Homeಕರ್ನಾಟಕಮಸ್ಕಿ: ಬಿಜೆಪಿ ಪರ ಹಣ ಹಂಚಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಹಾಸನದ ಯುವಕರ ಬಂಧನ; 81...

ಮಸ್ಕಿ: ಬಿಜೆಪಿ ಪರ ಹಣ ಹಂಚಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಹಾಸನದ ಯುವಕರ ಬಂಧನ; 81 ಸಾವಿರ ರೂ. ವಶ!

- Advertisement -
- Advertisement -

ಬಿಜೆಪಿ ಮಸ್ಕಿಯಲ್ಲಿ ಒಂದು ವೋಟಿಗೆ ಸಾವಿರ ನಿಗದಿ ಮಾಡಿದೆ ಎಂದ ಆರೋಪಗಳು ಕೇಳಿ ಬಂದಿವೆ. ಇದಕ್ಕೆ ಸಾಕ್ಷಿ ಎಂಬಂತೆ ಮಸ್ಕಿಯ ತುರ್ವಿಹಾಳದಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲರಿಗೆ ಮತ ನೀಡಿ ಎಂದು ಹಣ ಹಂಚುತ್ತಿದ್ದ ಮೂವರನ್ನು ನಿನ್ನೆ ಬಂಧಿಸಲಾಗಿದ್ದು, ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಣ ಹಂಚುತ್ತಿದ್ದ ಮೂವರು ಯುವಕರು ತಾವು ಹಾಸನದವರೆಂದು ಪೊಲೀಸರ ಎದುರು ಒಪ್ಪಿಕೊಂಡಿದ್ದು, ನವೀನ್, ಸಚಿನ್ ಮತ್ತು ಆನಂದ್ ಎಂಬ ಯುವಕರ ಮೇಲೆ ಪ್ರಕರಣ ದಾಖಲಾಗಿದೆ. ಇವರಿಂದ 81 ಸಾವಿರ ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮಸ್ಕಿ: ಬಿಜೆಪಿ ಹಣ ಹಂಚಿಕೆ ಆರೋಪದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್

ತುರ್ವಿಹಾಳದ ಶ್ರೀನಿವಾಸ್ ಕ್ಯಾಂಪ್ ರಸ್ತೆ ಬಳಿಯ ವಾರ್ಡ್ 1 ಮತ್ತು 3 ರಲ್ಲಿ ಮನೆಮನೆಗೆ ತೆರಳಿ, ಪ್ರತಾಪ ಗೌಡರಿಗೆ ಮತ ನೀಡುವಂತೆ ಹಣ ಹಂಚುತ್ತಿದ್ದಾಗ ಕಾಂಗ್ರೆಸ್ ಕಾರ್ಯಕರ್ತರು ಇವರನ್ನು ಹಿಡಿದು, ’ನೀವೆಲ್ಲ ಎಲ್ಲಿಂದ ಬಂದಿರಲೇ?’ ಎಂದು ಆಕ್ರೋಶ ವ್ಯಕ್ತಪಡಿಸುವ ವಿಡಿಯೋ ವೈರಲ್ ಆಗಿದೆ. ನಂತರ ಕಾಂಗ್ರೆಸ್ ಕಾರ್ಯಕರ್ತರು ಈ ಮೂವರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಆ ಸಂದರ್ಭದಲ್ಲಿ ಠಾಣೆಗೆ ಬಂದ ಚುನಾವಣಾ ಜಾಗೃತ ದಳದ ಅಧಿಕಾರಿ ಎಂ. ಬೀರಪ್ಪ ಅವರ ತಂಡ ಈ ಮೂವರನ್ನು ವಿಚಾರಣೆಗೆ ಒಳಪಡಿಸಿದೆ. ಪ್ರಕರಣ ದಾಖಲಿಸಿ ಹಾಗೇ ಬಿಟ್ಟು ಕಳಿಸಲಾಗಿದೆಯೇ ಎಂಬ ಅನುಮಾನವೂ ಜನರಲ್ಲಿದೆ. ಈ ಕುರಿತು ಹೆಚ್ಚಿನ ವಿವರಣೆಗಾಗಿ ತುರ್ವಿಹಾಳ್ ಠಾಣೆಯ ಪಿಎಸ್‌ಐ ಯರಿಯಪ್ಪಂಗಡಿಯವರನ್ನು ಫೋನಿನಲ್ಲಿ ಸಂರ್ಕಿಸಲು ಯತ್ನಿಸಿದೆವು. ಅವರು ಲಭ್ಯವಾಗಿಲ್ಲ.

