Homeಕರ್ನಾಟಕಕಾರ್ಮಿಕ ಕಾನೂನು ತಿದ್ದುಪಡಿಗೆ ವಿರೋಧ: ಸುಗ್ರೀವಾಜ್ಞೆ ಪ್ರತಿ ಸುಟ್ಟು ಪ್ರತಿಭಟನೆಗೆ ನಿರ್ಧಾರ

ಕಾರ್ಮಿಕ ಕಾನೂನು ತಿದ್ದುಪಡಿಗೆ ವಿರೋಧ: ಸುಗ್ರೀವಾಜ್ಞೆ ಪ್ರತಿ ಸುಟ್ಟು ಪ್ರತಿಭಟನೆಗೆ ನಿರ್ಧಾರ

ಈ ತಿದ್ದುಪಡಿಯು ರಾಜ್ಯದ 70% ಕ್ಕೂ ಹೆಚ್ಚು ಕಾರ್ಮಿಕರಿಗೆ ಕಾರ್ಮಿಕ ಕಾನೂನುಗಳಿಂದ ಒದಗಿಸಲಾದ ಸಾಮಾಜಿಕ ಮತ್ತು ಕಾನೂನು ರಕ್ಷಣೆಗಳನ್ನು ಕಿತ್ತುಕೊಳ್ಳಲಿವೆ ಎನ್ನಲಾಗಿದೆ.

- Advertisement -
- Advertisement -

ಕಾರ್ಮಿಕ ಕಾನೂನುಗಳಿಗೆ ಕರ್ನಾಟಕ ಸರ್ಕಾರ ತಂದಿರುವ ಇತ್ತೀಚಿನ ತಿದ್ದುಪಡಿಗಳನ್ನು ವಿರೋಧಿಸಿ ಜುಲೈ 29 ರಂದು ಕಾರ್ಮಿಕರು ಎಲ್ಲಾ ಕೈಗಾರಿಕಾ ಸಂಸ್ಥೆಗಳ ಮುಂದೆ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ.

ಈ ತಿದ್ದುಪಡಿಯು ರಾಜ್ಯದ 70% ಕ್ಕೂ ಹೆಚ್ಚು ಕಾರ್ಮಿಕರಿಗೆ ಕಾರ್ಮಿಕ ಕಾನೂನುಗಳಿಂದ ಸಿಕ್ಕಿರುವ ಸಾಮಾಜಿಕ ಮತ್ತು ಕಾನೂನು ರಕ್ಷಣೆಗಳನ್ನು ಕಿತ್ತುಕೊಳ್ಳಲಿದೆ ಎಂದು ಕಾರ್ಮಿಕ ಸಂಘಟನೆಗಳು ಅಭಿಪ್ರಾಯಪಟ್ಟಿವೆ. ಹಾಗಾಗಿ ಸಾಮೂಹಿಕ ಆಂದೋಲನವನ್ನು ಪ್ರಾರಂಭಿಸಲಿದ್ದು, ಜುಲೈ 29 ರಂದು ಸುಗ್ರೀವಾಜ್ಞೆ ಪ್ರತಿ ಸುಟ್ಟು ಪ್ರತಿಭಟನೆ ನಡೆಸಲು ತೀರ್ಮಾನಿಸಿವೆ.

ಸುಗ್ರೀವಾಜ್ಞೆಯ ಮೂಲಕ ತಂದ ತಿದ್ದುಪಡಿಗಳ ಪ್ರಕಾರ, ಕೈಗಾರಿಕಾ ವಿವಾದ ಕಾಯ್ದೆ 1947 ರ ಸೆಕ್ಷನ್ 25 ಕೆ ಅನ್ನು ತಿದ್ದುಪಡಿ ಮಾಡಲಾಗಿದ್ದು, ಕಾರ್ಖಾನೆ ಮುಚ್ಚಲು ಇದ್ದ ಮಿತಿಯನ್ನು 100 ರಿಂದ 300 ಕಾರ್ಮಿಕರಿಗೆ ಹೆಚ್ಚಿಸಲಾಗಿದೆ.

