Homeಕರ್ನಾಟಕಉದ್ಯೋಗಿಗಳ ಸಾಮೂಹಿಕ ವಜಾ : ಇನ್ಫೋಸಿಸ್‌ಗೆ ಕ್ಲೀನ್ ಚಿಟ್ ಕೊಟ್ಟ ಕರ್ನಾಟಕ ಸರ್ಕಾರ ; ವರದಿ

ಉದ್ಯೋಗಿಗಳ ಸಾಮೂಹಿಕ ವಜಾ : ಇನ್ಫೋಸಿಸ್‌ಗೆ ಕ್ಲೀನ್ ಚಿಟ್ ಕೊಟ್ಟ ಕರ್ನಾಟಕ ಸರ್ಕಾರ ; ವರದಿ

- Advertisement -
- Advertisement -

ಇತ್ತೀಚೆಗೆ ಸುಮಾರು 700 ಉದ್ಯೋಗಿಗಳನ್ನು (ಕೆಲ ವರದಿಗಳು 400-500 ಎಂದಿವೆ) ಏಕಾಏಕಿ ವಜಾಗೊಳಿಸಿದ ಪ್ರಕರಣದಲ್ಲಿ ಇನ್ಫೋಸಿಸ್‌ ಕಂಪನಿಗೆ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ ಕ್ಲೀನ್ ಚಿಟ್ ಕೊಟ್ಟಿದೆ ಎಂದು ವರದಿಯಾಗಿದೆ.

ಈ ಕುರಿತು ತನಿಖೆ ನಡೆಸಿದ ಕಾರ್ಮಿಕ ಇಲಾಖೆ ಇನ್ಫೋಸಿಸ್ ಕಂಪನಿ ಉದ್ಯೋಗಿಗಳ ವಜಾ ವೇಳೆ ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ. ಏಕೆಂದರೆ ‘ವಜಾಗೊಂಡವರು ಖಾಯಂ ನೌಕರರು ಅಲ್ಲ, ಬದಲಾಗಿ ತರಬೇತಿಯಲ್ಲಿದ್ದವರು’ ಎಂದಿರುವುದಾಗಿ ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

“ನಮ್ಮ ತನಿಖೆಯಲ್ಲಿ ಇನ್ಫೋಸಿಸ್‌ ಕಂಪನಿ ಯಾವುದೇ ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸಿರುವುದು ಕಂಡು ಬಂದಿಲ್ಲ. ಮೊದಲನೆಯದಾಗಿ ವಜಾಗೊಂಡವರು ಮತ್ತು ಕಂಪನಿ ನಡುವೆ ಉದ್ಯೋಗಿ ಮತ್ತು ಉದ್ಯೋಗದಾತ ಎಂಬ ಸಂಬಂಧವೇ ಇರಲಿಲ್ಲ. ವಜಾಗೊಂಡವರನ್ನು ನೌಕರರು ಎಂದು ಕರೆಯಲು ನೇಮಕಾತಿ ಪತ್ರಗಳನ್ನೂ ನೀಡಿರಲಿಲ್ಲ. ಅವರು ಮೂರು ತಿಂಗಳ ಕಾಲ ತರಬೇತಿಯಲ್ಲಿದ್ದರು. ಅದಕ್ಕೆ ಸ್ಟೈಫಂಡ್ ನೀಡಲಾಗಿದೆ. ಅಲ್ಲದೆ ಅವರು ಅಪ್ರೆಂಟಿಸ್‌ಶಿಪ್ ಕಾರ್ಯಕ್ರಮದ ಭಾಗವಾಗಿದ್ದರು” ಎಂದು ಸರ್ಕಾರಿ ಅಧಿಕಾರಿಯೊಬ್ಬರು ದೃಢಪಡಿಸಿದ್ದಾಗಿ ವರದಿ ವಿವರಿಸಿದೆ.

ಕಳೆದ ಫೆಬ್ರವರಿ 7ರಂದು ಇನ್ಫೋಸಿಸ್ ಕಂಪನಿ ಸುಮಾರು 700 ಉದ್ಯೋಗಿಗಳನ್ನು ಏಕಾಏಕಿ ವಜಾಗೊಳಿಸಿದೆ ಎಂಬ ಆರೋಪ ಕೇಳಿ ಬಂದಿತ್ತು. (ಕೆಲ ವರದಿಗಳು 400-500 ಎಂದಿವೆ). ವಜಾಗೊಂಡವರು ಇನ್ಫೋಸಿಸ್‌ನಲ್ಲಿ ಕೆಲಸಕ್ಕೆ ಆಯ್ಕೆಯಾಗಿ ಎರಡೂವರೆ ವರ್ಷ ಕಾದಿದ್ದರು. ಕೊನೆಗೂ ಸೆಪ್ಟೆಂಬರ್ 2024ರಲ್ಲಿ ಇವರು ಮೈಸೂರು ಕ್ಯಾಂಪಸ್‌ನಲ್ಲಿ ಕೆಲಸ ಆರಂಭಿಸಿದ್ದರು. ಇದಾಗಿ 6 ತಿಂಗಳಿಗೆ ‘ಆಂತರಿಕ ಪರೀಕ್ಷೆಯಲ್ಲಿ ವಿಫಲ’ ಎಂಬ ಕಾರಣ ನೀಡಿ ವಜಾಗೊಳಿಸಲಾಗಿದೆ. ವಜಾಗೊಂಡವರು ಮನೆಗೆ ಮರಳಲು ಟ್ಯಾಕ್ಸಿ, ಬಸ್‌ ಬುಕ್‌ ಮಾಡಲೂ ಪರದಾಡಿದ್ದರು. ಕೆಲವರು ಈ ವಿಚಾರವನ್ನು ಮನೆಯವರೆಗೆ ಹೇಗೆ ತಿಳಿಸುವುದು ಎಂಬ ಚಿಂತೆಯಲ್ಲಿದ್ದರು ಎಂದು ಮಾಧ್ಯಮ ವರದಿಗಳು ಹೇಳಿತ್ತು.

ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸಿ ಉದ್ಯೋಗಿಗಳನ್ನು ವಜಾ ಮಾಡಲಾಗಿದೆ ಎಂದು ಐಟಿ ಉದ್ಯೋಗಿಗಳ ಒಕ್ಕೂಟವಾದ ನಾಸೆಂಟ್ ಇನ್ಫರ್ಮೇಷನ್ ಟೆಕ್ನಾಲಜಿ ಎಂಪ್ಲಾಯೀಸ್ ಸೆನೆಟ್ (ಎನ್‌ಐಟಿಇಎಸ್) ಫೆಬ್ರವರಿ 10ರ ವೇಳೆಗೆ ಆರೋಪಿಸಿತ್ತು.

ಈ ವಿಚಾರ ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದಂತೆ ಫೆಬ್ರವರಿ 13ರಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಗೆ ಈ ಕುರಿತು ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿತ್ತು. ಅದರಂತೆ ತನಿಖೆ ನಡೆಸಿದ ಕಾರ್ಮಿಕ ಇಲಾಖೆ, ಇನ್ಫೋಸಿಸ್‌ಗೆ ಕ್ಲೀನ್ ಚಿಟ್ ನೀಡಿದೆ ಎಂದು ವರದಿಯಾಗಿದೆ.

ಕರ್ನಾಟಕ ಕಾರ್ಮಿಕ ಇಲಾಖೆ ತನ್ನ ಮಧ್ಯಂತರ ವರದಿಯಲ್ಲಿ, ಖಾಸಗಿ ಕಂಪನಿಗಳ ಆಯ್ಕೆ ಅಥವಾ ಮೌಲ್ಯಮಾಪನ ಪ್ರಕ್ರಿಯೆಗಳಲ್ಲಿ ರಾಜ್ಯ ಸರ್ಕಾರ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಕೆಲಸದಿಂದ ವಜಾಗೊಂಡ ತರಬೇತಿದಾರರಿಗೆ ಔಟ್‌ಪ್ಲೇಸ್‌ಮೆಂಟ್ ಸೇವೆಗಳು, ಬೇರ್ಪಡಿಕೆ ವೇತನ ಮತ್ತು ಕೌನ್ಸೆಲಿಂಗ್ ನೀಡುವ ಮೂಲಕ ಇನ್ಫೋಸಿಸ್ ತನ್ನ ನೀತಿಗಳಿಗೆ ಬದ್ಧವಾಗಿದೆ ಎಂಬುವುದಾಗಿದೆ ತಿಳಿಸಿದೆ ಎಂದು ವರದಿ ಹೇಳಿದೆ.

ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮೈಸೂರು ಮತ್ತು ಬೆಂಗಳೂರಿನಲ್ಲಿರುವ ಇನ್ಫೋಸಿಸ್ ಕ್ಯಾಂಪಸ್‌ಗಳ ಪರಿಶೀಲನೆಗೆ ಆದೇಶಿಸಿದ್ದರು. ಇದನ್ನು ಜಿ ಮಂಜುನಾಥ್ ನೇತೃತ್ವದ ತಂಡ ನಡೆಸಿದೆ. ನೇಮಕಾತಿ ದಾಖಲೆಗಳ ಪರಿಶೀಲನೆಯು 2022ರ ಬ್ಯಾಚ್‌ನ 600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮುಂದುವರಿದರೆ, 329 ಜನರು ಅಗತ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಾರೆ ಎಂದು ಬಹಿರಂಗಪಡಿಸಿದೆ. ಸರ್ಕಾರಿ ಅಧಿಕಾರಿಗಳು ಇನ್ಫೋಸಿಸ್‌ನ ಪರಿಭಾಷೆಯ ಬಗ್ಗೆಯೂ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ವರದಿ ತಿಳಿಸಿದೆ.

ಕ್ಲೀನ್ ಚಿಟ್ ಕುರಿತು ಪ್ರತಿಕ್ರಿಯಿಸಿರುವ ಎನ್‌ಐಟಿಇಎಸ್, ತನಿಖೆ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದೆ ಮತ್ತು ಪ್ರತಿಭಟನೆಯ ಎಚ್ಚರಿಕೆ ನೀಡಿದೆ. ಐಟಿ ವಲಯದಲ್ಲಿ ತರಬೇತಿ ಪಡೆಯುವವರು ಮತ್ತು ಉದ್ಯೋಗಿಗಳಿಗೆ ರಕ್ಷಣೆ ಒದಗಿಸುವಂತೆ ಎನ್‌ಐಟಿಇಎಸ್ ಆಗ್ರಹಿಸಿದೆ. ನೇಮಕಾತಿ ಮತ್ತು ಮೌಲ್ಯಮಾಪನ ಪದ್ಧತಿಗಳಲ್ಲಿ ಹೆಚ್ಚಿನ ಪಾರದರ್ಶಕತೆ ಮತ್ತು ನ್ಯಾಯಸಮ್ಮತತೆ ಒತ್ತಾಯಿಸಿದೆ.

ಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ ದುರ್ಬಳಕೆ ಯಾವುದೆ ಕಾರಣಕ್ಕೂ ಒಪ್ಪಲ್ಲ – ದಲಿತ ಹಕ್ಕುಗಳ ಹೋರಾಟಗಾರ ಎ. ನರಸಿಂಹ ಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...