Homeಕರ್ನಾಟಕಕಾರ್ಮಿಕ ಕಾನೂನು ತಿದ್ದುಪಡಿಗೆ ವಿರೋಧ: ಸುಗ್ರೀವಾಜ್ಞೆ ಪ್ರತಿ ಸುಟ್ಟು ಪ್ರತಿಭಟನೆಗೆ ನಿರ್ಧಾರ

ಕಾರ್ಮಿಕ ಕಾನೂನು ತಿದ್ದುಪಡಿಗೆ ವಿರೋಧ: ಸುಗ್ರೀವಾಜ್ಞೆ ಪ್ರತಿ ಸುಟ್ಟು ಪ್ರತಿಭಟನೆಗೆ ನಿರ್ಧಾರ

ಈ ತಿದ್ದುಪಡಿಯು ರಾಜ್ಯದ 70% ಕ್ಕೂ ಹೆಚ್ಚು ಕಾರ್ಮಿಕರಿಗೆ ಕಾರ್ಮಿಕ ಕಾನೂನುಗಳಿಂದ ಒದಗಿಸಲಾದ ಸಾಮಾಜಿಕ ಮತ್ತು ಕಾನೂನು ರಕ್ಷಣೆಗಳನ್ನು ಕಿತ್ತುಕೊಳ್ಳಲಿವೆ ಎನ್ನಲಾಗಿದೆ.

- Advertisement -
- Advertisement -

ಕಾರ್ಮಿಕ ಕಾನೂನುಗಳಿಗೆ ಕರ್ನಾಟಕ ಸರ್ಕಾರ ತಂದಿರುವ ಇತ್ತೀಚಿನ ತಿದ್ದುಪಡಿಗಳನ್ನು ವಿರೋಧಿಸಿ ಜುಲೈ 29 ರಂದು ಕಾರ್ಮಿಕರು ಎಲ್ಲಾ ಕೈಗಾರಿಕಾ ಸಂಸ್ಥೆಗಳ ಮುಂದೆ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ.

ಈ ತಿದ್ದುಪಡಿಯು ರಾಜ್ಯದ 70% ಕ್ಕೂ ಹೆಚ್ಚು ಕಾರ್ಮಿಕರಿಗೆ ಕಾರ್ಮಿಕ ಕಾನೂನುಗಳಿಂದ ಸಿಕ್ಕಿರುವ ಸಾಮಾಜಿಕ ಮತ್ತು ಕಾನೂನು ರಕ್ಷಣೆಗಳನ್ನು ಕಿತ್ತುಕೊಳ್ಳಲಿದೆ ಎಂದು ಕಾರ್ಮಿಕ ಸಂಘಟನೆಗಳು ಅಭಿಪ್ರಾಯಪಟ್ಟಿವೆ. ಹಾಗಾಗಿ ಸಾಮೂಹಿಕ ಆಂದೋಲನವನ್ನು ಪ್ರಾರಂಭಿಸಲಿದ್ದು, ಜುಲೈ 29 ರಂದು ಸುಗ್ರೀವಾಜ್ಞೆ ಪ್ರತಿ ಸುಟ್ಟು ಪ್ರತಿಭಟನೆ ನಡೆಸಲು ತೀರ್ಮಾನಿಸಿವೆ.

ಸುಗ್ರೀವಾಜ್ಞೆಯ ಮೂಲಕ ತಂದ ತಿದ್ದುಪಡಿಗಳ ಪ್ರಕಾರ, ಕೈಗಾರಿಕಾ ವಿವಾದ ಕಾಯ್ದೆ 1947 ರ ಸೆಕ್ಷನ್ 25 ಕೆ ಅನ್ನು ತಿದ್ದುಪಡಿ ಮಾಡಲಾಗಿದ್ದು, ಕಾರ್ಖಾನೆ ಮುಚ್ಚಲು ಇದ್ದ ಮಿತಿಯನ್ನು 100 ರಿಂದ 300 ಕಾರ್ಮಿಕರಿಗೆ ಹೆಚ್ಚಿಸಲಾಗಿದೆ.