ಗುತ್ತಿಗೆ ಕಾರ್ಮಿಕ (ಕ್ರಮಬದ್ಧಗೊಳಿಸುವಿಕೆ ಮತ್ತು ನಿರ್ಮೂಲನೆ) ಕಾಯ್ದೆ-1970 ರ ಸೆಕ್ಷನ್ 1 ಅನ್ನು ತಿದ್ದುಪಡಿ ಮಾಡಿ, ಅಸ್ತಿತ್ವದಲ್ಲಿರುವ 20 ಗುತ್ತಿಗೆ ಕಾರ್ಮಿಕರನ್ನು ನೇಮಿಸಿಕೊಳ್ಳಲುಇ ಇದ್ದ ಕಡ್ಡಾಯ ಪರವಾನಗಿಯನ್ನು ಮುಂದೆ 50ಕ್ಕೂ ಹೆಚ್ಚು ಕಾರ್ಮಿಕರಿಗೆ ಮಿತಿಯನ್ನು ಹೆಚ್ಚಿಸಲಾಗಿದೆ.

ಕಾರ್ಖಾನೆಗಳ ಕಾಯ್ದೆ-1948 ರ ಸೆಕ್ಷನ್ 2 (ಎಮ್) ಅನ್ನು ಸಹ ತಿದ್ದುಪಡಿ ಮಾಡಲಾಗಿದ್ದು, ಕಾರ್ಖಾನೆಗಳ ತಪಾಸಣೆಯನ್ನು 10 ಕಾರ್ಮಿಕರಿಂದ (ವಿದ್ಯುತ್‌ನೊಂದಿಗೆ) ಮಿತಿಯನ್ನು 20 ಕ್ಕೆ ಹೆಚ್ಚಿಸಲಾಗಿದೆ. 20 ಕಾರ್ಮಿಕರು (ವಿದ್ಯುತ್ ಸಹಾಯವಿಲ್ಲದೆ) ಮಿತಿಯನ್ನು 40 ಕ್ಕೆ ಹೆಚ್ಚಿಸಲಾಗಿದೆ.

ಕಾರ್ಖಾನೆಗಳ ಕಾಯ್ದೆ-1948 ರ ಸೆಕ್ಷನ್ 65 (3) (iv) ಅನ್ನು ಸಹ ತಿದ್ದುಪಡಿ ಮಾಡಲಾಗಿದೆ, ಯಾವುದೇ ತ್ರೈಮಾಸಿಕದಲ್ಲಿ ಅಧಿಕ ಕೆಲಸ ( ಒವರ್ ಟೈಂ ಡ್ಯೂಟಿ) ಒಟ್ಟು ಗಂಟೆಗಳ  75 ಗಂಟೆಗಳಿಂದ 125 ಗಂಟೆಗಳಿಗೆ ಹೆಚ್ಚಿಸಲಾಗಿದೆ.

ಈ ಬದಲಾವಣೆಗಳು ಕಾರ್ಖಾನೆಗಳಿಗೆ ಕಾರ್ಮಿಕರನ್ನು ನಿರ್ದಾಕ್ಷಿಣ್ಯವಾಗಿ ನೇಮಿಸಿಕೊಳ್ಳಲು ಮತ್ತು ಕಿತ್ತೊಗೆಯಲು ಅನುವು ಮಾಡಿಕೊಡುತ್ತದೆ ಎಂದು ಸೆಂಟರ್‌ ಆಫ್‌ ಇಂಡಿಯನ್ ಟ್ರೇಡ್‌ ಯುನಿಯನ್ (ಸಿಐಟಿಯು) ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಹೇಳಿದ್ದಾರೆ.

