Homeಮುಖಪುಟವರರಿಲ್ಲದೆ ನೂರಾರು ವಧುಗಳ ಸಾಮೂಹಿಕ ವಿವಾಹ: ಉತ್ತರಪ್ರದೇಶದ ಮ್ಯಾರೇಜ್‌ ಸ್ಕೀಂ ಹಗರಣ ಬಯಲು

ವರರಿಲ್ಲದೆ ನೂರಾರು ವಧುಗಳ ಸಾಮೂಹಿಕ ವಿವಾಹ: ಉತ್ತರಪ್ರದೇಶದ ಮ್ಯಾರೇಜ್‌ ಸ್ಕೀಂ ಹಗರಣ ಬಯಲು

- Advertisement -
- Advertisement -

ಯೋಗಿ ಆದಿತ್ಯನಾಥ್‌ ನೇತೃತ್ವದ ಬಿಜೆಪಿ ಸರಕಾರವಿರುವ ಉತ್ತರಪ್ರದೇಶದಲ್ಲಿ ವಿವಾಹಕ್ಕೆ ಸಂಬಂಧಿಸಿದ  ಬಹುದೊಡ್ಡ ಹಗರಣವೊಂದು ಬೆಳಕಿಗೆ ಬಂದಿದ್ದು, ನೂರಾರು ವಧುಗಳು ವರರಿಲ್ಲದೆ ವಿವಾಹವಾಗಿದ್ದಾರೆ. ‘ಸಿಎಂ ಗ್ರೂಪ್‌ ಮ್ಯಾರೇಜ್‌ ಸ್ಕೀಂ’ ಯೋಜನೆಯಡಿ ಕೋಟ್ಯಾಂತರ ರೂ. ಹಗರಣ ನಡೆದಿರುವ ಆರೋಪ ಕೇಳಿ ಬಂದಿದೆ.

ಉತ್ತರಪ್ರದೇಶದ ಬಲಿಯಾ ಪ್ರದೇಶದಲ್ಲಿ ಸುಮಾರು 568 ವಧುಗಳು ಹಣಕ್ಕಾಗಿ ವರರಿಲ್ಲದೆ ವಿವಾಹವಾಗಿದ್ದಾರೆ. ವಿವಾಹ ಸಮಾರಂಭವು ಜನವರಿ 25ರಂದು ನಡೆದಿದೆ ಮತ್ತು ವಧುವಿನಂತೆ ನಟಿಸಿದ ಯುವತಿಯರು ತಮ್ಮ ಭಾವಿ ಪತಿಗಳಿಲ್ಲದೆ ಏಕಾಂಗಿಯಾಗಿ ಮದುವೆಯ ವಿಧಿಗಳನ್ನು ನೆರವೇರಿಸಿದ್ದಾರೆ. ಈ ಕುರಿತ ಅಚ್ಚರಿಯ ವಿಡಿಯೋಗಳು ಕೂಡ ವೈರಲ್‌ ಆಗಿದೆ.

ಮುಖ್ಯಮಂತ್ರಿಗಳ ವಿವಾಹ ಯೋಜನೆಯಡಿ ನೀಡುವ ಹಣವನ್ನು ಕಬಳಿಸಲು ಸ್ಥಳೀಯ ಆಡಳಿತವು ಈ ನಕಲಿ ವಿವಾಹ ಕಾರ್ಯಕ್ರಮವನ್ನು ಏರ್ಪಡಿಸಿದೆ. ಈ ಯೋಜನೆಯಡಿಯಲ್ಲಿ ಸರಕಾರವು ತನ್ನ ಮದುವೆಯ ಸಮಯದಲ್ಲಿ ಪ್ರತಿಯೊಬ್ಬ ಬಡ ವಧುವಿಗೆ 51,000 ರೂ.ನೀಡುತ್ತಾರೆ. ಆದರೆ ವಿವಾಹ ಕಾರ್ಯಕ್ರಮದ ಸಂಘಟಕರು ಯಾದೃಚ್ಛಿಕವಾಗಿ ಹುಡುಗಿಯರನ್ನು ಒಟ್ಟುಗೂಡಿಸಿ ಹಣಕ್ಕಾಗಿ ವಧುವಿನಂತೆ ಪೋಸ್ ನೀಡುವಂತೆ ಆಮಿಷ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನು ಮೊದಲು ಪತ್ರಕರ್ತ ಸಚಿನ್ ಗುಪ್ತಾ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಜನವರಿ 25ರಂದು ಮುಖ್ಯಮಂತ್ರಿಗಳ ಗುಂಪು ವಿವಾಹ ಯೋಜನೆಯಡಿ 568 ಜೋಡಿಗಳು ವಿವಾಹವಾದರು. ವರನಿಲ್ಲದೇ ಹೆಚ್ಚಿನ ಸಂಖ್ಯೆಯಲ್ಲಿ ವಧುಗಳಿಗೆ ಮಾಲೆ ಹಾಕಲಾಯಿತು. ಅನೇಕರು ಹಲವು ವರ್ಷಗಳ ಹಿಂದೆಯೇ ಮದುವೆಯಾಗಿದ್ದರು. ವಿವಾಹ ಕಾರ್ಯಕ್ರಮದಲ್ಲಿ ವಧು-ವರರಾಗಿ ಕಾಣಿಸಿಕೊಂಡವರಲ್ಲಿ ಅನೇಕರು ಸಹೋದರ-ಸಹೋದರಿಯರಾಗಿದ್ದರು. ದಂಪತಿಗಳಂತೆ ಪೋಸ್ ಕೊಡಲು ಮತ್ತು ಛಾಯಾಚಿತ್ರಗಳನ್ನು ತೆಗೆದುಕೊಳ್ಳಲು ಮತ್ತು ಸರ್ಕಾರದ ಹಣವನ್ನು ಹಂಚಿಕೊಳ್ಳಲು ಈ ಎಲ್ಲಾ ನಾಟಕವನ್ನು ಮಾಡಲಾಗಿದೆ ಎಂದು ಪೋಸ್ಟ್‌ನಲ್ಲಿ ಆರೋಪಿಸಿದ್ದರು.

