Homeಮುಖಪುಟಸಾಮೂಹಿಕ ಆಧಾರ್ ನಿಷ್ಕ್ರಿಯ; ಪ್ರಧಾನಿ ಮೋದಿಗೆ ಪತ್ರ ಬರೆದ ಪಶ್ಚಿಮ ಬಂಗಾಳ ಸಿಎಂ

ಸಾಮೂಹಿಕ ಆಧಾರ್ ನಿಷ್ಕ್ರಿಯ; ಪ್ರಧಾನಿ ಮೋದಿಗೆ ಪತ್ರ ಬರೆದ ಪಶ್ಚಿಮ ಬಂಗಾಳ ಸಿಎಂ

- Advertisement -
- Advertisement -

ರಾಜ್ಯದಲ್ಲಿ ಆಧಾರ್ ಕಾರ್ಡ್‌ಗಳ ‘ಸಾಮೂಹಿಕ ನಿಷ್ಕ್ರಿಯಗೊಳಿಸುವಿಕೆ’ ಕುರಿತು ಕಳವಳ ವ್ಯಕ್ತಪಡಿಸಿರುವ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೋಮವಾರ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ.

ಆಧಾರ್ ಸಂಬಂಧಿಸಿದ ನಾಗರಿಕರ ದೂರುಗಳನ್ನು ದಾಖಲಿಸಲು ಪೋರ್ಟಲ್ ಅನ್ನು ಪ್ರಾರಂಭಿಸಲಾಗುವುದು; ಅಗತ್ಯವಿದ್ದರೆ ರಾಜ್ಯ ಸರ್ಕಾರವು ಸಂತ್ರಸ್ತ ವ್ಯಕ್ತಿಗಳಿಗೆ ಪ್ರತ್ಯೇಕ ಕಾರ್ಡ್‌ಗಳನ್ನು ವಿತರಿಸುತ್ತದೆ, ಇದರಿಂದ ಯಾರೂ ಕಲ್ಯಾಣ ಯೋಜನೆಗಳಿಂದ ವಂಚಿತರಾಗುವುದಿಲ್ಲ ಎಂದು ಹೇಳಿದ್ದಾರೆ.

ಕೆಲವು ದಿನಗಳ ಹಿಂದೆ ಸಿಎಂ ಬ್ಯಾನರ್ಜಿ ಅವರು ಆಧಾರ್ ನಿಷ್ಕ್ರಿಯ ಸಮಸ್ಯೆಗಳ ಕುರಿತು ಪ್ರತಿಕ್ರಿಯಿಸಿ,  ತಾಂತ್ರಿಕ ಸಮಸ್ಯೆಯಿಂದ ನಿಷ್ಕ್ರಿಯಗೊಂಡಿರುವ ಆಧಾರ್ ಅನ್ನು ಮರು-ಸಕ್ರಿಯಗೊಳಿಸಲು ನಿರ್ಧರಿಸಿದರು. ಕೇಂದ್ರದ ಕಿರಿಯ ಸಚಿವ ಶಾಂತನು ಠಾಕೂರ್ ಅವರು ‘ತಾಂತ್ರಿಕ ಸಮಸ್ಯೆಯಿಂದಾಗಿ ಆಧಾರ್ ಕಾರ್ಡ್ ನಿಷ್ಕ್ರಿಯಗೊಂಡಿರುವ ನಿರಾಶ್ರಿತರಿಂದ ಕ್ಷಮೆಯಾಚಿಸಬೇಕು’ ಎಂದು ಕೋರಿದರು. ‘ಕೆಲವೇ ದಿನಗಳಲ್ಲಿ ಕಾರ್ಡ್‌ಗಳನ್ನು ಮರು-ಸಕ್ರಿಯಗೊಳಿಸಲಾಗುವುದು’ ಎಂದು ಅವರು ಎಲ್ಲರಿಗೂ ಭರವಸೆ ನೀಡಿದರು.

ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ತನ್ನ ಪ್ರಕಟಣೆಯಲ್ಲಿ, ‘ಆಧಾರ್ ಡೇಟಾಬೇಸ್ ಅನ್ನು ನವೀಕರಿಸಲು ಕೈಗೊಂಡ ಚಟುವಟಿಕೆಗಳ ಸಂದರ್ಭದಲ್ಲಿ, ಸೂಚನೆಗಳು ಆಧಾರ್ ಸಂಖ್ಯೆ ಹೊಂದಿರುವವರಿಗೆ ಕಾಲಕಾಲಕ್ಕೆ ನೀಡಲಾಗುತ್ತದೆ. ಈ ಸಂಬಂಧ, ಯಾವುದೇ ಆಧಾರ್ ಸಂಖ್ಯೆಯನ್ನು ರದ್ದುಗೊಳಿಸಲಾಗಿಲ್ಲ’ ಎಂದು ಸ್ಪಷ್ಟಪಡಿಸಿದೆ.

