Homeಮುಖಪುಟಆಪ್ ಸಚಿವನ ನೇತೃತ್ವದಲ್ಲಿ ಬೌದ್ಧ ಧರ್ಮಕ್ಕೆ ಸಾಮೂಹಿಕ ಮತಾಂತರ: ಪ್ರತಿಜ್ಞೆ ಆಕ್ಷೇಪಿಸಿದ ಬಿಜೆಪಿ

ಆಪ್ ಸಚಿವನ ನೇತೃತ್ವದಲ್ಲಿ ಬೌದ್ಧ ಧರ್ಮಕ್ಕೆ ಸಾಮೂಹಿಕ ಮತಾಂತರ: ಪ್ರತಿಜ್ಞೆ ಆಕ್ಷೇಪಿಸಿದ ಬಿಜೆಪಿ

ಜೈಭೀಮ್ ಮಿ‍ಷನ್ ಸಂಘಟನೆ ಏರ್ಪಡಿಸಿದ್ದ ಧಮ್ಮ ಚಕ್ರ ಪರಿವರ್ತನಾ ದಿನ ಕಾರ್ಯಕ್ರಮದಲ್ಲಿ ಅಂಬೇಡ್ಕರ್‌ರವರ ಸಂಬಂಧಿ ರಾಜರತ್ನ ಅಂಬೇಡ್ಕರ್ ಕೂಡ ಭಾಗವಹಿಸಿದ್ದರು.

- Advertisement -
- Advertisement -

ಡಾ.ಬಿ.ಆರ್ ಅಂಬೇಡ್ಕರ್‌ರವರು ಹಿಂದೂ ಧರ್ಮ ತ್ಯಜಿಸಿ ಬೌದ್ಧ ಧರ್ಮಕ್ಕೆ ಮತಾಂತರಗೊಂಡ ದಿನದ ಅಂಗವಾಗಿ ದೆಹಲಿಯಲ್ಲಿ ನಡೆದ ಧಮ್ಮ ಚಕ್ರ ಪರಿವರ್ತನಾ ದಿನ ಕಾರ್ಯಕ್ರಮದಲ್ಲಿ ಆಪ್ ಸಚಿವ ಸೇರಿ 7000ಕ್ಕೂ ಹೆಚ್ಚು ಜನರು ಬೌದ್ಧ ಧರ್ಮ ಸ್ವೀಕರಿಸಿದ್ದಾರೆ.

ದೆಹಲಿಯ ಸಮಾಜ ಕಲ್ಯಾಣ ಇಲಾಖೆ ಸಚಿವ ರಾಜೇಂದ್ರ ಪಾಲ್ ಗೌತಮ್ ತಮ್ಮ ಸಾವಿರಾರು ಅನುಯಾಯಿಗಳೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಂಬೇಡ್ಕರ್‌ರವರು ಪ್ರತಿಪಾದಿಸಿದ್ದ 22 ಪ್ರತಿಜ್ಞೆಗಳನ್ನು ತೆಗೆದುಕೊಂಡಿದ್ದಾರೆ.

ಈ ಕುರಿತು ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. 22 ಪ್ರತಿಜ್ಞೆಗಳಲ್ಲಿ ಒಂದಾದ ಬ್ರಹ್ಮ, ವಿಷ್ಣು, ಮಹೇಶ್ವರನಲ್ಲಿ ನನಗೆ ನಂಬಿಕೆಯಿಲ್ಲ, ಅವರನ್ನು ನಾನು ಪೂಜಿಸುವುದಿಲ್ಲ ಎಂದು ಕಾರ್ಯಕ್ರಮದಲ್ಲಿ ಬೋದಿಸಿರುವುದಕ್ಕೆ ಹಿಂದೂ ದೇವತೆಗಳಿಗೆ ಅವಮಾನ ಎಂದು ಕರೆದಿದೆ.

