Homeಕರ್ನಾಟಕಉದ್ಯೋಗಿಗಳ ಸಾಮೂಹಿಕ ವಜಾ | ಇನ್ಫೋಸಿಸ್ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯಕ್ಕೆ ಕೇಂದ್ರ ಸೂಚನೆ

ಉದ್ಯೋಗಿಗಳ ಸಾಮೂಹಿಕ ವಜಾ | ಇನ್ಫೋಸಿಸ್ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯಕ್ಕೆ ಕೇಂದ್ರ ಸೂಚನೆ

- Advertisement -
- Advertisement -

ಉದ್ಯೋಗಿಗಳ ಸಾಮೂಹಿಕ ವಜಾ ಮಾಡಿದ್ದ ಇನ್ಫೋಸಿಸ್‌ನಿಂದ ಕುರಿತು ಟೆಕ್ ಉದ್ಯೋಗಿಗಳ ಸಂಘಟನೆ ನೀಡಿದ್ದ ದೂರನ್ನು ಉಲ್ಲೇಖಿಸಿ, ಕೇಂದ್ರ ಕಾರ್ಮಿಕ ಸಚಿವಾಲಯವು ಗುರುವಾರ ಕರ್ನಾಟಕ ಕಾರ್ಮಿಕ ಇಲಾಖೆಗೆ “ವಿವಾದವನ್ನು ಪರಿಹರಿಸಲು ತುರ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳಿ” ಎಂದು ನಿರ್ದೇಶನ ನೀಡಿದೆ. ಉದ್ಯೋಗಿಗಳ ಸಾಮೂಹಿಕ ವಜಾ

ಇನ್ಫೋಸಿಸ್‌ನ ಮೈಸೂರು ಕ್ಯಾಂಪಸ್‌ನಲ್ಲಿ ತಿಂಗಳುಗಟ್ಟಲೆ ಮೂಲಭೂತ ತರಬೇತಿ ಪಡೆದ 300 ಕ್ಕೂ ಹೆಚ್ಚು ಹೊಸ ಉದ್ಯೋಗಿಗಳನ್ನು ವಜಾಗೊಳಿಸಿರುವುದಾಗಿ ಸಂಸ್ಥೆಯು ಕಳೆದ ವಾರ ಒಪ್ಪಿಕೊಂಡಿತ್ತು.

ಆದರೆ, ಈ ಸಂಖ್ಯೆ ಬಗ್ಗೆ ಐಟಿ ವಲಯದ ಸಂಘಟನೆಯಾದ ನಸೆಂಟ್ ಇನ್ಫರ್ಮೇಷನ್ ಟೆಕ್ನಾಲಜಿ ಉದ್ಯೋಗಿಗಳ ಸೆನೆಟ್ (NITES) ಆಕ್ಷೇಪ ವ್ಯಕ್ತಪಡಿಸಿದ್ದು, ವಜಾಗೊಳ್ಳಲ್ಪಟ್ಟ ಉದ್ಯೋಗಿಗಳ ಸಂಖ್ಯೆ 700 ಎಂದು ಪ್ರತಿಪಾದಿತ್ತು. ಇನ್ಫೋಸಿಸ್ ವಿರುದ್ಧ ತಕ್ಷಣದ ಹಸ್ತಕ್ಷೇಪ ಮತ್ತು ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯಕ್ಕೆ ಸಂಘಟನೆಯು ಅಧಿಕೃತ ದೂರು ಸಲ್ಲಿಸಿತ್ತು. ಉದ್ಯೋಗಿಗಳ ಸಾಮೂಹಿಕ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂಘಟನೆ ಸಲ್ಲಿಸಿದ ದೂರಿನಲ್ಲಿ, “ಇನ್ಫೋಸಿಸ್‌ಗೆ ಇತ್ತೀಚೆಗೆ ಸೇರ್ಪಡೆಗೊಂಡ ಕ್ಯಾಂಪಸ್ ನೇಮಕಾತಿದಾರರನ್ನು ಬಲವಂತವಾಗಿ ವಜಾಗೊಳಿಸಲಾಗಿದೆ. ಈ ಎಲ್ಲಾ ಉದ್ಯೋಗಿಗಳು ಸುಮಾರು 2 ವರ್ಷಗಳ ಹಿಂದೆಯೆ ಆಫರ್ ಲೆಟರ್‌ಗಳನ್ನು ಪಡೆದಿದ್ದರು. ಅದಾಗ್ಯೂ, ಅವರನ್ನು ಕೆಲಸಕ್ಕೆ ಸೇರಿಸುವಲ್ಲಿ ಸಂಸ್ಥೆಯು ಎರಡು ವರ್ಷ ವಿಳಂಬ ಮಾಡಿ ಅವರನ್ನು ಕೆಲಸದಿಂದ ವಜಾ ಮಾಡಿದೆ” ಎಂದು ಹೇಳಿದೆ.

ಇನ್ಫೋಸಿಸ್ ವಿರುದ್ಧ ತನಿಖೆ ನಡೆಸಬೇಕು, ಈ ರೀತಿಯ ವಜಾಗೊಳಿಸುವಿಕೆಯನ್ನು ತಡೆಯಲು ಇನ್ಫೋಸಿಸ್ ವಿರುದ್ಧ ತಡೆಯಾಜ್ಞೆ ಹೊರಡಿಸಬೇಕು. ಜೊತೆಗೆ ವಜಾಗೊಳಿಸಲ್ಪಟ್ಟ ಎಲ್ಲಾ ಉದ್ಯೋಗಿಗಳಿಗೆ ಮತ್ತೆ ಉದ್ಯೋಗ ನೀಡಬೇಕು ಮತ್ತು 1947 ರ ಕೈಗಾರಿಕಾ ವಿವಾದ ಕಾಯ್ದೆ ಮತ್ತು ಇತರ ಅನ್ವಯವಾಗುವ ಕಾರ್ಮಿಕ ಕಾನೂನುಗಳ ನಿಬಂಧನೆಗಳನ್ನು ಉಲ್ಲಂಘಿಸಿದ್ದಕ್ಕಾಗಿ ಕಂಪನಿಯ ವಿರುದ್ಧ ದಂಡ ವಿಧಿಸಬೇಕು ಎಂದು NITES ಸಲ್ಲಿಸಿದ ದೂರಿನಲ್ಲಿ ಒತ್ತಾಯಿಸಿದೆ.

ಈ ದೂರಿನ ಅನ್ವಯ ಕೇಂದ್ರ ಕಾರ್ಮಿಕ ಸಚಿವಾಲಯವು ರಾಜ್ಯಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಕೇಂದ್ರದ ಸೂಚನೆ ಹಿನ್ನಲೆ, ಕಾರ್ಮಿಕ ಇಲಾಖೆಯ ಅಧಿಕಾರಿಗಳು ಗುರುವಾರ ತಡರಾತ್ರಿ ಕಂಪನಿಗಳ ಬೆಂಗಳೂರು ಮತ್ತು ಮೈಸೂರು ಕ್ಯಾಂಪಸ್‌ಗಳಿಗೆ ಭೇಟಿ ನೀಡಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂಓದಿ:  ಅಕ್ರಮ ವಲಸೆ | 6 ಟ್ರಾವೆಲ್‌ ಏಜೆನ್ಸಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಪಂಜಾಬ್ ಪೊಲೀಸರು

ಅಕ್ರಮ ವಲಸೆ | 6 ಟ್ರಾವೆಲ್‌ ಏಜೆನ್ಸಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಪಂಜಾಬ್ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...