Homeಮುಖಪುಟವರರಿಲ್ಲದೆ ನೂರಾರು ವಧುಗಳ ಸಾಮೂಹಿಕ ವಿವಾಹ: ಉತ್ತರಪ್ರದೇಶದ ಮ್ಯಾರೇಜ್‌ ಸ್ಕೀಂ ಹಗರಣ ಬಯಲು

ವರರಿಲ್ಲದೆ ನೂರಾರು ವಧುಗಳ ಸಾಮೂಹಿಕ ವಿವಾಹ: ಉತ್ತರಪ್ರದೇಶದ ಮ್ಯಾರೇಜ್‌ ಸ್ಕೀಂ ಹಗರಣ ಬಯಲು

- Advertisement -
- Advertisement -

ಯೋಗಿ ಆದಿತ್ಯನಾಥ್‌ ನೇತೃತ್ವದ ಬಿಜೆಪಿ ಸರಕಾರವಿರುವ ಉತ್ತರಪ್ರದೇಶದಲ್ಲಿ ವಿವಾಹಕ್ಕೆ ಸಂಬಂಧಿಸಿದ  ಬಹುದೊಡ್ಡ ಹಗರಣವೊಂದು ಬೆಳಕಿಗೆ ಬಂದಿದ್ದು, ನೂರಾರು ವಧುಗಳು ವರರಿಲ್ಲದೆ ವಿವಾಹವಾಗಿದ್ದಾರೆ. ‘ಸಿಎಂ ಗ್ರೂಪ್‌ ಮ್ಯಾರೇಜ್‌ ಸ್ಕೀಂ’ ಯೋಜನೆಯಡಿ ಕೋಟ್ಯಾಂತರ ರೂ. ಹಗರಣ ನಡೆದಿರುವ ಆರೋಪ ಕೇಳಿ ಬಂದಿದೆ.

ಉತ್ತರಪ್ರದೇಶದ ಬಲಿಯಾ ಪ್ರದೇಶದಲ್ಲಿ ಸುಮಾರು 568 ವಧುಗಳು ಹಣಕ್ಕಾಗಿ ವರರಿಲ್ಲದೆ ವಿವಾಹವಾಗಿದ್ದಾರೆ. ವಿವಾಹ ಸಮಾರಂಭವು ಜನವರಿ 25ರಂದು ನಡೆದಿದೆ ಮತ್ತು ವಧುವಿನಂತೆ ನಟಿಸಿದ ಯುವತಿಯರು ತಮ್ಮ ಭಾವಿ ಪತಿಗಳಿಲ್ಲದೆ ಏಕಾಂಗಿಯಾಗಿ ಮದುವೆಯ ವಿಧಿಗಳನ್ನು ನೆರವೇರಿಸಿದ್ದಾರೆ. ಈ ಕುರಿತ ಅಚ್ಚರಿಯ ವಿಡಿಯೋಗಳು ಕೂಡ ವೈರಲ್‌ ಆಗಿದೆ.

ಮುಖ್ಯಮಂತ್ರಿಗಳ ವಿವಾಹ ಯೋಜನೆಯಡಿ ನೀಡುವ ಹಣವನ್ನು ಕಬಳಿಸಲು ಸ್ಥಳೀಯ ಆಡಳಿತವು ಈ ನಕಲಿ ವಿವಾಹ ಕಾರ್ಯಕ್ರಮವನ್ನು ಏರ್ಪಡಿಸಿದೆ. ಈ ಯೋಜನೆಯಡಿಯಲ್ಲಿ ಸರಕಾರವು ತನ್ನ ಮದುವೆಯ ಸಮಯದಲ್ಲಿ ಪ್ರತಿಯೊಬ್ಬ ಬಡ ವಧುವಿಗೆ 51,000 ರೂ.ನೀಡುತ್ತಾರೆ. ಆದರೆ ವಿವಾಹ ಕಾರ್ಯಕ್ರಮದ ಸಂಘಟಕರು ಯಾದೃಚ್ಛಿಕವಾಗಿ ಹುಡುಗಿಯರನ್ನು ಒಟ್ಟುಗೂಡಿಸಿ ಹಣಕ್ಕಾಗಿ ವಧುವಿನಂತೆ ಪೋಸ್ ನೀಡುವಂತೆ ಆಮಿಷ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನು ಮೊದಲು ಪತ್ರಕರ್ತ ಸಚಿನ್ ಗುಪ್ತಾ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಜನವರಿ 25ರಂದು ಮುಖ್ಯಮಂತ್ರಿಗಳ ಗುಂಪು ವಿವಾಹ ಯೋಜನೆಯಡಿ 568 ಜೋಡಿಗಳು ವಿವಾಹವಾದರು. ವರನಿಲ್ಲದೇ ಹೆಚ್ಚಿನ ಸಂಖ್ಯೆಯಲ್ಲಿ ವಧುಗಳಿಗೆ ಮಾಲೆ ಹಾಕಲಾಯಿತು. ಅನೇಕರು ಹಲವು ವರ್ಷಗಳ ಹಿಂದೆಯೇ ಮದುವೆಯಾಗಿದ್ದರು. ವಿವಾಹ ಕಾರ್ಯಕ್ರಮದಲ್ಲಿ ವಧು-ವರರಾಗಿ ಕಾಣಿಸಿಕೊಂಡವರಲ್ಲಿ ಅನೇಕರು ಸಹೋದರ-ಸಹೋದರಿಯರಾಗಿದ್ದರು. ದಂಪತಿಗಳಂತೆ ಪೋಸ್ ಕೊಡಲು ಮತ್ತು ಛಾಯಾಚಿತ್ರಗಳನ್ನು ತೆಗೆದುಕೊಳ್ಳಲು ಮತ್ತು ಸರ್ಕಾರದ ಹಣವನ್ನು ಹಂಚಿಕೊಳ್ಳಲು ಈ ಎಲ್ಲಾ ನಾಟಕವನ್ನು ಮಾಡಲಾಗಿದೆ ಎಂದು ಪೋಸ್ಟ್‌ನಲ್ಲಿ ಆರೋಪಿಸಿದ್ದರು.

