Homeಮುಖಪುಟಆಪ್ ಸಚಿವನ ನೇತೃತ್ವದಲ್ಲಿ ಬೌದ್ಧ ಧರ್ಮಕ್ಕೆ ಸಾಮೂಹಿಕ ಮತಾಂತರ: ಪ್ರತಿಜ್ಞೆ ಆಕ್ಷೇಪಿಸಿದ ಬಿಜೆಪಿ

ಆಪ್ ಸಚಿವನ ನೇತೃತ್ವದಲ್ಲಿ ಬೌದ್ಧ ಧರ್ಮಕ್ಕೆ ಸಾಮೂಹಿಕ ಮತಾಂತರ: ಪ್ರತಿಜ್ಞೆ ಆಕ್ಷೇಪಿಸಿದ ಬಿಜೆಪಿ

ಜೈಭೀಮ್ ಮಿ‍ಷನ್ ಸಂಘಟನೆ ಏರ್ಪಡಿಸಿದ್ದ ಧಮ್ಮ ಚಕ್ರ ಪರಿವರ್ತನಾ ದಿನ ಕಾರ್ಯಕ್ರಮದಲ್ಲಿ ಅಂಬೇಡ್ಕರ್‌ರವರ ಸಂಬಂಧಿ ರಾಜರತ್ನ ಅಂಬೇಡ್ಕರ್ ಕೂಡ ಭಾಗವಹಿಸಿದ್ದರು.

- Advertisement -
- Advertisement -

ಡಾ.ಬಿ.ಆರ್ ಅಂಬೇಡ್ಕರ್‌ರವರು ಹಿಂದೂ ಧರ್ಮ ತ್ಯಜಿಸಿ ಬೌದ್ಧ ಧರ್ಮಕ್ಕೆ ಮತಾಂತರಗೊಂಡ ದಿನದ ಅಂಗವಾಗಿ ದೆಹಲಿಯಲ್ಲಿ ನಡೆದ ಧಮ್ಮ ಚಕ್ರ ಪರಿವರ್ತನಾ ದಿನ ಕಾರ್ಯಕ್ರಮದಲ್ಲಿ ಆಪ್ ಸಚಿವ ಸೇರಿ 7000ಕ್ಕೂ ಹೆಚ್ಚು ಜನರು ಬೌದ್ಧ ಧರ್ಮ ಸ್ವೀಕರಿಸಿದ್ದಾರೆ.

ದೆಹಲಿಯ ಸಮಾಜ ಕಲ್ಯಾಣ ಇಲಾಖೆ ಸಚಿವ ರಾಜೇಂದ್ರ ಪಾಲ್ ಗೌತಮ್ ತಮ್ಮ ಸಾವಿರಾರು ಅನುಯಾಯಿಗಳೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಂಬೇಡ್ಕರ್‌ರವರು ಪ್ರತಿಪಾದಿಸಿದ್ದ 22 ಪ್ರತಿಜ್ಞೆಗಳನ್ನು ತೆಗೆದುಕೊಂಡಿದ್ದಾರೆ.

ಈ ಕುರಿತು ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. 22 ಪ್ರತಿಜ್ಞೆಗಳಲ್ಲಿ ಒಂದಾದ ಬ್ರಹ್ಮ, ವಿಷ್ಣು, ಮಹೇಶ್ವರನಲ್ಲಿ ನನಗೆ ನಂಬಿಕೆಯಿಲ್ಲ, ಅವರನ್ನು ನಾನು ಪೂಜಿಸುವುದಿಲ್ಲ ಎಂದು ಕಾರ್ಯಕ್ರಮದಲ್ಲಿ ಬೋದಿಸಿರುವುದಕ್ಕೆ ಹಿಂದೂ ದೇವತೆಗಳಿಗೆ ಅವಮಾನ ಎಂದು ಕರೆದಿದೆ.

