Homeಕರ್ನಾಟಕಕಾರ್ಮಿಕ ಕಾನೂನು ತಿದ್ದುಪಡಿಗೆ ವಿರೋಧ: ಸುಗ್ರೀವಾಜ್ಞೆ ಪ್ರತಿ ಸುಟ್ಟು ಪ್ರತಿಭಟನೆಗೆ ನಿರ್ಧಾರ

ಕಾರ್ಮಿಕ ಕಾನೂನು ತಿದ್ದುಪಡಿಗೆ ವಿರೋಧ: ಸುಗ್ರೀವಾಜ್ಞೆ ಪ್ರತಿ ಸುಟ್ಟು ಪ್ರತಿಭಟನೆಗೆ ನಿರ್ಧಾರ

ಈ ತಿದ್ದುಪಡಿಯು ರಾಜ್ಯದ 70% ಕ್ಕೂ ಹೆಚ್ಚು ಕಾರ್ಮಿಕರಿಗೆ ಕಾರ್ಮಿಕ ಕಾನೂನುಗಳಿಂದ ಒದಗಿಸಲಾದ ಸಾಮಾಜಿಕ ಮತ್ತು ಕಾನೂನು ರಕ್ಷಣೆಗಳನ್ನು ಕಿತ್ತುಕೊಳ್ಳಲಿವೆ ಎನ್ನಲಾಗಿದೆ.

- Advertisement -
- Advertisement -

ಕಾರ್ಮಿಕ ಕಾನೂನುಗಳಿಗೆ ಕರ್ನಾಟಕ ಸರ್ಕಾರ ತಂದಿರುವ ಇತ್ತೀಚಿನ ತಿದ್ದುಪಡಿಗಳನ್ನು ವಿರೋಧಿಸಿ ಜುಲೈ 29 ರಂದು ಕಾರ್ಮಿಕರು ಎಲ್ಲಾ ಕೈಗಾರಿಕಾ ಸಂಸ್ಥೆಗಳ ಮುಂದೆ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ.

ಈ ತಿದ್ದುಪಡಿಯು ರಾಜ್ಯದ 70% ಕ್ಕೂ ಹೆಚ್ಚು ಕಾರ್ಮಿಕರಿಗೆ ಕಾರ್ಮಿಕ ಕಾನೂನುಗಳಿಂದ ಸಿಕ್ಕಿರುವ ಸಾಮಾಜಿಕ ಮತ್ತು ಕಾನೂನು ರಕ್ಷಣೆಗಳನ್ನು ಕಿತ್ತುಕೊಳ್ಳಲಿದೆ ಎಂದು ಕಾರ್ಮಿಕ ಸಂಘಟನೆಗಳು ಅಭಿಪ್ರಾಯಪಟ್ಟಿವೆ. ಹಾಗಾಗಿ ಸಾಮೂಹಿಕ ಆಂದೋಲನವನ್ನು ಪ್ರಾರಂಭಿಸಲಿದ್ದು, ಜುಲೈ 29 ರಂದು ಸುಗ್ರೀವಾಜ್ಞೆ ಪ್ರತಿ ಸುಟ್ಟು ಪ್ರತಿಭಟನೆ ನಡೆಸಲು ತೀರ್ಮಾನಿಸಿವೆ.

ಸುಗ್ರೀವಾಜ್ಞೆಯ ಮೂಲಕ ತಂದ ತಿದ್ದುಪಡಿಗಳ ಪ್ರಕಾರ, ಕೈಗಾರಿಕಾ ವಿವಾದ ಕಾಯ್ದೆ 1947 ರ ಸೆಕ್ಷನ್ 25 ಕೆ ಅನ್ನು ತಿದ್ದುಪಡಿ ಮಾಡಲಾಗಿದ್ದು, ಕಾರ್ಖಾನೆ ಮುಚ್ಚಲು ಇದ್ದ ಮಿತಿಯನ್ನು 100 ರಿಂದ 300 ಕಾರ್ಮಿಕರಿಗೆ ಹೆಚ್ಚಿಸಲಾಗಿದೆ.

