Homeಮುಖಪುಟಆಪ್ ಸಚಿವನ ನೇತೃತ್ವದಲ್ಲಿ ಬೌದ್ಧ ಧರ್ಮಕ್ಕೆ ಸಾಮೂಹಿಕ ಮತಾಂತರ: ಪ್ರತಿಜ್ಞೆ ಆಕ್ಷೇಪಿಸಿದ ಬಿಜೆಪಿ

ಆಪ್ ಸಚಿವನ ನೇತೃತ್ವದಲ್ಲಿ ಬೌದ್ಧ ಧರ್ಮಕ್ಕೆ ಸಾಮೂಹಿಕ ಮತಾಂತರ: ಪ್ರತಿಜ್ಞೆ ಆಕ್ಷೇಪಿಸಿದ ಬಿಜೆಪಿ

ಜೈಭೀಮ್ ಮಿ‍ಷನ್ ಸಂಘಟನೆ ಏರ್ಪಡಿಸಿದ್ದ ಧಮ್ಮ ಚಕ್ರ ಪರಿವರ್ತನಾ ದಿನ ಕಾರ್ಯಕ್ರಮದಲ್ಲಿ ಅಂಬೇಡ್ಕರ್‌ರವರ ಸಂಬಂಧಿ ರಾಜರತ್ನ ಅಂಬೇಡ್ಕರ್ ಕೂಡ ಭಾಗವಹಿಸಿದ್ದರು.

- Advertisement -
- Advertisement -

ಡಾ.ಬಿ.ಆರ್ ಅಂಬೇಡ್ಕರ್‌ರವರು ಹಿಂದೂ ಧರ್ಮ ತ್ಯಜಿಸಿ ಬೌದ್ಧ ಧರ್ಮಕ್ಕೆ ಮತಾಂತರಗೊಂಡ ದಿನದ ಅಂಗವಾಗಿ ದೆಹಲಿಯಲ್ಲಿ ನಡೆದ ಧಮ್ಮ ಚಕ್ರ ಪರಿವರ್ತನಾ ದಿನ ಕಾರ್ಯಕ್ರಮದಲ್ಲಿ ಆಪ್ ಸಚಿವ ಸೇರಿ 7000ಕ್ಕೂ ಹೆಚ್ಚು ಜನರು ಬೌದ್ಧ ಧರ್ಮ ಸ್ವೀಕರಿಸಿದ್ದಾರೆ.

ದೆಹಲಿಯ ಸಮಾಜ ಕಲ್ಯಾಣ ಇಲಾಖೆ ಸಚಿವ ರಾಜೇಂದ್ರ ಪಾಲ್ ಗೌತಮ್ ತಮ್ಮ ಸಾವಿರಾರು ಅನುಯಾಯಿಗಳೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಂಬೇಡ್ಕರ್‌ರವರು ಪ್ರತಿಪಾದಿಸಿದ್ದ 22 ಪ್ರತಿಜ್ಞೆಗಳನ್ನು ತೆಗೆದುಕೊಂಡಿದ್ದಾರೆ.

ಈ ಕುರಿತು ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. 22 ಪ್ರತಿಜ್ಞೆಗಳಲ್ಲಿ ಒಂದಾದ ಬ್ರಹ್ಮ, ವಿಷ್ಣು, ಮಹೇಶ್ವರನಲ್ಲಿ ನನಗೆ ನಂಬಿಕೆಯಿಲ್ಲ, ಅವರನ್ನು ನಾನು ಪೂಜಿಸುವುದಿಲ್ಲ ಎಂದು ಕಾರ್ಯಕ್ರಮದಲ್ಲಿ ಬೋದಿಸಿರುವುದಕ್ಕೆ ಹಿಂದೂ ದೇವತೆಗಳಿಗೆ ಅವಮಾನ ಎಂದು ಕರೆದಿದೆ.