ಎಎಪಿ ಸಚಿವರು ಗಲಭೆ ಎಬ್ಬಿಸಲು ಪ್ರಯತ್ನಿಸುತ್ತಿದ್ದಾರೆ. ಕೂಡಲೇ ಸಚಿವರನ್ನು ಪಕ್ಷದಿಂದ ತೆಗೆದು ಹಾಕಬೇಕು. ನಾವು ಅವರ ವಿರುದ್ಧ ದೂರು ಸಲ್ಲಿಸುತ್ತಿದ್ದೇವೆ ಎಂದು ಬಿಜೆಪಿ ಸಂಸದ ಮನೋಜ್ ತಿವಾರಿ ಹೇಳಿದ್ದಾರೆ.

“ಕೇಜ್ರಿವಾಲ್ ಮಂತ್ರಿ ಹಿಂದೂಗಳ ವಿರುದ್ಧ ಹೇಗೆ ವಿಷ ಉಗುಳುತ್ತಿದ್ದಾರೆ ನೋಡಿ. ಚುನಾವಣಾ ಹಿಂದೂ ಕೇಜ್ರಿವಾಲ್ ಮತ್ತು ಎಎಪಿಯ ಹಿಂದೂ ವಿರೋಧಿ ಮುಖ ಎಲ್ಲರ ಮುಂದೆ ಬಂದಿದೆ. ಹಿಂದೂ ವಿರೋಧಿ ಎಎಪಿಗೆ ಸಾರ್ವಜನಿಕರು ಶೀಘ್ರದಲ್ಲೇ ತಕ್ಕ ಉತ್ತರ ನೀಡಲಿದ್ದಾರೆ. ನಾಚಿಕೆ ಆಗುತ್ತಿದೆ ಕೇಜ್ರಿವಾಲ್” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ರಾಜೇಂದ್ರ ಪಾಲ್ ಗೌತಮ್, “ನನಗೆ ಬೌದ್ಧ ಧರ್ಮದಲ್ಲಿ ನಂಬಿಕೆಯಿದೆ. ಭಾರತದ ಸಂವಿಧಾನವು ನನಗಿಷ್ಟವಾದ ಧರ್ಮವನ್ನು ಅನುಸರಿಸುವ ಹಕ್ಕು ನೀಡಿದೆ. ಇದರಿಂದ ಯಾರಿಗೆ ತೊಂದರೆಯಾಗುತ್ತಿದೆ? ಬಿಜೆಪಿಯವರು ನಿಜವಾದ ದೇಶ ವಿರೋಧಿಗಳು. ಆಪ್ ಕಂಡರೆ ಅವರಿಗೆ ಭಯ, ಅದಕ್ಕಾಗಿ ಸುಳ್ಳು ದೂರು ನೀಡುತ್ತಿದ್ದಾರೆ” ಎಂದಿದ್ದಾರೆ.

ಜಾತಿ ಆಧಾರಿತ ರಾಜಕೀಯ ಮಾಡುವವರು ದ್ರೋಹಿಗಳು. ಅವರಿಗೆ ಬೇರೆ ಯಾವುದೇ ಅಜೆಂಡಾಗಳಿಲ್ಲ. ಧರ್ಮ ಧರ್ಮದ ನಡುವೆ ಎತ್ತಿಕಟ್ಟುವುದು ಅವರ ಚಾಳಿ. ಅವರು ಆಪ್ ಕಾರ್ಯಕರ್ತರು ಏಕೆ ದೇವಸ್ಥಾನಕ್ಕೆ ಹೋಗುತ್ತಾರೆ ಎಂದು ಪ್ರಶ್ನಿಸುತ್ತಾರೆ. ನನ್ನ ಪ್ರಕಾರ ಯಾರಿಗೆ ಯಾವ ಧರ್ಮದ ಮೇಲೆ ನಂಬಿಕೆಯಿದೆಯೊ ಅವರು ಆಯಾದ ಧರ್ಮದ ಪೂಜಾಸ್ಥಳಿಗೆ ಹೋಗುವ ಹಕ್ಕು ಹೊಂದಿದ್ದಾರೆ. ನನಗೆ ಬೌದ್ಧ ಧರ್ಮದ ಮೇಲೆ ನಂಬಿಕೆಯಿದೆ. ಹಾಗಾಗಿ ನಾನು ಅಲ್ಲಿಗೆ ಹೋಗುತ್ತೇನೆ. ಯಾರಿಗೂ ಇನ್ನೊಂದು ಧರ್ಮವನ್ನು ಹೇರುವ ಅಧಿಕಾರವಿಲ್ಲ” ಎಂದು ರಾಜೇಂದ್ರ ಪಾಲ್ ಗೌತಮ್ ತಿಳಿಸಿದ್ದಾರೆ.

