Homeಮುಖಪುಟಆಪ್ ಸಚಿವನ ನೇತೃತ್ವದಲ್ಲಿ ಬೌದ್ಧ ಧರ್ಮಕ್ಕೆ ಸಾಮೂಹಿಕ ಮತಾಂತರ: ಪ್ರತಿಜ್ಞೆ ಆಕ್ಷೇಪಿಸಿದ ಬಿಜೆಪಿ

ಆಪ್ ಸಚಿವನ ನೇತೃತ್ವದಲ್ಲಿ ಬೌದ್ಧ ಧರ್ಮಕ್ಕೆ ಸಾಮೂಹಿಕ ಮತಾಂತರ: ಪ್ರತಿಜ್ಞೆ ಆಕ್ಷೇಪಿಸಿದ ಬಿಜೆಪಿ

ಜೈಭೀಮ್ ಮಿ‍ಷನ್ ಸಂಘಟನೆ ಏರ್ಪಡಿಸಿದ್ದ ಧಮ್ಮ ಚಕ್ರ ಪರಿವರ್ತನಾ ದಿನ ಕಾರ್ಯಕ್ರಮದಲ್ಲಿ ಅಂಬೇಡ್ಕರ್‌ರವರ ಸಂಬಂಧಿ ರಾಜರತ್ನ ಅಂಬೇಡ್ಕರ್ ಕೂಡ ಭಾಗವಹಿಸಿದ್ದರು.

- Advertisement -
- Advertisement -

ಡಾ.ಬಿ.ಆರ್ ಅಂಬೇಡ್ಕರ್‌ರವರು ಹಿಂದೂ ಧರ್ಮ ತ್ಯಜಿಸಿ ಬೌದ್ಧ ಧರ್ಮಕ್ಕೆ ಮತಾಂತರಗೊಂಡ ದಿನದ ಅಂಗವಾಗಿ ದೆಹಲಿಯಲ್ಲಿ ನಡೆದ ಧಮ್ಮ ಚಕ್ರ ಪರಿವರ್ತನಾ ದಿನ ಕಾರ್ಯಕ್ರಮದಲ್ಲಿ ಆಪ್ ಸಚಿವ ಸೇರಿ 7000ಕ್ಕೂ ಹೆಚ್ಚು ಜನರು ಬೌದ್ಧ ಧರ್ಮ ಸ್ವೀಕರಿಸಿದ್ದಾರೆ.

ದೆಹಲಿಯ ಸಮಾಜ ಕಲ್ಯಾಣ ಇಲಾಖೆ ಸಚಿವ ರಾಜೇಂದ್ರ ಪಾಲ್ ಗೌತಮ್ ತಮ್ಮ ಸಾವಿರಾರು ಅನುಯಾಯಿಗಳೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಂಬೇಡ್ಕರ್‌ರವರು ಪ್ರತಿಪಾದಿಸಿದ್ದ 22 ಪ್ರತಿಜ್ಞೆಗಳನ್ನು ತೆಗೆದುಕೊಂಡಿದ್ದಾರೆ.

ಈ ಕುರಿತು ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. 22 ಪ್ರತಿಜ್ಞೆಗಳಲ್ಲಿ ಒಂದಾದ ಬ್ರಹ್ಮ, ವಿಷ್ಣು, ಮಹೇಶ್ವರನಲ್ಲಿ ನನಗೆ ನಂಬಿಕೆಯಿಲ್ಲ, ಅವರನ್ನು ನಾನು ಪೂಜಿಸುವುದಿಲ್ಲ ಎಂದು ಕಾರ್ಯಕ್ರಮದಲ್ಲಿ ಬೋದಿಸಿರುವುದಕ್ಕೆ ಹಿಂದೂ ದೇವತೆಗಳಿಗೆ ಅವಮಾನ ಎಂದು ಕರೆದಿದೆ.