ಈ ಬೆಳವಣಿಗೆಗಳ ನಡುವೆಯೇ, ‘ಆಧಾರ್ ಕುಂದುಕೊರತೆಗಳ ಪೋರ್ಟಲ್ ಮಂಗಳವಾರದಿಂದ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ’ ಎಂದು ಪಶ್ಚಿಮ ಬಂಗಾಳ ಸರ್ಕಾರದ ಸಿಎಂ ಹೇಳಿದ್ದಾರೆ.

‘ವಿಶೇಷವಾಗಿ ಬಂಗಾಳದ ಎಸ್‌ಟಿ ಮತ್ತು ಒಬಿಸಿ ಸಮುದಾಯಗಳ ಜನರ ಆಧಾರ್ ನಿಷ್ಕ್ರಿಯಗೊಳಿಸುವಿಕೆಯು, ಕೇಂದ್ರ ಸರ್ಕಾರದ ವಿವೇಚನಾರಹಿತ ಕಾನೂನುಬಾಹಿರ ಕ್ರಮವಾಗಿದೆ ಎಂದು’ ಮಮತಾ ಬ್ಯಾನರ್ಜಿ ಪ್ರಧಾನಿಗೆ ಪತ್ರ ಬರೆದಿದ್ದಾರೆ.

‘ಕಾರ್ಡ್ ಹೊಂದಿರುವವರನ್ನೂ ಎಂದಿಗೂ ಕೇಳದೆ, ಯಾವುದೇ ವಿಚಾರಣೆ ನಡೆಸಲಿಲ್ಲ ಮತ್ತು ಆಧಾರ್ ಪರಿಶೀಲನೆಯ ಬಗ್ಗೆ ರಾಜ್ಯ ಸರ್ಕಾರಕ್ಕೆ ತಿಳಿಸಲಾಗಿಲ್ಲ. ಕಾರಣಗಳನ್ನು ನೀಡದೆ ಆಧಾರ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸುವ ಇಂತಹ ಹಠಾತ್ ಕ್ರಮಕ್ಕೆ ಕಾರಣಗಳ ಬಗ್ಗೆ ನಾನು ನಿಮ್ಮಿಂದ ತಿಳಿಯಲು ಬಯಸುತ್ತೇನೆ. ಇದು ಕೇವಲ ಅರ್ಹ ಫಲಾನುಭವಿಗಳನ್ನು ಪ್ರಯೋಜನಗಳಿಂದ ವಂಚಿತಗೊಳಿಸುವ ಸಲುವಾಗಿಯೇ ಅಥವಾ ಲೋಕಸಭೆಯ ಮೊದಲು ಚುನಾವಣೆಗೂ ಮೊದಲು ಭೀತಿಯ ಪರಿಸ್ಥಿತಿಯನ್ನು ಸೃಷ್ಟಿಸುವುದಕ್ಕಾಗಿಯೇ’ ಎಂದು ಅವರು ಕೇಂದ್ರವನ್ನು ಪ್ರಶ್ನಿಸಿದ್ದಾರೆ.

ಕೇಂದ್ರದ ಸಹಾಯಕ ಸಚಿವ ಶಾಂತನು ಠಾಕೂರ್ ಅವರು ಗೃಹ ಸಚಿವ ಅಮಿತ್ ಶಾ, ಐಟಿ ಸಚಿವ ಅಶ್ವಿನಿ ವೈಷ್ಣವ್ ಮತ್ತು ಬಂಗಾಳ ಬಿಜೆಪಿ ಅಧ್ಯಕ್ಷ ಮತ್ತು ಸಂಸದ ಸುಕಾಂತ ಮಜುಂದಾರ್ ಅವರೊಂದಿಗೆ ಈ ವಿಷಯದ ಕುರಿತು ದೆಹಲಿಯಲ್ಲಿ ಸಭೆ ನಡೆಸಿದರು. ನಂತರ, ‘ತಾಂತ್ರಿಕ ಸಮಸ್ಯೆಯಿಂದ ಆಧಾರ್ ಕಾರ್ಡ್ ನಿಷ್ಕ್ರಿಯಗೊಂಡಿರುವ ನಿರಾಶ್ರಿತರಿಂದ ನಾನು ಕ್ಷಮೆಯಾಚಿಸುತ್ತೇನೆ. ಕೆಲವೇ ದಿನಗಳಲ್ಲಿ ಅವುಗಳನ್ನು ಮರುಸ್ಥಾಪಿಸಲಾಗುವುದು’ ಎಂದು ಅವರು ಹೇಳಿದರು.

