Homeಕರ್ನಾಟಕಉದ್ಯೋಗಿಗಳ ಸಾಮೂಹಿಕ ವಜಾ : ಇನ್ಫೋಸಿಸ್‌ಗೆ ಕ್ಲೀನ್ ಚಿಟ್ ಕೊಟ್ಟ ಕರ್ನಾಟಕ ಸರ್ಕಾರ ; ವರದಿ

ಉದ್ಯೋಗಿಗಳ ಸಾಮೂಹಿಕ ವಜಾ : ಇನ್ಫೋಸಿಸ್‌ಗೆ ಕ್ಲೀನ್ ಚಿಟ್ ಕೊಟ್ಟ ಕರ್ನಾಟಕ ಸರ್ಕಾರ ; ವರದಿ

- Advertisement -
- Advertisement -

ಇತ್ತೀಚೆಗೆ ಸುಮಾರು 700 ಉದ್ಯೋಗಿಗಳನ್ನು (ಕೆಲ ವರದಿಗಳು 400-500 ಎಂದಿವೆ) ಏಕಾಏಕಿ ವಜಾಗೊಳಿಸಿದ ಪ್ರಕರಣದಲ್ಲಿ ಇನ್ಫೋಸಿಸ್‌ ಕಂಪನಿಗೆ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ ಕ್ಲೀನ್ ಚಿಟ್ ಕೊಟ್ಟಿದೆ ಎಂದು ವರದಿಯಾಗಿದೆ.

ಈ ಕುರಿತು ತನಿಖೆ ನಡೆಸಿದ ಕಾರ್ಮಿಕ ಇಲಾಖೆ ಇನ್ಫೋಸಿಸ್ ಕಂಪನಿ ಉದ್ಯೋಗಿಗಳ ವಜಾ ವೇಳೆ ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ. ಏಕೆಂದರೆ ‘ವಜಾಗೊಂಡವರು ಖಾಯಂ ನೌಕರರು ಅಲ್ಲ, ಬದಲಾಗಿ ತರಬೇತಿಯಲ್ಲಿದ್ದವರು’ ಎಂದಿರುವುದಾಗಿ ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

“ನಮ್ಮ ತನಿಖೆಯಲ್ಲಿ ಇನ್ಫೋಸಿಸ್‌ ಕಂಪನಿ ಯಾವುದೇ ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸಿರುವುದು ಕಂಡು ಬಂದಿಲ್ಲ. ಮೊದಲನೆಯದಾಗಿ ವಜಾಗೊಂಡವರು ಮತ್ತು ಕಂಪನಿ ನಡುವೆ ಉದ್ಯೋಗಿ ಮತ್ತು ಉದ್ಯೋಗದಾತ ಎಂಬ ಸಂಬಂಧವೇ ಇರಲಿಲ್ಲ. ವಜಾಗೊಂಡವರನ್ನು ನೌಕರರು ಎಂದು ಕರೆಯಲು ನೇಮಕಾತಿ ಪತ್ರಗಳನ್ನೂ ನೀಡಿರಲಿಲ್ಲ. ಅವರು ಮೂರು ತಿಂಗಳ ಕಾಲ ತರಬೇತಿಯಲ್ಲಿದ್ದರು. ಅದಕ್ಕೆ ಸ್ಟೈಫಂಡ್ ನೀಡಲಾಗಿದೆ. ಅಲ್ಲದೆ ಅವರು ಅಪ್ರೆಂಟಿಸ್‌ಶಿಪ್ ಕಾರ್ಯಕ್ರಮದ ಭಾಗವಾಗಿದ್ದರು” ಎಂದು ಸರ್ಕಾರಿ ಅಧಿಕಾರಿಯೊಬ್ಬರು ದೃಢಪಡಿಸಿದ್ದಾಗಿ ವರದಿ ವಿವರಿಸಿದೆ.

ಕಳೆದ ಫೆಬ್ರವರಿ 7ರಂದು ಇನ್ಫೋಸಿಸ್ ಕಂಪನಿ ಸುಮಾರು 700 ಉದ್ಯೋಗಿಗಳನ್ನು ಏಕಾಏಕಿ ವಜಾಗೊಳಿಸಿದೆ ಎಂಬ ಆರೋಪ ಕೇಳಿ ಬಂದಿತ್ತು. (ಕೆಲ ವರದಿಗಳು 400-500 ಎಂದಿವೆ). ವಜಾಗೊಂಡವರು ಇನ್ಫೋಸಿಸ್‌ನಲ್ಲಿ ಕೆಲಸಕ್ಕೆ ಆಯ್ಕೆಯಾಗಿ ಎರಡೂವರೆ ವರ್ಷ ಕಾದಿದ್ದರು. ಕೊನೆಗೂ ಸೆಪ್ಟೆಂಬರ್ 2024ರಲ್ಲಿ ಇವರು ಮೈಸೂರು ಕ್ಯಾಂಪಸ್‌ನಲ್ಲಿ ಕೆಲಸ ಆರಂಭಿಸಿದ್ದರು. ಇದಾಗಿ 6 ತಿಂಗಳಿಗೆ ‘ಆಂತರಿಕ ಪರೀಕ್ಷೆಯಲ್ಲಿ ವಿಫಲ’ ಎಂಬ ಕಾರಣ ನೀಡಿ ವಜಾಗೊಳಿಸಲಾಗಿದೆ. ವಜಾಗೊಂಡವರು ಮನೆಗೆ ಮರಳಲು ಟ್ಯಾಕ್ಸಿ, ಬಸ್‌ ಬುಕ್‌ ಮಾಡಲೂ ಪರದಾಡಿದ್ದರು. ಕೆಲವರು ಈ ವಿಚಾರವನ್ನು ಮನೆಯವರೆಗೆ ಹೇಗೆ ತಿಳಿಸುವುದು ಎಂಬ ಚಿಂತೆಯಲ್ಲಿದ್ದರು ಎಂದು ಮಾಧ್ಯಮ ವರದಿಗಳು ಹೇಳಿತ್ತು.

ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸಿ ಉದ್ಯೋಗಿಗಳನ್ನು ವಜಾ ಮಾಡಲಾಗಿದೆ ಎಂದು ಐಟಿ ಉದ್ಯೋಗಿಗಳ ಒಕ್ಕೂಟವಾದ ನಾಸೆಂಟ್ ಇನ್ಫರ್ಮೇಷನ್ ಟೆಕ್ನಾಲಜಿ ಎಂಪ್ಲಾಯೀಸ್ ಸೆನೆಟ್ (ಎನ್‌ಐಟಿಇಎಸ್) ಫೆಬ್ರವರಿ 10ರ ವೇಳೆಗೆ ಆರೋಪಿಸಿತ್ತು.

ಈ ವಿಚಾರ ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದಂತೆ ಫೆಬ್ರವರಿ 13ರಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಗೆ ಈ ಕುರಿತು ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿತ್ತು. ಅದರಂತೆ ತನಿಖೆ ನಡೆಸಿದ ಕಾರ್ಮಿಕ ಇಲಾಖೆ, ಇನ್ಫೋಸಿಸ್‌ಗೆ ಕ್ಲೀನ್ ಚಿಟ್ ನೀಡಿದೆ ಎಂದು ವರದಿಯಾಗಿದೆ.

ಕರ್ನಾಟಕ ಕಾರ್ಮಿಕ ಇಲಾಖೆ ತನ್ನ ಮಧ್ಯಂತರ ವರದಿಯಲ್ಲಿ, ಖಾಸಗಿ ಕಂಪನಿಗಳ ಆಯ್ಕೆ ಅಥವಾ ಮೌಲ್ಯಮಾಪನ ಪ್ರಕ್ರಿಯೆಗಳಲ್ಲಿ ರಾಜ್ಯ ಸರ್ಕಾರ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಕೆಲಸದಿಂದ ವಜಾಗೊಂಡ ತರಬೇತಿದಾರರಿಗೆ ಔಟ್‌ಪ್ಲೇಸ್‌ಮೆಂಟ್ ಸೇವೆಗಳು, ಬೇರ್ಪಡಿಕೆ ವೇತನ ಮತ್ತು ಕೌನ್ಸೆಲಿಂಗ್ ನೀಡುವ ಮೂಲಕ ಇನ್ಫೋಸಿಸ್ ತನ್ನ ನೀತಿಗಳಿಗೆ ಬದ್ಧವಾಗಿದೆ ಎಂಬುವುದಾಗಿದೆ ತಿಳಿಸಿದೆ ಎಂದು ವರದಿ ಹೇಳಿದೆ.

ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮೈಸೂರು ಮತ್ತು ಬೆಂಗಳೂರಿನಲ್ಲಿರುವ ಇನ್ಫೋಸಿಸ್ ಕ್ಯಾಂಪಸ್‌ಗಳ ಪರಿಶೀಲನೆಗೆ ಆದೇಶಿಸಿದ್ದರು. ಇದನ್ನು ಜಿ ಮಂಜುನಾಥ್ ನೇತೃತ್ವದ ತಂಡ ನಡೆಸಿದೆ. ನೇಮಕಾತಿ ದಾಖಲೆಗಳ ಪರಿಶೀಲನೆಯು 2022ರ ಬ್ಯಾಚ್‌ನ 600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮುಂದುವರಿದರೆ, 329 ಜನರು ಅಗತ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಾರೆ ಎಂದು ಬಹಿರಂಗಪಡಿಸಿದೆ. ಸರ್ಕಾರಿ ಅಧಿಕಾರಿಗಳು ಇನ್ಫೋಸಿಸ್‌ನ ಪರಿಭಾಷೆಯ ಬಗ್ಗೆಯೂ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ವರದಿ ತಿಳಿಸಿದೆ.

ಕ್ಲೀನ್ ಚಿಟ್ ಕುರಿತು ಪ್ರತಿಕ್ರಿಯಿಸಿರುವ ಎನ್‌ಐಟಿಇಎಸ್, ತನಿಖೆ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದೆ ಮತ್ತು ಪ್ರತಿಭಟನೆಯ ಎಚ್ಚರಿಕೆ ನೀಡಿದೆ. ಐಟಿ ವಲಯದಲ್ಲಿ ತರಬೇತಿ ಪಡೆಯುವವರು ಮತ್ತು ಉದ್ಯೋಗಿಗಳಿಗೆ ರಕ್ಷಣೆ ಒದಗಿಸುವಂತೆ ಎನ್‌ಐಟಿಇಎಸ್ ಆಗ್ರಹಿಸಿದೆ. ನೇಮಕಾತಿ ಮತ್ತು ಮೌಲ್ಯಮಾಪನ ಪದ್ಧತಿಗಳಲ್ಲಿ ಹೆಚ್ಚಿನ ಪಾರದರ್ಶಕತೆ ಮತ್ತು ನ್ಯಾಯಸಮ್ಮತತೆ ಒತ್ತಾಯಿಸಿದೆ.

ಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ ದುರ್ಬಳಕೆ ಯಾವುದೆ ಕಾರಣಕ್ಕೂ ಒಪ್ಪಲ್ಲ – ದಲಿತ ಹಕ್ಕುಗಳ ಹೋರಾಟಗಾರ ಎ. ನರಸಿಂಹ ಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...