ವೀಡಿಯೊದಲ್ಲಿ ವಧುವಿನ ಉಡುಪಿನಲ್ಲಿರುವ ಯುವತಿಯರು ಧ್ವನಿವರ್ಧಕದಲ್ಲಿ ನೀಡಲಾದ ಸಲಹೆಗಳ ಪ್ರಕಾರ, ತಮ್ಮನ್ನು ತಾವು ಹಾರ ಹಾಕಿಕೊಳ್ಳುತ್ತಿರುವುದು ಕಂಡುಬರುತ್ತದೆ. ಕೆಲವು ಪುರುಷರು ಕೂಡ ಹೂಮಾಲೆಗಳನ್ನು ಹಾಕಿಕೊಂಡಿದ್ದರು. ಆದರೆ ಅವರು ನಿಜವಾಗಿಯೂ ಮದುವೆಯಾಗಲಿಲ್ಲ, ಬರೀ ಡ್ರಾಮ ಮಾಡಿದ್ದರು ಎನ್ನುವುದು ಬಯಲಾಗಿದೆ.

ವಂಚನೆ ಆರೋಪದ ಮೇಲೆ ಎಫ್‌ಐಆರ್‌:

ಮುಖ್ಯಮಂತ್ರಿಗಳ ಸಾಮೂಹಿಕ ವಿವಾಹ ಯೋಜನೆಯಡಿಯಲ್ಲಿ ವಂಚನೆಯ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಮಾಜ ಕಲ್ಯಾಣ ಇಲಾಖೆಯ ಸಹಾಯಕ ಅಭಿವೃದ್ಧಿ ಅಧಿಕಾರಿ ಮತ್ತು ಎಂಟು ಫಲಾನುಭವಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಬುಧವಾರ ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಜನವರಿ 25 ರಂದು ಮಣಿಯಾರ್ ಇಂಟರ್ ಕಾಲೇಜಿನಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಈಗಾಗಲೇ ಮದುವೆಯಾಗಿದ್ದ ಅನೇಕರು ಮತ್ತೆ ಮದುವೆಯಾಗಿದ್ದಾರೆ. ಮುಖ್ಯಮಂತ್ರಿಗಳ ಸಾಮೂಹಿಕ ವಿವಾಹ ಯೋಜನೆಯು ಸಮಾಜ ಕಲ್ಯಾಣ ಯೋಜನೆಯಾಗಿದ್ದು, ಆರ್ಥಿಕವಾಗಿ ಹಿಂದುಳಿದ ಕುಟುಂಬದ ಯುವಕ-ಯುವತಿಯರ ವಿವಾಹಕ್ಕೆ ಅನುಕೂಲ ಕಲ್ಪಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಸಹಾಯಕ ಅಭಿವೃದ್ಧಿ ಅಧಿಕಾರಿ ಸುನಿಲ್ ಕುಮಾರ್ ಯಾದವ್ ಮತ್ತು ಅರ್ಚನಾ, ರಂಜನಾ ಯಾದವ್, ಸುಮನ್ ಚೌಹಾಣ್, ಪ್ರಿಯಾಂಕಾ, ಸೋನಂ, ಪೂಜಾ, ಸಂಜು ಮತ್ತು ರಮಿತಾ ಸೇರಿದಂತೆ ಎಂಟು ಫಲಾನುಭವಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮನಿಯಾರ್ ಎಸ್‌ಎಚ್‌ಒ ಮಂತೋಷ್ ಸಿಂಗ್ ತಿಳಿಸಿದ್ದಾರೆ.

