Homeಮುಖಪುಟಸಂಸದರ ಸಾಮೂಹಿಕ ಅಮಾನತು ಪ್ರಜಾಪ್ರಭುತ್ವದ ಮೂಲ ತತ್ವಗಳಿಗೆ ಹಾನಿಕಾರಕ; ಧನ್ಖರ್‌ಗೆ ಪತ್ರ ಬರೆದ ಖರ್ಗೆ

ಸಂಸದರ ಸಾಮೂಹಿಕ ಅಮಾನತು ಪ್ರಜಾಪ್ರಭುತ್ವದ ಮೂಲ ತತ್ವಗಳಿಗೆ ಹಾನಿಕಾರಕ; ಧನ್ಖರ್‌ಗೆ ಪತ್ರ ಬರೆದ ಖರ್ಗೆ

- Advertisement -
- Advertisement -

ಲೋಕಸಭೆ ಭದ್ರತೆ ಲೋಪದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರ ನೀಡುವಂತೆ ಪ್ರತಿಪಕ್ಷಗಳು ನಡೆಸಿದ ಗದ್ದಲ ಕಾರಣಕ್ಕೆ, ರಾಜ್ಯಸಭೆಯಿಂದ ಸದಸ್ಯರನ್ನು ಸಾಮೂಹಿಕವಾಗಿ ಅಮಾನತುಗೊಳಿಸಿದ ವಿಷಯದ ಕುರಿತು ಚರ್ಚಿಸಲು ರಾಜ್ಯಸಭೆ ಸಭಾಪತಿ ಜಗದೀಪ್ ಧನ್ಖರ್ ಅವರು ಇಂದು (ಡಿಸೆಂಬರ್ 25) ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ತಮ್ಮ ನಿವಾಸಕ್ಕೆ ಆಹ್ವಾನಿಸಿದ್ದಾರೆ.

‘ಭೇಟಿ ಮಾಡಲು ಸಾಧ್ಯವಾಗುವುದಿಲ್ಲ’ ಎಂದು ಪತ್ರ ಬರೆದಿರುವ ಖರ್ಗೆ, ಭೇಟಿಯಾಗದಿರಲು ಕಾರಣ ವಿವರಿಸಿ ಪತ್ರ ಬರೆದಿದ್ದಾರೆ. ಸದ್ಯ ದೆಹಲಿಯಿಂದ ಹೊರಗಿರುವ ಕಾರಣ ಇಂದು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ, ದೆಹಲಿಗೆ ಮರಳಿದ ತಕ್ಷಣ ಭೇಟಿ ಮಾಡುವುದಾಗಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಲೋಕಸಭೆ ಭದ್ರತೆ ಉಲ್ಲಂಘನೆಯ ಗದ್ದಲದಲ್ಲೆ ಸಂಸತ್ತಿನ ಚಳಿಗಾಲದ ಅಧಿವೇಶನ ಮುಗಿದ ಒಂದು ದಿನದ ನಂತರ, ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭಾ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರು ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ಅವರಿಗೆ ಪತ್ರ ಬರೆದು, ‘ಇಷ್ಟು ದೊಡ್ಡ ಪ್ರಮಾಣದಲ್ಲಿ ಸಂಸದರನ್ನು ಅಮಾನತುಗೊಳಿಸಿರುವುದು ನಮ್ಮ ಸಂಸದೀಯ ಪ್ರಜಾಪ್ರಭುತ್ವದ ಮೂಲ ತತ್ವಗಳಿಗೆ ಹಾನಿಕಾರಕ. ರಚನಾತ್ಮಕವಾಗಿ ಸಮಸ್ಯೆಗಳನ್ನು ಪರಿಹರಿಸಲು ಉಪಾಧ್ಯಕ್ಷರನ್ನು ಭೇಟಿ ಮಾಡಲು ಸಿದ್ಧ’ ಎಂದು ಹೇಳಿದ್ದಾರೆ.

