Homeಕರ್ನಾಟಕಉದ್ಯೋಗಿಗಳ ಸಾಮೂಹಿಕ ವಜಾ : ಇನ್ಫೋಸಿಸ್‌ಗೆ ಕ್ಲೀನ್ ಚಿಟ್ ಕೊಟ್ಟ ಕರ್ನಾಟಕ ಸರ್ಕಾರ ; ವರದಿ

ಉದ್ಯೋಗಿಗಳ ಸಾಮೂಹಿಕ ವಜಾ : ಇನ್ಫೋಸಿಸ್‌ಗೆ ಕ್ಲೀನ್ ಚಿಟ್ ಕೊಟ್ಟ ಕರ್ನಾಟಕ ಸರ್ಕಾರ ; ವರದಿ

- Advertisement -
- Advertisement -

ಇತ್ತೀಚೆಗೆ ಸುಮಾರು 700 ಉದ್ಯೋಗಿಗಳನ್ನು (ಕೆಲ ವರದಿಗಳು 400-500 ಎಂದಿವೆ) ಏಕಾಏಕಿ ವಜಾಗೊಳಿಸಿದ ಪ್ರಕರಣದಲ್ಲಿ ಇನ್ಫೋಸಿಸ್‌ ಕಂಪನಿಗೆ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ ಕ್ಲೀನ್ ಚಿಟ್ ಕೊಟ್ಟಿದೆ ಎಂದು ವರದಿಯಾಗಿದೆ.

ಈ ಕುರಿತು ತನಿಖೆ ನಡೆಸಿದ ಕಾರ್ಮಿಕ ಇಲಾಖೆ ಇನ್ಫೋಸಿಸ್ ಕಂಪನಿ ಉದ್ಯೋಗಿಗಳ ವಜಾ ವೇಳೆ ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ. ಏಕೆಂದರೆ ‘ವಜಾಗೊಂಡವರು ಖಾಯಂ ನೌಕರರು ಅಲ್ಲ, ಬದಲಾಗಿ ತರಬೇತಿಯಲ್ಲಿದ್ದವರು’ ಎಂದಿರುವುದಾಗಿ ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

“ನಮ್ಮ ತನಿಖೆಯಲ್ಲಿ ಇನ್ಫೋಸಿಸ್‌ ಕಂಪನಿ ಯಾವುದೇ ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸಿರುವುದು ಕಂಡು ಬಂದಿಲ್ಲ. ಮೊದಲನೆಯದಾಗಿ ವಜಾಗೊಂಡವರು ಮತ್ತು ಕಂಪನಿ ನಡುವೆ ಉದ್ಯೋಗಿ ಮತ್ತು ಉದ್ಯೋಗದಾತ ಎಂಬ ಸಂಬಂಧವೇ ಇರಲಿಲ್ಲ. ವಜಾಗೊಂಡವರನ್ನು ನೌಕರರು ಎಂದು ಕರೆಯಲು ನೇಮಕಾತಿ ಪತ್ರಗಳನ್ನೂ ನೀಡಿರಲಿಲ್ಲ. ಅವರು ಮೂರು ತಿಂಗಳ ಕಾಲ ತರಬೇತಿಯಲ್ಲಿದ್ದರು. ಅದಕ್ಕೆ ಸ್ಟೈಫಂಡ್ ನೀಡಲಾಗಿದೆ. ಅಲ್ಲದೆ ಅವರು ಅಪ್ರೆಂಟಿಸ್‌ಶಿಪ್ ಕಾರ್ಯಕ್ರಮದ ಭಾಗವಾಗಿದ್ದರು” ಎಂದು ಸರ್ಕಾರಿ ಅಧಿಕಾರಿಯೊಬ್ಬರು ದೃಢಪಡಿಸಿದ್ದಾಗಿ ವರದಿ ವಿವರಿಸಿದೆ.

ಕಳೆದ ಫೆಬ್ರವರಿ 7ರಂದು ಇನ್ಫೋಸಿಸ್ ಕಂಪನಿ ಸುಮಾರು 700 ಉದ್ಯೋಗಿಗಳನ್ನು ಏಕಾಏಕಿ ವಜಾಗೊಳಿಸಿದೆ ಎಂಬ ಆರೋಪ ಕೇಳಿ ಬಂದಿತ್ತು. (ಕೆಲ ವರದಿಗಳು 400-500 ಎಂದಿವೆ). ವಜಾಗೊಂಡವರು ಇನ್ಫೋಸಿಸ್‌ನಲ್ಲಿ ಕೆಲಸಕ್ಕೆ ಆಯ್ಕೆಯಾಗಿ ಎರಡೂವರೆ ವರ್ಷ ಕಾದಿದ್ದರು. ಕೊನೆಗೂ ಸೆಪ್ಟೆಂಬರ್ 2024ರಲ್ಲಿ ಇವರು ಮೈಸೂರು ಕ್ಯಾಂಪಸ್‌ನಲ್ಲಿ ಕೆಲಸ ಆರಂಭಿಸಿದ್ದರು. ಇದಾಗಿ 6 ತಿಂಗಳಿಗೆ ‘ಆಂತರಿಕ ಪರೀಕ್ಷೆಯಲ್ಲಿ ವಿಫಲ’ ಎಂಬ ಕಾರಣ ನೀಡಿ ವಜಾಗೊಳಿಸಲಾಗಿದೆ. ವಜಾಗೊಂಡವರು ಮನೆಗೆ ಮರಳಲು ಟ್ಯಾಕ್ಸಿ, ಬಸ್‌ ಬುಕ್‌ ಮಾಡಲೂ ಪರದಾಡಿದ್ದರು. ಕೆಲವರು ಈ ವಿಚಾರವನ್ನು ಮನೆಯವರೆಗೆ ಹೇಗೆ ತಿಳಿಸುವುದು ಎಂಬ ಚಿಂತೆಯಲ್ಲಿದ್ದರು ಎಂದು ಮಾಧ್ಯಮ ವರದಿಗಳು ಹೇಳಿತ್ತು.

ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸಿ ಉದ್ಯೋಗಿಗಳನ್ನು ವಜಾ ಮಾಡಲಾಗಿದೆ ಎಂದು ಐಟಿ ಉದ್ಯೋಗಿಗಳ ಒಕ್ಕೂಟವಾದ ನಾಸೆಂಟ್ ಇನ್ಫರ್ಮೇಷನ್ ಟೆಕ್ನಾಲಜಿ ಎಂಪ್ಲಾಯೀಸ್ ಸೆನೆಟ್ (ಎನ್‌ಐಟಿಇಎಸ್) ಫೆಬ್ರವರಿ 10ರ ವೇಳೆಗೆ ಆರೋಪಿಸಿತ್ತು.

ಈ ವಿಚಾರ ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದಂತೆ ಫೆಬ್ರವರಿ 13ರಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಗೆ ಈ ಕುರಿತು ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿತ್ತು. ಅದರಂತೆ ತನಿಖೆ ನಡೆಸಿದ ಕಾರ್ಮಿಕ ಇಲಾಖೆ, ಇನ್ಫೋಸಿಸ್‌ಗೆ ಕ್ಲೀನ್ ಚಿಟ್ ನೀಡಿದೆ ಎಂದು ವರದಿಯಾಗಿದೆ.

ಕರ್ನಾಟಕ ಕಾರ್ಮಿಕ ಇಲಾಖೆ ತನ್ನ ಮಧ್ಯಂತರ ವರದಿಯಲ್ಲಿ, ಖಾಸಗಿ ಕಂಪನಿಗಳ ಆಯ್ಕೆ ಅಥವಾ ಮೌಲ್ಯಮಾಪನ ಪ್ರಕ್ರಿಯೆಗಳಲ್ಲಿ ರಾಜ್ಯ ಸರ್ಕಾರ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಕೆಲಸದಿಂದ ವಜಾಗೊಂಡ ತರಬೇತಿದಾರರಿಗೆ ಔಟ್‌ಪ್ಲೇಸ್‌ಮೆಂಟ್ ಸೇವೆಗಳು, ಬೇರ್ಪಡಿಕೆ ವೇತನ ಮತ್ತು ಕೌನ್ಸೆಲಿಂಗ್ ನೀಡುವ ಮೂಲಕ ಇನ್ಫೋಸಿಸ್ ತನ್ನ ನೀತಿಗಳಿಗೆ ಬದ್ಧವಾಗಿದೆ ಎಂಬುವುದಾಗಿದೆ ತಿಳಿಸಿದೆ ಎಂದು ವರದಿ ಹೇಳಿದೆ.

ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮೈಸೂರು ಮತ್ತು ಬೆಂಗಳೂರಿನಲ್ಲಿರುವ ಇನ್ಫೋಸಿಸ್ ಕ್ಯಾಂಪಸ್‌ಗಳ ಪರಿಶೀಲನೆಗೆ ಆದೇಶಿಸಿದ್ದರು. ಇದನ್ನು ಜಿ ಮಂಜುನಾಥ್ ನೇತೃತ್ವದ ತಂಡ ನಡೆಸಿದೆ. ನೇಮಕಾತಿ ದಾಖಲೆಗಳ ಪರಿಶೀಲನೆಯು 2022ರ ಬ್ಯಾಚ್‌ನ 600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮುಂದುವರಿದರೆ, 329 ಜನರು ಅಗತ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಾರೆ ಎಂದು ಬಹಿರಂಗಪಡಿಸಿದೆ. ಸರ್ಕಾರಿ ಅಧಿಕಾರಿಗಳು ಇನ್ಫೋಸಿಸ್‌ನ ಪರಿಭಾಷೆಯ ಬಗ್ಗೆಯೂ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ವರದಿ ತಿಳಿಸಿದೆ.

ಕ್ಲೀನ್ ಚಿಟ್ ಕುರಿತು ಪ್ರತಿಕ್ರಿಯಿಸಿರುವ ಎನ್‌ಐಟಿಇಎಸ್, ತನಿಖೆ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದೆ ಮತ್ತು ಪ್ರತಿಭಟನೆಯ ಎಚ್ಚರಿಕೆ ನೀಡಿದೆ. ಐಟಿ ವಲಯದಲ್ಲಿ ತರಬೇತಿ ಪಡೆಯುವವರು ಮತ್ತು ಉದ್ಯೋಗಿಗಳಿಗೆ ರಕ್ಷಣೆ ಒದಗಿಸುವಂತೆ ಎನ್‌ಐಟಿಇಎಸ್ ಆಗ್ರಹಿಸಿದೆ. ನೇಮಕಾತಿ ಮತ್ತು ಮೌಲ್ಯಮಾಪನ ಪದ್ಧತಿಗಳಲ್ಲಿ ಹೆಚ್ಚಿನ ಪಾರದರ್ಶಕತೆ ಮತ್ತು ನ್ಯಾಯಸಮ್ಮತತೆ ಒತ್ತಾಯಿಸಿದೆ.

ಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ ದುರ್ಬಳಕೆ ಯಾವುದೆ ಕಾರಣಕ್ಕೂ ಒಪ್ಪಲ್ಲ – ದಲಿತ ಹಕ್ಕುಗಳ ಹೋರಾಟಗಾರ ಎ. ನರಸಿಂಹ ಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...