ಗುತ್ತಿಗೆ ಕಾರ್ಮಿಕ (ಕ್ರಮಬದ್ಧಗೊಳಿಸುವಿಕೆ ಮತ್ತು ನಿರ್ಮೂಲನೆ) ಕಾಯ್ದೆ-1970 ರ ಸೆಕ್ಷನ್ 1 ಅನ್ನು ತಿದ್ದುಪಡಿ ಮಾಡಿ, ಅಸ್ತಿತ್ವದಲ್ಲಿರುವ 20 ಗುತ್ತಿಗೆ ಕಾರ್ಮಿಕರನ್ನು ನೇಮಿಸಿಕೊಳ್ಳಲುಇ ಇದ್ದ ಕಡ್ಡಾಯ ಪರವಾನಗಿಯನ್ನು ಮುಂದೆ 50ಕ್ಕೂ ಹೆಚ್ಚು ಕಾರ್ಮಿಕರಿಗೆ ಮಿತಿಯನ್ನು ಹೆಚ್ಚಿಸಲಾಗಿದೆ.

ಕಾರ್ಖಾನೆಗಳ ಕಾಯ್ದೆ-1948 ರ ಸೆಕ್ಷನ್ 2 (ಎಮ್) ಅನ್ನು ಸಹ ತಿದ್ದುಪಡಿ ಮಾಡಲಾಗಿದ್ದು, ಕಾರ್ಖಾನೆಗಳ ತಪಾಸಣೆಯನ್ನು 10 ಕಾರ್ಮಿಕರಿಂದ (ವಿದ್ಯುತ್‌ನೊಂದಿಗೆ) ಮಿತಿಯನ್ನು 20 ಕ್ಕೆ ಹೆಚ್ಚಿಸಲಾಗಿದೆ. 20 ಕಾರ್ಮಿಕರು (ವಿದ್ಯುತ್ ಸಹಾಯವಿಲ್ಲದೆ) ಮಿತಿಯನ್ನು 40 ಕ್ಕೆ ಹೆಚ್ಚಿಸಲಾಗಿದೆ.

ಕಾರ್ಖಾನೆಗಳ ಕಾಯ್ದೆ-1948 ರ ಸೆಕ್ಷನ್ 65 (3) (iv) ಅನ್ನು ಸಹ ತಿದ್ದುಪಡಿ ಮಾಡಲಾಗಿದೆ, ಯಾವುದೇ ತ್ರೈಮಾಸಿಕದಲ್ಲಿ ಅಧಿಕ ಕೆಲಸ ( ಒವರ್ ಟೈಂ ಡ್ಯೂಟಿ) ಒಟ್ಟು ಗಂಟೆಗಳ  75 ಗಂಟೆಗಳಿಂದ 125 ಗಂಟೆಗಳಿಗೆ ಹೆಚ್ಚಿಸಲಾಗಿದೆ.

ಈ ಬದಲಾವಣೆಗಳು ಕಾರ್ಖಾನೆಗಳಿಗೆ ಕಾರ್ಮಿಕರನ್ನು ನಿರ್ದಾಕ್ಷಿಣ್ಯವಾಗಿ ನೇಮಿಸಿಕೊಳ್ಳಲು ಮತ್ತು ಕಿತ್ತೊಗೆಯಲು ಅನುವು ಮಾಡಿಕೊಡುತ್ತದೆ ಎಂದು ಸೆಂಟರ್‌ ಆಫ್‌ ಇಂಡಿಯನ್ ಟ್ರೇಡ್‌ ಯುನಿಯನ್ (ಸಿಐಟಿಯು) ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಹೇಳಿದ್ದಾರೆ.

