Homeಮುಖಪುಟಸಾಮೂಹಿಕ ಆಧಾರ್ ನಿಷ್ಕ್ರಿಯ; ಪ್ರಧಾನಿ ಮೋದಿಗೆ ಪತ್ರ ಬರೆದ ಪಶ್ಚಿಮ ಬಂಗಾಳ ಸಿಎಂ

ಸಾಮೂಹಿಕ ಆಧಾರ್ ನಿಷ್ಕ್ರಿಯ; ಪ್ರಧಾನಿ ಮೋದಿಗೆ ಪತ್ರ ಬರೆದ ಪಶ್ಚಿಮ ಬಂಗಾಳ ಸಿಎಂ

- Advertisement -
- Advertisement -

ರಾಜ್ಯದಲ್ಲಿ ಆಧಾರ್ ಕಾರ್ಡ್‌ಗಳ ‘ಸಾಮೂಹಿಕ ನಿಷ್ಕ್ರಿಯಗೊಳಿಸುವಿಕೆ’ ಕುರಿತು ಕಳವಳ ವ್ಯಕ್ತಪಡಿಸಿರುವ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೋಮವಾರ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ.

ಆಧಾರ್ ಸಂಬಂಧಿಸಿದ ನಾಗರಿಕರ ದೂರುಗಳನ್ನು ದಾಖಲಿಸಲು ಪೋರ್ಟಲ್ ಅನ್ನು ಪ್ರಾರಂಭಿಸಲಾಗುವುದು; ಅಗತ್ಯವಿದ್ದರೆ ರಾಜ್ಯ ಸರ್ಕಾರವು ಸಂತ್ರಸ್ತ ವ್ಯಕ್ತಿಗಳಿಗೆ ಪ್ರತ್ಯೇಕ ಕಾರ್ಡ್‌ಗಳನ್ನು ವಿತರಿಸುತ್ತದೆ, ಇದರಿಂದ ಯಾರೂ ಕಲ್ಯಾಣ ಯೋಜನೆಗಳಿಂದ ವಂಚಿತರಾಗುವುದಿಲ್ಲ ಎಂದು ಹೇಳಿದ್ದಾರೆ.

ಕೆಲವು ದಿನಗಳ ಹಿಂದೆ ಸಿಎಂ ಬ್ಯಾನರ್ಜಿ ಅವರು ಆಧಾರ್ ನಿಷ್ಕ್ರಿಯ ಸಮಸ್ಯೆಗಳ ಕುರಿತು ಪ್ರತಿಕ್ರಿಯಿಸಿ,  ತಾಂತ್ರಿಕ ಸಮಸ್ಯೆಯಿಂದ ನಿಷ್ಕ್ರಿಯಗೊಂಡಿರುವ ಆಧಾರ್ ಅನ್ನು ಮರು-ಸಕ್ರಿಯಗೊಳಿಸಲು ನಿರ್ಧರಿಸಿದರು. ಕೇಂದ್ರದ ಕಿರಿಯ ಸಚಿವ ಶಾಂತನು ಠಾಕೂರ್ ಅವರು ‘ತಾಂತ್ರಿಕ ಸಮಸ್ಯೆಯಿಂದಾಗಿ ಆಧಾರ್ ಕಾರ್ಡ್ ನಿಷ್ಕ್ರಿಯಗೊಂಡಿರುವ ನಿರಾಶ್ರಿತರಿಂದ ಕ್ಷಮೆಯಾಚಿಸಬೇಕು’ ಎಂದು ಕೋರಿದರು. ‘ಕೆಲವೇ ದಿನಗಳಲ್ಲಿ ಕಾರ್ಡ್‌ಗಳನ್ನು ಮರು-ಸಕ್ರಿಯಗೊಳಿಸಲಾಗುವುದು’ ಎಂದು ಅವರು ಎಲ್ಲರಿಗೂ ಭರವಸೆ ನೀಡಿದರು.

ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ತನ್ನ ಪ್ರಕಟಣೆಯಲ್ಲಿ, ‘ಆಧಾರ್ ಡೇಟಾಬೇಸ್ ಅನ್ನು ನವೀಕರಿಸಲು ಕೈಗೊಂಡ ಚಟುವಟಿಕೆಗಳ ಸಂದರ್ಭದಲ್ಲಿ, ಸೂಚನೆಗಳು ಆಧಾರ್ ಸಂಖ್ಯೆ ಹೊಂದಿರುವವರಿಗೆ ಕಾಲಕಾಲಕ್ಕೆ ನೀಡಲಾಗುತ್ತದೆ. ಈ ಸಂಬಂಧ, ಯಾವುದೇ ಆಧಾರ್ ಸಂಖ್ಯೆಯನ್ನು ರದ್ದುಗೊಳಿಸಲಾಗಿಲ್ಲ’ ಎಂದು ಸ್ಪಷ್ಟಪಡಿಸಿದೆ.