ಇದನ್ನೂ ಓದಿ: ಮಮತಾ ಬ್ಯಾನರ್ಜಿ ವಿಚಾರದಲ್ಲಿ ಚುನಾವಣಾ ಆಯೋಗ ಪಕ್ಷಪಾತ ತೋರುತ್ತಿದೆ- ಶಿವಸೇನೆ

ಹೊರಗಿನವರ ಆಟ-ಬಂಗಾಳದಲ್ಲೂ, ಇಲ್ಲೂ

ಬಂಗಾಳದಲ್ಲೂ ಬಿಜೆಪಿ ಸಾವಿರಾರು ಸಂಖ್ಯೆಯಲ್ಲಿ ಹೊರಗಿನವರನ್ನು ಕರೆತಂದು ಗಲಭೆ ಮತ್ತು ಕೊವಿಡ್ ಹರಡುವಿಕೆಗೆ ಕಾರಣವಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸುತ್ತಲೇ ಇದ್ದಾರೆ.
ಮಸ್ಕಿಯಲ್ಲೂ ಹಾಸನ, ಶಿರಾ, ಶಿವಮೊಗ್ಗ, ಮೈಸೂರು ಕಡೆಯ ಆರ್‌ಎಸ್‌ಎಸ್ ಕಾರ್ಯಕರ್ತರನ್ನು ಹಣ ಹಂಚಲು ಕರೆ ತರಲಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಈ ಕಾರ್ಯಾಚರಣೆ ಹಿಂದೆ ವಿಜಯೇಂದ್ರ ಇದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರನ್ನೂ ಸಲ್ಲಿಸಿದೆ.

ಆದರೆ, ಆಯೋಗ ಇದನ್ನು ಗಂಭಿರವಾಗಿ ಪರಿಗಣಿಸಿಲ್ಲ, ಇದಕ್ಕೆ ಸರ್ಕಾರದ ಪ್ರಭಾವ ಕಾರಣ ಎಂದು ರೈತ ಹೋರಾಟಗಾರರು ಆರೋಪಿಸಿದ್ದಾರೆ. ಹಣ ಹಂಚುವ ವಿಡಿಯೋಗಳು ಹರಿದಾಡಿದರೂ ಇಲ್ಲಿನ ಚುನಾವಣಾ ಜಾಗೃತಾ ಅಧಿಕಾರಿಗಳು ಮತ್ತು ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡುತ್ತಿದ್ದಾರೆ.

ಮಸ್ಕಿ ಪಕ್ಕದ ಮುದಗಲ್, ಲಿಂಗಸೂಗುರು ಮತ್ತು ಸಿಂಧನೂರಿನ ಲಾಡ್ಜ್‌ಗಳ ಮೇಲೆ ದಾಳಿ ನಡೆಸಿದರೆ ನೂರಾರು ಕಾರ್ಯಕರ್ತರು ಮತ್ತು ಅಪಾರ ಹಣ ಸಿಗಬಹುದು ಎಂದು ರೈತ ಹೋರಾಟಗಾರರು ಹೇಳುತ್ತಲೇ ಬಂದಿದ್ದಾರೆ. ಇಂದು ರಾತ್ರಿ ಪ್ರಚಾರ ಅಂತ್ಯವಾಗಲಿದ್ದು ಬಿಜೆಪಿ ಸಾಕಷ್ಟು ಹಣ ಹರಿಸಲಿದೆ ಎಂದೂ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಇಫ್ತಾರ್‌ ಕೂಟ ನಡೆಸುವಂತಿಲ್ಲ, ರಂಜಾನ್‌ಗೆ ರಾಜ್ಯದಲ್ಲಿ ಹೊಸ ಮಾರ್ಗಸೂಚಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...