‘ಸಂಸತ್ತಿನ ಭದ್ರತೆಯ ಉಲ್ಲಂಘನೆಯ ತುರ್ತು ಸಮಸ್ಯೆಯನ್ನು ಪರಿಹರಿಸಲು ರಾಜ್ಯಸಭೆ ನಿಯಮಗಳು ಮತ್ತು ಕಾರ್ಯವಿಧಾನದ ಸಂಬಂಧಿತ ನಿಯಮಗಳ ಅಡಿಯಲ್ಲಿ ಅನೇಕ ಸೂಚನೆಗಳನ್ನು ಸಲ್ಲಿಸಲಾಗಿದೆ ಎಂದು ನಾನು ನಿಮ್ಮ ಗಮನಕ್ಕೆ ತರಲು ಬಯಸುತ್ತೇನೆ. ಮುಕ್ತ ಚರ್ಚೆ ಮತ್ತು ಸಂವಾದಕ್ಕೆ ನನ್ನ ಬದ್ಧತೆಯನ್ನು ಪುನರುಚ್ಚರಿಸಲು ನಾನು ಬಯಸುತ್ತೇನೆ. ಇವುಗಳನ್ನು ಪರಿಹರಿಸಲು ಮುಂದಿನ ದಿನಗಳಲ್ಲಿ ಪರಸ್ಪರ ಅನುಕೂಲಕರ ದಿನಾಂಕ ಮತ್ತು ಸಮಯದಲ್ಲಿ ನಿಮ್ಮೊಂದಿಗೆ ಸಭೆ ನಡೆಸಲು ನಾನು ಸಿದ್ಧನಿದ್ದೇನೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

‘ಅಧ್ಯಕ್ಷರು ಸದನದ ಪಾಲಕರಾಗಿದ್ದು, ನೀವು ಸದನದ ಘನತೆಯನ್ನು ಎತ್ತಿಹಿಡಿಯಲು, ಸಂಸದೀಯ ಸವಲತ್ತುಗಳನ್ನು ರಕ್ಷಿಸಲು, ಚರ್ಚೆಗಳು ಮತ್ತು ಉತ್ತರಗಳ ಮೂಲಕ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡುವ ಜನರ ಹಕ್ಕನ್ನು ರಕ್ಷಿಸಲು ಮುಂಚೂಣಿಯಲ್ಲಿರಬೇಕು. ಚರ್ಚೆಯಿಲ್ಲದೆ ಮತ್ತು ಸರ್ಕಾರದಿಂದ ಉತ್ತರದಾಯಿತ್ವವನ್ನು ಕೇಳದೆ ಪೀಠಾಧಿಪತಿಗಳು ವಿಧೇಯಕಗಳನ್ನು ಅಂಗೀಕರಿಸಲು ನಿರ್ಣಯಿಸಿದಾಗ ಅದು ಸಂಕಟವನ್ನುಂಟುಮಾಡುತ್ತದೆ’ ಎಂದು ಹೇಳಿದ್ದಾರೆ.

ಸದಸ್ಯರ ಅಮಾನತು ನಿರ್ಧಾರದ ಮೂಲಕ 146 ಸಂಸದರ ಧ್ವನಿಯನ್ನು ಸರ್ಕಾರ ಅಡಗಿಸುತ್ತಿದೆ. ಡಿಸೆಂಬರ್ 14 ರಂದು ನಡೆದ ಭದ್ರತಾ ಲೋಪ ಘಟನೆ ಬಗ್ಗೆ ಸಂಸದರ ಅಮಾನತುಗೊಳಿಸುವುದಕ್ಕೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಪ್ರತಿಕ್ರಿಯೆ ಕೇಳಲಾಗಿತ್ತು. ಆದರೆ, ಸದನದಲ್ಲಿ ಸಚಿವರು ಹೇಳಿಕೆಯನ್ನು ನೀಡಲಿಲ್ಲ. ಬದಲಿಗೆ ಅವರು ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದರು. ಅವರು ಪ್ರಜಾಪ್ರಭುತ್ವ ಮಂದಿರವನ್ನು ಅಪಹಾಸ್ಯ ಮಾಡಿರುವುದು ವಿಷಾದನೀಯವಾದದ್ದು’ ಎಂದು ಹೇಳಿದ್ದಾರೆ.