ಸಂತ್ರಸ್ಥ ಜನರು ತಮ್ಮ ಕುಂದುಕೊರತೆಗಳನ್ನು ತಿಳಿಸಲು ಮತ್ತು ಆಧಾರ್ ಮರುಸ್ಥಾಪನೆಗಾಗಿ ಅರ್ಜಿ ಸಲ್ಲಿಸಲು ಇಮೇಲ್ ಖಾತೆ – [email protected] ಮತ್ತು WhatsApp ಸಂಖ್ಯೆ – 9647534453 ಅನ್ನು ಬಳಸುವಂತೆ ಸಹ ಸಲಹೆ ನೀಡಿದ್ದಾರೆ. ‘ಆಧಾರ್ ಮರು ಪರಿಶಿಲನೆಗೆ ಯಾವುದೇ ದಾಖಲೆಯ ಅಗತ್ಯವಿಲ್ಲ. ನೀವು ಅರ್ಜಿಯಲ್ಲಿ ನಿಮ್ಮ ಹೆಸರು, ವಿಳಾಸ ಮತ್ತು ಫೋನ್ ಸಂಖ್ಯೆಯನ್ನು ನಮೂದಿಸಬೇಕಾಗಿರುವುದು’ ಎಂದು ಠಾಕೂರ್ ಹೇಳಿದರು.

ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಪಶ್ಚಿಮ ಬಂಗಾಳ ಸಿಎಂ, ‘ಈ ಮೂಲಕ ಜನರು  ಬ್ಯಾಂಕ್‌ ಪ್ರಯೋಜನಗಳಿಂದ ವಂಚಿತರಾಗುತ್ತಾರೆ. ಬಿಜೆಪಿಯು ಚುನಾವಣೆಗೆ ಮುಂಚಿತವಾಗಿ ಎನ್‌ಆರ್‌ಸಿಯನ್ನು ಪ್ರಾರಂಭಿಸಲು ಯೋಜಿಸುತ್ತಿದೆಯೇ? ಬಿಜೆಪಿ ಮೊದಲು ಆಧಾರ್‌ಗಳನ್ನು ಕಸಿದುಕೊಂಡು ನಂತರ ಸಿಎಎ ನೀಡಲು ಯೋಜಿಸುತ್ತಿದೆಯೇ? ಈ ಜನರು ಸರಿಯಾದ ವಿಧಾನಗಳ ಮೂಲಕ ತಮ್ಮ ಆಧಾರ್‌ಗಳನ್ನು ಪಡೆದಿದ್ದಾರೆ’ ಎಂದಿದ್ದಾರೆ.

‘ನಾವು ಯುಐಡಿಎಐ ರಾಜ್ಯ ಕಚೇರಿ ಕೋಲ್ಕತ್ತಾ (ಪಶ್ಚಿಮ ಬಂಗಾಳ) ಸುಭೋದೀಪ್ ಚೌಧರಿ ಅವರನ್ನು ಭೇಟಿ ಮಾಡಿದ್ದೇವೆ. ದೆಹಲಿ ಮತ್ತು ಬೆಂಗಳೂರಿನಿಂದ ಆಧಾರ್ ನಿಷ್ಕ್ರಿಯಗೊಳಿಸಲಾಗುತ್ತಿದೆ ಎಂದು ಹೇಳಿದರು’ ಎಂದು ಬಂಗಾಳದ ಮುಖ್ಯ ಕಾರ್ಯದರ್ಶಿ ಬಿ.ಪಿ. ಗೋಪಾಲಿಕಾ ಹೇಳಿದ್ದಾರೆ.