ಈ ಬೆಳವಣಿಗೆಗಳ ನಡುವೆಯೇ, ‘ಆಧಾರ್ ಕುಂದುಕೊರತೆಗಳ ಪೋರ್ಟಲ್ ಮಂಗಳವಾರದಿಂದ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ’ ಎಂದು ಪಶ್ಚಿಮ ಬಂಗಾಳ ಸರ್ಕಾರದ ಸಿಎಂ ಹೇಳಿದ್ದಾರೆ.

‘ವಿಶೇಷವಾಗಿ ಬಂಗಾಳದ ಎಸ್‌ಟಿ ಮತ್ತು ಒಬಿಸಿ ಸಮುದಾಯಗಳ ಜನರ ಆಧಾರ್ ನಿಷ್ಕ್ರಿಯಗೊಳಿಸುವಿಕೆಯು, ಕೇಂದ್ರ ಸರ್ಕಾರದ ವಿವೇಚನಾರಹಿತ ಕಾನೂನುಬಾಹಿರ ಕ್ರಮವಾಗಿದೆ ಎಂದು’ ಮಮತಾ ಬ್ಯಾನರ್ಜಿ ಪ್ರಧಾನಿಗೆ ಪತ್ರ ಬರೆದಿದ್ದಾರೆ.

‘ಕಾರ್ಡ್ ಹೊಂದಿರುವವರನ್ನೂ ಎಂದಿಗೂ ಕೇಳದೆ, ಯಾವುದೇ ವಿಚಾರಣೆ ನಡೆಸಲಿಲ್ಲ ಮತ್ತು ಆಧಾರ್ ಪರಿಶೀಲನೆಯ ಬಗ್ಗೆ ರಾಜ್ಯ ಸರ್ಕಾರಕ್ಕೆ ತಿಳಿಸಲಾಗಿಲ್ಲ. ಕಾರಣಗಳನ್ನು ನೀಡದೆ ಆಧಾರ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸುವ ಇಂತಹ ಹಠಾತ್ ಕ್ರಮಕ್ಕೆ ಕಾರಣಗಳ ಬಗ್ಗೆ ನಾನು ನಿಮ್ಮಿಂದ ತಿಳಿಯಲು ಬಯಸುತ್ತೇನೆ. ಇದು ಕೇವಲ ಅರ್ಹ ಫಲಾನುಭವಿಗಳನ್ನು ಪ್ರಯೋಜನಗಳಿಂದ ವಂಚಿತಗೊಳಿಸುವ ಸಲುವಾಗಿಯೇ ಅಥವಾ ಲೋಕಸಭೆಯ ಮೊದಲು ಚುನಾವಣೆಗೂ ಮೊದಲು ಭೀತಿಯ ಪರಿಸ್ಥಿತಿಯನ್ನು ಸೃಷ್ಟಿಸುವುದಕ್ಕಾಗಿಯೇ’ ಎಂದು ಅವರು ಕೇಂದ್ರವನ್ನು ಪ್ರಶ್ನಿಸಿದ್ದಾರೆ.

ಕೇಂದ್ರದ ಸಹಾಯಕ ಸಚಿವ ಶಾಂತನು ಠಾಕೂರ್ ಅವರು ಗೃಹ ಸಚಿವ ಅಮಿತ್ ಶಾ, ಐಟಿ ಸಚಿವ ಅಶ್ವಿನಿ ವೈಷ್ಣವ್ ಮತ್ತು ಬಂಗಾಳ ಬಿಜೆಪಿ ಅಧ್ಯಕ್ಷ ಮತ್ತು ಸಂಸದ ಸುಕಾಂತ ಮಜುಂದಾರ್ ಅವರೊಂದಿಗೆ ಈ ವಿಷಯದ ಕುರಿತು ದೆಹಲಿಯಲ್ಲಿ ಸಭೆ ನಡೆಸಿದರು. ನಂತರ, ‘ತಾಂತ್ರಿಕ ಸಮಸ್ಯೆಯಿಂದ ಆಧಾರ್ ಕಾರ್ಡ್ ನಿಷ್ಕ್ರಿಯಗೊಂಡಿರುವ ನಿರಾಶ್ರಿತರಿಂದ ನಾನು ಕ್ಷಮೆಯಾಚಿಸುತ್ತೇನೆ. ಕೆಲವೇ ದಿನಗಳಲ್ಲಿ ಅವುಗಳನ್ನು ಮರುಸ್ಥಾಪಿಸಲಾಗುವುದು’ ಎಂದು ಅವರು ಹೇಳಿದರು.

