Homeಕರೋನಾ ತಲ್ಲಣವಾಹನಗಳಲ್ಲಿ ಏಕಾಂಗಿಯಾಗಿ ಓಡಾಡುವವರೂ ಮಾಸ್ಕ್‌ ಧರಿಸಬೇಕು - ದೆಹಲಿ ಹೈಕೋರ್ಟ್

ವಾಹನಗಳಲ್ಲಿ ಏಕಾಂಗಿಯಾಗಿ ಓಡಾಡುವವರೂ ಮಾಸ್ಕ್‌ ಧರಿಸಬೇಕು – ದೆಹಲಿ ಹೈಕೋರ್ಟ್

- Advertisement -
- Advertisement -

ಸಾರ್ವಜನಿಕ ಸ್ಥಳಗಳಲ್ಲಿ ಏಕಾಂಗಿಯಾಗಿ ವಾಹನಗಳಲ್ಲಿ ಓಡಾಡುವವರು ಕೂಡಾ ಕೊರೊನಾ ನಿಯಮಗಳನ್ನು ಪಾಲಿಸಿ ಮಾಸ್ಕ್ ಧರಿಸಬೇಕು ಎಂದು ದೆಹಲಿ ಹೈಕೋಟ್ ಬುಧವಾರ ಹೇಳಿದೆ. ಏಕಾಂಗಿಯಾಗಿ ವಾಹನ ಚಲಾಯಿಸುತ್ತಿರುವಾಗ ಮಾಸ್ಕ್‌ ಧರಿಸದಿದ್ದಕ್ಕಾಗಿ ದಂಡ ಹಾಕಿದ್ದನ್ನು ಪ್ರಶ್ನಿಸಿದ್ದ ಅರ್ಜಿದಾರರೊಬ್ಬರ ವಿಚಾರಣೆ ನಡೆಸಿದ ನ್ಯಾಯಾಮೂರ್ತಿ ಪ್ರತಿಭಾ ಎಂ. ಸಿಂಗ್ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.

“ನೀವು ಕಾರಿನಲ್ಲಿ ಏಕಾಂಗಿಯಾಗಿದ್ದರೂ, ಮಾಸ್ಕ್‌ ಧರಿಸಲು ಏಕೆ ಆಕ್ಷೇಪಿಸುತ್ತೀರಿ? ಇದು ನಿಮ್ಮ ಸ್ವಂತ ಸುರಕ್ಷತೆಗಾಗಿ. ಸಾಂಕ್ರಾಮಿಕ ಬಿಕ್ಕಟ್ಟು ಹೆಚ್ಚಾಗಿದೆ. ಒಬ್ಬ ವ್ಯಕ್ತಿಗೆ ಲಸಿಕೆ ನೀಡಲಾಗಿದೆಯೋ ಇಲ್ಲವೋ, ಆದರೆ ಮಾಸ್ಕ್‌ ಧರಿಸಬೇಕು” ಎಂದು ನ್ಯಾಯಾಮೂರ್ತಿ ಹೇಳಿದ್ದಾರೆ.

ಇದನ್ನೂ ಓದಿ: ವ್ಯಾಕ್ಸಿನೇಷನ್‌ ಕೇಂದ್ರಗಳಲ್ಲಿ ಜನ ಲಸಿಕೆಯಿಲ್ಲದೆ ಹಿಂತಿರುಗುತ್ತಿದ್ದಾರೆ : ಮಹಾರಾಷ್ಟ್ರ ಆರೋಗ್ಯ ಸಚಿವ

ವಿಶ್ವಾದ್ಯಂತ ವಿಜ್ಞಾನಿಗಳು ಮತ್ತು ಸರ್ಕಾರಗಳ ಸಲಹೆಯನ್ನು ಉಲ್ಲೇಖಿಸಿ ಕೊರೊನಾ ವಿರುದ್ಧ ಸುರಕ್ಷಿತವಾಗಿರಲು ಯಾರಾದರೂ ಮಾಡಬಹುದಾದ ಕನಿಷ್ಠ ಕೆಲಸ ಇದಾಗಿದೆ. ಕೊರೊನಾ ವೈರಸ್ ಎಷ್ಟು ಸಾಂಕ್ರಾಮಿಕವಾಗಿದೆಯೆಂದರೆ, ಟ್ರಾಫಿಕ್ ಸಮಯದಲ್ಲೂ ಸೋಂಕಿಗೆ ಒಳಗಾಗಬಹುದು ಎಂದು ಅವರು ಹೇಳಿದ್ದಾರೆ.

ವಿಚಾರಣೆಯ ಸಮಯದಲ್ಲಿ, ಕೇಂದ್ರ ಆರೋಗ್ಯ ಸಚಿವಾಲಯವು ಹೈಕೋರ್ಟ್‌ಗೆ ಏಕಾಂಗಿ ಚಾಲಕ ಮಾಸ್ಕ್‌ ಧರಿಸಬೇಕೆಂಬ ನಿಯಮವಿಲ್ಲ ಎಂದು ತಿಳಿಸಿತ್ತು. ಆದರೆ ಪ್ರತಿಯೊಂದು ರಾಜ್ಯಕ್ಕೂ ತನ್ನದೇ ಆದ ನಿಯಮಗಳನ್ನು ರೂಪಿಸುವ ಮತ್ತು ಅವುಗಳನ್ನು ಜಾರಿಗೊಳಿಸುವ ಹಕ್ಕಿದೆ ಎಂದು ಸಚಿವಾಲಯ ಪ್ರತಿಪಾದಿಸಿತ್ತು.

ದೆಹಲಿಯ ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರವು ಖಾಸಗಿ ಅಥವಾ ಸಾರ್ವಜನಿಕ ವಾಹನಗಳಲ್ಲಿ ಎಲ್ಲರೂ ಮಾಸ್ಕ್‌ ಧರಿಸಬೇಕು ಎಂದು ಕಳೆದ ವರ್ಷ ಏಪ್ರಿಲ್‌ನಲ್ಲಿ ಆದೇಶವನ್ನು ಅಂಗೀಕರಿಸಿತ್ತು.

ಇದನ್ನೂ ಓದಿ: ಅಪ್ಪ-ಮಗನ ನಿಜ ಬಣ್ಣ ಬಯಲಾಗಲಿದೆ: ಸಿಎಂ ಮತ್ತು ವಿಜಯೇಂದ್ರ ಬಗ್ಗೆ ಬಿಜೆಪಿ ಶಾಸಕ ಯತ್ನಾಳ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...