ಎಎಪಿ ಸಚಿವರು ಗಲಭೆ ಎಬ್ಬಿಸಲು ಪ್ರಯತ್ನಿಸುತ್ತಿದ್ದಾರೆ. ಕೂಡಲೇ ಸಚಿವರನ್ನು ಪಕ್ಷದಿಂದ ತೆಗೆದು ಹಾಕಬೇಕು. ನಾವು ಅವರ ವಿರುದ್ಧ ದೂರು ಸಲ್ಲಿಸುತ್ತಿದ್ದೇವೆ ಎಂದು ಬಿಜೆಪಿ ಸಂಸದ ಮನೋಜ್ ತಿವಾರಿ ಹೇಳಿದ್ದಾರೆ.

“ಕೇಜ್ರಿವಾಲ್ ಮಂತ್ರಿ ಹಿಂದೂಗಳ ವಿರುದ್ಧ ಹೇಗೆ ವಿಷ ಉಗುಳುತ್ತಿದ್ದಾರೆ ನೋಡಿ. ಚುನಾವಣಾ ಹಿಂದೂ ಕೇಜ್ರಿವಾಲ್ ಮತ್ತು ಎಎಪಿಯ ಹಿಂದೂ ವಿರೋಧಿ ಮುಖ ಎಲ್ಲರ ಮುಂದೆ ಬಂದಿದೆ. ಹಿಂದೂ ವಿರೋಧಿ ಎಎಪಿಗೆ ಸಾರ್ವಜನಿಕರು ಶೀಘ್ರದಲ್ಲೇ ತಕ್ಕ ಉತ್ತರ ನೀಡಲಿದ್ದಾರೆ. ನಾಚಿಕೆ ಆಗುತ್ತಿದೆ ಕೇಜ್ರಿವಾಲ್” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ರಾಜೇಂದ್ರ ಪಾಲ್ ಗೌತಮ್, “ನನಗೆ ಬೌದ್ಧ ಧರ್ಮದಲ್ಲಿ ನಂಬಿಕೆಯಿದೆ. ಭಾರತದ ಸಂವಿಧಾನವು ನನಗಿಷ್ಟವಾದ ಧರ್ಮವನ್ನು ಅನುಸರಿಸುವ ಹಕ್ಕು ನೀಡಿದೆ. ಇದರಿಂದ ಯಾರಿಗೆ ತೊಂದರೆಯಾಗುತ್ತಿದೆ? ಬಿಜೆಪಿಯವರು ನಿಜವಾದ ದೇಶ ವಿರೋಧಿಗಳು. ಆಪ್ ಕಂಡರೆ ಅವರಿಗೆ ಭಯ, ಅದಕ್ಕಾಗಿ ಸುಳ್ಳು ದೂರು ನೀಡುತ್ತಿದ್ದಾರೆ” ಎಂದಿದ್ದಾರೆ.

ಜಾತಿ ಆಧಾರಿತ ರಾಜಕೀಯ ಮಾಡುವವರು ದ್ರೋಹಿಗಳು. ಅವರಿಗೆ ಬೇರೆ ಯಾವುದೇ ಅಜೆಂಡಾಗಳಿಲ್ಲ. ಧರ್ಮ ಧರ್ಮದ ನಡುವೆ ಎತ್ತಿಕಟ್ಟುವುದು ಅವರ ಚಾಳಿ. ಅವರು ಆಪ್ ಕಾರ್ಯಕರ್ತರು ಏಕೆ ದೇವಸ್ಥಾನಕ್ಕೆ ಹೋಗುತ್ತಾರೆ ಎಂದು ಪ್ರಶ್ನಿಸುತ್ತಾರೆ. ನನ್ನ ಪ್ರಕಾರ ಯಾರಿಗೆ ಯಾವ ಧರ್ಮದ ಮೇಲೆ ನಂಬಿಕೆಯಿದೆಯೊ ಅವರು ಆಯಾದ ಧರ್ಮದ ಪೂಜಾಸ್ಥಳಿಗೆ ಹೋಗುವ ಹಕ್ಕು ಹೊಂದಿದ್ದಾರೆ. ನನಗೆ ಬೌದ್ಧ ಧರ್ಮದ ಮೇಲೆ ನಂಬಿಕೆಯಿದೆ. ಹಾಗಾಗಿ ನಾನು ಅಲ್ಲಿಗೆ ಹೋಗುತ್ತೇನೆ. ಯಾರಿಗೂ ಇನ್ನೊಂದು ಧರ್ಮವನ್ನು ಹೇರುವ ಅಧಿಕಾರವಿಲ್ಲ” ಎಂದು ರಾಜೇಂದ್ರ ಪಾಲ್ ಗೌತಮ್ ತಿಳಿಸಿದ್ದಾರೆ.

