Homeಕರ್ನಾಟಕಕಾರ್ಮಿಕ ಕಾನೂನು ತಿದ್ದುಪಡಿಗೆ ವಿರೋಧ: ಸುಗ್ರೀವಾಜ್ಞೆ ಪ್ರತಿ ಸುಟ್ಟು ಪ್ರತಿಭಟನೆಗೆ ನಿರ್ಧಾರ

ಕಾರ್ಮಿಕ ಕಾನೂನು ತಿದ್ದುಪಡಿಗೆ ವಿರೋಧ: ಸುಗ್ರೀವಾಜ್ಞೆ ಪ್ರತಿ ಸುಟ್ಟು ಪ್ರತಿಭಟನೆಗೆ ನಿರ್ಧಾರ

ಈ ತಿದ್ದುಪಡಿಯು ರಾಜ್ಯದ 70% ಕ್ಕೂ ಹೆಚ್ಚು ಕಾರ್ಮಿಕರಿಗೆ ಕಾರ್ಮಿಕ ಕಾನೂನುಗಳಿಂದ ಒದಗಿಸಲಾದ ಸಾಮಾಜಿಕ ಮತ್ತು ಕಾನೂನು ರಕ್ಷಣೆಗಳನ್ನು ಕಿತ್ತುಕೊಳ್ಳಲಿವೆ ಎನ್ನಲಾಗಿದೆ.

- Advertisement -
- Advertisement -

ಕಾರ್ಮಿಕ ಕಾನೂನುಗಳಿಗೆ ಕರ್ನಾಟಕ ಸರ್ಕಾರ ತಂದಿರುವ ಇತ್ತೀಚಿನ ತಿದ್ದುಪಡಿಗಳನ್ನು ವಿರೋಧಿಸಿ ಜುಲೈ 29 ರಂದು ಕಾರ್ಮಿಕರು ಎಲ್ಲಾ ಕೈಗಾರಿಕಾ ಸಂಸ್ಥೆಗಳ ಮುಂದೆ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ.

ಈ ತಿದ್ದುಪಡಿಯು ರಾಜ್ಯದ 70% ಕ್ಕೂ ಹೆಚ್ಚು ಕಾರ್ಮಿಕರಿಗೆ ಕಾರ್ಮಿಕ ಕಾನೂನುಗಳಿಂದ ಸಿಕ್ಕಿರುವ ಸಾಮಾಜಿಕ ಮತ್ತು ಕಾನೂನು ರಕ್ಷಣೆಗಳನ್ನು ಕಿತ್ತುಕೊಳ್ಳಲಿದೆ ಎಂದು ಕಾರ್ಮಿಕ ಸಂಘಟನೆಗಳು ಅಭಿಪ್ರಾಯಪಟ್ಟಿವೆ. ಹಾಗಾಗಿ ಸಾಮೂಹಿಕ ಆಂದೋಲನವನ್ನು ಪ್ರಾರಂಭಿಸಲಿದ್ದು, ಜುಲೈ 29 ರಂದು ಸುಗ್ರೀವಾಜ್ಞೆ ಪ್ರತಿ ಸುಟ್ಟು ಪ್ರತಿಭಟನೆ ನಡೆಸಲು ತೀರ್ಮಾನಿಸಿವೆ.

ಸುಗ್ರೀವಾಜ್ಞೆಯ ಮೂಲಕ ತಂದ ತಿದ್ದುಪಡಿಗಳ ಪ್ರಕಾರ, ಕೈಗಾರಿಕಾ ವಿವಾದ ಕಾಯ್ದೆ 1947 ರ ಸೆಕ್ಷನ್ 25 ಕೆ ಅನ್ನು ತಿದ್ದುಪಡಿ ಮಾಡಲಾಗಿದ್ದು, ಕಾರ್ಖಾನೆ ಮುಚ್ಚಲು ಇದ್ದ ಮಿತಿಯನ್ನು 100 ರಿಂದ 300 ಕಾರ್ಮಿಕರಿಗೆ ಹೆಚ್ಚಿಸಲಾಗಿದೆ.

