Homeಕರ್ನಾಟಕಉದ್ಯೋಗಿಗಳ ಸಾಮೂಹಿಕ ವಜಾ : ಇನ್ಫೋಸಿಸ್‌ಗೆ ಕ್ಲೀನ್ ಚಿಟ್ ಕೊಟ್ಟ ಕರ್ನಾಟಕ ಸರ್ಕಾರ ; ವರದಿ

ಉದ್ಯೋಗಿಗಳ ಸಾಮೂಹಿಕ ವಜಾ : ಇನ್ಫೋಸಿಸ್‌ಗೆ ಕ್ಲೀನ್ ಚಿಟ್ ಕೊಟ್ಟ ಕರ್ನಾಟಕ ಸರ್ಕಾರ ; ವರದಿ

- Advertisement -
- Advertisement -

ಇತ್ತೀಚೆಗೆ ಸುಮಾರು 700 ಉದ್ಯೋಗಿಗಳನ್ನು (ಕೆಲ ವರದಿಗಳು 400-500 ಎಂದಿವೆ) ಏಕಾಏಕಿ ವಜಾಗೊಳಿಸಿದ ಪ್ರಕರಣದಲ್ಲಿ ಇನ್ಫೋಸಿಸ್‌ ಕಂಪನಿಗೆ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ ಕ್ಲೀನ್ ಚಿಟ್ ಕೊಟ್ಟಿದೆ ಎಂದು ವರದಿಯಾಗಿದೆ.

ಈ ಕುರಿತು ತನಿಖೆ ನಡೆಸಿದ ಕಾರ್ಮಿಕ ಇಲಾಖೆ ಇನ್ಫೋಸಿಸ್ ಕಂಪನಿ ಉದ್ಯೋಗಿಗಳ ವಜಾ ವೇಳೆ ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ. ಏಕೆಂದರೆ ‘ವಜಾಗೊಂಡವರು ಖಾಯಂ ನೌಕರರು ಅಲ್ಲ, ಬದಲಾಗಿ ತರಬೇತಿಯಲ್ಲಿದ್ದವರು’ ಎಂದಿರುವುದಾಗಿ ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

“ನಮ್ಮ ತನಿಖೆಯಲ್ಲಿ ಇನ್ಫೋಸಿಸ್‌ ಕಂಪನಿ ಯಾವುದೇ ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸಿರುವುದು ಕಂಡು ಬಂದಿಲ್ಲ. ಮೊದಲನೆಯದಾಗಿ ವಜಾಗೊಂಡವರು ಮತ್ತು ಕಂಪನಿ ನಡುವೆ ಉದ್ಯೋಗಿ ಮತ್ತು ಉದ್ಯೋಗದಾತ ಎಂಬ ಸಂಬಂಧವೇ ಇರಲಿಲ್ಲ. ವಜಾಗೊಂಡವರನ್ನು ನೌಕರರು ಎಂದು ಕರೆಯಲು ನೇಮಕಾತಿ ಪತ್ರಗಳನ್ನೂ ನೀಡಿರಲಿಲ್ಲ. ಅವರು ಮೂರು ತಿಂಗಳ ಕಾಲ ತರಬೇತಿಯಲ್ಲಿದ್ದರು. ಅದಕ್ಕೆ ಸ್ಟೈಫಂಡ್ ನೀಡಲಾಗಿದೆ. ಅಲ್ಲದೆ ಅವರು ಅಪ್ರೆಂಟಿಸ್‌ಶಿಪ್ ಕಾರ್ಯಕ್ರಮದ ಭಾಗವಾಗಿದ್ದರು” ಎಂದು ಸರ್ಕಾರಿ ಅಧಿಕಾರಿಯೊಬ್ಬರು ದೃಢಪಡಿಸಿದ್ದಾಗಿ ವರದಿ ವಿವರಿಸಿದೆ.

ಕಳೆದ ಫೆಬ್ರವರಿ 7ರಂದು ಇನ್ಫೋಸಿಸ್ ಕಂಪನಿ ಸುಮಾರು 700 ಉದ್ಯೋಗಿಗಳನ್ನು ಏಕಾಏಕಿ ವಜಾಗೊಳಿಸಿದೆ ಎಂಬ ಆರೋಪ ಕೇಳಿ ಬಂದಿತ್ತು. (ಕೆಲ ವರದಿಗಳು 400-500 ಎಂದಿವೆ). ವಜಾಗೊಂಡವರು ಇನ್ಫೋಸಿಸ್‌ನಲ್ಲಿ ಕೆಲಸಕ್ಕೆ ಆಯ್ಕೆಯಾಗಿ ಎರಡೂವರೆ ವರ್ಷ ಕಾದಿದ್ದರು. ಕೊನೆಗೂ ಸೆಪ್ಟೆಂಬರ್ 2024ರಲ್ಲಿ ಇವರು ಮೈಸೂರು ಕ್ಯಾಂಪಸ್‌ನಲ್ಲಿ ಕೆಲಸ ಆರಂಭಿಸಿದ್ದರು. ಇದಾಗಿ 6 ತಿಂಗಳಿಗೆ ‘ಆಂತರಿಕ ಪರೀಕ್ಷೆಯಲ್ಲಿ ವಿಫಲ’ ಎಂಬ ಕಾರಣ ನೀಡಿ ವಜಾಗೊಳಿಸಲಾಗಿದೆ. ವಜಾಗೊಂಡವರು ಮನೆಗೆ ಮರಳಲು ಟ್ಯಾಕ್ಸಿ, ಬಸ್‌ ಬುಕ್‌ ಮಾಡಲೂ ಪರದಾಡಿದ್ದರು. ಕೆಲವರು ಈ ವಿಚಾರವನ್ನು ಮನೆಯವರೆಗೆ ಹೇಗೆ ತಿಳಿಸುವುದು ಎಂಬ ಚಿಂತೆಯಲ್ಲಿದ್ದರು ಎಂದು ಮಾಧ್ಯಮ ವರದಿಗಳು ಹೇಳಿತ್ತು.

ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸಿ ಉದ್ಯೋಗಿಗಳನ್ನು ವಜಾ ಮಾಡಲಾಗಿದೆ ಎಂದು ಐಟಿ ಉದ್ಯೋಗಿಗಳ ಒಕ್ಕೂಟವಾದ ನಾಸೆಂಟ್ ಇನ್ಫರ್ಮೇಷನ್ ಟೆಕ್ನಾಲಜಿ ಎಂಪ್ಲಾಯೀಸ್ ಸೆನೆಟ್ (ಎನ್‌ಐಟಿಇಎಸ್) ಫೆಬ್ರವರಿ 10ರ ವೇಳೆಗೆ ಆರೋಪಿಸಿತ್ತು.

ಈ ವಿಚಾರ ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದಂತೆ ಫೆಬ್ರವರಿ 13ರಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಗೆ ಈ ಕುರಿತು ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿತ್ತು. ಅದರಂತೆ ತನಿಖೆ ನಡೆಸಿದ ಕಾರ್ಮಿಕ ಇಲಾಖೆ, ಇನ್ಫೋಸಿಸ್‌ಗೆ ಕ್ಲೀನ್ ಚಿಟ್ ನೀಡಿದೆ ಎಂದು ವರದಿಯಾಗಿದೆ.

ಕರ್ನಾಟಕ ಕಾರ್ಮಿಕ ಇಲಾಖೆ ತನ್ನ ಮಧ್ಯಂತರ ವರದಿಯಲ್ಲಿ, ಖಾಸಗಿ ಕಂಪನಿಗಳ ಆಯ್ಕೆ ಅಥವಾ ಮೌಲ್ಯಮಾಪನ ಪ್ರಕ್ರಿಯೆಗಳಲ್ಲಿ ರಾಜ್ಯ ಸರ್ಕಾರ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಕೆಲಸದಿಂದ ವಜಾಗೊಂಡ ತರಬೇತಿದಾರರಿಗೆ ಔಟ್‌ಪ್ಲೇಸ್‌ಮೆಂಟ್ ಸೇವೆಗಳು, ಬೇರ್ಪಡಿಕೆ ವೇತನ ಮತ್ತು ಕೌನ್ಸೆಲಿಂಗ್ ನೀಡುವ ಮೂಲಕ ಇನ್ಫೋಸಿಸ್ ತನ್ನ ನೀತಿಗಳಿಗೆ ಬದ್ಧವಾಗಿದೆ ಎಂಬುವುದಾಗಿದೆ ತಿಳಿಸಿದೆ ಎಂದು ವರದಿ ಹೇಳಿದೆ.

ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮೈಸೂರು ಮತ್ತು ಬೆಂಗಳೂರಿನಲ್ಲಿರುವ ಇನ್ಫೋಸಿಸ್ ಕ್ಯಾಂಪಸ್‌ಗಳ ಪರಿಶೀಲನೆಗೆ ಆದೇಶಿಸಿದ್ದರು. ಇದನ್ನು ಜಿ ಮಂಜುನಾಥ್ ನೇತೃತ್ವದ ತಂಡ ನಡೆಸಿದೆ. ನೇಮಕಾತಿ ದಾಖಲೆಗಳ ಪರಿಶೀಲನೆಯು 2022ರ ಬ್ಯಾಚ್‌ನ 600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮುಂದುವರಿದರೆ, 329 ಜನರು ಅಗತ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಾರೆ ಎಂದು ಬಹಿರಂಗಪಡಿಸಿದೆ. ಸರ್ಕಾರಿ ಅಧಿಕಾರಿಗಳು ಇನ್ಫೋಸಿಸ್‌ನ ಪರಿಭಾಷೆಯ ಬಗ್ಗೆಯೂ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ವರದಿ ತಿಳಿಸಿದೆ.

ಕ್ಲೀನ್ ಚಿಟ್ ಕುರಿತು ಪ್ರತಿಕ್ರಿಯಿಸಿರುವ ಎನ್‌ಐಟಿಇಎಸ್, ತನಿಖೆ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದೆ ಮತ್ತು ಪ್ರತಿಭಟನೆಯ ಎಚ್ಚರಿಕೆ ನೀಡಿದೆ. ಐಟಿ ವಲಯದಲ್ಲಿ ತರಬೇತಿ ಪಡೆಯುವವರು ಮತ್ತು ಉದ್ಯೋಗಿಗಳಿಗೆ ರಕ್ಷಣೆ ಒದಗಿಸುವಂತೆ ಎನ್‌ಐಟಿಇಎಸ್ ಆಗ್ರಹಿಸಿದೆ. ನೇಮಕಾತಿ ಮತ್ತು ಮೌಲ್ಯಮಾಪನ ಪದ್ಧತಿಗಳಲ್ಲಿ ಹೆಚ್ಚಿನ ಪಾರದರ್ಶಕತೆ ಮತ್ತು ನ್ಯಾಯಸಮ್ಮತತೆ ಒತ್ತಾಯಿಸಿದೆ.

ಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ ದುರ್ಬಳಕೆ ಯಾವುದೆ ಕಾರಣಕ್ಕೂ ಒಪ್ಪಲ್ಲ – ದಲಿತ ಹಕ್ಕುಗಳ ಹೋರಾಟಗಾರ ಎ. ನರಸಿಂಹ ಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...