‘ಸುಮಾರು 900-1,000 ಜನರು ತಮ್ಮ ವೆಬ್‌ಸೈಟ್ ಮೂಲಕ ಅಥವಾ ನೇರವಾಗಿ ಅವರ ಕಚೇರಿಗೆ ಬರುವ ಮೂಲಕ  ಸಂಪರ್ಕಿಸಿದ್ದಾರೆ. ನಾವು ನಿಯಮಗಳ ಬಗ್ಗೆ ಅವರನ್ನು ಕೇಳಿದಾಗ, ಇದು ಆಧಾರ್ ನಿಯಂತ್ರಣದ 28-ಎ ಪ್ರಕಾರ ಮಾಡಲಾಗಿದೆ ಎಂದು ಹೇಳಿದರು. ಆದರೆ, ಯಾವುದೇ ನಿಷ್ಕ್ರಿಯಗೊಳಿಸುವಿಕೆಗೆ ಮುಂಚಿತವಾಗಿ, ಕ್ಷೇತ್ರ ವಿಚಾರಣೆ ಮತ್ತು ವೈಯಕ್ತಿಕ ವಿಚಾರಣೆಯನ್ನು ಹೊಂದಿರಬೇಕು ಎಂದು ಸ್ಪಷ್ಟವಾಗಿ ಹೇಳಲಾಗಿದೆ. ಯಾವುದೇ ನಿಯಮಗಳನ್ನು ಅನುಸರಿಸಿಲ್ಲ…. ಹಾಗೇನಾದರೂ ಮತ್ತೆ ಸಂಭವಿಸಿದರೆ ನಾವು ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಅವರಿಗೆ ತಿಳಿಸಿದ್ದೇವೆ. ನಾವು ಬಂಗಾಳದಲ್ಲಿ ಎನ್‌ಆರ್‌ಸಿಯನ್ನು ಅನುಮತಿಸುವುದಿಲ್ಲ. ನಾವು ರಕ್ತವನ್ನು ಚೆಲ್ಲುತ್ತೇವೆ; ಆದರೆ ಬಂಗಾಳದಿಂದ ಒಬ್ಬ ವ್ಯಕ್ತಿಯನ್ನು ಹೊರಗಿಡಲು ಅನುಮತಿಸುವುದಿಲ್ಲ…. ನಾವು ಬಂಗಾಳದಲ್ಲಿ ಬಂಧನ ಶಿಬಿರಗಳನ್ನು ಅನುಮತಿಸುವುದಿಲ್ಲ. ಜನರು ಪೌರತ್ವದ ಭರವಸೆ ನೀಡಿದ ಮತುವಾ ಸಮುದಾಯವನ್ನು ಈಗ ವಿದೇಶಿಯರೆಂದು ಕರೆಯಲಾಗುತ್ತಿದೆ, ಇದು ಅವರಿಗೆ ಅಗೌರವವಲ್ಲವೇ’ ಎಂದು ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

‘ಆಧಾರ್‌ನೊಂದಿಗೆ ಆಟವಾಡುತ್ತಿರುವವರನ್ನು ಜನರು ಅಂಧಾರ್ (ಕತ್ತಲೆ)ಗೆ ಎಸೆಯುವ ಸಮಯ ಬರುತ್ತದೆ. ಪರ್ಯಾಯ ಕಾರ್ಡ್ ನಿಮ್ಮ ಗುರುತನ್ನು ರಕ್ಷಿಸಲು ಮಾತ್ರವಲ್ಲದೆ ನಮ್ಮ ಕಲ್ಯಾಣ ಯೋಜನೆಗಳನ್ನು ಪಡೆದುಕೊಳ್ಳಲು ನಿಮಗೆ ಅವಕಾಶ ನೀಡುತ್ತದೆ. ನಾವು ಜಮೀನ್ದಾರರಲ್ಲ, ನೀವು ಪಹರಾದಾರರು; ಭಯಪಡಬೇಡಿ. ಇಲ್ಲಿ ಯಾವುದೇ ಎನ್‌ಆರ್‌ಸಿ ಇರುವುದಿಲ್ಲ. ಇದು ಅಸ್ಸಾಂ, ಉತ್ತರ ಪ್ರದೇಶ, ಬಿಹಾರ ಅಥವಾ ರಾಜಸ್ಥಾನ ಅಲ್ಲ. ಇದು ಕವಿಗುರುವಿನ ಬಂಗಾಳ’ ಎಂದು ಕೇಂದ್ರದಕ್ಕೆ ತಿರುಗೇಟು ಕೊಟ್ಟರು.

ಇದನ್ನೂ ಓದಿ; ಇಂಡಿಯಾ ಬ್ಲಾಕ್ ಸೇರಿಲ್ಲ; ರಾಷ್ಟ್ರದ ಬಗ್ಗೆ ನಿಸ್ವಾರ್ಥವಾಗಿ ಯೋಚಿಸುವರಿಗೆ ನಮ್ಮ ಬೆಂಬಲ: ಕಮಲ್ ಹಾಸನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...