ವೀಡಿಯೊದಲ್ಲಿ ವಧುವಿನ ಉಡುಪಿನಲ್ಲಿರುವ ಯುವತಿಯರು ಧ್ವನಿವರ್ಧಕದಲ್ಲಿ ನೀಡಲಾದ ಸಲಹೆಗಳ ಪ್ರಕಾರ, ತಮ್ಮನ್ನು ತಾವು ಹಾರ ಹಾಕಿಕೊಳ್ಳುತ್ತಿರುವುದು ಕಂಡುಬರುತ್ತದೆ. ಕೆಲವು ಪುರುಷರು ಕೂಡ ಹೂಮಾಲೆಗಳನ್ನು ಹಾಕಿಕೊಂಡಿದ್ದರು. ಆದರೆ ಅವರು ನಿಜವಾಗಿಯೂ ಮದುವೆಯಾಗಲಿಲ್ಲ, ಬರೀ ಡ್ರಾಮ ಮಾಡಿದ್ದರು ಎನ್ನುವುದು ಬಯಲಾಗಿದೆ.

ವಂಚನೆ ಆರೋಪದ ಮೇಲೆ ಎಫ್‌ಐಆರ್‌:

ಮುಖ್ಯಮಂತ್ರಿಗಳ ಸಾಮೂಹಿಕ ವಿವಾಹ ಯೋಜನೆಯಡಿಯಲ್ಲಿ ವಂಚನೆಯ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಮಾಜ ಕಲ್ಯಾಣ ಇಲಾಖೆಯ ಸಹಾಯಕ ಅಭಿವೃದ್ಧಿ ಅಧಿಕಾರಿ ಮತ್ತು ಎಂಟು ಫಲಾನುಭವಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಬುಧವಾರ ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಜನವರಿ 25 ರಂದು ಮಣಿಯಾರ್ ಇಂಟರ್ ಕಾಲೇಜಿನಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಈಗಾಗಲೇ ಮದುವೆಯಾಗಿದ್ದ ಅನೇಕರು ಮತ್ತೆ ಮದುವೆಯಾಗಿದ್ದಾರೆ. ಮುಖ್ಯಮಂತ್ರಿಗಳ ಸಾಮೂಹಿಕ ವಿವಾಹ ಯೋಜನೆಯು ಸಮಾಜ ಕಲ್ಯಾಣ ಯೋಜನೆಯಾಗಿದ್ದು, ಆರ್ಥಿಕವಾಗಿ ಹಿಂದುಳಿದ ಕುಟುಂಬದ ಯುವಕ-ಯುವತಿಯರ ವಿವಾಹಕ್ಕೆ ಅನುಕೂಲ ಕಲ್ಪಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಸಹಾಯಕ ಅಭಿವೃದ್ಧಿ ಅಧಿಕಾರಿ ಸುನಿಲ್ ಕುಮಾರ್ ಯಾದವ್ ಮತ್ತು ಅರ್ಚನಾ, ರಂಜನಾ ಯಾದವ್, ಸುಮನ್ ಚೌಹಾಣ್, ಪ್ರಿಯಾಂಕಾ, ಸೋನಂ, ಪೂಜಾ, ಸಂಜು ಮತ್ತು ರಮಿತಾ ಸೇರಿದಂತೆ ಎಂಟು ಫಲಾನುಭವಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮನಿಯಾರ್ ಎಸ್‌ಎಚ್‌ಒ ಮಂತೋಷ್ ಸಿಂಗ್ ತಿಳಿಸಿದ್ದಾರೆ.