ಗುತ್ತಿಗೆ ಕಾರ್ಮಿಕ (ಕ್ರಮಬದ್ಧಗೊಳಿಸುವಿಕೆ ಮತ್ತು ನಿರ್ಮೂಲನೆ) ಕಾಯ್ದೆ-1970 ರ ಸೆಕ್ಷನ್ 1 ಅನ್ನು ತಿದ್ದುಪಡಿ ಮಾಡಿ, ಅಸ್ತಿತ್ವದಲ್ಲಿರುವ 20 ಗುತ್ತಿಗೆ ಕಾರ್ಮಿಕರನ್ನು ನೇಮಿಸಿಕೊಳ್ಳಲುಇ ಇದ್ದ ಕಡ್ಡಾಯ ಪರವಾನಗಿಯನ್ನು ಮುಂದೆ 50ಕ್ಕೂ ಹೆಚ್ಚು ಕಾರ್ಮಿಕರಿಗೆ ಮಿತಿಯನ್ನು ಹೆಚ್ಚಿಸಲಾಗಿದೆ.

ಕಾರ್ಖಾನೆಗಳ ಕಾಯ್ದೆ-1948 ರ ಸೆಕ್ಷನ್ 2 (ಎಮ್) ಅನ್ನು ಸಹ ತಿದ್ದುಪಡಿ ಮಾಡಲಾಗಿದ್ದು, ಕಾರ್ಖಾನೆಗಳ ತಪಾಸಣೆಯನ್ನು 10 ಕಾರ್ಮಿಕರಿಂದ (ವಿದ್ಯುತ್‌ನೊಂದಿಗೆ) ಮಿತಿಯನ್ನು 20 ಕ್ಕೆ ಹೆಚ್ಚಿಸಲಾಗಿದೆ. 20 ಕಾರ್ಮಿಕರು (ವಿದ್ಯುತ್ ಸಹಾಯವಿಲ್ಲದೆ) ಮಿತಿಯನ್ನು 40 ಕ್ಕೆ ಹೆಚ್ಚಿಸಲಾಗಿದೆ.

ಕಾರ್ಖಾನೆಗಳ ಕಾಯ್ದೆ-1948 ರ ಸೆಕ್ಷನ್ 65 (3) (iv) ಅನ್ನು ಸಹ ತಿದ್ದುಪಡಿ ಮಾಡಲಾಗಿದೆ, ಯಾವುದೇ ತ್ರೈಮಾಸಿಕದಲ್ಲಿ ಅಧಿಕ ಕೆಲಸ ( ಒವರ್ ಟೈಂ ಡ್ಯೂಟಿ) ಒಟ್ಟು ಗಂಟೆಗಳ  75 ಗಂಟೆಗಳಿಂದ 125 ಗಂಟೆಗಳಿಗೆ ಹೆಚ್ಚಿಸಲಾಗಿದೆ.

ಈ ಬದಲಾವಣೆಗಳು ಕಾರ್ಖಾನೆಗಳಿಗೆ ಕಾರ್ಮಿಕರನ್ನು ನಿರ್ದಾಕ್ಷಿಣ್ಯವಾಗಿ ನೇಮಿಸಿಕೊಳ್ಳಲು ಮತ್ತು ಕಿತ್ತೊಗೆಯಲು ಅನುವು ಮಾಡಿಕೊಡುತ್ತದೆ ಎಂದು ಸೆಂಟರ್‌ ಆಫ್‌ ಇಂಡಿಯನ್ ಟ್ರೇಡ್‌ ಯುನಿಯನ್ (ಸಿಐಟಿಯು) ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಹೇಳಿದ್ದಾರೆ.