ಜೈಭೀಮ್ ಮಿ‍ಷನ್ ಸಂಘಟನೆ ಏರ್ಪಡಿಸಿದ್ದ ಧಮ್ಮ ಚಕ್ರ ಪರಿವರ್ತನಾ ದಿನ ಕಾರ್ಯಕ್ರಮದಲ್ಲಿ ಅಂಬೇಡ್ಕರ್‌ರವರ ಸಂಬಂಧಿ ರಾಜರತ್ನ ಅಂಬೇಡ್ಕರ್ ಕೂಡ ಭಾಗವಹಿಸಿದ್ದರು.

ಇದನ್ನೂ ಓದಿ: ನಾನಕ್ ಚಂದ್ ರತ್ತುರವರ ’ಬಾಬಾ ಸಾಹೇಬರ ಕೊನೆದಿನಗಳು’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪ್ರತಿಯೊಬ್ಬ ವ್ಯಕ್ತಿಯು ತನ್ನಗಿಷ್ಟವಾದ ಧರ್ಮವನ್ನು ಸ್ವೀಕರಿಸಬಹುದು….ಅದು ಎಲ್ಲಾರ ಧಾರ್ಮಿಕ ಹಕ್ಕು….. ಅದು ಭಾರತ ಕಾನೂನು…
    ಮಾತು ಮಾತಿಗೆ ಹಿಂದೂ , ಹಿಂದು ಎನ್ನುವ ನೀವು ನಿಮ್ಮ ಬ್ರಾಹ್ಮಣ ಸಮಾಜದ ಹೆಣ್ಣುಮಕ್ಕಳನ್ನು ಮುಸ್ಲಿಂರಿಗೆ ಕೊಟ್ಟು ವಿವಾಹ ಮಾಡುತ್ತೀರಿ… ಅದು ನಾಶ ಮಾಡದಂಗೆ ಅಲ್ವ…..
    ರೀಮಾ- ಶಾರುಖ್ ಖಾನ್..
    1)ಕಿರಣ್ ರಾವ್ 2), ರೀತು – ಅಮೀರ್ ಖಾನ್….
    ಮೋನಿಕ ಬೇಡಿ – ಅಬ್ಬು ಸಲಿಂ….( ದಾವುದ್ ಶಿಷ್ಯ)
    ಸಂಗೀತ ಬಿಜಲಾನಿ- ಅಜರ್…cricket ..
    ಕರೀನಾ ಕಪೂರ್ – ಸೈಫ್ ಆಲಿಖಾನ್…
    MP ಶನ್ವಾಜ್ ಹೆಂಡತಿ ಬ್ರಾಹ್ಮಣಿ…
    BJP , MP ಸುಬ್ರಮಣೀ ಸ್ವಾಮಿ ಮಗಳು (ಬ್ರಾಹ್ಮಣಿ) ಮಸ್ಲಿಂರ ಜೊತೆ ಮದುವೆ …
    ಇನ್ನು ನೂರಾರು….
    ಈ BJP ಯವರಿಗೆ ಶ್ರೀಮಂತ ಮುಸ್ಲಿಂರು ಅಳಿಯಂದಿರು…..
    ಬಡ ಮಸ್ಲಿಂರು ದೇಶದ್ರೋಹಿಗಳು…

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....