Homeಕರ್ನಾಟಕಕಾರ್ಮಿಕ ಕಾನೂನು ತಿದ್ದುಪಡಿಗೆ ವಿರೋಧ: ಸುಗ್ರೀವಾಜ್ಞೆ ಪ್ರತಿ ಸುಟ್ಟು ಪ್ರತಿಭಟನೆಗೆ ನಿರ್ಧಾರ

ಕಾರ್ಮಿಕ ಕಾನೂನು ತಿದ್ದುಪಡಿಗೆ ವಿರೋಧ: ಸುಗ್ರೀವಾಜ್ಞೆ ಪ್ರತಿ ಸುಟ್ಟು ಪ್ರತಿಭಟನೆಗೆ ನಿರ್ಧಾರ

ಈ ತಿದ್ದುಪಡಿಯು ರಾಜ್ಯದ 70% ಕ್ಕೂ ಹೆಚ್ಚು ಕಾರ್ಮಿಕರಿಗೆ ಕಾರ್ಮಿಕ ಕಾನೂನುಗಳಿಂದ ಒದಗಿಸಲಾದ ಸಾಮಾಜಿಕ ಮತ್ತು ಕಾನೂನು ರಕ್ಷಣೆಗಳನ್ನು ಕಿತ್ತುಕೊಳ್ಳಲಿವೆ ಎನ್ನಲಾಗಿದೆ.

- Advertisement -
- Advertisement -

ಕಾರ್ಮಿಕ ಕಾನೂನುಗಳಿಗೆ ಕರ್ನಾಟಕ ಸರ್ಕಾರ ತಂದಿರುವ ಇತ್ತೀಚಿನ ತಿದ್ದುಪಡಿಗಳನ್ನು ವಿರೋಧಿಸಿ ಜುಲೈ 29 ರಂದು ಕಾರ್ಮಿಕರು ಎಲ್ಲಾ ಕೈಗಾರಿಕಾ ಸಂಸ್ಥೆಗಳ ಮುಂದೆ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ.

ಈ ತಿದ್ದುಪಡಿಯು ರಾಜ್ಯದ 70% ಕ್ಕೂ ಹೆಚ್ಚು ಕಾರ್ಮಿಕರಿಗೆ ಕಾರ್ಮಿಕ ಕಾನೂನುಗಳಿಂದ ಸಿಕ್ಕಿರುವ ಸಾಮಾಜಿಕ ಮತ್ತು ಕಾನೂನು ರಕ್ಷಣೆಗಳನ್ನು ಕಿತ್ತುಕೊಳ್ಳಲಿದೆ ಎಂದು ಕಾರ್ಮಿಕ ಸಂಘಟನೆಗಳು ಅಭಿಪ್ರಾಯಪಟ್ಟಿವೆ. ಹಾಗಾಗಿ ಸಾಮೂಹಿಕ ಆಂದೋಲನವನ್ನು ಪ್ರಾರಂಭಿಸಲಿದ್ದು, ಜುಲೈ 29 ರಂದು ಸುಗ್ರೀವಾಜ್ಞೆ ಪ್ರತಿ ಸುಟ್ಟು ಪ್ರತಿಭಟನೆ ನಡೆಸಲು ತೀರ್ಮಾನಿಸಿವೆ.

ಸುಗ್ರೀವಾಜ್ಞೆಯ ಮೂಲಕ ತಂದ ತಿದ್ದುಪಡಿಗಳ ಪ್ರಕಾರ, ಕೈಗಾರಿಕಾ ವಿವಾದ ಕಾಯ್ದೆ 1947 ರ ಸೆಕ್ಷನ್ 25 ಕೆ ಅನ್ನು ತಿದ್ದುಪಡಿ ಮಾಡಲಾಗಿದ್ದು, ಕಾರ್ಖಾನೆ ಮುಚ್ಚಲು ಇದ್ದ ಮಿತಿಯನ್ನು 100 ರಿಂದ 300 ಕಾರ್ಮಿಕರಿಗೆ ಹೆಚ್ಚಿಸಲಾಗಿದೆ.