“ಜುಲೈ 29 ರಂದು ಎಲ್ಲಾ ಕಾರ್ಖಾನೆಗಳ ಮುಂದೆ ಸುಗ್ರೀವಾಜ್ಞೆಯ ಪ್ರತಿಗಳನ್ನು ಸುಡುವಂತೆ ನಾವು ಕರೆ ನೀಡಿದ್ದೇವೆ. ಇದರ ನಂತರ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ನಮ್ಮ ವಿರೋಧವನ್ನು ಪ್ರಕಟಿಸಲು ಆಗಸ್ಟ್ 10 ರಂದು ರಾಜ್ಯವ್ಯಾಪಿ ‘ಸೇವ್ ಇಂಡಿಯಾ’ ಪ್ರತಿಭಟನೆ ನಡೆಯಲಿದೆ. ತರುವಾಯ, ಕಾರ್ಮಿಕರ ಹಕ್ಕುಗಳನ್ನು ಪುನಃಸ್ಥಾಪಿಸಲು ಕಾರ್ಮಿಕ ಚಳವಳಿಯನ್ನು ತೀವ್ರಗೊಳಿಸಲು ಕಾರ್ಮಿಕ ಸಂಘಗಳು ಜಂಟಿಯಾಗಿ ಪ್ರಚಾರ ಮಾಡಲಿವೆ” ಎಂದು ಸುಂದರಂ ಹೇಳಿದ್ದಾರೆ.

ಕರ್ನಾಟಕ ಹೈಕೋರ್ಟ್‌ನಲ್ಲಿ ಈ ಸುಗ್ರೀವಾಜ್ಞೆಯನ್ನು ಟ್ರೇಡ್ ಯೂನಿಯನ್ ಪ್ರಶ್ನಿಸಲಿದೆ ಎಂದು ಅವರು ಹೇಳಿದ್ದಾರೆ.

ದೊಡ್ಡ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳು ಹಾಗೂ ಸಾರ್ವಜನಿಕ ಉದ್ಯಮಗಳ ಸಚಿವ ಜಗದೀಶ್ ಶೆಟ್ಟರ್, ಸಾಂಕ್ರಾಮಿಕ ರೋಗದಿಂದಾಗಿ ವ್ಯಾಪಾರವನ್ನು ಸುಲಭ ಮಾಡಲು ಕಾರ್ಮಿಕ ಕಾನೂನುಗಳಲ್ಲಿ ಕೈಗಾರಿಕೆಗಳ ಪರವಾದ ಬದಲಾವಣೆಗಳು ಅಗತ್ಯ ಎಂದು ಹೇಳಿದ್ದಾರೆ.

ಐಎನ್‌ಟಿಯುಸಿ‌, ಸಿಐಟಿಯು, ಹಿಂದ್ ಮಜ್ದೂರ್ ಸಭಾ ಮತ್ತು ಎಐಯುಟಿಸಿ ಸೇರಿದಂತೆ ರಾಜ್ಯದ ಹತ್ತು ಕಾರ್ಮಿಕ ಸಂಘಗಟನೆಳು ಕಾರ್ಮಿಕ ಸಂಘಗಳ ಜಂಟಿ ಸಮಿತಿ (ಜೆಸಿಟಿಯು)ಯು ಜುಲೈ 24 ರಂದು ಸರ್ಕಾರದ ಸುಗ್ರೀವಾಜ್ಞೆಯನ್ನು ತಿರೋಗಾಮಿ ಹಾಗೂ ಕಾರ್ಮಿಕ ವಿರೋಧಿ ಎಂದು ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಿದೆ.


ಓದಿ: ವಲಸೆ ಕಾರ್ಮಿಕರ ಮತದಾನದ ಹಕ್ಕನ್ನು ಖಾತರಿಗೊಳಿಸಿ: ಚುನಾವಣಾ ಆಯೋಗಕ್ಕೆ ಬಹಿರಂಗ ಪತ್ರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...