ಗುತ್ತಿಗೆ ಕಾರ್ಮಿಕ (ಕ್ರಮಬದ್ಧಗೊಳಿಸುವಿಕೆ ಮತ್ತು ನಿರ್ಮೂಲನೆ) ಕಾಯ್ದೆ-1970 ರ ಸೆಕ್ಷನ್ 1 ಅನ್ನು ತಿದ್ದುಪಡಿ ಮಾಡಿ, ಅಸ್ತಿತ್ವದಲ್ಲಿರುವ 20 ಗುತ್ತಿಗೆ ಕಾರ್ಮಿಕರನ್ನು ನೇಮಿಸಿಕೊಳ್ಳಲುಇ ಇದ್ದ ಕಡ್ಡಾಯ ಪರವಾನಗಿಯನ್ನು ಮುಂದೆ 50ಕ್ಕೂ ಹೆಚ್ಚು ಕಾರ್ಮಿಕರಿಗೆ ಮಿತಿಯನ್ನು ಹೆಚ್ಚಿಸಲಾಗಿದೆ.

ಕಾರ್ಖಾನೆಗಳ ಕಾಯ್ದೆ-1948 ರ ಸೆಕ್ಷನ್ 2 (ಎಮ್) ಅನ್ನು ಸಹ ತಿದ್ದುಪಡಿ ಮಾಡಲಾಗಿದ್ದು, ಕಾರ್ಖಾನೆಗಳ ತಪಾಸಣೆಯನ್ನು 10 ಕಾರ್ಮಿಕರಿಂದ (ವಿದ್ಯುತ್‌ನೊಂದಿಗೆ) ಮಿತಿಯನ್ನು 20 ಕ್ಕೆ ಹೆಚ್ಚಿಸಲಾಗಿದೆ. 20 ಕಾರ್ಮಿಕರು (ವಿದ್ಯುತ್ ಸಹಾಯವಿಲ್ಲದೆ) ಮಿತಿಯನ್ನು 40 ಕ್ಕೆ ಹೆಚ್ಚಿಸಲಾಗಿದೆ.

ಕಾರ್ಖಾನೆಗಳ ಕಾಯ್ದೆ-1948 ರ ಸೆಕ್ಷನ್ 65 (3) (iv) ಅನ್ನು ಸಹ ತಿದ್ದುಪಡಿ ಮಾಡಲಾಗಿದೆ, ಯಾವುದೇ ತ್ರೈಮಾಸಿಕದಲ್ಲಿ ಅಧಿಕ ಕೆಲಸ ( ಒವರ್ ಟೈಂ ಡ್ಯೂಟಿ) ಒಟ್ಟು ಗಂಟೆಗಳ  75 ಗಂಟೆಗಳಿಂದ 125 ಗಂಟೆಗಳಿಗೆ ಹೆಚ್ಚಿಸಲಾಗಿದೆ.

ಈ ಬದಲಾವಣೆಗಳು ಕಾರ್ಖಾನೆಗಳಿಗೆ ಕಾರ್ಮಿಕರನ್ನು ನಿರ್ದಾಕ್ಷಿಣ್ಯವಾಗಿ ನೇಮಿಸಿಕೊಳ್ಳಲು ಮತ್ತು ಕಿತ್ತೊಗೆಯಲು ಅನುವು ಮಾಡಿಕೊಡುತ್ತದೆ ಎಂದು ಸೆಂಟರ್‌ ಆಫ್‌ ಇಂಡಿಯನ್ ಟ್ರೇಡ್‌ ಯುನಿಯನ್ (ಸಿಐಟಿಯು) ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಹೇಳಿದ್ದಾರೆ.