ಎಎಪಿ ಸಚಿವರು ಗಲಭೆ ಎಬ್ಬಿಸಲು ಪ್ರಯತ್ನಿಸುತ್ತಿದ್ದಾರೆ. ಕೂಡಲೇ ಸಚಿವರನ್ನು ಪಕ್ಷದಿಂದ ತೆಗೆದು ಹಾಕಬೇಕು. ನಾವು ಅವರ ವಿರುದ್ಧ ದೂರು ಸಲ್ಲಿಸುತ್ತಿದ್ದೇವೆ ಎಂದು ಬಿಜೆಪಿ ಸಂಸದ ಮನೋಜ್ ತಿವಾರಿ ಹೇಳಿದ್ದಾರೆ.

“ಕೇಜ್ರಿವಾಲ್ ಮಂತ್ರಿ ಹಿಂದೂಗಳ ವಿರುದ್ಧ ಹೇಗೆ ವಿಷ ಉಗುಳುತ್ತಿದ್ದಾರೆ ನೋಡಿ. ಚುನಾವಣಾ ಹಿಂದೂ ಕೇಜ್ರಿವಾಲ್ ಮತ್ತು ಎಎಪಿಯ ಹಿಂದೂ ವಿರೋಧಿ ಮುಖ ಎಲ್ಲರ ಮುಂದೆ ಬಂದಿದೆ. ಹಿಂದೂ ವಿರೋಧಿ ಎಎಪಿಗೆ ಸಾರ್ವಜನಿಕರು ಶೀಘ್ರದಲ್ಲೇ ತಕ್ಕ ಉತ್ತರ ನೀಡಲಿದ್ದಾರೆ. ನಾಚಿಕೆ ಆಗುತ್ತಿದೆ ಕೇಜ್ರಿವಾಲ್” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ರಾಜೇಂದ್ರ ಪಾಲ್ ಗೌತಮ್, “ನನಗೆ ಬೌದ್ಧ ಧರ್ಮದಲ್ಲಿ ನಂಬಿಕೆಯಿದೆ. ಭಾರತದ ಸಂವಿಧಾನವು ನನಗಿಷ್ಟವಾದ ಧರ್ಮವನ್ನು ಅನುಸರಿಸುವ ಹಕ್ಕು ನೀಡಿದೆ. ಇದರಿಂದ ಯಾರಿಗೆ ತೊಂದರೆಯಾಗುತ್ತಿದೆ? ಬಿಜೆಪಿಯವರು ನಿಜವಾದ ದೇಶ ವಿರೋಧಿಗಳು. ಆಪ್ ಕಂಡರೆ ಅವರಿಗೆ ಭಯ, ಅದಕ್ಕಾಗಿ ಸುಳ್ಳು ದೂರು ನೀಡುತ್ತಿದ್ದಾರೆ” ಎಂದಿದ್ದಾರೆ.

ಜಾತಿ ಆಧಾರಿತ ರಾಜಕೀಯ ಮಾಡುವವರು ದ್ರೋಹಿಗಳು. ಅವರಿಗೆ ಬೇರೆ ಯಾವುದೇ ಅಜೆಂಡಾಗಳಿಲ್ಲ. ಧರ್ಮ ಧರ್ಮದ ನಡುವೆ ಎತ್ತಿಕಟ್ಟುವುದು ಅವರ ಚಾಳಿ. ಅವರು ಆಪ್ ಕಾರ್ಯಕರ್ತರು ಏಕೆ ದೇವಸ್ಥಾನಕ್ಕೆ ಹೋಗುತ್ತಾರೆ ಎಂದು ಪ್ರಶ್ನಿಸುತ್ತಾರೆ. ನನ್ನ ಪ್ರಕಾರ ಯಾರಿಗೆ ಯಾವ ಧರ್ಮದ ಮೇಲೆ ನಂಬಿಕೆಯಿದೆಯೊ ಅವರು ಆಯಾದ ಧರ್ಮದ ಪೂಜಾಸ್ಥಳಿಗೆ ಹೋಗುವ ಹಕ್ಕು ಹೊಂದಿದ್ದಾರೆ. ನನಗೆ ಬೌದ್ಧ ಧರ್ಮದ ಮೇಲೆ ನಂಬಿಕೆಯಿದೆ. ಹಾಗಾಗಿ ನಾನು ಅಲ್ಲಿಗೆ ಹೋಗುತ್ತೇನೆ. ಯಾರಿಗೂ ಇನ್ನೊಂದು ಧರ್ಮವನ್ನು ಹೇರುವ ಅಧಿಕಾರವಿಲ್ಲ” ಎಂದು ರಾಜೇಂದ್ರ ಪಾಲ್ ಗೌತಮ್ ತಿಳಿಸಿದ್ದಾರೆ.