ಗುತ್ತಿಗೆ ಕಾರ್ಮಿಕ (ಕ್ರಮಬದ್ಧಗೊಳಿಸುವಿಕೆ ಮತ್ತು ನಿರ್ಮೂಲನೆ) ಕಾಯ್ದೆ-1970 ರ ಸೆಕ್ಷನ್ 1 ಅನ್ನು ತಿದ್ದುಪಡಿ ಮಾಡಿ, ಅಸ್ತಿತ್ವದಲ್ಲಿರುವ 20 ಗುತ್ತಿಗೆ ಕಾರ್ಮಿಕರನ್ನು ನೇಮಿಸಿಕೊಳ್ಳಲುಇ ಇದ್ದ ಕಡ್ಡಾಯ ಪರವಾನಗಿಯನ್ನು ಮುಂದೆ 50ಕ್ಕೂ ಹೆಚ್ಚು ಕಾರ್ಮಿಕರಿಗೆ ಮಿತಿಯನ್ನು ಹೆಚ್ಚಿಸಲಾಗಿದೆ.

ಕಾರ್ಖಾನೆಗಳ ಕಾಯ್ದೆ-1948 ರ ಸೆಕ್ಷನ್ 2 (ಎಮ್) ಅನ್ನು ಸಹ ತಿದ್ದುಪಡಿ ಮಾಡಲಾಗಿದ್ದು, ಕಾರ್ಖಾನೆಗಳ ತಪಾಸಣೆಯನ್ನು 10 ಕಾರ್ಮಿಕರಿಂದ (ವಿದ್ಯುತ್‌ನೊಂದಿಗೆ) ಮಿತಿಯನ್ನು 20 ಕ್ಕೆ ಹೆಚ್ಚಿಸಲಾಗಿದೆ. 20 ಕಾರ್ಮಿಕರು (ವಿದ್ಯುತ್ ಸಹಾಯವಿಲ್ಲದೆ) ಮಿತಿಯನ್ನು 40 ಕ್ಕೆ ಹೆಚ್ಚಿಸಲಾಗಿದೆ.

ಕಾರ್ಖಾನೆಗಳ ಕಾಯ್ದೆ-1948 ರ ಸೆಕ್ಷನ್ 65 (3) (iv) ಅನ್ನು ಸಹ ತಿದ್ದುಪಡಿ ಮಾಡಲಾಗಿದೆ, ಯಾವುದೇ ತ್ರೈಮಾಸಿಕದಲ್ಲಿ ಅಧಿಕ ಕೆಲಸ ( ಒವರ್ ಟೈಂ ಡ್ಯೂಟಿ) ಒಟ್ಟು ಗಂಟೆಗಳ  75 ಗಂಟೆಗಳಿಂದ 125 ಗಂಟೆಗಳಿಗೆ ಹೆಚ್ಚಿಸಲಾಗಿದೆ.

ಈ ಬದಲಾವಣೆಗಳು ಕಾರ್ಖಾನೆಗಳಿಗೆ ಕಾರ್ಮಿಕರನ್ನು ನಿರ್ದಾಕ್ಷಿಣ್ಯವಾಗಿ ನೇಮಿಸಿಕೊಳ್ಳಲು ಮತ್ತು ಕಿತ್ತೊಗೆಯಲು ಅನುವು ಮಾಡಿಕೊಡುತ್ತದೆ ಎಂದು ಸೆಂಟರ್‌ ಆಫ್‌ ಇಂಡಿಯನ್ ಟ್ರೇಡ್‌ ಯುನಿಯನ್ (ಸಿಐಟಿಯು) ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಹೇಳಿದ್ದಾರೆ.

