Homeಕರ್ನಾಟಕಕಾರ್ಮಿಕ ಕಾನೂನು ತಿದ್ದುಪಡಿಗೆ ವಿರೋಧ: ಸುಗ್ರೀವಾಜ್ಞೆ ಪ್ರತಿ ಸುಟ್ಟು ಪ್ರತಿಭಟನೆಗೆ ನಿರ್ಧಾರ

ಕಾರ್ಮಿಕ ಕಾನೂನು ತಿದ್ದುಪಡಿಗೆ ವಿರೋಧ: ಸುಗ್ರೀವಾಜ್ಞೆ ಪ್ರತಿ ಸುಟ್ಟು ಪ್ರತಿಭಟನೆಗೆ ನಿರ್ಧಾರ

ಈ ತಿದ್ದುಪಡಿಯು ರಾಜ್ಯದ 70% ಕ್ಕೂ ಹೆಚ್ಚು ಕಾರ್ಮಿಕರಿಗೆ ಕಾರ್ಮಿಕ ಕಾನೂನುಗಳಿಂದ ಒದಗಿಸಲಾದ ಸಾಮಾಜಿಕ ಮತ್ತು ಕಾನೂನು ರಕ್ಷಣೆಗಳನ್ನು ಕಿತ್ತುಕೊಳ್ಳಲಿವೆ ಎನ್ನಲಾಗಿದೆ.

- Advertisement -
- Advertisement -

ಕಾರ್ಮಿಕ ಕಾನೂನುಗಳಿಗೆ ಕರ್ನಾಟಕ ಸರ್ಕಾರ ತಂದಿರುವ ಇತ್ತೀಚಿನ ತಿದ್ದುಪಡಿಗಳನ್ನು ವಿರೋಧಿಸಿ ಜುಲೈ 29 ರಂದು ಕಾರ್ಮಿಕರು ಎಲ್ಲಾ ಕೈಗಾರಿಕಾ ಸಂಸ್ಥೆಗಳ ಮುಂದೆ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ.

ಈ ತಿದ್ದುಪಡಿಯು ರಾಜ್ಯದ 70% ಕ್ಕೂ ಹೆಚ್ಚು ಕಾರ್ಮಿಕರಿಗೆ ಕಾರ್ಮಿಕ ಕಾನೂನುಗಳಿಂದ ಸಿಕ್ಕಿರುವ ಸಾಮಾಜಿಕ ಮತ್ತು ಕಾನೂನು ರಕ್ಷಣೆಗಳನ್ನು ಕಿತ್ತುಕೊಳ್ಳಲಿದೆ ಎಂದು ಕಾರ್ಮಿಕ ಸಂಘಟನೆಗಳು ಅಭಿಪ್ರಾಯಪಟ್ಟಿವೆ. ಹಾಗಾಗಿ ಸಾಮೂಹಿಕ ಆಂದೋಲನವನ್ನು ಪ್ರಾರಂಭಿಸಲಿದ್ದು, ಜುಲೈ 29 ರಂದು ಸುಗ್ರೀವಾಜ್ಞೆ ಪ್ರತಿ ಸುಟ್ಟು ಪ್ರತಿಭಟನೆ ನಡೆಸಲು ತೀರ್ಮಾನಿಸಿವೆ.

ಸುಗ್ರೀವಾಜ್ಞೆಯ ಮೂಲಕ ತಂದ ತಿದ್ದುಪಡಿಗಳ ಪ್ರಕಾರ, ಕೈಗಾರಿಕಾ ವಿವಾದ ಕಾಯ್ದೆ 1947 ರ ಸೆಕ್ಷನ್ 25 ಕೆ ಅನ್ನು ತಿದ್ದುಪಡಿ ಮಾಡಲಾಗಿದ್ದು, ಕಾರ್ಖಾನೆ ಮುಚ್ಚಲು ಇದ್ದ ಮಿತಿಯನ್ನು 100 ರಿಂದ 300 ಕಾರ್ಮಿಕರಿಗೆ ಹೆಚ್ಚಿಸಲಾಗಿದೆ.

