Homeಕರ್ನಾಟಕಉದ್ಯೋಗಿಗಳ ಸಾಮೂಹಿಕ ವಜಾ | ಇನ್ಫೋಸಿಸ್ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯಕ್ಕೆ ಕೇಂದ್ರ ಸೂಚನೆ

ಉದ್ಯೋಗಿಗಳ ಸಾಮೂಹಿಕ ವಜಾ | ಇನ್ಫೋಸಿಸ್ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯಕ್ಕೆ ಕೇಂದ್ರ ಸೂಚನೆ

- Advertisement -
- Advertisement -

ಉದ್ಯೋಗಿಗಳ ಸಾಮೂಹಿಕ ವಜಾ ಮಾಡಿದ್ದ ಇನ್ಫೋಸಿಸ್‌ನಿಂದ ಕುರಿತು ಟೆಕ್ ಉದ್ಯೋಗಿಗಳ ಸಂಘಟನೆ ನೀಡಿದ್ದ ದೂರನ್ನು ಉಲ್ಲೇಖಿಸಿ, ಕೇಂದ್ರ ಕಾರ್ಮಿಕ ಸಚಿವಾಲಯವು ಗುರುವಾರ ಕರ್ನಾಟಕ ಕಾರ್ಮಿಕ ಇಲಾಖೆಗೆ “ವಿವಾದವನ್ನು ಪರಿಹರಿಸಲು ತುರ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳಿ” ಎಂದು ನಿರ್ದೇಶನ ನೀಡಿದೆ. ಉದ್ಯೋಗಿಗಳ ಸಾಮೂಹಿಕ ವಜಾ

ಇನ್ಫೋಸಿಸ್‌ನ ಮೈಸೂರು ಕ್ಯಾಂಪಸ್‌ನಲ್ಲಿ ತಿಂಗಳುಗಟ್ಟಲೆ ಮೂಲಭೂತ ತರಬೇತಿ ಪಡೆದ 300 ಕ್ಕೂ ಹೆಚ್ಚು ಹೊಸ ಉದ್ಯೋಗಿಗಳನ್ನು ವಜಾಗೊಳಿಸಿರುವುದಾಗಿ ಸಂಸ್ಥೆಯು ಕಳೆದ ವಾರ ಒಪ್ಪಿಕೊಂಡಿತ್ತು.

ಆದರೆ, ಈ ಸಂಖ್ಯೆ ಬಗ್ಗೆ ಐಟಿ ವಲಯದ ಸಂಘಟನೆಯಾದ ನಸೆಂಟ್ ಇನ್ಫರ್ಮೇಷನ್ ಟೆಕ್ನಾಲಜಿ ಉದ್ಯೋಗಿಗಳ ಸೆನೆಟ್ (NITES) ಆಕ್ಷೇಪ ವ್ಯಕ್ತಪಡಿಸಿದ್ದು, ವಜಾಗೊಳ್ಳಲ್ಪಟ್ಟ ಉದ್ಯೋಗಿಗಳ ಸಂಖ್ಯೆ 700 ಎಂದು ಪ್ರತಿಪಾದಿತ್ತು. ಇನ್ಫೋಸಿಸ್ ವಿರುದ್ಧ ತಕ್ಷಣದ ಹಸ್ತಕ್ಷೇಪ ಮತ್ತು ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯಕ್ಕೆ ಸಂಘಟನೆಯು ಅಧಿಕೃತ ದೂರು ಸಲ್ಲಿಸಿತ್ತು. ಉದ್ಯೋಗಿಗಳ ಸಾಮೂಹಿಕ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂಘಟನೆ ಸಲ್ಲಿಸಿದ ದೂರಿನಲ್ಲಿ, “ಇನ್ಫೋಸಿಸ್‌ಗೆ ಇತ್ತೀಚೆಗೆ ಸೇರ್ಪಡೆಗೊಂಡ ಕ್ಯಾಂಪಸ್ ನೇಮಕಾತಿದಾರರನ್ನು ಬಲವಂತವಾಗಿ ವಜಾಗೊಳಿಸಲಾಗಿದೆ. ಈ ಎಲ್ಲಾ ಉದ್ಯೋಗಿಗಳು ಸುಮಾರು 2 ವರ್ಷಗಳ ಹಿಂದೆಯೆ ಆಫರ್ ಲೆಟರ್‌ಗಳನ್ನು ಪಡೆದಿದ್ದರು. ಅದಾಗ್ಯೂ, ಅವರನ್ನು ಕೆಲಸಕ್ಕೆ ಸೇರಿಸುವಲ್ಲಿ ಸಂಸ್ಥೆಯು ಎರಡು ವರ್ಷ ವಿಳಂಬ ಮಾಡಿ ಅವರನ್ನು ಕೆಲಸದಿಂದ ವಜಾ ಮಾಡಿದೆ” ಎಂದು ಹೇಳಿದೆ.

ಇನ್ಫೋಸಿಸ್ ವಿರುದ್ಧ ತನಿಖೆ ನಡೆಸಬೇಕು, ಈ ರೀತಿಯ ವಜಾಗೊಳಿಸುವಿಕೆಯನ್ನು ತಡೆಯಲು ಇನ್ಫೋಸಿಸ್ ವಿರುದ್ಧ ತಡೆಯಾಜ್ಞೆ ಹೊರಡಿಸಬೇಕು. ಜೊತೆಗೆ ವಜಾಗೊಳಿಸಲ್ಪಟ್ಟ ಎಲ್ಲಾ ಉದ್ಯೋಗಿಗಳಿಗೆ ಮತ್ತೆ ಉದ್ಯೋಗ ನೀಡಬೇಕು ಮತ್ತು 1947 ರ ಕೈಗಾರಿಕಾ ವಿವಾದ ಕಾಯ್ದೆ ಮತ್ತು ಇತರ ಅನ್ವಯವಾಗುವ ಕಾರ್ಮಿಕ ಕಾನೂನುಗಳ ನಿಬಂಧನೆಗಳನ್ನು ಉಲ್ಲಂಘಿಸಿದ್ದಕ್ಕಾಗಿ ಕಂಪನಿಯ ವಿರುದ್ಧ ದಂಡ ವಿಧಿಸಬೇಕು ಎಂದು NITES ಸಲ್ಲಿಸಿದ ದೂರಿನಲ್ಲಿ ಒತ್ತಾಯಿಸಿದೆ.

ಈ ದೂರಿನ ಅನ್ವಯ ಕೇಂದ್ರ ಕಾರ್ಮಿಕ ಸಚಿವಾಲಯವು ರಾಜ್ಯಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಕೇಂದ್ರದ ಸೂಚನೆ ಹಿನ್ನಲೆ, ಕಾರ್ಮಿಕ ಇಲಾಖೆಯ ಅಧಿಕಾರಿಗಳು ಗುರುವಾರ ತಡರಾತ್ರಿ ಕಂಪನಿಗಳ ಬೆಂಗಳೂರು ಮತ್ತು ಮೈಸೂರು ಕ್ಯಾಂಪಸ್‌ಗಳಿಗೆ ಭೇಟಿ ನೀಡಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂಓದಿ:  ಅಕ್ರಮ ವಲಸೆ | 6 ಟ್ರಾವೆಲ್‌ ಏಜೆನ್ಸಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಪಂಜಾಬ್ ಪೊಲೀಸರು

ಅಕ್ರಮ ವಲಸೆ | 6 ಟ್ರಾವೆಲ್‌ ಏಜೆನ್ಸಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಪಂಜಾಬ್ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...