ಜೈಭೀಮ್ ಮಿ‍ಷನ್ ಸಂಘಟನೆ ಏರ್ಪಡಿಸಿದ್ದ ಧಮ್ಮ ಚಕ್ರ ಪರಿವರ್ತನಾ ದಿನ ಕಾರ್ಯಕ್ರಮದಲ್ಲಿ ಅಂಬೇಡ್ಕರ್‌ರವರ ಸಂಬಂಧಿ ರಾಜರತ್ನ ಅಂಬೇಡ್ಕರ್ ಕೂಡ ಭಾಗವಹಿಸಿದ್ದರು.

ಇದನ್ನೂ ಓದಿ: ನಾನಕ್ ಚಂದ್ ರತ್ತುರವರ ’ಬಾಬಾ ಸಾಹೇಬರ ಕೊನೆದಿನಗಳು’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪ್ರತಿಯೊಬ್ಬ ವ್ಯಕ್ತಿಯು ತನ್ನಗಿಷ್ಟವಾದ ಧರ್ಮವನ್ನು ಸ್ವೀಕರಿಸಬಹುದು….ಅದು ಎಲ್ಲಾರ ಧಾರ್ಮಿಕ ಹಕ್ಕು….. ಅದು ಭಾರತ ಕಾನೂನು…
    ಮಾತು ಮಾತಿಗೆ ಹಿಂದೂ , ಹಿಂದು ಎನ್ನುವ ನೀವು ನಿಮ್ಮ ಬ್ರಾಹ್ಮಣ ಸಮಾಜದ ಹೆಣ್ಣುಮಕ್ಕಳನ್ನು ಮುಸ್ಲಿಂರಿಗೆ ಕೊಟ್ಟು ವಿವಾಹ ಮಾಡುತ್ತೀರಿ… ಅದು ನಾಶ ಮಾಡದಂಗೆ ಅಲ್ವ…..
    ರೀಮಾ- ಶಾರುಖ್ ಖಾನ್..
    1)ಕಿರಣ್ ರಾವ್ 2), ರೀತು – ಅಮೀರ್ ಖಾನ್….
    ಮೋನಿಕ ಬೇಡಿ – ಅಬ್ಬು ಸಲಿಂ….( ದಾವುದ್ ಶಿಷ್ಯ)
    ಸಂಗೀತ ಬಿಜಲಾನಿ- ಅಜರ್…cricket ..
    ಕರೀನಾ ಕಪೂರ್ – ಸೈಫ್ ಆಲಿಖಾನ್…
    MP ಶನ್ವಾಜ್ ಹೆಂಡತಿ ಬ್ರಾಹ್ಮಣಿ…
    BJP , MP ಸುಬ್ರಮಣೀ ಸ್ವಾಮಿ ಮಗಳು (ಬ್ರಾಹ್ಮಣಿ) ಮಸ್ಲಿಂರ ಜೊತೆ ಮದುವೆ …
    ಇನ್ನು ನೂರಾರು….
    ಈ BJP ಯವರಿಗೆ ಶ್ರೀಮಂತ ಮುಸ್ಲಿಂರು ಅಳಿಯಂದಿರು…..
    ಬಡ ಮಸ್ಲಿಂರು ದೇಶದ್ರೋಹಿಗಳು…

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...