ಗುತ್ತಿಗೆ ಕಾರ್ಮಿಕ (ಕ್ರಮಬದ್ಧಗೊಳಿಸುವಿಕೆ ಮತ್ತು ನಿರ್ಮೂಲನೆ) ಕಾಯ್ದೆ-1970 ರ ಸೆಕ್ಷನ್ 1 ಅನ್ನು ತಿದ್ದುಪಡಿ ಮಾಡಿ, ಅಸ್ತಿತ್ವದಲ್ಲಿರುವ 20 ಗುತ್ತಿಗೆ ಕಾರ್ಮಿಕರನ್ನು ನೇಮಿಸಿಕೊಳ್ಳಲುಇ ಇದ್ದ ಕಡ್ಡಾಯ ಪರವಾನಗಿಯನ್ನು ಮುಂದೆ 50ಕ್ಕೂ ಹೆಚ್ಚು ಕಾರ್ಮಿಕರಿಗೆ ಮಿತಿಯನ್ನು ಹೆಚ್ಚಿಸಲಾಗಿದೆ.

ಕಾರ್ಖಾನೆಗಳ ಕಾಯ್ದೆ-1948 ರ ಸೆಕ್ಷನ್ 2 (ಎಮ್) ಅನ್ನು ಸಹ ತಿದ್ದುಪಡಿ ಮಾಡಲಾಗಿದ್ದು, ಕಾರ್ಖಾನೆಗಳ ತಪಾಸಣೆಯನ್ನು 10 ಕಾರ್ಮಿಕರಿಂದ (ವಿದ್ಯುತ್‌ನೊಂದಿಗೆ) ಮಿತಿಯನ್ನು 20 ಕ್ಕೆ ಹೆಚ್ಚಿಸಲಾಗಿದೆ. 20 ಕಾರ್ಮಿಕರು (ವಿದ್ಯುತ್ ಸಹಾಯವಿಲ್ಲದೆ) ಮಿತಿಯನ್ನು 40 ಕ್ಕೆ ಹೆಚ್ಚಿಸಲಾಗಿದೆ.

ಕಾರ್ಖಾನೆಗಳ ಕಾಯ್ದೆ-1948 ರ ಸೆಕ್ಷನ್ 65 (3) (iv) ಅನ್ನು ಸಹ ತಿದ್ದುಪಡಿ ಮಾಡಲಾಗಿದೆ, ಯಾವುದೇ ತ್ರೈಮಾಸಿಕದಲ್ಲಿ ಅಧಿಕ ಕೆಲಸ ( ಒವರ್ ಟೈಂ ಡ್ಯೂಟಿ) ಒಟ್ಟು ಗಂಟೆಗಳ  75 ಗಂಟೆಗಳಿಂದ 125 ಗಂಟೆಗಳಿಗೆ ಹೆಚ್ಚಿಸಲಾಗಿದೆ.

ಈ ಬದಲಾವಣೆಗಳು ಕಾರ್ಖಾನೆಗಳಿಗೆ ಕಾರ್ಮಿಕರನ್ನು ನಿರ್ದಾಕ್ಷಿಣ್ಯವಾಗಿ ನೇಮಿಸಿಕೊಳ್ಳಲು ಮತ್ತು ಕಿತ್ತೊಗೆಯಲು ಅನುವು ಮಾಡಿಕೊಡುತ್ತದೆ ಎಂದು ಸೆಂಟರ್‌ ಆಫ್‌ ಇಂಡಿಯನ್ ಟ್ರೇಡ್‌ ಯುನಿಯನ್ (ಸಿಐಟಿಯು) ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಹೇಳಿದ್ದಾರೆ.

