Homeಕರ್ನಾಟಕಕಾರ್ಮಿಕ ಕಾನೂನು ತಿದ್ದುಪಡಿಗೆ ವಿರೋಧ: ಸುಗ್ರೀವಾಜ್ಞೆ ಪ್ರತಿ ಸುಟ್ಟು ಪ್ರತಿಭಟನೆಗೆ ನಿರ್ಧಾರ

ಕಾರ್ಮಿಕ ಕಾನೂನು ತಿದ್ದುಪಡಿಗೆ ವಿರೋಧ: ಸುಗ್ರೀವಾಜ್ಞೆ ಪ್ರತಿ ಸುಟ್ಟು ಪ್ರತಿಭಟನೆಗೆ ನಿರ್ಧಾರ

ಈ ತಿದ್ದುಪಡಿಯು ರಾಜ್ಯದ 70% ಕ್ಕೂ ಹೆಚ್ಚು ಕಾರ್ಮಿಕರಿಗೆ ಕಾರ್ಮಿಕ ಕಾನೂನುಗಳಿಂದ ಒದಗಿಸಲಾದ ಸಾಮಾಜಿಕ ಮತ್ತು ಕಾನೂನು ರಕ್ಷಣೆಗಳನ್ನು ಕಿತ್ತುಕೊಳ್ಳಲಿವೆ ಎನ್ನಲಾಗಿದೆ.

- Advertisement -
- Advertisement -

ಕಾರ್ಮಿಕ ಕಾನೂನುಗಳಿಗೆ ಕರ್ನಾಟಕ ಸರ್ಕಾರ ತಂದಿರುವ ಇತ್ತೀಚಿನ ತಿದ್ದುಪಡಿಗಳನ್ನು ವಿರೋಧಿಸಿ ಜುಲೈ 29 ರಂದು ಕಾರ್ಮಿಕರು ಎಲ್ಲಾ ಕೈಗಾರಿಕಾ ಸಂಸ್ಥೆಗಳ ಮುಂದೆ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ.

ಈ ತಿದ್ದುಪಡಿಯು ರಾಜ್ಯದ 70% ಕ್ಕೂ ಹೆಚ್ಚು ಕಾರ್ಮಿಕರಿಗೆ ಕಾರ್ಮಿಕ ಕಾನೂನುಗಳಿಂದ ಸಿಕ್ಕಿರುವ ಸಾಮಾಜಿಕ ಮತ್ತು ಕಾನೂನು ರಕ್ಷಣೆಗಳನ್ನು ಕಿತ್ತುಕೊಳ್ಳಲಿದೆ ಎಂದು ಕಾರ್ಮಿಕ ಸಂಘಟನೆಗಳು ಅಭಿಪ್ರಾಯಪಟ್ಟಿವೆ. ಹಾಗಾಗಿ ಸಾಮೂಹಿಕ ಆಂದೋಲನವನ್ನು ಪ್ರಾರಂಭಿಸಲಿದ್ದು, ಜುಲೈ 29 ರಂದು ಸುಗ್ರೀವಾಜ್ಞೆ ಪ್ರತಿ ಸುಟ್ಟು ಪ್ರತಿಭಟನೆ ನಡೆಸಲು ತೀರ್ಮಾನಿಸಿವೆ.

ಸುಗ್ರೀವಾಜ್ಞೆಯ ಮೂಲಕ ತಂದ ತಿದ್ದುಪಡಿಗಳ ಪ್ರಕಾರ, ಕೈಗಾರಿಕಾ ವಿವಾದ ಕಾಯ್ದೆ 1947 ರ ಸೆಕ್ಷನ್ 25 ಕೆ ಅನ್ನು ತಿದ್ದುಪಡಿ ಮಾಡಲಾಗಿದ್ದು, ಕಾರ್ಖಾನೆ ಮುಚ್ಚಲು ಇದ್ದ ಮಿತಿಯನ್ನು 100 ರಿಂದ 300 ಕಾರ್ಮಿಕರಿಗೆ ಹೆಚ್ಚಿಸಲಾಗಿದೆ.