ಈ ಬಗ್ಗೆ ದೂರು ದಾಖಲಿಸಿರುವ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ದೀಪಕ್ ಶ್ರೀವಾಸ್ತವ ಮಾತನಾಡಿ, ಈ ಯೋಜನೆಯಡಿ ಸಾಮೂಹಿಕ ವಿವಾಹ ನಡೆದ ಬಳಿಕ ಈಗಾಗಲೇ ವಿವಾಹವಾಗಿದ್ದ ವಧು-ವರರು ಮತ್ತೆ ವಿವಾಹವಾಗುತ್ತಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಜನವರಿ 29ರಂದು ಮುಖ್ಯ ಅಭಿವೃದ್ಧಿ ಅಧಿಕಾರಿ ನೇತೃತ್ವದಲ್ಲಿ ತನಿಖಾ ಸಮಿತಿಯನ್ನು ರಚಿಸಲಾಗಿತ್ತು. ಅನರ್ಹ ಅರ್ಜಿದಾರರು ನೈಜ ಸಂಗತಿಗಳನ್ನು ಮರೆಮಾಚುವ ಮೂಲಕ ಯೋಜನೆಯಡಿ ಲಾಭ ಪಡೆಯಲು ಅಕ್ರಮವಾಗಿ ಅರ್ಜಿ ಸಲ್ಲಿಸಿರುವುದು ತನಿಖೆಯ ವೇಳೆ ಪತ್ತೆಯಾಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಜಿಲ್ಲಾಧಿಕಾರಿ ರವೀಂದ್ರಕುಮಾರ್ ಮಾತನಾಡಿ, ಸಾಮೂಹಿಕ ವಿವಾಹ ಕಾರ್ಯಕ್ರಮದ ಫಲಾನುಭವಿಗಳಿಗೆ ಇನ್ನೂ ಹಣ ವಿತರಣೆಯಾಗಿಲ್ಲ. ಇದುವರೆಗೆ ಸಹಾಯಕ ಅಭಿವೃದ್ಧಿ ಅಧಿಕಾರಿ ಹಾಗೂ ಎಂಟು ಮಂದಿ ಫಲಾನುಭವಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆಯಲ್ಲಿ ತಪ್ಪಿತಸ್ಥರೆಂದು ತಿಳಿದು ಬಂದಿದೆ. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಆಡಳಿತಾರೂಢ ಬಿಜೆಯ ಭ್ರಷ್ಟಾಚಾರದ ಬಗ್ಗೆ ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ. ಅವರು ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದು, ಯುವತಿಯರ ಜೀವನದ ಮೇಲೆ ಭಾವನಾತ್ಮಕ ಪ್ರಭಾವದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

‘ಸಿಎಂ ಗ್ರೂಪ್‌ ಮ್ಯಾರೇಜ್‌ ಸ್ಕೀಂ’ ಯೋಜನೆಯಡಿಯಲ್ಲಿ 51,000ರೂ.ಗಳನ್ನು ಪಾವತಿಸಲಾಗುತ್ತದೆ. ಇದರಲ್ಲಿ 35,000ರೂ.ವಧುವಿಗೆ, 10,000ರೂ.ವೈವಾಹಿಕ ಸಾಮಗ್ರಿಗಳನ್ನು ಖರೀದಿಸಲು ಮತ್ತು 6,000ರೂ. ಕಾರ್ಯಕ್ರಮಕ್ಕೆ ವೆಚ್ಚವಾಗಿ ಪಾವತಿಸಲಾಗುತ್ತದೆ ಎಂದು ಸರ್ಕಾರದ ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದೆ.

ಇದನ್ನು ಓದಿ: ಪನ್ನುನ್ ಹತ್ಯೆ ಸಂಚು ಆರೋಪ: ಭಾರತದ ಜೊತೆಗಿನ 3 ಬಿಲಿಯನ್ ಡಾಲರ್‌ ವೆಚ್ಚದ ಡ್ರೋನ್‌ ಮಾರಾಟ ಒಪ್ಪಂದವನ್ನು ತಡೆ ಹಿಡಿದ ಅಮೆರಿಕ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...