ಈ ಬಗ್ಗೆ ದೂರು ದಾಖಲಿಸಿರುವ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ದೀಪಕ್ ಶ್ರೀವಾಸ್ತವ ಮಾತನಾಡಿ, ಈ ಯೋಜನೆಯಡಿ ಸಾಮೂಹಿಕ ವಿವಾಹ ನಡೆದ ಬಳಿಕ ಈಗಾಗಲೇ ವಿವಾಹವಾಗಿದ್ದ ವಧು-ವರರು ಮತ್ತೆ ವಿವಾಹವಾಗುತ್ತಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಜನವರಿ 29ರಂದು ಮುಖ್ಯ ಅಭಿವೃದ್ಧಿ ಅಧಿಕಾರಿ ನೇತೃತ್ವದಲ್ಲಿ ತನಿಖಾ ಸಮಿತಿಯನ್ನು ರಚಿಸಲಾಗಿತ್ತು. ಅನರ್ಹ ಅರ್ಜಿದಾರರು ನೈಜ ಸಂಗತಿಗಳನ್ನು ಮರೆಮಾಚುವ ಮೂಲಕ ಯೋಜನೆಯಡಿ ಲಾಭ ಪಡೆಯಲು ಅಕ್ರಮವಾಗಿ ಅರ್ಜಿ ಸಲ್ಲಿಸಿರುವುದು ತನಿಖೆಯ ವೇಳೆ ಪತ್ತೆಯಾಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಜಿಲ್ಲಾಧಿಕಾರಿ ರವೀಂದ್ರಕುಮಾರ್ ಮಾತನಾಡಿ, ಸಾಮೂಹಿಕ ವಿವಾಹ ಕಾರ್ಯಕ್ರಮದ ಫಲಾನುಭವಿಗಳಿಗೆ ಇನ್ನೂ ಹಣ ವಿತರಣೆಯಾಗಿಲ್ಲ. ಇದುವರೆಗೆ ಸಹಾಯಕ ಅಭಿವೃದ್ಧಿ ಅಧಿಕಾರಿ ಹಾಗೂ ಎಂಟು ಮಂದಿ ಫಲಾನುಭವಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆಯಲ್ಲಿ ತಪ್ಪಿತಸ್ಥರೆಂದು ತಿಳಿದು ಬಂದಿದೆ. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಆಡಳಿತಾರೂಢ ಬಿಜೆಯ ಭ್ರಷ್ಟಾಚಾರದ ಬಗ್ಗೆ ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ. ಅವರು ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದು, ಯುವತಿಯರ ಜೀವನದ ಮೇಲೆ ಭಾವನಾತ್ಮಕ ಪ್ರಭಾವದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

‘ಸಿಎಂ ಗ್ರೂಪ್‌ ಮ್ಯಾರೇಜ್‌ ಸ್ಕೀಂ’ ಯೋಜನೆಯಡಿಯಲ್ಲಿ 51,000ರೂ.ಗಳನ್ನು ಪಾವತಿಸಲಾಗುತ್ತದೆ. ಇದರಲ್ಲಿ 35,000ರೂ.ವಧುವಿಗೆ, 10,000ರೂ.ವೈವಾಹಿಕ ಸಾಮಗ್ರಿಗಳನ್ನು ಖರೀದಿಸಲು ಮತ್ತು 6,000ರೂ. ಕಾರ್ಯಕ್ರಮಕ್ಕೆ ವೆಚ್ಚವಾಗಿ ಪಾವತಿಸಲಾಗುತ್ತದೆ ಎಂದು ಸರ್ಕಾರದ ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದೆ.

ಇದನ್ನು ಓದಿ: ಪನ್ನುನ್ ಹತ್ಯೆ ಸಂಚು ಆರೋಪ: ಭಾರತದ ಜೊತೆಗಿನ 3 ಬಿಲಿಯನ್ ಡಾಲರ್‌ ವೆಚ್ಚದ ಡ್ರೋನ್‌ ಮಾರಾಟ ಒಪ್ಪಂದವನ್ನು ತಡೆ ಹಿಡಿದ ಅಮೆರಿಕ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...