ಗುತ್ತಿಗೆ ಕಾರ್ಮಿಕ (ಕ್ರಮಬದ್ಧಗೊಳಿಸುವಿಕೆ ಮತ್ತು ನಿರ್ಮೂಲನೆ) ಕಾಯ್ದೆ-1970 ರ ಸೆಕ್ಷನ್ 1 ಅನ್ನು ತಿದ್ದುಪಡಿ ಮಾಡಿ, ಅಸ್ತಿತ್ವದಲ್ಲಿರುವ 20 ಗುತ್ತಿಗೆ ಕಾರ್ಮಿಕರನ್ನು ನೇಮಿಸಿಕೊಳ್ಳಲುಇ ಇದ್ದ ಕಡ್ಡಾಯ ಪರವಾನಗಿಯನ್ನು ಮುಂದೆ 50ಕ್ಕೂ ಹೆಚ್ಚು ಕಾರ್ಮಿಕರಿಗೆ ಮಿತಿಯನ್ನು ಹೆಚ್ಚಿಸಲಾಗಿದೆ.

ಕಾರ್ಖಾನೆಗಳ ಕಾಯ್ದೆ-1948 ರ ಸೆಕ್ಷನ್ 2 (ಎಮ್) ಅನ್ನು ಸಹ ತಿದ್ದುಪಡಿ ಮಾಡಲಾಗಿದ್ದು, ಕಾರ್ಖಾನೆಗಳ ತಪಾಸಣೆಯನ್ನು 10 ಕಾರ್ಮಿಕರಿಂದ (ವಿದ್ಯುತ್‌ನೊಂದಿಗೆ) ಮಿತಿಯನ್ನು 20 ಕ್ಕೆ ಹೆಚ್ಚಿಸಲಾಗಿದೆ. 20 ಕಾರ್ಮಿಕರು (ವಿದ್ಯುತ್ ಸಹಾಯವಿಲ್ಲದೆ) ಮಿತಿಯನ್ನು 40 ಕ್ಕೆ ಹೆಚ್ಚಿಸಲಾಗಿದೆ.

ಕಾರ್ಖಾನೆಗಳ ಕಾಯ್ದೆ-1948 ರ ಸೆಕ್ಷನ್ 65 (3) (iv) ಅನ್ನು ಸಹ ತಿದ್ದುಪಡಿ ಮಾಡಲಾಗಿದೆ, ಯಾವುದೇ ತ್ರೈಮಾಸಿಕದಲ್ಲಿ ಅಧಿಕ ಕೆಲಸ ( ಒವರ್ ಟೈಂ ಡ್ಯೂಟಿ) ಒಟ್ಟು ಗಂಟೆಗಳ  75 ಗಂಟೆಗಳಿಂದ 125 ಗಂಟೆಗಳಿಗೆ ಹೆಚ್ಚಿಸಲಾಗಿದೆ.

ಈ ಬದಲಾವಣೆಗಳು ಕಾರ್ಖಾನೆಗಳಿಗೆ ಕಾರ್ಮಿಕರನ್ನು ನಿರ್ದಾಕ್ಷಿಣ್ಯವಾಗಿ ನೇಮಿಸಿಕೊಳ್ಳಲು ಮತ್ತು ಕಿತ್ತೊಗೆಯಲು ಅನುವು ಮಾಡಿಕೊಡುತ್ತದೆ ಎಂದು ಸೆಂಟರ್‌ ಆಫ್‌ ಇಂಡಿಯನ್ ಟ್ರೇಡ್‌ ಯುನಿಯನ್ (ಸಿಐಟಿಯು) ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಹೇಳಿದ್ದಾರೆ.