“ಜುಲೈ 29 ರಂದು ಎಲ್ಲಾ ಕಾರ್ಖಾನೆಗಳ ಮುಂದೆ ಸುಗ್ರೀವಾಜ್ಞೆಯ ಪ್ರತಿಗಳನ್ನು ಸುಡುವಂತೆ ನಾವು ಕರೆ ನೀಡಿದ್ದೇವೆ. ಇದರ ನಂತರ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ನಮ್ಮ ವಿರೋಧವನ್ನು ಪ್ರಕಟಿಸಲು ಆಗಸ್ಟ್ 10 ರಂದು ರಾಜ್ಯವ್ಯಾಪಿ ‘ಸೇವ್ ಇಂಡಿಯಾ’ ಪ್ರತಿಭಟನೆ ನಡೆಯಲಿದೆ. ತರುವಾಯ, ಕಾರ್ಮಿಕರ ಹಕ್ಕುಗಳನ್ನು ಪುನಃಸ್ಥಾಪಿಸಲು ಕಾರ್ಮಿಕ ಚಳವಳಿಯನ್ನು ತೀವ್ರಗೊಳಿಸಲು ಕಾರ್ಮಿಕ ಸಂಘಗಳು ಜಂಟಿಯಾಗಿ ಪ್ರಚಾರ ಮಾಡಲಿವೆ” ಎಂದು ಸುಂದರಂ ಹೇಳಿದ್ದಾರೆ.

ಕರ್ನಾಟಕ ಹೈಕೋರ್ಟ್‌ನಲ್ಲಿ ಈ ಸುಗ್ರೀವಾಜ್ಞೆಯನ್ನು ಟ್ರೇಡ್ ಯೂನಿಯನ್ ಪ್ರಶ್ನಿಸಲಿದೆ ಎಂದು ಅವರು ಹೇಳಿದ್ದಾರೆ.

ದೊಡ್ಡ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳು ಹಾಗೂ ಸಾರ್ವಜನಿಕ ಉದ್ಯಮಗಳ ಸಚಿವ ಜಗದೀಶ್ ಶೆಟ್ಟರ್, ಸಾಂಕ್ರಾಮಿಕ ರೋಗದಿಂದಾಗಿ ವ್ಯಾಪಾರವನ್ನು ಸುಲಭ ಮಾಡಲು ಕಾರ್ಮಿಕ ಕಾನೂನುಗಳಲ್ಲಿ ಕೈಗಾರಿಕೆಗಳ ಪರವಾದ ಬದಲಾವಣೆಗಳು ಅಗತ್ಯ ಎಂದು ಹೇಳಿದ್ದಾರೆ.

ಐಎನ್‌ಟಿಯುಸಿ‌, ಸಿಐಟಿಯು, ಹಿಂದ್ ಮಜ್ದೂರ್ ಸಭಾ ಮತ್ತು ಎಐಯುಟಿಸಿ ಸೇರಿದಂತೆ ರಾಜ್ಯದ ಹತ್ತು ಕಾರ್ಮಿಕ ಸಂಘಗಟನೆಳು ಕಾರ್ಮಿಕ ಸಂಘಗಳ ಜಂಟಿ ಸಮಿತಿ (ಜೆಸಿಟಿಯು)ಯು ಜುಲೈ 24 ರಂದು ಸರ್ಕಾರದ ಸುಗ್ರೀವಾಜ್ಞೆಯನ್ನು ತಿರೋಗಾಮಿ ಹಾಗೂ ಕಾರ್ಮಿಕ ವಿರೋಧಿ ಎಂದು ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಿದೆ.


ಓದಿ: ವಲಸೆ ಕಾರ್ಮಿಕರ ಮತದಾನದ ಹಕ್ಕನ್ನು ಖಾತರಿಗೊಳಿಸಿ: ಚುನಾವಣಾ ಆಯೋಗಕ್ಕೆ ಬಹಿರಂಗ ಪತ್ರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...