ಮಸ್ಕಿಯಲ್ಲಿ ಒಂದು ವೋಟಿಗೆ ಸಾವಿರ ನಿಗದಿ ಮಾಡಿದೆ ಎಂದ ಆರೋಪಗಳು ಕೇಳಿ ಬಂದಿವೆ. ಇದಕ್ಕೆ ಸಾಕ್ಷಿ ಎಂಬಂತೆ ಮಸ್ಕಿಯ ತುರ್ವಿಹಾಳದಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲರಿಗೆ ಮತ ನೀಡಿ ಎಂದು ಹಣ ಹಂಚುತ್ತಿದ್ದ ಮೂವರನ್ನು ನಿನ್ನೆ ಬಂಧಿಸಲಾಗಿದ್ದು, ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಣ ಹಂಚುತ್ತಿದ್ದ ಮೂವರು ಯುವಕರು ತಾವು ಹಾಸನದವರೆಂದು ಪೊಲೀಸರ ಎದುರು ಒಪ್ಪಿಕೊಂಡಿದ್ದು, ನವೀನ್, ಸಚಿನ್ ಮತ್ತು ಆನಂದ್ ಎಂಬ ಯುವಕರ ಮೇಲೆ ಪ್ರಕರಣ ದಾಖಲಾಗಿದೆ. ಇವರಿಂದ 81 ಸಾವಿರ ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮಸ್ಕಿ: ಬಿಜೆಪಿ ಹಣ ಹಂಚಿಕೆ ಆರೋಪದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್

ತುರ್ವಿಹಾಳದ ಶ್ರೀನಿವಾಸ್ ಕ್ಯಾಂಪ್ ರಸ್ತೆ ಬಳಿಯ ವಾರ್ಡ್ 1 ಮತ್ತು 3 ರಲ್ಲಿ ಮನೆಮನೆಗೆ ತೆರಳಿ, ಪ್ರತಾಪ ಗೌಡರಿಗೆ ಮತ ನೀಡುವಂತೆ ಹಣ ಹಂಚುತ್ತಿದ್ದಾಗ ಕಾಂಗ್ರೆಸ್ ಕಾರ್ಯಕರ್ತರು ಇವರನ್ನು ಹಿಡಿದು, ’ನೀವೆಲ್ಲ ಎಲ್ಲಿಂದ ಬಂದಿರಲೇ?’ ಎಂದು ಆಕ್ರೋಶ ವ್ಯಕ್ತಪಡಿಸುವ ವಿಡಿಯೋ ವೈರಲ್ ಆಗಿದೆ. ನಂತರ ಕಾಂಗ್ರೆಸ್ ಕಾರ್ಯಕರ್ತರು ಈ ಮೂವರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಆ ಸಂದರ್ಭದಲ್ಲಿ ಠಾಣೆಗೆ ಬಂದ ಚುನಾವಣಾ ಜಾಗೃತ ದಳದ ಅಧಿಕಾರಿ ಎಂ. ಬೀರಪ್ಪ ಅವರ ತಂಡ ಈ ಮೂವರನ್ನು ವಿಚಾರಣೆಗೆ ಒಳಪಡಿಸಿದೆ. ಪ್ರಕರಣ ದಾಖಲಿಸಿ ಹಾಗೇ ಬಿಟ್ಟು ಕಳಿಸಲಾಗಿದೆಯೇ ಎಂಬ ಅನುಮಾನವೂ ಜನರಲ್ಲಿದೆ. ಈ ಕುರಿತು ಹೆಚ್ಚಿನ ವಿವರಣೆಗಾಗಿ ತುರ್ವಿಹಾಳ್ ಠಾಣೆಯ ಪಿಎಸ್‌ಐ ಯರಿಯಪ್ಪಂಗಡಿಯವರನ್ನು ಫೋನಿನಲ್ಲಿ ಸಂರ್ಕಿಸಲು ಯತ್ನಿಸಿದೆವು. ಅವರು ಲಭ್ಯವಾಗಿಲ್ಲ.

ಇದನ್ನೂ ಓದಿ: ಮಮತಾ ಬ್ಯಾನರ್ಜಿ ವಿಚಾರದಲ್ಲಿ ಚುನಾವಣಾ ಆಯೋಗ ಪಕ್ಷಪಾತ ತೋರುತ್ತಿದೆ- ಶಿವಸೇನೆ

ಹೊರಗಿನವರ ಆಟ-ಬಂಗಾಳದಲ್ಲೂ, ಇಲ್ಲೂ

ಬಂಗಾಳದಲ್ಲೂ ಬಿಜೆಪಿ ಸಾವಿರಾರು ಸಂಖ್ಯೆಯಲ್ಲಿ ಹೊರಗಿನವರನ್ನು ಕರೆತಂದು ಗಲಭೆ ಮತ್ತು ಕೊವಿಡ್ ಹರಡುವಿಕೆಗೆ ಕಾರಣವಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸುತ್ತಲೇ ಇದ್ದಾರೆ.
ಮಸ್ಕಿಯಲ್ಲೂ ಹಾಸನ, ಶಿರಾ, ಶಿವಮೊಗ್ಗ, ಮೈಸೂರು ಕಡೆಯ ಆರ್‌ಎಸ್‌ಎಸ್ ಕಾರ್ಯಕರ್ತರನ್ನು ಹಣ ಹಂಚಲು ಕರೆ ತರಲಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಈ ಕಾರ್ಯಾಚರಣೆ ಹಿಂದೆ ವಿಜಯೇಂದ್ರ ಇದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರನ್ನೂ ಸಲ್ಲಿಸಿದೆ.

ಆದರೆ, ಆಯೋಗ ಇದನ್ನು ಗಂಭಿರವಾಗಿ ಪರಿಗಣಿಸಿಲ್ಲ, ಇದಕ್ಕೆ ಸರ್ಕಾರದ ಪ್ರಭಾವ ಕಾರಣ ಎಂದು ರೈತ ಹೋರಾಟಗಾರರು ಆರೋಪಿಸಿದ್ದಾರೆ. ಹಣ ಹಂಚುವ ವಿಡಿಯೋಗಳು ಹರಿದಾಡಿದರೂ ಇಲ್ಲಿನ ಚುನಾವಣಾ ಜಾಗೃತಾ ಅಧಿಕಾರಿಗಳು ಮತ್ತು ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡುತ್ತಿದ್ದಾರೆ.

ಮಸ್ಕಿ ಪಕ್ಕದ ಮುದಗಲ್, ಲಿಂಗಸೂಗುರು ಮತ್ತು ಸಿಂಧನೂರಿನ ಲಾಡ್ಜ್‌ಗಳ ಮೇಲೆ ದಾಳಿ ನಡೆಸಿದರೆ ನೂರಾರು ಕಾರ್ಯಕರ್ತರು ಮತ್ತು ಅಪಾರ ಹಣ ಸಿಗಬಹುದು ಎಂದು ರೈತ ಹೋರಾಟಗಾರರು ಹೇಳುತ್ತಲೇ ಬಂದಿದ್ದಾರೆ. ಇಂದು ರಾತ್ರಿ ಪ್ರಚಾರ ಅಂತ್ಯವಾಗಲಿದ್ದು ಬಿಜೆಪಿ ಸಾಕಷ್ಟು ಹಣ ಹರಿಸಲಿದೆ ಎಂದೂ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಇಫ್ತಾರ್‌ ಕೂಟ ನಡೆಸುವಂತಿಲ್ಲ, ರಂಜಾನ್‌ಗೆ ರಾಜ್ಯದಲ್ಲಿ ಹೊಸ ಮಾರ್ಗಸೂಚಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...