“ಜುಲೈ 29 ರಂದು ಎಲ್ಲಾ ಕಾರ್ಖಾನೆಗಳ ಮುಂದೆ ಸುಗ್ರೀವಾಜ್ಞೆಯ ಪ್ರತಿಗಳನ್ನು ಸುಡುವಂತೆ ನಾವು ಕರೆ ನೀಡಿದ್ದೇವೆ. ಇದರ ನಂತರ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ನಮ್ಮ ವಿರೋಧವನ್ನು ಪ್ರಕಟಿಸಲು ಆಗಸ್ಟ್ 10 ರಂದು ರಾಜ್ಯವ್ಯಾಪಿ ‘ಸೇವ್ ಇಂಡಿಯಾ’ ಪ್ರತಿಭಟನೆ ನಡೆಯಲಿದೆ. ತರುವಾಯ, ಕಾರ್ಮಿಕರ ಹಕ್ಕುಗಳನ್ನು ಪುನಃಸ್ಥಾಪಿಸಲು ಕಾರ್ಮಿಕ ಚಳವಳಿಯನ್ನು ತೀವ್ರಗೊಳಿಸಲು ಕಾರ್ಮಿಕ ಸಂಘಗಳು ಜಂಟಿಯಾಗಿ ಪ್ರಚಾರ ಮಾಡಲಿವೆ” ಎಂದು ಸುಂದರಂ ಹೇಳಿದ್ದಾರೆ.

ಕರ್ನಾಟಕ ಹೈಕೋರ್ಟ್‌ನಲ್ಲಿ ಈ ಸುಗ್ರೀವಾಜ್ಞೆಯನ್ನು ಟ್ರೇಡ್ ಯೂನಿಯನ್ ಪ್ರಶ್ನಿಸಲಿದೆ ಎಂದು ಅವರು ಹೇಳಿದ್ದಾರೆ.

ದೊಡ್ಡ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳು ಹಾಗೂ ಸಾರ್ವಜನಿಕ ಉದ್ಯಮಗಳ ಸಚಿವ ಜಗದೀಶ್ ಶೆಟ್ಟರ್, ಸಾಂಕ್ರಾಮಿಕ ರೋಗದಿಂದಾಗಿ ವ್ಯಾಪಾರವನ್ನು ಸುಲಭ ಮಾಡಲು ಕಾರ್ಮಿಕ ಕಾನೂನುಗಳಲ್ಲಿ ಕೈಗಾರಿಕೆಗಳ ಪರವಾದ ಬದಲಾವಣೆಗಳು ಅಗತ್ಯ ಎಂದು ಹೇಳಿದ್ದಾರೆ.

ಐಎನ್‌ಟಿಯುಸಿ‌, ಸಿಐಟಿಯು, ಹಿಂದ್ ಮಜ್ದೂರ್ ಸಭಾ ಮತ್ತು ಎಐಯುಟಿಸಿ ಸೇರಿದಂತೆ ರಾಜ್ಯದ ಹತ್ತು ಕಾರ್ಮಿಕ ಸಂಘಗಟನೆಳು ಕಾರ್ಮಿಕ ಸಂಘಗಳ ಜಂಟಿ ಸಮಿತಿ (ಜೆಸಿಟಿಯು)ಯು ಜುಲೈ 24 ರಂದು ಸರ್ಕಾರದ ಸುಗ್ರೀವಾಜ್ಞೆಯನ್ನು ತಿರೋಗಾಮಿ ಹಾಗೂ ಕಾರ್ಮಿಕ ವಿರೋಧಿ ಎಂದು ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಿದೆ.


ಓದಿ: ವಲಸೆ ಕಾರ್ಮಿಕರ ಮತದಾನದ ಹಕ್ಕನ್ನು ಖಾತರಿಗೊಳಿಸಿ: ಚುನಾವಣಾ ಆಯೋಗಕ್ಕೆ ಬಹಿರಂಗ ಪತ್ರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...