“ಜುಲೈ 29 ರಂದು ಎಲ್ಲಾ ಕಾರ್ಖಾನೆಗಳ ಮುಂದೆ ಸುಗ್ರೀವಾಜ್ಞೆಯ ಪ್ರತಿಗಳನ್ನು ಸುಡುವಂತೆ ನಾವು ಕರೆ ನೀಡಿದ್ದೇವೆ. ಇದರ ನಂತರ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ನಮ್ಮ ವಿರೋಧವನ್ನು ಪ್ರಕಟಿಸಲು ಆಗಸ್ಟ್ 10 ರಂದು ರಾಜ್ಯವ್ಯಾಪಿ ‘ಸೇವ್ ಇಂಡಿಯಾ’ ಪ್ರತಿಭಟನೆ ನಡೆಯಲಿದೆ. ತರುವಾಯ, ಕಾರ್ಮಿಕರ ಹಕ್ಕುಗಳನ್ನು ಪುನಃಸ್ಥಾಪಿಸಲು ಕಾರ್ಮಿಕ ಚಳವಳಿಯನ್ನು ತೀವ್ರಗೊಳಿಸಲು ಕಾರ್ಮಿಕ ಸಂಘಗಳು ಜಂಟಿಯಾಗಿ ಪ್ರಚಾರ ಮಾಡಲಿವೆ” ಎಂದು ಸುಂದರಂ ಹೇಳಿದ್ದಾರೆ.

ಕರ್ನಾಟಕ ಹೈಕೋರ್ಟ್‌ನಲ್ಲಿ ಈ ಸುಗ್ರೀವಾಜ್ಞೆಯನ್ನು ಟ್ರೇಡ್ ಯೂನಿಯನ್ ಪ್ರಶ್ನಿಸಲಿದೆ ಎಂದು ಅವರು ಹೇಳಿದ್ದಾರೆ.

ದೊಡ್ಡ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳು ಹಾಗೂ ಸಾರ್ವಜನಿಕ ಉದ್ಯಮಗಳ ಸಚಿವ ಜಗದೀಶ್ ಶೆಟ್ಟರ್, ಸಾಂಕ್ರಾಮಿಕ ರೋಗದಿಂದಾಗಿ ವ್ಯಾಪಾರವನ್ನು ಸುಲಭ ಮಾಡಲು ಕಾರ್ಮಿಕ ಕಾನೂನುಗಳಲ್ಲಿ ಕೈಗಾರಿಕೆಗಳ ಪರವಾದ ಬದಲಾವಣೆಗಳು ಅಗತ್ಯ ಎಂದು ಹೇಳಿದ್ದಾರೆ.

ಐಎನ್‌ಟಿಯುಸಿ‌, ಸಿಐಟಿಯು, ಹಿಂದ್ ಮಜ್ದೂರ್ ಸಭಾ ಮತ್ತು ಎಐಯುಟಿಸಿ ಸೇರಿದಂತೆ ರಾಜ್ಯದ ಹತ್ತು ಕಾರ್ಮಿಕ ಸಂಘಗಟನೆಳು ಕಾರ್ಮಿಕ ಸಂಘಗಳ ಜಂಟಿ ಸಮಿತಿ (ಜೆಸಿಟಿಯು)ಯು ಜುಲೈ 24 ರಂದು ಸರ್ಕಾರದ ಸುಗ್ರೀವಾಜ್ಞೆಯನ್ನು ತಿರೋಗಾಮಿ ಹಾಗೂ ಕಾರ್ಮಿಕ ವಿರೋಧಿ ಎಂದು ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಿದೆ.


ಓದಿ: ವಲಸೆ ಕಾರ್ಮಿಕರ ಮತದಾನದ ಹಕ್ಕನ್ನು ಖಾತರಿಗೊಳಿಸಿ: ಚುನಾವಣಾ ಆಯೋಗಕ್ಕೆ ಬಹಿರಂಗ ಪತ್ರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...