ಜೈಭೀಮ್ ಮಿ‍ಷನ್ ಸಂಘಟನೆ ಏರ್ಪಡಿಸಿದ್ದ ಧಮ್ಮ ಚಕ್ರ ಪರಿವರ್ತನಾ ದಿನ ಕಾರ್ಯಕ್ರಮದಲ್ಲಿ ಅಂಬೇಡ್ಕರ್‌ರವರ ಸಂಬಂಧಿ ರಾಜರತ್ನ ಅಂಬೇಡ್ಕರ್ ಕೂಡ ಭಾಗವಹಿಸಿದ್ದರು.

ಇದನ್ನೂ ಓದಿ: ನಾನಕ್ ಚಂದ್ ರತ್ತುರವರ ’ಬಾಬಾ ಸಾಹೇಬರ ಕೊನೆದಿನಗಳು’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪ್ರತಿಯೊಬ್ಬ ವ್ಯಕ್ತಿಯು ತನ್ನಗಿಷ್ಟವಾದ ಧರ್ಮವನ್ನು ಸ್ವೀಕರಿಸಬಹುದು….ಅದು ಎಲ್ಲಾರ ಧಾರ್ಮಿಕ ಹಕ್ಕು….. ಅದು ಭಾರತ ಕಾನೂನು…
    ಮಾತು ಮಾತಿಗೆ ಹಿಂದೂ , ಹಿಂದು ಎನ್ನುವ ನೀವು ನಿಮ್ಮ ಬ್ರಾಹ್ಮಣ ಸಮಾಜದ ಹೆಣ್ಣುಮಕ್ಕಳನ್ನು ಮುಸ್ಲಿಂರಿಗೆ ಕೊಟ್ಟು ವಿವಾಹ ಮಾಡುತ್ತೀರಿ… ಅದು ನಾಶ ಮಾಡದಂಗೆ ಅಲ್ವ…..
    ರೀಮಾ- ಶಾರುಖ್ ಖಾನ್..
    1)ಕಿರಣ್ ರಾವ್ 2), ರೀತು – ಅಮೀರ್ ಖಾನ್….
    ಮೋನಿಕ ಬೇಡಿ – ಅಬ್ಬು ಸಲಿಂ….( ದಾವುದ್ ಶಿಷ್ಯ)
    ಸಂಗೀತ ಬಿಜಲಾನಿ- ಅಜರ್…cricket ..
    ಕರೀನಾ ಕಪೂರ್ – ಸೈಫ್ ಆಲಿಖಾನ್…
    MP ಶನ್ವಾಜ್ ಹೆಂಡತಿ ಬ್ರಾಹ್ಮಣಿ…
    BJP , MP ಸುಬ್ರಮಣೀ ಸ್ವಾಮಿ ಮಗಳು (ಬ್ರಾಹ್ಮಣಿ) ಮಸ್ಲಿಂರ ಜೊತೆ ಮದುವೆ …
    ಇನ್ನು ನೂರಾರು….
    ಈ BJP ಯವರಿಗೆ ಶ್ರೀಮಂತ ಮುಸ್ಲಿಂರು ಅಳಿಯಂದಿರು…..
    ಬಡ ಮಸ್ಲಿಂರು ದೇಶದ್ರೋಹಿಗಳು…

LEAVE A REPLY

Please enter your comment!
Please enter your name here

- Advertisment -

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...