Homeಕರ್ನಾಟಕಉದ್ಯೋಗಿಗಳ ಸಾಮೂಹಿಕ ವಜಾ | ಇನ್ಫೋಸಿಸ್ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯಕ್ಕೆ ಕೇಂದ್ರ ಸೂಚನೆ

ಉದ್ಯೋಗಿಗಳ ಸಾಮೂಹಿಕ ವಜಾ | ಇನ್ಫೋಸಿಸ್ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯಕ್ಕೆ ಕೇಂದ್ರ ಸೂಚನೆ

- Advertisement -
- Advertisement -

ಉದ್ಯೋಗಿಗಳ ಸಾಮೂಹಿಕ ವಜಾ ಮಾಡಿದ್ದ ಇನ್ಫೋಸಿಸ್‌ನಿಂದ ಕುರಿತು ಟೆಕ್ ಉದ್ಯೋಗಿಗಳ ಸಂಘಟನೆ ನೀಡಿದ್ದ ದೂರನ್ನು ಉಲ್ಲೇಖಿಸಿ, ಕೇಂದ್ರ ಕಾರ್ಮಿಕ ಸಚಿವಾಲಯವು ಗುರುವಾರ ಕರ್ನಾಟಕ ಕಾರ್ಮಿಕ ಇಲಾಖೆಗೆ “ವಿವಾದವನ್ನು ಪರಿಹರಿಸಲು ತುರ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳಿ” ಎಂದು ನಿರ್ದೇಶನ ನೀಡಿದೆ. ಉದ್ಯೋಗಿಗಳ ಸಾಮೂಹಿಕ ವಜಾ

ಇನ್ಫೋಸಿಸ್‌ನ ಮೈಸೂರು ಕ್ಯಾಂಪಸ್‌ನಲ್ಲಿ ತಿಂಗಳುಗಟ್ಟಲೆ ಮೂಲಭೂತ ತರಬೇತಿ ಪಡೆದ 300 ಕ್ಕೂ ಹೆಚ್ಚು ಹೊಸ ಉದ್ಯೋಗಿಗಳನ್ನು ವಜಾಗೊಳಿಸಿರುವುದಾಗಿ ಸಂಸ್ಥೆಯು ಕಳೆದ ವಾರ ಒಪ್ಪಿಕೊಂಡಿತ್ತು.

ಆದರೆ, ಈ ಸಂಖ್ಯೆ ಬಗ್ಗೆ ಐಟಿ ವಲಯದ ಸಂಘಟನೆಯಾದ ನಸೆಂಟ್ ಇನ್ಫರ್ಮೇಷನ್ ಟೆಕ್ನಾಲಜಿ ಉದ್ಯೋಗಿಗಳ ಸೆನೆಟ್ (NITES) ಆಕ್ಷೇಪ ವ್ಯಕ್ತಪಡಿಸಿದ್ದು, ವಜಾಗೊಳ್ಳಲ್ಪಟ್ಟ ಉದ್ಯೋಗಿಗಳ ಸಂಖ್ಯೆ 700 ಎಂದು ಪ್ರತಿಪಾದಿತ್ತು. ಇನ್ಫೋಸಿಸ್ ವಿರುದ್ಧ ತಕ್ಷಣದ ಹಸ್ತಕ್ಷೇಪ ಮತ್ತು ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯಕ್ಕೆ ಸಂಘಟನೆಯು ಅಧಿಕೃತ ದೂರು ಸಲ್ಲಿಸಿತ್ತು. ಉದ್ಯೋಗಿಗಳ ಸಾಮೂಹಿಕ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂಘಟನೆ ಸಲ್ಲಿಸಿದ ದೂರಿನಲ್ಲಿ, “ಇನ್ಫೋಸಿಸ್‌ಗೆ ಇತ್ತೀಚೆಗೆ ಸೇರ್ಪಡೆಗೊಂಡ ಕ್ಯಾಂಪಸ್ ನೇಮಕಾತಿದಾರರನ್ನು ಬಲವಂತವಾಗಿ ವಜಾಗೊಳಿಸಲಾಗಿದೆ. ಈ ಎಲ್ಲಾ ಉದ್ಯೋಗಿಗಳು ಸುಮಾರು 2 ವರ್ಷಗಳ ಹಿಂದೆಯೆ ಆಫರ್ ಲೆಟರ್‌ಗಳನ್ನು ಪಡೆದಿದ್ದರು. ಅದಾಗ್ಯೂ, ಅವರನ್ನು ಕೆಲಸಕ್ಕೆ ಸೇರಿಸುವಲ್ಲಿ ಸಂಸ್ಥೆಯು ಎರಡು ವರ್ಷ ವಿಳಂಬ ಮಾಡಿ ಅವರನ್ನು ಕೆಲಸದಿಂದ ವಜಾ ಮಾಡಿದೆ” ಎಂದು ಹೇಳಿದೆ.

ಇನ್ಫೋಸಿಸ್ ವಿರುದ್ಧ ತನಿಖೆ ನಡೆಸಬೇಕು, ಈ ರೀತಿಯ ವಜಾಗೊಳಿಸುವಿಕೆಯನ್ನು ತಡೆಯಲು ಇನ್ಫೋಸಿಸ್ ವಿರುದ್ಧ ತಡೆಯಾಜ್ಞೆ ಹೊರಡಿಸಬೇಕು. ಜೊತೆಗೆ ವಜಾಗೊಳಿಸಲ್ಪಟ್ಟ ಎಲ್ಲಾ ಉದ್ಯೋಗಿಗಳಿಗೆ ಮತ್ತೆ ಉದ್ಯೋಗ ನೀಡಬೇಕು ಮತ್ತು 1947 ರ ಕೈಗಾರಿಕಾ ವಿವಾದ ಕಾಯ್ದೆ ಮತ್ತು ಇತರ ಅನ್ವಯವಾಗುವ ಕಾರ್ಮಿಕ ಕಾನೂನುಗಳ ನಿಬಂಧನೆಗಳನ್ನು ಉಲ್ಲಂಘಿಸಿದ್ದಕ್ಕಾಗಿ ಕಂಪನಿಯ ವಿರುದ್ಧ ದಂಡ ವಿಧಿಸಬೇಕು ಎಂದು NITES ಸಲ್ಲಿಸಿದ ದೂರಿನಲ್ಲಿ ಒತ್ತಾಯಿಸಿದೆ.

ಈ ದೂರಿನ ಅನ್ವಯ ಕೇಂದ್ರ ಕಾರ್ಮಿಕ ಸಚಿವಾಲಯವು ರಾಜ್ಯಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಕೇಂದ್ರದ ಸೂಚನೆ ಹಿನ್ನಲೆ, ಕಾರ್ಮಿಕ ಇಲಾಖೆಯ ಅಧಿಕಾರಿಗಳು ಗುರುವಾರ ತಡರಾತ್ರಿ ಕಂಪನಿಗಳ ಬೆಂಗಳೂರು ಮತ್ತು ಮೈಸೂರು ಕ್ಯಾಂಪಸ್‌ಗಳಿಗೆ ಭೇಟಿ ನೀಡಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂಓದಿ:  ಅಕ್ರಮ ವಲಸೆ | 6 ಟ್ರಾವೆಲ್‌ ಏಜೆನ್ಸಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಪಂಜಾಬ್ ಪೊಲೀಸರು

ಅಕ್ರಮ ವಲಸೆ | 6 ಟ್ರಾವೆಲ್‌ ಏಜೆನ್ಸಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಪಂಜಾಬ್ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...