ಉದ್ಯೋಗಿಗಳ ಸಾಮೂಹಿಕ ವಜಾ ಮಾಡಿದ್ದ ಇನ್ಫೋಸಿಸ್ನಿಂದ ಕುರಿತು ಟೆಕ್ ಉದ್ಯೋಗಿಗಳ ಸಂಘಟನೆ ನೀಡಿದ್ದ ದೂರನ್ನು ಉಲ್ಲೇಖಿಸಿ, ಕೇಂದ್ರ ಕಾರ್ಮಿಕ ಸಚಿವಾಲಯವು ಗುರುವಾರ ಕರ್ನಾಟಕ ಕಾರ್ಮಿಕ ಇಲಾಖೆಗೆ “ವಿವಾದವನ್ನು ಪರಿಹರಿಸಲು ತುರ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳಿ” ಎಂದು ನಿರ್ದೇಶನ ನೀಡಿದೆ. ಉದ್ಯೋಗಿಗಳ ಸಾಮೂಹಿಕ ವಜಾ
ಇನ್ಫೋಸಿಸ್ನ ಮೈಸೂರು ಕ್ಯಾಂಪಸ್ನಲ್ಲಿ ತಿಂಗಳುಗಟ್ಟಲೆ ಮೂಲಭೂತ ತರಬೇತಿ ಪಡೆದ 300 ಕ್ಕೂ ಹೆಚ್ಚು ಹೊಸ ಉದ್ಯೋಗಿಗಳನ್ನು ವಜಾಗೊಳಿಸಿರುವುದಾಗಿ ಸಂಸ್ಥೆಯು ಕಳೆದ ವಾರ ಒಪ್ಪಿಕೊಂಡಿತ್ತು.
ಆದರೆ, ಈ ಸಂಖ್ಯೆ ಬಗ್ಗೆ ಐಟಿ ವಲಯದ ಸಂಘಟನೆಯಾದ ನಸೆಂಟ್ ಇನ್ಫರ್ಮೇಷನ್ ಟೆಕ್ನಾಲಜಿ ಉದ್ಯೋಗಿಗಳ ಸೆನೆಟ್ (NITES) ಆಕ್ಷೇಪ ವ್ಯಕ್ತಪಡಿಸಿದ್ದು, ವಜಾಗೊಳ್ಳಲ್ಪಟ್ಟ ಉದ್ಯೋಗಿಗಳ ಸಂಖ್ಯೆ 700 ಎಂದು ಪ್ರತಿಪಾದಿತ್ತು. ಇನ್ಫೋಸಿಸ್ ವಿರುದ್ಧ ತಕ್ಷಣದ ಹಸ್ತಕ್ಷೇಪ ಮತ್ತು ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯಕ್ಕೆ ಸಂಘಟನೆಯು ಅಧಿಕೃತ ದೂರು ಸಲ್ಲಿಸಿತ್ತು. ಉದ್ಯೋಗಿಗಳ ಸಾಮೂಹಿಕ ವಜಾ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಸಂಘಟನೆ ಸಲ್ಲಿಸಿದ ದೂರಿನಲ್ಲಿ, “ಇನ್ಫೋಸಿಸ್ಗೆ ಇತ್ತೀಚೆಗೆ ಸೇರ್ಪಡೆಗೊಂಡ ಕ್ಯಾಂಪಸ್ ನೇಮಕಾತಿದಾರರನ್ನು ಬಲವಂತವಾಗಿ ವಜಾಗೊಳಿಸಲಾಗಿದೆ. ಈ ಎಲ್ಲಾ ಉದ್ಯೋಗಿಗಳು ಸುಮಾರು 2 ವರ್ಷಗಳ ಹಿಂದೆಯೆ ಆಫರ್ ಲೆಟರ್ಗಳನ್ನು ಪಡೆದಿದ್ದರು. ಅದಾಗ್ಯೂ, ಅವರನ್ನು ಕೆಲಸಕ್ಕೆ ಸೇರಿಸುವಲ್ಲಿ ಸಂಸ್ಥೆಯು ಎರಡು ವರ್ಷ ವಿಳಂಬ ಮಾಡಿ ಅವರನ್ನು ಕೆಲಸದಿಂದ ವಜಾ ಮಾಡಿದೆ” ಎಂದು ಹೇಳಿದೆ.
ಇನ್ಫೋಸಿಸ್ ವಿರುದ್ಧ ತನಿಖೆ ನಡೆಸಬೇಕು, ಈ ರೀತಿಯ ವಜಾಗೊಳಿಸುವಿಕೆಯನ್ನು ತಡೆಯಲು ಇನ್ಫೋಸಿಸ್ ವಿರುದ್ಧ ತಡೆಯಾಜ್ಞೆ ಹೊರಡಿಸಬೇಕು. ಜೊತೆಗೆ ವಜಾಗೊಳಿಸಲ್ಪಟ್ಟ ಎಲ್ಲಾ ಉದ್ಯೋಗಿಗಳಿಗೆ ಮತ್ತೆ ಉದ್ಯೋಗ ನೀಡಬೇಕು ಮತ್ತು 1947 ರ ಕೈಗಾರಿಕಾ ವಿವಾದ ಕಾಯ್ದೆ ಮತ್ತು ಇತರ ಅನ್ವಯವಾಗುವ ಕಾರ್ಮಿಕ ಕಾನೂನುಗಳ ನಿಬಂಧನೆಗಳನ್ನು ಉಲ್ಲಂಘಿಸಿದ್ದಕ್ಕಾಗಿ ಕಂಪನಿಯ ವಿರುದ್ಧ ದಂಡ ವಿಧಿಸಬೇಕು ಎಂದು NITES ಸಲ್ಲಿಸಿದ ದೂರಿನಲ್ಲಿ ಒತ್ತಾಯಿಸಿದೆ.
ಈ ದೂರಿನ ಅನ್ವಯ ಕೇಂದ್ರ ಕಾರ್ಮಿಕ ಸಚಿವಾಲಯವು ರಾಜ್ಯಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಕೇಂದ್ರದ ಸೂಚನೆ ಹಿನ್ನಲೆ, ಕಾರ್ಮಿಕ ಇಲಾಖೆಯ ಅಧಿಕಾರಿಗಳು ಗುರುವಾರ ತಡರಾತ್ರಿ ಕಂಪನಿಗಳ ಬೆಂಗಳೂರು ಮತ್ತು ಮೈಸೂರು ಕ್ಯಾಂಪಸ್ಗಳಿಗೆ ಭೇಟಿ ನೀಡಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.
ಇದನ್ನೂಓದಿ: ಅಕ್ರಮ ವಲಸೆ | 6 ಟ್ರಾವೆಲ್ ಏಜೆನ್ಸಿ ವಿರುದ್ಧ ಎಫ್ಐಆರ್ ದಾಖಲಿಸಿದ ಪಂಜಾಬ್ ಪೊಲೀಸರು
ಅಕ್ರಮ ವಲಸೆ | 6 ಟ್ರಾವೆಲ್ ಏಜೆನ್ಸಿ ವಿರುದ್ಧ ಎಫ್ಐಆರ್ ದಾಖಲಿಸಿದ ಪಂಜಾಬ್ ಪೊಲೀಸರು