ಎಎಪಿ ಸಚಿವರು ಗಲಭೆ ಎಬ್ಬಿಸಲು ಪ್ರಯತ್ನಿಸುತ್ತಿದ್ದಾರೆ. ಕೂಡಲೇ ಸಚಿವರನ್ನು ಪಕ್ಷದಿಂದ ತೆಗೆದು ಹಾಕಬೇಕು. ನಾವು ಅವರ ವಿರುದ್ಧ ದೂರು ಸಲ್ಲಿಸುತ್ತಿದ್ದೇವೆ ಎಂದು ಬಿಜೆಪಿ ಸಂಸದ ಮನೋಜ್ ತಿವಾರಿ ಹೇಳಿದ್ದಾರೆ.

“ಕೇಜ್ರಿವಾಲ್ ಮಂತ್ರಿ ಹಿಂದೂಗಳ ವಿರುದ್ಧ ಹೇಗೆ ವಿಷ ಉಗುಳುತ್ತಿದ್ದಾರೆ ನೋಡಿ. ಚುನಾವಣಾ ಹಿಂದೂ ಕೇಜ್ರಿವಾಲ್ ಮತ್ತು ಎಎಪಿಯ ಹಿಂದೂ ವಿರೋಧಿ ಮುಖ ಎಲ್ಲರ ಮುಂದೆ ಬಂದಿದೆ. ಹಿಂದೂ ವಿರೋಧಿ ಎಎಪಿಗೆ ಸಾರ್ವಜನಿಕರು ಶೀಘ್ರದಲ್ಲೇ ತಕ್ಕ ಉತ್ತರ ನೀಡಲಿದ್ದಾರೆ. ನಾಚಿಕೆ ಆಗುತ್ತಿದೆ ಕೇಜ್ರಿವಾಲ್” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ರಾಜೇಂದ್ರ ಪಾಲ್ ಗೌತಮ್, “ನನಗೆ ಬೌದ್ಧ ಧರ್ಮದಲ್ಲಿ ನಂಬಿಕೆಯಿದೆ. ಭಾರತದ ಸಂವಿಧಾನವು ನನಗಿಷ್ಟವಾದ ಧರ್ಮವನ್ನು ಅನುಸರಿಸುವ ಹಕ್ಕು ನೀಡಿದೆ. ಇದರಿಂದ ಯಾರಿಗೆ ತೊಂದರೆಯಾಗುತ್ತಿದೆ? ಬಿಜೆಪಿಯವರು ನಿಜವಾದ ದೇಶ ವಿರೋಧಿಗಳು. ಆಪ್ ಕಂಡರೆ ಅವರಿಗೆ ಭಯ, ಅದಕ್ಕಾಗಿ ಸುಳ್ಳು ದೂರು ನೀಡುತ್ತಿದ್ದಾರೆ” ಎಂದಿದ್ದಾರೆ.

ಜಾತಿ ಆಧಾರಿತ ರಾಜಕೀಯ ಮಾಡುವವರು ದ್ರೋಹಿಗಳು. ಅವರಿಗೆ ಬೇರೆ ಯಾವುದೇ ಅಜೆಂಡಾಗಳಿಲ್ಲ. ಧರ್ಮ ಧರ್ಮದ ನಡುವೆ ಎತ್ತಿಕಟ್ಟುವುದು ಅವರ ಚಾಳಿ. ಅವರು ಆಪ್ ಕಾರ್ಯಕರ್ತರು ಏಕೆ ದೇವಸ್ಥಾನಕ್ಕೆ ಹೋಗುತ್ತಾರೆ ಎಂದು ಪ್ರಶ್ನಿಸುತ್ತಾರೆ. ನನ್ನ ಪ್ರಕಾರ ಯಾರಿಗೆ ಯಾವ ಧರ್ಮದ ಮೇಲೆ ನಂಬಿಕೆಯಿದೆಯೊ ಅವರು ಆಯಾದ ಧರ್ಮದ ಪೂಜಾಸ್ಥಳಿಗೆ ಹೋಗುವ ಹಕ್ಕು ಹೊಂದಿದ್ದಾರೆ. ನನಗೆ ಬೌದ್ಧ ಧರ್ಮದ ಮೇಲೆ ನಂಬಿಕೆಯಿದೆ. ಹಾಗಾಗಿ ನಾನು ಅಲ್ಲಿಗೆ ಹೋಗುತ್ತೇನೆ. ಯಾರಿಗೂ ಇನ್ನೊಂದು ಧರ್ಮವನ್ನು ಹೇರುವ ಅಧಿಕಾರವಿಲ್ಲ” ಎಂದು ರಾಜೇಂದ್ರ ಪಾಲ್ ಗೌತಮ್ ತಿಳಿಸಿದ್ದಾರೆ.