“ಜುಲೈ 29 ರಂದು ಎಲ್ಲಾ ಕಾರ್ಖಾನೆಗಳ ಮುಂದೆ ಸುಗ್ರೀವಾಜ್ಞೆಯ ಪ್ರತಿಗಳನ್ನು ಸುಡುವಂತೆ ನಾವು ಕರೆ ನೀಡಿದ್ದೇವೆ. ಇದರ ನಂತರ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ನಮ್ಮ ವಿರೋಧವನ್ನು ಪ್ರಕಟಿಸಲು ಆಗಸ್ಟ್ 10 ರಂದು ರಾಜ್ಯವ್ಯಾಪಿ ‘ಸೇವ್ ಇಂಡಿಯಾ’ ಪ್ರತಿಭಟನೆ ನಡೆಯಲಿದೆ. ತರುವಾಯ, ಕಾರ್ಮಿಕರ ಹಕ್ಕುಗಳನ್ನು ಪುನಃಸ್ಥಾಪಿಸಲು ಕಾರ್ಮಿಕ ಚಳವಳಿಯನ್ನು ತೀವ್ರಗೊಳಿಸಲು ಕಾರ್ಮಿಕ ಸಂಘಗಳು ಜಂಟಿಯಾಗಿ ಪ್ರಚಾರ ಮಾಡಲಿವೆ” ಎಂದು ಸುಂದರಂ ಹೇಳಿದ್ದಾರೆ.

ಕರ್ನಾಟಕ ಹೈಕೋರ್ಟ್‌ನಲ್ಲಿ ಈ ಸುಗ್ರೀವಾಜ್ಞೆಯನ್ನು ಟ್ರೇಡ್ ಯೂನಿಯನ್ ಪ್ರಶ್ನಿಸಲಿದೆ ಎಂದು ಅವರು ಹೇಳಿದ್ದಾರೆ.

ದೊಡ್ಡ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳು ಹಾಗೂ ಸಾರ್ವಜನಿಕ ಉದ್ಯಮಗಳ ಸಚಿವ ಜಗದೀಶ್ ಶೆಟ್ಟರ್, ಸಾಂಕ್ರಾಮಿಕ ರೋಗದಿಂದಾಗಿ ವ್ಯಾಪಾರವನ್ನು ಸುಲಭ ಮಾಡಲು ಕಾರ್ಮಿಕ ಕಾನೂನುಗಳಲ್ಲಿ ಕೈಗಾರಿಕೆಗಳ ಪರವಾದ ಬದಲಾವಣೆಗಳು ಅಗತ್ಯ ಎಂದು ಹೇಳಿದ್ದಾರೆ.

ಐಎನ್‌ಟಿಯುಸಿ‌, ಸಿಐಟಿಯು, ಹಿಂದ್ ಮಜ್ದೂರ್ ಸಭಾ ಮತ್ತು ಎಐಯುಟಿಸಿ ಸೇರಿದಂತೆ ರಾಜ್ಯದ ಹತ್ತು ಕಾರ್ಮಿಕ ಸಂಘಗಟನೆಳು ಕಾರ್ಮಿಕ ಸಂಘಗಳ ಜಂಟಿ ಸಮಿತಿ (ಜೆಸಿಟಿಯು)ಯು ಜುಲೈ 24 ರಂದು ಸರ್ಕಾರದ ಸುಗ್ರೀವಾಜ್ಞೆಯನ್ನು ತಿರೋಗಾಮಿ ಹಾಗೂ ಕಾರ್ಮಿಕ ವಿರೋಧಿ ಎಂದು ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಿದೆ.


ಓದಿ: ವಲಸೆ ಕಾರ್ಮಿಕರ ಮತದಾನದ ಹಕ್ಕನ್ನು ಖಾತರಿಗೊಳಿಸಿ: ಚುನಾವಣಾ ಆಯೋಗಕ್ಕೆ ಬಹಿರಂಗ ಪತ್ರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...