Homeಕರ್ನಾಟಕಉದ್ಯೋಗಿಗಳ ಸಾಮೂಹಿಕ ವಜಾ : ಇನ್ಫೋಸಿಸ್‌ಗೆ ಕ್ಲೀನ್ ಚಿಟ್ ಕೊಟ್ಟ ಕರ್ನಾಟಕ ಸರ್ಕಾರ ; ವರದಿ

ಉದ್ಯೋಗಿಗಳ ಸಾಮೂಹಿಕ ವಜಾ : ಇನ್ಫೋಸಿಸ್‌ಗೆ ಕ್ಲೀನ್ ಚಿಟ್ ಕೊಟ್ಟ ಕರ್ನಾಟಕ ಸರ್ಕಾರ ; ವರದಿ

- Advertisement -
- Advertisement -

ಇತ್ತೀಚೆಗೆ ಸುಮಾರು 700 ಉದ್ಯೋಗಿಗಳನ್ನು (ಕೆಲ ವರದಿಗಳು 400-500 ಎಂದಿವೆ) ಏಕಾಏಕಿ ವಜಾಗೊಳಿಸಿದ ಪ್ರಕರಣದಲ್ಲಿ ಇನ್ಫೋಸಿಸ್‌ ಕಂಪನಿಗೆ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ ಕ್ಲೀನ್ ಚಿಟ್ ಕೊಟ್ಟಿದೆ ಎಂದು ವರದಿಯಾಗಿದೆ.

ಈ ಕುರಿತು ತನಿಖೆ ನಡೆಸಿದ ಕಾರ್ಮಿಕ ಇಲಾಖೆ ಇನ್ಫೋಸಿಸ್ ಕಂಪನಿ ಉದ್ಯೋಗಿಗಳ ವಜಾ ವೇಳೆ ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ. ಏಕೆಂದರೆ ‘ವಜಾಗೊಂಡವರು ಖಾಯಂ ನೌಕರರು ಅಲ್ಲ, ಬದಲಾಗಿ ತರಬೇತಿಯಲ್ಲಿದ್ದವರು’ ಎಂದಿರುವುದಾಗಿ ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

“ನಮ್ಮ ತನಿಖೆಯಲ್ಲಿ ಇನ್ಫೋಸಿಸ್‌ ಕಂಪನಿ ಯಾವುದೇ ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸಿರುವುದು ಕಂಡು ಬಂದಿಲ್ಲ. ಮೊದಲನೆಯದಾಗಿ ವಜಾಗೊಂಡವರು ಮತ್ತು ಕಂಪನಿ ನಡುವೆ ಉದ್ಯೋಗಿ ಮತ್ತು ಉದ್ಯೋಗದಾತ ಎಂಬ ಸಂಬಂಧವೇ ಇರಲಿಲ್ಲ. ವಜಾಗೊಂಡವರನ್ನು ನೌಕರರು ಎಂದು ಕರೆಯಲು ನೇಮಕಾತಿ ಪತ್ರಗಳನ್ನೂ ನೀಡಿರಲಿಲ್ಲ. ಅವರು ಮೂರು ತಿಂಗಳ ಕಾಲ ತರಬೇತಿಯಲ್ಲಿದ್ದರು. ಅದಕ್ಕೆ ಸ್ಟೈಫಂಡ್ ನೀಡಲಾಗಿದೆ. ಅಲ್ಲದೆ ಅವರು ಅಪ್ರೆಂಟಿಸ್‌ಶಿಪ್ ಕಾರ್ಯಕ್ರಮದ ಭಾಗವಾಗಿದ್ದರು” ಎಂದು ಸರ್ಕಾರಿ ಅಧಿಕಾರಿಯೊಬ್ಬರು ದೃಢಪಡಿಸಿದ್ದಾಗಿ ವರದಿ ವಿವರಿಸಿದೆ.

ಕಳೆದ ಫೆಬ್ರವರಿ 7ರಂದು ಇನ್ಫೋಸಿಸ್ ಕಂಪನಿ ಸುಮಾರು 700 ಉದ್ಯೋಗಿಗಳನ್ನು ಏಕಾಏಕಿ ವಜಾಗೊಳಿಸಿದೆ ಎಂಬ ಆರೋಪ ಕೇಳಿ ಬಂದಿತ್ತು. (ಕೆಲ ವರದಿಗಳು 400-500 ಎಂದಿವೆ). ವಜಾಗೊಂಡವರು ಇನ್ಫೋಸಿಸ್‌ನಲ್ಲಿ ಕೆಲಸಕ್ಕೆ ಆಯ್ಕೆಯಾಗಿ ಎರಡೂವರೆ ವರ್ಷ ಕಾದಿದ್ದರು. ಕೊನೆಗೂ ಸೆಪ್ಟೆಂಬರ್ 2024ರಲ್ಲಿ ಇವರು ಮೈಸೂರು ಕ್ಯಾಂಪಸ್‌ನಲ್ಲಿ ಕೆಲಸ ಆರಂಭಿಸಿದ್ದರು. ಇದಾಗಿ 6 ತಿಂಗಳಿಗೆ ‘ಆಂತರಿಕ ಪರೀಕ್ಷೆಯಲ್ಲಿ ವಿಫಲ’ ಎಂಬ ಕಾರಣ ನೀಡಿ ವಜಾಗೊಳಿಸಲಾಗಿದೆ. ವಜಾಗೊಂಡವರು ಮನೆಗೆ ಮರಳಲು ಟ್ಯಾಕ್ಸಿ, ಬಸ್‌ ಬುಕ್‌ ಮಾಡಲೂ ಪರದಾಡಿದ್ದರು. ಕೆಲವರು ಈ ವಿಚಾರವನ್ನು ಮನೆಯವರೆಗೆ ಹೇಗೆ ತಿಳಿಸುವುದು ಎಂಬ ಚಿಂತೆಯಲ್ಲಿದ್ದರು ಎಂದು ಮಾಧ್ಯಮ ವರದಿಗಳು ಹೇಳಿತ್ತು.

ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸಿ ಉದ್ಯೋಗಿಗಳನ್ನು ವಜಾ ಮಾಡಲಾಗಿದೆ ಎಂದು ಐಟಿ ಉದ್ಯೋಗಿಗಳ ಒಕ್ಕೂಟವಾದ ನಾಸೆಂಟ್ ಇನ್ಫರ್ಮೇಷನ್ ಟೆಕ್ನಾಲಜಿ ಎಂಪ್ಲಾಯೀಸ್ ಸೆನೆಟ್ (ಎನ್‌ಐಟಿಇಎಸ್) ಫೆಬ್ರವರಿ 10ರ ವೇಳೆಗೆ ಆರೋಪಿಸಿತ್ತು.

ಈ ವಿಚಾರ ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದಂತೆ ಫೆಬ್ರವರಿ 13ರಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಗೆ ಈ ಕುರಿತು ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿತ್ತು. ಅದರಂತೆ ತನಿಖೆ ನಡೆಸಿದ ಕಾರ್ಮಿಕ ಇಲಾಖೆ, ಇನ್ಫೋಸಿಸ್‌ಗೆ ಕ್ಲೀನ್ ಚಿಟ್ ನೀಡಿದೆ ಎಂದು ವರದಿಯಾಗಿದೆ.

ಕರ್ನಾಟಕ ಕಾರ್ಮಿಕ ಇಲಾಖೆ ತನ್ನ ಮಧ್ಯಂತರ ವರದಿಯಲ್ಲಿ, ಖಾಸಗಿ ಕಂಪನಿಗಳ ಆಯ್ಕೆ ಅಥವಾ ಮೌಲ್ಯಮಾಪನ ಪ್ರಕ್ರಿಯೆಗಳಲ್ಲಿ ರಾಜ್ಯ ಸರ್ಕಾರ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಕೆಲಸದಿಂದ ವಜಾಗೊಂಡ ತರಬೇತಿದಾರರಿಗೆ ಔಟ್‌ಪ್ಲೇಸ್‌ಮೆಂಟ್ ಸೇವೆಗಳು, ಬೇರ್ಪಡಿಕೆ ವೇತನ ಮತ್ತು ಕೌನ್ಸೆಲಿಂಗ್ ನೀಡುವ ಮೂಲಕ ಇನ್ಫೋಸಿಸ್ ತನ್ನ ನೀತಿಗಳಿಗೆ ಬದ್ಧವಾಗಿದೆ ಎಂಬುವುದಾಗಿದೆ ತಿಳಿಸಿದೆ ಎಂದು ವರದಿ ಹೇಳಿದೆ.

ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮೈಸೂರು ಮತ್ತು ಬೆಂಗಳೂರಿನಲ್ಲಿರುವ ಇನ್ಫೋಸಿಸ್ ಕ್ಯಾಂಪಸ್‌ಗಳ ಪರಿಶೀಲನೆಗೆ ಆದೇಶಿಸಿದ್ದರು. ಇದನ್ನು ಜಿ ಮಂಜುನಾಥ್ ನೇತೃತ್ವದ ತಂಡ ನಡೆಸಿದೆ. ನೇಮಕಾತಿ ದಾಖಲೆಗಳ ಪರಿಶೀಲನೆಯು 2022ರ ಬ್ಯಾಚ್‌ನ 600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮುಂದುವರಿದರೆ, 329 ಜನರು ಅಗತ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಾರೆ ಎಂದು ಬಹಿರಂಗಪಡಿಸಿದೆ. ಸರ್ಕಾರಿ ಅಧಿಕಾರಿಗಳು ಇನ್ಫೋಸಿಸ್‌ನ ಪರಿಭಾಷೆಯ ಬಗ್ಗೆಯೂ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ವರದಿ ತಿಳಿಸಿದೆ.

ಕ್ಲೀನ್ ಚಿಟ್ ಕುರಿತು ಪ್ರತಿಕ್ರಿಯಿಸಿರುವ ಎನ್‌ಐಟಿಇಎಸ್, ತನಿಖೆ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದೆ ಮತ್ತು ಪ್ರತಿಭಟನೆಯ ಎಚ್ಚರಿಕೆ ನೀಡಿದೆ. ಐಟಿ ವಲಯದಲ್ಲಿ ತರಬೇತಿ ಪಡೆಯುವವರು ಮತ್ತು ಉದ್ಯೋಗಿಗಳಿಗೆ ರಕ್ಷಣೆ ಒದಗಿಸುವಂತೆ ಎನ್‌ಐಟಿಇಎಸ್ ಆಗ್ರಹಿಸಿದೆ. ನೇಮಕಾತಿ ಮತ್ತು ಮೌಲ್ಯಮಾಪನ ಪದ್ಧತಿಗಳಲ್ಲಿ ಹೆಚ್ಚಿನ ಪಾರದರ್ಶಕತೆ ಮತ್ತು ನ್ಯಾಯಸಮ್ಮತತೆ ಒತ್ತಾಯಿಸಿದೆ.

ಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ ದುರ್ಬಳಕೆ ಯಾವುದೆ ಕಾರಣಕ್ಕೂ ಒಪ್ಪಲ್ಲ – ದಲಿತ ಹಕ್ಕುಗಳ ಹೋರಾಟಗಾರ ಎ. ನರಸಿಂಹ ಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...