Homeಮುಖಪುಟವರರಿಲ್ಲದೆ ನೂರಾರು ವಧುಗಳ ಸಾಮೂಹಿಕ ವಿವಾಹ: ಉತ್ತರಪ್ರದೇಶದ ಮ್ಯಾರೇಜ್‌ ಸ್ಕೀಂ ಹಗರಣ ಬಯಲು

ವರರಿಲ್ಲದೆ ನೂರಾರು ವಧುಗಳ ಸಾಮೂಹಿಕ ವಿವಾಹ: ಉತ್ತರಪ್ರದೇಶದ ಮ್ಯಾರೇಜ್‌ ಸ್ಕೀಂ ಹಗರಣ ಬಯಲು

- Advertisement -
- Advertisement -

ಯೋಗಿ ಆದಿತ್ಯನಾಥ್‌ ನೇತೃತ್ವದ ಬಿಜೆಪಿ ಸರಕಾರವಿರುವ ಉತ್ತರಪ್ರದೇಶದಲ್ಲಿ ವಿವಾಹಕ್ಕೆ ಸಂಬಂಧಿಸಿದ  ಬಹುದೊಡ್ಡ ಹಗರಣವೊಂದು ಬೆಳಕಿಗೆ ಬಂದಿದ್ದು, ನೂರಾರು ವಧುಗಳು ವರರಿಲ್ಲದೆ ವಿವಾಹವಾಗಿದ್ದಾರೆ. ‘ಸಿಎಂ ಗ್ರೂಪ್‌ ಮ್ಯಾರೇಜ್‌ ಸ್ಕೀಂ’ ಯೋಜನೆಯಡಿ ಕೋಟ್ಯಾಂತರ ರೂ. ಹಗರಣ ನಡೆದಿರುವ ಆರೋಪ ಕೇಳಿ ಬಂದಿದೆ.

ಉತ್ತರಪ್ರದೇಶದ ಬಲಿಯಾ ಪ್ರದೇಶದಲ್ಲಿ ಸುಮಾರು 568 ವಧುಗಳು ಹಣಕ್ಕಾಗಿ ವರರಿಲ್ಲದೆ ವಿವಾಹವಾಗಿದ್ದಾರೆ. ವಿವಾಹ ಸಮಾರಂಭವು ಜನವರಿ 25ರಂದು ನಡೆದಿದೆ ಮತ್ತು ವಧುವಿನಂತೆ ನಟಿಸಿದ ಯುವತಿಯರು ತಮ್ಮ ಭಾವಿ ಪತಿಗಳಿಲ್ಲದೆ ಏಕಾಂಗಿಯಾಗಿ ಮದುವೆಯ ವಿಧಿಗಳನ್ನು ನೆರವೇರಿಸಿದ್ದಾರೆ. ಈ ಕುರಿತ ಅಚ್ಚರಿಯ ವಿಡಿಯೋಗಳು ಕೂಡ ವೈರಲ್‌ ಆಗಿದೆ.

ಮುಖ್ಯಮಂತ್ರಿಗಳ ವಿವಾಹ ಯೋಜನೆಯಡಿ ನೀಡುವ ಹಣವನ್ನು ಕಬಳಿಸಲು ಸ್ಥಳೀಯ ಆಡಳಿತವು ಈ ನಕಲಿ ವಿವಾಹ ಕಾರ್ಯಕ್ರಮವನ್ನು ಏರ್ಪಡಿಸಿದೆ. ಈ ಯೋಜನೆಯಡಿಯಲ್ಲಿ ಸರಕಾರವು ತನ್ನ ಮದುವೆಯ ಸಮಯದಲ್ಲಿ ಪ್ರತಿಯೊಬ್ಬ ಬಡ ವಧುವಿಗೆ 51,000 ರೂ.ನೀಡುತ್ತಾರೆ. ಆದರೆ ವಿವಾಹ ಕಾರ್ಯಕ್ರಮದ ಸಂಘಟಕರು ಯಾದೃಚ್ಛಿಕವಾಗಿ ಹುಡುಗಿಯರನ್ನು ಒಟ್ಟುಗೂಡಿಸಿ ಹಣಕ್ಕಾಗಿ ವಧುವಿನಂತೆ ಪೋಸ್ ನೀಡುವಂತೆ ಆಮಿಷ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನು ಮೊದಲು ಪತ್ರಕರ್ತ ಸಚಿನ್ ಗುಪ್ತಾ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಜನವರಿ 25ರಂದು ಮುಖ್ಯಮಂತ್ರಿಗಳ ಗುಂಪು ವಿವಾಹ ಯೋಜನೆಯಡಿ 568 ಜೋಡಿಗಳು ವಿವಾಹವಾದರು. ವರನಿಲ್ಲದೇ ಹೆಚ್ಚಿನ ಸಂಖ್ಯೆಯಲ್ಲಿ ವಧುಗಳಿಗೆ ಮಾಲೆ ಹಾಕಲಾಯಿತು. ಅನೇಕರು ಹಲವು ವರ್ಷಗಳ ಹಿಂದೆಯೇ ಮದುವೆಯಾಗಿದ್ದರು. ವಿವಾಹ ಕಾರ್ಯಕ್ರಮದಲ್ಲಿ ವಧು-ವರರಾಗಿ ಕಾಣಿಸಿಕೊಂಡವರಲ್ಲಿ ಅನೇಕರು ಸಹೋದರ-ಸಹೋದರಿಯರಾಗಿದ್ದರು. ದಂಪತಿಗಳಂತೆ ಪೋಸ್ ಕೊಡಲು ಮತ್ತು ಛಾಯಾಚಿತ್ರಗಳನ್ನು ತೆಗೆದುಕೊಳ್ಳಲು ಮತ್ತು ಸರ್ಕಾರದ ಹಣವನ್ನು ಹಂಚಿಕೊಳ್ಳಲು ಈ ಎಲ್ಲಾ ನಾಟಕವನ್ನು ಮಾಡಲಾಗಿದೆ ಎಂದು ಪೋಸ್ಟ್‌ನಲ್ಲಿ ಆರೋಪಿಸಿದ್ದರು.