‘ರಾಜ್ಯಸಭೆಗೆ ಗೃಹ ಸಚಿವರು ಹಾಜರಾಗುವುದಕ್ಕೂ ಮುನ್ನ ಹೆಚ್ಚಿನ ಸಂಖ್ಯೆಯ ವಿಪಕ್ಷದ ಸಂಸದರನ್ನು ಅಮಾನತುಗೊಳಿಸಲಾಗುವುದು ಎಂದು ಕೇಂದ್ರ ಸಚಿವರೊಬ್ಬರು ವಿರೋಧ ಪಕ್ಷದ ನಾಯಕರಿಗೆ ಮೊದಲೆ ತಿಳಿಸಿದ್ದರು. ಇಂತಹ ಬೆದರಿಕೆಗಳ ಕುರಿತು ಸಭಾಧ್ಯಕ್ಷಕರು ಪರಿಶೀಲಿಸಬೇಕೆಂದು ನಾವು ಬಯಸುತ್ತೇವೆ’ ಎಂದು ಮನವಿ ಮಾಡಿದ್ದಾರೆ.

‘ದೇಶದ ಗಡಿಯಲ್ಲಿ ಚೀನಾ ಅತಿಕ್ರಮಣ, ಮಣಿಪುರದಲ್ಲಿ ಅಶಾಂತಿ ಸೇರಿದಂತೆ ಹಲವು ಗಂಭೀರ ವಿಚಾರಗಳ ಕುರಿತ ಚರ್ಚೆಯಿಂದ ಸರ್ಕಾರ ನುಣುಚಿಕೊಂಡಿರುವುದನ್ನು ಸಭಾಧ್ಯಕ್ಷರು ಗಮನಿಸಬೇಕು. ನೀವು ಸದನದ ಕಾವಲುಗಾರರಾಗಿದ್ದು, ಸದನದ ಘನತೆ ಕಾಪಾಡಬೇಕು, ಸಂಸದೀಯ ಸವಲತ್ತುಗಳನ್ನು ಕಾಪಾಡಬೇಕು. ಸಂಸತ್ತಿನಲ್ಲಿ ಕಲಾಪ, ಚರ್ಚೆ ಮತ್ತು ಉತ್ತರದ ಮೂಲಕ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡುವ ಹಕ್ಕು ಜನರಿಗಿದೆ’ ಎಂದು ಖರ್ಗೆ ಪ್ರತಿಪಾದಿಸಿದ್ದಾರೆ.

ಸಂಸತ್ತಿನ ಘನತೆ ರಕ್ಷಿಸುವಲ್ಲಿ ತಾವು ಮುಂಚೂಣಿಯಲ್ಲಿರಬೇಕು. ಆದರೆ, ಚರ್ಚೆಯಿಲ್ಲದೆ ಮಸೂದೆಗಳನ್ನು ಅಂಗೀಕರಿಸಿದ್ದಕ್ಕಾಗಿ ಮತ್ತು ಸರ್ಕಾರದಿಂದ ಉತ್ತರದಾಯಿತ್ವವನ್ನು ಕೇಳದಿದ್ದಕ್ಕಾಗಿ ಸಭಾಧ್ಯಕ್ಷ ಮೇಲೆ ಅಸಮಾಧಾನವಿದೆ. ಸದನದಲ್ಲಿ ಕಲಾಪ ಮುಂದುವರೆಯಬೇಕೆಂಬ ಸಭಾಧ್ಯಕ್ಷ ಮಾತನ್ನು ನಾನು ಒಪ್ಪುತ್ತೇನೆ. ಆದರೆ, ಸದನದಲ್ಲಿ ಚರ್ಚೆ ನಡೆಸಲು ಸರ್ಕಾರ ಉತ್ಸುಕವಾಗಿರದಿದ್ದರೆ, ಚರ್ಚೆಗಳಿಗೆ ಉತ್ತರ ಸಿಗುವುದಿಲ್ಲ ಎಂದು’ ಕಾಂಗ್ರೆಸ್ ಅಧ್ಯಕ್ಷರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; INDIA ಮೈತ್ರಿಕೂಟಕ್ಕೆ BSP? ಒಕ್ಕೂಟ ತ್ಯಜಿಸುವ ಬೆದರಿಕೆ ಹಾಕಿದ ಅಖಿಲೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...