Homeಕರ್ನಾಟಕಉದ್ಯೋಗಿಗಳ ಸಾಮೂಹಿಕ ವಜಾ : ಇನ್ಫೋಸಿಸ್‌ಗೆ ಕ್ಲೀನ್ ಚಿಟ್ ಕೊಟ್ಟ ಕರ್ನಾಟಕ ಸರ್ಕಾರ ; ವರದಿ

ಉದ್ಯೋಗಿಗಳ ಸಾಮೂಹಿಕ ವಜಾ : ಇನ್ಫೋಸಿಸ್‌ಗೆ ಕ್ಲೀನ್ ಚಿಟ್ ಕೊಟ್ಟ ಕರ್ನಾಟಕ ಸರ್ಕಾರ ; ವರದಿ

- Advertisement -
- Advertisement -

ಇತ್ತೀಚೆಗೆ ಸುಮಾರು 700 ಉದ್ಯೋಗಿಗಳನ್ನು (ಕೆಲ ವರದಿಗಳು 400-500 ಎಂದಿವೆ) ಏಕಾಏಕಿ ವಜಾಗೊಳಿಸಿದ ಪ್ರಕರಣದಲ್ಲಿ ಇನ್ಫೋಸಿಸ್‌ ಕಂಪನಿಗೆ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ ಕ್ಲೀನ್ ಚಿಟ್ ಕೊಟ್ಟಿದೆ ಎಂದು ವರದಿಯಾಗಿದೆ.

ಈ ಕುರಿತು ತನಿಖೆ ನಡೆಸಿದ ಕಾರ್ಮಿಕ ಇಲಾಖೆ ಇನ್ಫೋಸಿಸ್ ಕಂಪನಿ ಉದ್ಯೋಗಿಗಳ ವಜಾ ವೇಳೆ ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ. ಏಕೆಂದರೆ ‘ವಜಾಗೊಂಡವರು ಖಾಯಂ ನೌಕರರು ಅಲ್ಲ, ಬದಲಾಗಿ ತರಬೇತಿಯಲ್ಲಿದ್ದವರು’ ಎಂದಿರುವುದಾಗಿ ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

“ನಮ್ಮ ತನಿಖೆಯಲ್ಲಿ ಇನ್ಫೋಸಿಸ್‌ ಕಂಪನಿ ಯಾವುದೇ ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸಿರುವುದು ಕಂಡು ಬಂದಿಲ್ಲ. ಮೊದಲನೆಯದಾಗಿ ವಜಾಗೊಂಡವರು ಮತ್ತು ಕಂಪನಿ ನಡುವೆ ಉದ್ಯೋಗಿ ಮತ್ತು ಉದ್ಯೋಗದಾತ ಎಂಬ ಸಂಬಂಧವೇ ಇರಲಿಲ್ಲ. ವಜಾಗೊಂಡವರನ್ನು ನೌಕರರು ಎಂದು ಕರೆಯಲು ನೇಮಕಾತಿ ಪತ್ರಗಳನ್ನೂ ನೀಡಿರಲಿಲ್ಲ. ಅವರು ಮೂರು ತಿಂಗಳ ಕಾಲ ತರಬೇತಿಯಲ್ಲಿದ್ದರು. ಅದಕ್ಕೆ ಸ್ಟೈಫಂಡ್ ನೀಡಲಾಗಿದೆ. ಅಲ್ಲದೆ ಅವರು ಅಪ್ರೆಂಟಿಸ್‌ಶಿಪ್ ಕಾರ್ಯಕ್ರಮದ ಭಾಗವಾಗಿದ್ದರು” ಎಂದು ಸರ್ಕಾರಿ ಅಧಿಕಾರಿಯೊಬ್ಬರು ದೃಢಪಡಿಸಿದ್ದಾಗಿ ವರದಿ ವಿವರಿಸಿದೆ.

ಕಳೆದ ಫೆಬ್ರವರಿ 7ರಂದು ಇನ್ಫೋಸಿಸ್ ಕಂಪನಿ ಸುಮಾರು 700 ಉದ್ಯೋಗಿಗಳನ್ನು ಏಕಾಏಕಿ ವಜಾಗೊಳಿಸಿದೆ ಎಂಬ ಆರೋಪ ಕೇಳಿ ಬಂದಿತ್ತು. (ಕೆಲ ವರದಿಗಳು 400-500 ಎಂದಿವೆ). ವಜಾಗೊಂಡವರು ಇನ್ಫೋಸಿಸ್‌ನಲ್ಲಿ ಕೆಲಸಕ್ಕೆ ಆಯ್ಕೆಯಾಗಿ ಎರಡೂವರೆ ವರ್ಷ ಕಾದಿದ್ದರು. ಕೊನೆಗೂ ಸೆಪ್ಟೆಂಬರ್ 2024ರಲ್ಲಿ ಇವರು ಮೈಸೂರು ಕ್ಯಾಂಪಸ್‌ನಲ್ಲಿ ಕೆಲಸ ಆರಂಭಿಸಿದ್ದರು. ಇದಾಗಿ 6 ತಿಂಗಳಿಗೆ ‘ಆಂತರಿಕ ಪರೀಕ್ಷೆಯಲ್ಲಿ ವಿಫಲ’ ಎಂಬ ಕಾರಣ ನೀಡಿ ವಜಾಗೊಳಿಸಲಾಗಿದೆ. ವಜಾಗೊಂಡವರು ಮನೆಗೆ ಮರಳಲು ಟ್ಯಾಕ್ಸಿ, ಬಸ್‌ ಬುಕ್‌ ಮಾಡಲೂ ಪರದಾಡಿದ್ದರು. ಕೆಲವರು ಈ ವಿಚಾರವನ್ನು ಮನೆಯವರೆಗೆ ಹೇಗೆ ತಿಳಿಸುವುದು ಎಂಬ ಚಿಂತೆಯಲ್ಲಿದ್ದರು ಎಂದು ಮಾಧ್ಯಮ ವರದಿಗಳು ಹೇಳಿತ್ತು.

ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸಿ ಉದ್ಯೋಗಿಗಳನ್ನು ವಜಾ ಮಾಡಲಾಗಿದೆ ಎಂದು ಐಟಿ ಉದ್ಯೋಗಿಗಳ ಒಕ್ಕೂಟವಾದ ನಾಸೆಂಟ್ ಇನ್ಫರ್ಮೇಷನ್ ಟೆಕ್ನಾಲಜಿ ಎಂಪ್ಲಾಯೀಸ್ ಸೆನೆಟ್ (ಎನ್‌ಐಟಿಇಎಸ್) ಫೆಬ್ರವರಿ 10ರ ವೇಳೆಗೆ ಆರೋಪಿಸಿತ್ತು.

ಈ ವಿಚಾರ ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದಂತೆ ಫೆಬ್ರವರಿ 13ರಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಗೆ ಈ ಕುರಿತು ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿತ್ತು. ಅದರಂತೆ ತನಿಖೆ ನಡೆಸಿದ ಕಾರ್ಮಿಕ ಇಲಾಖೆ, ಇನ್ಫೋಸಿಸ್‌ಗೆ ಕ್ಲೀನ್ ಚಿಟ್ ನೀಡಿದೆ ಎಂದು ವರದಿಯಾಗಿದೆ.

ಕರ್ನಾಟಕ ಕಾರ್ಮಿಕ ಇಲಾಖೆ ತನ್ನ ಮಧ್ಯಂತರ ವರದಿಯಲ್ಲಿ, ಖಾಸಗಿ ಕಂಪನಿಗಳ ಆಯ್ಕೆ ಅಥವಾ ಮೌಲ್ಯಮಾಪನ ಪ್ರಕ್ರಿಯೆಗಳಲ್ಲಿ ರಾಜ್ಯ ಸರ್ಕಾರ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಕೆಲಸದಿಂದ ವಜಾಗೊಂಡ ತರಬೇತಿದಾರರಿಗೆ ಔಟ್‌ಪ್ಲೇಸ್‌ಮೆಂಟ್ ಸೇವೆಗಳು, ಬೇರ್ಪಡಿಕೆ ವೇತನ ಮತ್ತು ಕೌನ್ಸೆಲಿಂಗ್ ನೀಡುವ ಮೂಲಕ ಇನ್ಫೋಸಿಸ್ ತನ್ನ ನೀತಿಗಳಿಗೆ ಬದ್ಧವಾಗಿದೆ ಎಂಬುವುದಾಗಿದೆ ತಿಳಿಸಿದೆ ಎಂದು ವರದಿ ಹೇಳಿದೆ.

ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮೈಸೂರು ಮತ್ತು ಬೆಂಗಳೂರಿನಲ್ಲಿರುವ ಇನ್ಫೋಸಿಸ್ ಕ್ಯಾಂಪಸ್‌ಗಳ ಪರಿಶೀಲನೆಗೆ ಆದೇಶಿಸಿದ್ದರು. ಇದನ್ನು ಜಿ ಮಂಜುನಾಥ್ ನೇತೃತ್ವದ ತಂಡ ನಡೆಸಿದೆ. ನೇಮಕಾತಿ ದಾಖಲೆಗಳ ಪರಿಶೀಲನೆಯು 2022ರ ಬ್ಯಾಚ್‌ನ 600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮುಂದುವರಿದರೆ, 329 ಜನರು ಅಗತ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಾರೆ ಎಂದು ಬಹಿರಂಗಪಡಿಸಿದೆ. ಸರ್ಕಾರಿ ಅಧಿಕಾರಿಗಳು ಇನ್ಫೋಸಿಸ್‌ನ ಪರಿಭಾಷೆಯ ಬಗ್ಗೆಯೂ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ವರದಿ ತಿಳಿಸಿದೆ.

ಕ್ಲೀನ್ ಚಿಟ್ ಕುರಿತು ಪ್ರತಿಕ್ರಿಯಿಸಿರುವ ಎನ್‌ಐಟಿಇಎಸ್, ತನಿಖೆ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದೆ ಮತ್ತು ಪ್ರತಿಭಟನೆಯ ಎಚ್ಚರಿಕೆ ನೀಡಿದೆ. ಐಟಿ ವಲಯದಲ್ಲಿ ತರಬೇತಿ ಪಡೆಯುವವರು ಮತ್ತು ಉದ್ಯೋಗಿಗಳಿಗೆ ರಕ್ಷಣೆ ಒದಗಿಸುವಂತೆ ಎನ್‌ಐಟಿಇಎಸ್ ಆಗ್ರಹಿಸಿದೆ. ನೇಮಕಾತಿ ಮತ್ತು ಮೌಲ್ಯಮಾಪನ ಪದ್ಧತಿಗಳಲ್ಲಿ ಹೆಚ್ಚಿನ ಪಾರದರ್ಶಕತೆ ಮತ್ತು ನ್ಯಾಯಸಮ್ಮತತೆ ಒತ್ತಾಯಿಸಿದೆ.

ಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ ದುರ್ಬಳಕೆ ಯಾವುದೆ ಕಾರಣಕ್ಕೂ ಒಪ್ಪಲ್ಲ – ದಲಿತ ಹಕ್ಕುಗಳ ಹೋರಾಟಗಾರ ಎ. ನರಸಿಂಹ ಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...