Homeಕರ್ನಾಟಕಮಸ್ಕಿ: ಬಿಜೆಪಿ ಪರ ಹಣ ಹಂಚಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಹಾಸನದ ಯುವಕರ ಬಂಧನ; 81...

ಮಸ್ಕಿ: ಬಿಜೆಪಿ ಪರ ಹಣ ಹಂಚಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಹಾಸನದ ಯುವಕರ ಬಂಧನ; 81 ಸಾವಿರ ರೂ. ವಶ!

- Advertisement -
- Advertisement -

ಬಿಜೆಪಿ ಮಸ್ಕಿಯಲ್ಲಿ ಒಂದು ವೋಟಿಗೆ ಸಾವಿರ ನಿಗದಿ ಮಾಡಿದೆ ಎಂದ ಆರೋಪಗಳು ಕೇಳಿ ಬಂದಿವೆ. ಇದಕ್ಕೆ ಸಾಕ್ಷಿ ಎಂಬಂತೆ ಮಸ್ಕಿಯ ತುರ್ವಿಹಾಳದಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲರಿಗೆ ಮತ ನೀಡಿ ಎಂದು ಹಣ ಹಂಚುತ್ತಿದ್ದ ಮೂವರನ್ನು ನಿನ್ನೆ ಬಂಧಿಸಲಾಗಿದ್ದು, ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಣ ಹಂಚುತ್ತಿದ್ದ ಮೂವರು ಯುವಕರು ತಾವು ಹಾಸನದವರೆಂದು ಪೊಲೀಸರ ಎದುರು ಒಪ್ಪಿಕೊಂಡಿದ್ದು, ನವೀನ್, ಸಚಿನ್ ಮತ್ತು ಆನಂದ್ ಎಂಬ ಯುವಕರ ಮೇಲೆ ಪ್ರಕರಣ ದಾಖಲಾಗಿದೆ. ಇವರಿಂದ 81 ಸಾವಿರ ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮಸ್ಕಿ: ಬಿಜೆಪಿ ಹಣ ಹಂಚಿಕೆ ಆರೋಪದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್

ತುರ್ವಿಹಾಳದ ಶ್ರೀನಿವಾಸ್ ಕ್ಯಾಂಪ್ ರಸ್ತೆ ಬಳಿಯ ವಾರ್ಡ್ 1 ಮತ್ತು 3 ರಲ್ಲಿ ಮನೆಮನೆಗೆ ತೆರಳಿ, ಪ್ರತಾಪ ಗೌಡರಿಗೆ ಮತ ನೀಡುವಂತೆ ಹಣ ಹಂಚುತ್ತಿದ್ದಾಗ ಕಾಂಗ್ರೆಸ್ ಕಾರ್ಯಕರ್ತರು ಇವರನ್ನು ಹಿಡಿದು, ’ನೀವೆಲ್ಲ ಎಲ್ಲಿಂದ ಬಂದಿರಲೇ?’ ಎಂದು ಆಕ್ರೋಶ ವ್ಯಕ್ತಪಡಿಸುವ ವಿಡಿಯೋ ವೈರಲ್ ಆಗಿದೆ. ನಂತರ ಕಾಂಗ್ರೆಸ್ ಕಾರ್ಯಕರ್ತರು ಈ ಮೂವರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಆ ಸಂದರ್ಭದಲ್ಲಿ ಠಾಣೆಗೆ ಬಂದ ಚುನಾವಣಾ ಜಾಗೃತ ದಳದ ಅಧಿಕಾರಿ ಎಂ. ಬೀರಪ್ಪ ಅವರ ತಂಡ ಈ ಮೂವರನ್ನು ವಿಚಾರಣೆಗೆ ಒಳಪಡಿಸಿದೆ. ಪ್ರಕರಣ ದಾಖಲಿಸಿ ಹಾಗೇ ಬಿಟ್ಟು ಕಳಿಸಲಾಗಿದೆಯೇ ಎಂಬ ಅನುಮಾನವೂ ಜನರಲ್ಲಿದೆ. ಈ ಕುರಿತು ಹೆಚ್ಚಿನ ವಿವರಣೆಗಾಗಿ ತುರ್ವಿಹಾಳ್ ಠಾಣೆಯ ಪಿಎಸ್‌ಐ ಯರಿಯಪ್ಪಂಗಡಿಯವರನ್ನು ಫೋನಿನಲ್ಲಿ ಸಂರ್ಕಿಸಲು ಯತ್ನಿಸಿದೆವು. ಅವರು ಲಭ್ಯವಾಗಿಲ್ಲ.