“ಜುಲೈ 29 ರಂದು ಎಲ್ಲಾ ಕಾರ್ಖಾನೆಗಳ ಮುಂದೆ ಸುಗ್ರೀವಾಜ್ಞೆಯ ಪ್ರತಿಗಳನ್ನು ಸುಡುವಂತೆ ನಾವು ಕರೆ ನೀಡಿದ್ದೇವೆ. ಇದರ ನಂತರ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ನಮ್ಮ ವಿರೋಧವನ್ನು ಪ್ರಕಟಿಸಲು ಆಗಸ್ಟ್ 10 ರಂದು ರಾಜ್ಯವ್ಯಾಪಿ ‘ಸೇವ್ ಇಂಡಿಯಾ’ ಪ್ರತಿಭಟನೆ ನಡೆಯಲಿದೆ. ತರುವಾಯ, ಕಾರ್ಮಿಕರ ಹಕ್ಕುಗಳನ್ನು ಪುನಃಸ್ಥಾಪಿಸಲು ಕಾರ್ಮಿಕ ಚಳವಳಿಯನ್ನು ತೀವ್ರಗೊಳಿಸಲು ಕಾರ್ಮಿಕ ಸಂಘಗಳು ಜಂಟಿಯಾಗಿ ಪ್ರಚಾರ ಮಾಡಲಿವೆ” ಎಂದು ಸುಂದರಂ ಹೇಳಿದ್ದಾರೆ.

ಕರ್ನಾಟಕ ಹೈಕೋರ್ಟ್‌ನಲ್ಲಿ ಈ ಸುಗ್ರೀವಾಜ್ಞೆಯನ್ನು ಟ್ರೇಡ್ ಯೂನಿಯನ್ ಪ್ರಶ್ನಿಸಲಿದೆ ಎಂದು ಅವರು ಹೇಳಿದ್ದಾರೆ.

ದೊಡ್ಡ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳು ಹಾಗೂ ಸಾರ್ವಜನಿಕ ಉದ್ಯಮಗಳ ಸಚಿವ ಜಗದೀಶ್ ಶೆಟ್ಟರ್, ಸಾಂಕ್ರಾಮಿಕ ರೋಗದಿಂದಾಗಿ ವ್ಯಾಪಾರವನ್ನು ಸುಲಭ ಮಾಡಲು ಕಾರ್ಮಿಕ ಕಾನೂನುಗಳಲ್ಲಿ ಕೈಗಾರಿಕೆಗಳ ಪರವಾದ ಬದಲಾವಣೆಗಳು ಅಗತ್ಯ ಎಂದು ಹೇಳಿದ್ದಾರೆ.

ಐಎನ್‌ಟಿಯುಸಿ‌, ಸಿಐಟಿಯು, ಹಿಂದ್ ಮಜ್ದೂರ್ ಸಭಾ ಮತ್ತು ಎಐಯುಟಿಸಿ ಸೇರಿದಂತೆ ರಾಜ್ಯದ ಹತ್ತು ಕಾರ್ಮಿಕ ಸಂಘಗಟನೆಳು ಕಾರ್ಮಿಕ ಸಂಘಗಳ ಜಂಟಿ ಸಮಿತಿ (ಜೆಸಿಟಿಯು)ಯು ಜುಲೈ 24 ರಂದು ಸರ್ಕಾರದ ಸುಗ್ರೀವಾಜ್ಞೆಯನ್ನು ತಿರೋಗಾಮಿ ಹಾಗೂ ಕಾರ್ಮಿಕ ವಿರೋಧಿ ಎಂದು ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಿದೆ.


ಓದಿ: ವಲಸೆ ಕಾರ್ಮಿಕರ ಮತದಾನದ ಹಕ್ಕನ್ನು ಖಾತರಿಗೊಳಿಸಿ: ಚುನಾವಣಾ ಆಯೋಗಕ್ಕೆ ಬಹಿರಂಗ ಪತ್ರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...