ವೀಡಿಯೊದಲ್ಲಿ ವಧುವಿನ ಉಡುಪಿನಲ್ಲಿರುವ ಯುವತಿಯರು ಧ್ವನಿವರ್ಧಕದಲ್ಲಿ ನೀಡಲಾದ ಸಲಹೆಗಳ ಪ್ರಕಾರ, ತಮ್ಮನ್ನು ತಾವು ಹಾರ ಹಾಕಿಕೊಳ್ಳುತ್ತಿರುವುದು ಕಂಡುಬರುತ್ತದೆ. ಕೆಲವು ಪುರುಷರು ಕೂಡ ಹೂಮಾಲೆಗಳನ್ನು ಹಾಕಿಕೊಂಡಿದ್ದರು. ಆದರೆ ಅವರು ನಿಜವಾಗಿಯೂ ಮದುವೆಯಾಗಲಿಲ್ಲ, ಬರೀ ಡ್ರಾಮ ಮಾಡಿದ್ದರು ಎನ್ನುವುದು ಬಯಲಾಗಿದೆ.

ವಂಚನೆ ಆರೋಪದ ಮೇಲೆ ಎಫ್‌ಐಆರ್‌:

ಮುಖ್ಯಮಂತ್ರಿಗಳ ಸಾಮೂಹಿಕ ವಿವಾಹ ಯೋಜನೆಯಡಿಯಲ್ಲಿ ವಂಚನೆಯ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಮಾಜ ಕಲ್ಯಾಣ ಇಲಾಖೆಯ ಸಹಾಯಕ ಅಭಿವೃದ್ಧಿ ಅಧಿಕಾರಿ ಮತ್ತು ಎಂಟು ಫಲಾನುಭವಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಬುಧವಾರ ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಜನವರಿ 25 ರಂದು ಮಣಿಯಾರ್ ಇಂಟರ್ ಕಾಲೇಜಿನಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಈಗಾಗಲೇ ಮದುವೆಯಾಗಿದ್ದ ಅನೇಕರು ಮತ್ತೆ ಮದುವೆಯಾಗಿದ್ದಾರೆ. ಮುಖ್ಯಮಂತ್ರಿಗಳ ಸಾಮೂಹಿಕ ವಿವಾಹ ಯೋಜನೆಯು ಸಮಾಜ ಕಲ್ಯಾಣ ಯೋಜನೆಯಾಗಿದ್ದು, ಆರ್ಥಿಕವಾಗಿ ಹಿಂದುಳಿದ ಕುಟುಂಬದ ಯುವಕ-ಯುವತಿಯರ ವಿವಾಹಕ್ಕೆ ಅನುಕೂಲ ಕಲ್ಪಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಸಹಾಯಕ ಅಭಿವೃದ್ಧಿ ಅಧಿಕಾರಿ ಸುನಿಲ್ ಕುಮಾರ್ ಯಾದವ್ ಮತ್ತು ಅರ್ಚನಾ, ರಂಜನಾ ಯಾದವ್, ಸುಮನ್ ಚೌಹಾಣ್, ಪ್ರಿಯಾಂಕಾ, ಸೋನಂ, ಪೂಜಾ, ಸಂಜು ಮತ್ತು ರಮಿತಾ ಸೇರಿದಂತೆ ಎಂಟು ಫಲಾನುಭವಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮನಿಯಾರ್ ಎಸ್‌ಎಚ್‌ಒ ಮಂತೋಷ್ ಸಿಂಗ್ ತಿಳಿಸಿದ್ದಾರೆ.