ಸಂತ್ರಸ್ಥ ಜನರು ತಮ್ಮ ಕುಂದುಕೊರತೆಗಳನ್ನು ತಿಳಿಸಲು ಮತ್ತು ಆಧಾರ್ ಮರುಸ್ಥಾಪನೆಗಾಗಿ ಅರ್ಜಿ ಸಲ್ಲಿಸಲು ಇಮೇಲ್ ಖಾತೆ – [email protected] ಮತ್ತು WhatsApp ಸಂಖ್ಯೆ – 9647534453 ಅನ್ನು ಬಳಸುವಂತೆ ಸಹ ಸಲಹೆ ನೀಡಿದ್ದಾರೆ. ‘ಆಧಾರ್ ಮರು ಪರಿಶಿಲನೆಗೆ ಯಾವುದೇ ದಾಖಲೆಯ ಅಗತ್ಯವಿಲ್ಲ. ನೀವು ಅರ್ಜಿಯಲ್ಲಿ ನಿಮ್ಮ ಹೆಸರು, ವಿಳಾಸ ಮತ್ತು ಫೋನ್ ಸಂಖ್ಯೆಯನ್ನು ನಮೂದಿಸಬೇಕಾಗಿರುವುದು’ ಎಂದು ಠಾಕೂರ್ ಹೇಳಿದರು.

ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಪಶ್ಚಿಮ ಬಂಗಾಳ ಸಿಎಂ, ‘ಈ ಮೂಲಕ ಜನರು  ಬ್ಯಾಂಕ್‌ ಪ್ರಯೋಜನಗಳಿಂದ ವಂಚಿತರಾಗುತ್ತಾರೆ. ಬಿಜೆಪಿಯು ಚುನಾವಣೆಗೆ ಮುಂಚಿತವಾಗಿ ಎನ್‌ಆರ್‌ಸಿಯನ್ನು ಪ್ರಾರಂಭಿಸಲು ಯೋಜಿಸುತ್ತಿದೆಯೇ? ಬಿಜೆಪಿ ಮೊದಲು ಆಧಾರ್‌ಗಳನ್ನು ಕಸಿದುಕೊಂಡು ನಂತರ ಸಿಎಎ ನೀಡಲು ಯೋಜಿಸುತ್ತಿದೆಯೇ? ಈ ಜನರು ಸರಿಯಾದ ವಿಧಾನಗಳ ಮೂಲಕ ತಮ್ಮ ಆಧಾರ್‌ಗಳನ್ನು ಪಡೆದಿದ್ದಾರೆ’ ಎಂದಿದ್ದಾರೆ.

‘ನಾವು ಯುಐಡಿಎಐ ರಾಜ್ಯ ಕಚೇರಿ ಕೋಲ್ಕತ್ತಾ (ಪಶ್ಚಿಮ ಬಂಗಾಳ) ಸುಭೋದೀಪ್ ಚೌಧರಿ ಅವರನ್ನು ಭೇಟಿ ಮಾಡಿದ್ದೇವೆ. ದೆಹಲಿ ಮತ್ತು ಬೆಂಗಳೂರಿನಿಂದ ಆಧಾರ್ ನಿಷ್ಕ್ರಿಯಗೊಳಿಸಲಾಗುತ್ತಿದೆ ಎಂದು ಹೇಳಿದರು’ ಎಂದು ಬಂಗಾಳದ ಮುಖ್ಯ ಕಾರ್ಯದರ್ಶಿ ಬಿ.ಪಿ. ಗೋಪಾಲಿಕಾ ಹೇಳಿದ್ದಾರೆ.