ಇದನ್ನೂ ಓದಿ: ಮಮತಾ ಬ್ಯಾನರ್ಜಿ ವಿಚಾರದಲ್ಲಿ ಚುನಾವಣಾ ಆಯೋಗ ಪಕ್ಷಪಾತ ತೋರುತ್ತಿದೆ- ಶಿವಸೇನೆ

ಹೊರಗಿನವರ ಆಟ-ಬಂಗಾಳದಲ್ಲೂ, ಇಲ್ಲೂ

ಬಂಗಾಳದಲ್ಲೂ ಬಿಜೆಪಿ ಸಾವಿರಾರು ಸಂಖ್ಯೆಯಲ್ಲಿ ಹೊರಗಿನವರನ್ನು ಕರೆತಂದು ಗಲಭೆ ಮತ್ತು ಕೊವಿಡ್ ಹರಡುವಿಕೆಗೆ ಕಾರಣವಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸುತ್ತಲೇ ಇದ್ದಾರೆ.
ಮಸ್ಕಿಯಲ್ಲೂ ಹಾಸನ, ಶಿರಾ, ಶಿವಮೊಗ್ಗ, ಮೈಸೂರು ಕಡೆಯ ಆರ್‌ಎಸ್‌ಎಸ್ ಕಾರ್ಯಕರ್ತರನ್ನು ಹಣ ಹಂಚಲು ಕರೆ ತರಲಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಈ ಕಾರ್ಯಾಚರಣೆ ಹಿಂದೆ ವಿಜಯೇಂದ್ರ ಇದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರನ್ನೂ ಸಲ್ಲಿಸಿದೆ.

ಆದರೆ, ಆಯೋಗ ಇದನ್ನು ಗಂಭಿರವಾಗಿ ಪರಿಗಣಿಸಿಲ್ಲ, ಇದಕ್ಕೆ ಸರ್ಕಾರದ ಪ್ರಭಾವ ಕಾರಣ ಎಂದು ರೈತ ಹೋರಾಟಗಾರರು ಆರೋಪಿಸಿದ್ದಾರೆ. ಹಣ ಹಂಚುವ ವಿಡಿಯೋಗಳು ಹರಿದಾಡಿದರೂ ಇಲ್ಲಿನ ಚುನಾವಣಾ ಜಾಗೃತಾ ಅಧಿಕಾರಿಗಳು ಮತ್ತು ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡುತ್ತಿದ್ದಾರೆ.

ಮಸ್ಕಿ ಪಕ್ಕದ ಮುದಗಲ್, ಲಿಂಗಸೂಗುರು ಮತ್ತು ಸಿಂಧನೂರಿನ ಲಾಡ್ಜ್‌ಗಳ ಮೇಲೆ ದಾಳಿ ನಡೆಸಿದರೆ ನೂರಾರು ಕಾರ್ಯಕರ್ತರು ಮತ್ತು ಅಪಾರ ಹಣ ಸಿಗಬಹುದು ಎಂದು ರೈತ ಹೋರಾಟಗಾರರು ಹೇಳುತ್ತಲೇ ಬಂದಿದ್ದಾರೆ. ಇಂದು ರಾತ್ರಿ ಪ್ರಚಾರ ಅಂತ್ಯವಾಗಲಿದ್ದು ಬಿಜೆಪಿ ಸಾಕಷ್ಟು ಹಣ ಹರಿಸಲಿದೆ ಎಂದೂ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಇಫ್ತಾರ್‌ ಕೂಟ ನಡೆಸುವಂತಿಲ್ಲ, ರಂಜಾನ್‌ಗೆ ರಾಜ್ಯದಲ್ಲಿ ಹೊಸ ಮಾರ್ಗಸೂಚಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...