ಈ ಬಗ್ಗೆ ದೂರು ದಾಖಲಿಸಿರುವ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ದೀಪಕ್ ಶ್ರೀವಾಸ್ತವ ಮಾತನಾಡಿ, ಈ ಯೋಜನೆಯಡಿ ಸಾಮೂಹಿಕ ವಿವಾಹ ನಡೆದ ಬಳಿಕ ಈಗಾಗಲೇ ವಿವಾಹವಾಗಿದ್ದ ವಧು-ವರರು ಮತ್ತೆ ವಿವಾಹವಾಗುತ್ತಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಜನವರಿ 29ರಂದು ಮುಖ್ಯ ಅಭಿವೃದ್ಧಿ ಅಧಿಕಾರಿ ನೇತೃತ್ವದಲ್ಲಿ ತನಿಖಾ ಸಮಿತಿಯನ್ನು ರಚಿಸಲಾಗಿತ್ತು. ಅನರ್ಹ ಅರ್ಜಿದಾರರು ನೈಜ ಸಂಗತಿಗಳನ್ನು ಮರೆಮಾಚುವ ಮೂಲಕ ಯೋಜನೆಯಡಿ ಲಾಭ ಪಡೆಯಲು ಅಕ್ರಮವಾಗಿ ಅರ್ಜಿ ಸಲ್ಲಿಸಿರುವುದು ತನಿಖೆಯ ವೇಳೆ ಪತ್ತೆಯಾಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಜಿಲ್ಲಾಧಿಕಾರಿ ರವೀಂದ್ರಕುಮಾರ್ ಮಾತನಾಡಿ, ಸಾಮೂಹಿಕ ವಿವಾಹ ಕಾರ್ಯಕ್ರಮದ ಫಲಾನುಭವಿಗಳಿಗೆ ಇನ್ನೂ ಹಣ ವಿತರಣೆಯಾಗಿಲ್ಲ. ಇದುವರೆಗೆ ಸಹಾಯಕ ಅಭಿವೃದ್ಧಿ ಅಧಿಕಾರಿ ಹಾಗೂ ಎಂಟು ಮಂದಿ ಫಲಾನುಭವಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆಯಲ್ಲಿ ತಪ್ಪಿತಸ್ಥರೆಂದು ತಿಳಿದು ಬಂದಿದೆ. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಆಡಳಿತಾರೂಢ ಬಿಜೆಯ ಭ್ರಷ್ಟಾಚಾರದ ಬಗ್ಗೆ ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ. ಅವರು ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದು, ಯುವತಿಯರ ಜೀವನದ ಮೇಲೆ ಭಾವನಾತ್ಮಕ ಪ್ರಭಾವದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

‘ಸಿಎಂ ಗ್ರೂಪ್‌ ಮ್ಯಾರೇಜ್‌ ಸ್ಕೀಂ’ ಯೋಜನೆಯಡಿಯಲ್ಲಿ 51,000ರೂ.ಗಳನ್ನು ಪಾವತಿಸಲಾಗುತ್ತದೆ. ಇದರಲ್ಲಿ 35,000ರೂ.ವಧುವಿಗೆ, 10,000ರೂ.ವೈವಾಹಿಕ ಸಾಮಗ್ರಿಗಳನ್ನು ಖರೀದಿಸಲು ಮತ್ತು 6,000ರೂ. ಕಾರ್ಯಕ್ರಮಕ್ಕೆ ವೆಚ್ಚವಾಗಿ ಪಾವತಿಸಲಾಗುತ್ತದೆ ಎಂದು ಸರ್ಕಾರದ ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದೆ.

ಇದನ್ನು ಓದಿ: ಪನ್ನುನ್ ಹತ್ಯೆ ಸಂಚು ಆರೋಪ: ಭಾರತದ ಜೊತೆಗಿನ 3 ಬಿಲಿಯನ್ ಡಾಲರ್‌ ವೆಚ್ಚದ ಡ್ರೋನ್‌ ಮಾರಾಟ ಒಪ್ಪಂದವನ್ನು ತಡೆ ಹಿಡಿದ ಅಮೆರಿಕ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...