ಜೈಭೀಮ್ ಮಿ‍ಷನ್ ಸಂಘಟನೆ ಏರ್ಪಡಿಸಿದ್ದ ಧಮ್ಮ ಚಕ್ರ ಪರಿವರ್ತನಾ ದಿನ ಕಾರ್ಯಕ್ರಮದಲ್ಲಿ ಅಂಬೇಡ್ಕರ್‌ರವರ ಸಂಬಂಧಿ ರಾಜರತ್ನ ಅಂಬೇಡ್ಕರ್ ಕೂಡ ಭಾಗವಹಿಸಿದ್ದರು.

ಇದನ್ನೂ ಓದಿ: ನಾನಕ್ ಚಂದ್ ರತ್ತುರವರ ’ಬಾಬಾ ಸಾಹೇಬರ ಕೊನೆದಿನಗಳು’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪ್ರತಿಯೊಬ್ಬ ವ್ಯಕ್ತಿಯು ತನ್ನಗಿಷ್ಟವಾದ ಧರ್ಮವನ್ನು ಸ್ವೀಕರಿಸಬಹುದು….ಅದು ಎಲ್ಲಾರ ಧಾರ್ಮಿಕ ಹಕ್ಕು….. ಅದು ಭಾರತ ಕಾನೂನು…
    ಮಾತು ಮಾತಿಗೆ ಹಿಂದೂ , ಹಿಂದು ಎನ್ನುವ ನೀವು ನಿಮ್ಮ ಬ್ರಾಹ್ಮಣ ಸಮಾಜದ ಹೆಣ್ಣುಮಕ್ಕಳನ್ನು ಮುಸ್ಲಿಂರಿಗೆ ಕೊಟ್ಟು ವಿವಾಹ ಮಾಡುತ್ತೀರಿ… ಅದು ನಾಶ ಮಾಡದಂಗೆ ಅಲ್ವ…..
    ರೀಮಾ- ಶಾರುಖ್ ಖಾನ್..
    1)ಕಿರಣ್ ರಾವ್ 2), ರೀತು – ಅಮೀರ್ ಖಾನ್….
    ಮೋನಿಕ ಬೇಡಿ – ಅಬ್ಬು ಸಲಿಂ….( ದಾವುದ್ ಶಿಷ್ಯ)
    ಸಂಗೀತ ಬಿಜಲಾನಿ- ಅಜರ್…cricket ..
    ಕರೀನಾ ಕಪೂರ್ – ಸೈಫ್ ಆಲಿಖಾನ್…
    MP ಶನ್ವಾಜ್ ಹೆಂಡತಿ ಬ್ರಾಹ್ಮಣಿ…
    BJP , MP ಸುಬ್ರಮಣೀ ಸ್ವಾಮಿ ಮಗಳು (ಬ್ರಾಹ್ಮಣಿ) ಮಸ್ಲಿಂರ ಜೊತೆ ಮದುವೆ …
    ಇನ್ನು ನೂರಾರು….
    ಈ BJP ಯವರಿಗೆ ಶ್ರೀಮಂತ ಮುಸ್ಲಿಂರು ಅಳಿಯಂದಿರು…..
    ಬಡ ಮಸ್ಲಿಂರು ದೇಶದ್ರೋಹಿಗಳು…

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...