“ಜುಲೈ 29 ರಂದು ಎಲ್ಲಾ ಕಾರ್ಖಾನೆಗಳ ಮುಂದೆ ಸುಗ್ರೀವಾಜ್ಞೆಯ ಪ್ರತಿಗಳನ್ನು ಸುಡುವಂತೆ ನಾವು ಕರೆ ನೀಡಿದ್ದೇವೆ. ಇದರ ನಂತರ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ನಮ್ಮ ವಿರೋಧವನ್ನು ಪ್ರಕಟಿಸಲು ಆಗಸ್ಟ್ 10 ರಂದು ರಾಜ್ಯವ್ಯಾಪಿ ‘ಸೇವ್ ಇಂಡಿಯಾ’ ಪ್ರತಿಭಟನೆ ನಡೆಯಲಿದೆ. ತರುವಾಯ, ಕಾರ್ಮಿಕರ ಹಕ್ಕುಗಳನ್ನು ಪುನಃಸ್ಥಾಪಿಸಲು ಕಾರ್ಮಿಕ ಚಳವಳಿಯನ್ನು ತೀವ್ರಗೊಳಿಸಲು ಕಾರ್ಮಿಕ ಸಂಘಗಳು ಜಂಟಿಯಾಗಿ ಪ್ರಚಾರ ಮಾಡಲಿವೆ” ಎಂದು ಸುಂದರಂ ಹೇಳಿದ್ದಾರೆ.

ಕರ್ನಾಟಕ ಹೈಕೋರ್ಟ್‌ನಲ್ಲಿ ಈ ಸುಗ್ರೀವಾಜ್ಞೆಯನ್ನು ಟ್ರೇಡ್ ಯೂನಿಯನ್ ಪ್ರಶ್ನಿಸಲಿದೆ ಎಂದು ಅವರು ಹೇಳಿದ್ದಾರೆ.

ದೊಡ್ಡ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳು ಹಾಗೂ ಸಾರ್ವಜನಿಕ ಉದ್ಯಮಗಳ ಸಚಿವ ಜಗದೀಶ್ ಶೆಟ್ಟರ್, ಸಾಂಕ್ರಾಮಿಕ ರೋಗದಿಂದಾಗಿ ವ್ಯಾಪಾರವನ್ನು ಸುಲಭ ಮಾಡಲು ಕಾರ್ಮಿಕ ಕಾನೂನುಗಳಲ್ಲಿ ಕೈಗಾರಿಕೆಗಳ ಪರವಾದ ಬದಲಾವಣೆಗಳು ಅಗತ್ಯ ಎಂದು ಹೇಳಿದ್ದಾರೆ.

ಐಎನ್‌ಟಿಯುಸಿ‌, ಸಿಐಟಿಯು, ಹಿಂದ್ ಮಜ್ದೂರ್ ಸಭಾ ಮತ್ತು ಎಐಯುಟಿಸಿ ಸೇರಿದಂತೆ ರಾಜ್ಯದ ಹತ್ತು ಕಾರ್ಮಿಕ ಸಂಘಗಟನೆಳು ಕಾರ್ಮಿಕ ಸಂಘಗಳ ಜಂಟಿ ಸಮಿತಿ (ಜೆಸಿಟಿಯು)ಯು ಜುಲೈ 24 ರಂದು ಸರ್ಕಾರದ ಸುಗ್ರೀವಾಜ್ಞೆಯನ್ನು ತಿರೋಗಾಮಿ ಹಾಗೂ ಕಾರ್ಮಿಕ ವಿರೋಧಿ ಎಂದು ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಿದೆ.


ಓದಿ: ವಲಸೆ ಕಾರ್ಮಿಕರ ಮತದಾನದ ಹಕ್ಕನ್ನು ಖಾತರಿಗೊಳಿಸಿ: ಚುನಾವಣಾ ಆಯೋಗಕ್ಕೆ ಬಹಿರಂಗ ಪತ್ರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...