‘ಸುಮಾರು 900-1,000 ಜನರು ತಮ್ಮ ವೆಬ್‌ಸೈಟ್ ಮೂಲಕ ಅಥವಾ ನೇರವಾಗಿ ಅವರ ಕಚೇರಿಗೆ ಬರುವ ಮೂಲಕ  ಸಂಪರ್ಕಿಸಿದ್ದಾರೆ. ನಾವು ನಿಯಮಗಳ ಬಗ್ಗೆ ಅವರನ್ನು ಕೇಳಿದಾಗ, ಇದು ಆಧಾರ್ ನಿಯಂತ್ರಣದ 28-ಎ ಪ್ರಕಾರ ಮಾಡಲಾಗಿದೆ ಎಂದು ಹೇಳಿದರು. ಆದರೆ, ಯಾವುದೇ ನಿಷ್ಕ್ರಿಯಗೊಳಿಸುವಿಕೆಗೆ ಮುಂಚಿತವಾಗಿ, ಕ್ಷೇತ್ರ ವಿಚಾರಣೆ ಮತ್ತು ವೈಯಕ್ತಿಕ ವಿಚಾರಣೆಯನ್ನು ಹೊಂದಿರಬೇಕು ಎಂದು ಸ್ಪಷ್ಟವಾಗಿ ಹೇಳಲಾಗಿದೆ. ಯಾವುದೇ ನಿಯಮಗಳನ್ನು ಅನುಸರಿಸಿಲ್ಲ…. ಹಾಗೇನಾದರೂ ಮತ್ತೆ ಸಂಭವಿಸಿದರೆ ನಾವು ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಅವರಿಗೆ ತಿಳಿಸಿದ್ದೇವೆ. ನಾವು ಬಂಗಾಳದಲ್ಲಿ ಎನ್‌ಆರ್‌ಸಿಯನ್ನು ಅನುಮತಿಸುವುದಿಲ್ಲ. ನಾವು ರಕ್ತವನ್ನು ಚೆಲ್ಲುತ್ತೇವೆ; ಆದರೆ ಬಂಗಾಳದಿಂದ ಒಬ್ಬ ವ್ಯಕ್ತಿಯನ್ನು ಹೊರಗಿಡಲು ಅನುಮತಿಸುವುದಿಲ್ಲ…. ನಾವು ಬಂಗಾಳದಲ್ಲಿ ಬಂಧನ ಶಿಬಿರಗಳನ್ನು ಅನುಮತಿಸುವುದಿಲ್ಲ. ಜನರು ಪೌರತ್ವದ ಭರವಸೆ ನೀಡಿದ ಮತುವಾ ಸಮುದಾಯವನ್ನು ಈಗ ವಿದೇಶಿಯರೆಂದು ಕರೆಯಲಾಗುತ್ತಿದೆ, ಇದು ಅವರಿಗೆ ಅಗೌರವವಲ್ಲವೇ’ ಎಂದು ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

‘ಆಧಾರ್‌ನೊಂದಿಗೆ ಆಟವಾಡುತ್ತಿರುವವರನ್ನು ಜನರು ಅಂಧಾರ್ (ಕತ್ತಲೆ)ಗೆ ಎಸೆಯುವ ಸಮಯ ಬರುತ್ತದೆ. ಪರ್ಯಾಯ ಕಾರ್ಡ್ ನಿಮ್ಮ ಗುರುತನ್ನು ರಕ್ಷಿಸಲು ಮಾತ್ರವಲ್ಲದೆ ನಮ್ಮ ಕಲ್ಯಾಣ ಯೋಜನೆಗಳನ್ನು ಪಡೆದುಕೊಳ್ಳಲು ನಿಮಗೆ ಅವಕಾಶ ನೀಡುತ್ತದೆ. ನಾವು ಜಮೀನ್ದಾರರಲ್ಲ, ನೀವು ಪಹರಾದಾರರು; ಭಯಪಡಬೇಡಿ. ಇಲ್ಲಿ ಯಾವುದೇ ಎನ್‌ಆರ್‌ಸಿ ಇರುವುದಿಲ್ಲ. ಇದು ಅಸ್ಸಾಂ, ಉತ್ತರ ಪ್ರದೇಶ, ಬಿಹಾರ ಅಥವಾ ರಾಜಸ್ಥಾನ ಅಲ್ಲ. ಇದು ಕವಿಗುರುವಿನ ಬಂಗಾಳ’ ಎಂದು ಕೇಂದ್ರದಕ್ಕೆ ತಿರುಗೇಟು ಕೊಟ್ಟರು.

ಇದನ್ನೂ ಓದಿ; ಇಂಡಿಯಾ ಬ್ಲಾಕ್ ಸೇರಿಲ್ಲ; ರಾಷ್ಟ್ರದ ಬಗ್ಗೆ ನಿಸ್ವಾರ್ಥವಾಗಿ ಯೋಚಿಸುವರಿಗೆ ನಮ್ಮ ಬೆಂಬಲ: ಕಮಲ್ ಹಾಸನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...