Homeಮುಖಪುಟಸಂಸದರ ಸಾಮೂಹಿಕ ಅಮಾನತು ಪ್ರಜಾಪ್ರಭುತ್ವದ ಮೂಲ ತತ್ವಗಳಿಗೆ ಹಾನಿಕಾರಕ; ಧನ್ಖರ್‌ಗೆ ಪತ್ರ ಬರೆದ ಖರ್ಗೆ

ಸಂಸದರ ಸಾಮೂಹಿಕ ಅಮಾನತು ಪ್ರಜಾಪ್ರಭುತ್ವದ ಮೂಲ ತತ್ವಗಳಿಗೆ ಹಾನಿಕಾರಕ; ಧನ್ಖರ್‌ಗೆ ಪತ್ರ ಬರೆದ ಖರ್ಗೆ

- Advertisement -
- Advertisement -

ಲೋಕಸಭೆ ಭದ್ರತೆ ಲೋಪದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರ ನೀಡುವಂತೆ ಪ್ರತಿಪಕ್ಷಗಳು ನಡೆಸಿದ ಗದ್ದಲ ಕಾರಣಕ್ಕೆ, ರಾಜ್ಯಸಭೆಯಿಂದ ಸದಸ್ಯರನ್ನು ಸಾಮೂಹಿಕವಾಗಿ ಅಮಾನತುಗೊಳಿಸಿದ ವಿಷಯದ ಕುರಿತು ಚರ್ಚಿಸಲು ರಾಜ್ಯಸಭೆ ಸಭಾಪತಿ ಜಗದೀಪ್ ಧನ್ಖರ್ ಅವರು ಇಂದು (ಡಿಸೆಂಬರ್ 25) ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ತಮ್ಮ ನಿವಾಸಕ್ಕೆ ಆಹ್ವಾನಿಸಿದ್ದಾರೆ.

‘ಭೇಟಿ ಮಾಡಲು ಸಾಧ್ಯವಾಗುವುದಿಲ್ಲ’ ಎಂದು ಪತ್ರ ಬರೆದಿರುವ ಖರ್ಗೆ, ಭೇಟಿಯಾಗದಿರಲು ಕಾರಣ ವಿವರಿಸಿ ಪತ್ರ ಬರೆದಿದ್ದಾರೆ. ಸದ್ಯ ದೆಹಲಿಯಿಂದ ಹೊರಗಿರುವ ಕಾರಣ ಇಂದು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ, ದೆಹಲಿಗೆ ಮರಳಿದ ತಕ್ಷಣ ಭೇಟಿ ಮಾಡುವುದಾಗಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಲೋಕಸಭೆ ಭದ್ರತೆ ಉಲ್ಲಂಘನೆಯ ಗದ್ದಲದಲ್ಲೆ ಸಂಸತ್ತಿನ ಚಳಿಗಾಲದ ಅಧಿವೇಶನ ಮುಗಿದ ಒಂದು ದಿನದ ನಂತರ, ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭಾ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರು ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ಅವರಿಗೆ ಪತ್ರ ಬರೆದು, ‘ಇಷ್ಟು ದೊಡ್ಡ ಪ್ರಮಾಣದಲ್ಲಿ ಸಂಸದರನ್ನು ಅಮಾನತುಗೊಳಿಸಿರುವುದು ನಮ್ಮ ಸಂಸದೀಯ ಪ್ರಜಾಪ್ರಭುತ್ವದ ಮೂಲ ತತ್ವಗಳಿಗೆ ಹಾನಿಕಾರಕ. ರಚನಾತ್ಮಕವಾಗಿ ಸಮಸ್ಯೆಗಳನ್ನು ಪರಿಹರಿಸಲು ಉಪಾಧ್ಯಕ್ಷರನ್ನು ಭೇಟಿ ಮಾಡಲು ಸಿದ್ಧ’ ಎಂದು ಹೇಳಿದ್ದಾರೆ.

‘ಸಂಸತ್ತಿನ ಭದ್ರತೆಯ ಉಲ್ಲಂಘನೆಯ ತುರ್ತು ಸಮಸ್ಯೆಯನ್ನು ಪರಿಹರಿಸಲು ರಾಜ್ಯಸಭೆ ನಿಯಮಗಳು ಮತ್ತು ಕಾರ್ಯವಿಧಾನದ ಸಂಬಂಧಿತ ನಿಯಮಗಳ ಅಡಿಯಲ್ಲಿ ಅನೇಕ ಸೂಚನೆಗಳನ್ನು ಸಲ್ಲಿಸಲಾಗಿದೆ ಎಂದು ನಾನು ನಿಮ್ಮ ಗಮನಕ್ಕೆ ತರಲು ಬಯಸುತ್ತೇನೆ. ಮುಕ್ತ ಚರ್ಚೆ ಮತ್ತು ಸಂವಾದಕ್ಕೆ ನನ್ನ ಬದ್ಧತೆಯನ್ನು ಪುನರುಚ್ಚರಿಸಲು ನಾನು ಬಯಸುತ್ತೇನೆ. ಇವುಗಳನ್ನು ಪರಿಹರಿಸಲು ಮುಂದಿನ ದಿನಗಳಲ್ಲಿ ಪರಸ್ಪರ ಅನುಕೂಲಕರ ದಿನಾಂಕ ಮತ್ತು ಸಮಯದಲ್ಲಿ ನಿಮ್ಮೊಂದಿಗೆ ಸಭೆ ನಡೆಸಲು ನಾನು ಸಿದ್ಧನಿದ್ದೇನೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

‘ಅಧ್ಯಕ್ಷರು ಸದನದ ಪಾಲಕರಾಗಿದ್ದು, ನೀವು ಸದನದ ಘನತೆಯನ್ನು ಎತ್ತಿಹಿಡಿಯಲು, ಸಂಸದೀಯ ಸವಲತ್ತುಗಳನ್ನು ರಕ್ಷಿಸಲು, ಚರ್ಚೆಗಳು ಮತ್ತು ಉತ್ತರಗಳ ಮೂಲಕ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡುವ ಜನರ ಹಕ್ಕನ್ನು ರಕ್ಷಿಸಲು ಮುಂಚೂಣಿಯಲ್ಲಿರಬೇಕು. ಚರ್ಚೆಯಿಲ್ಲದೆ ಮತ್ತು ಸರ್ಕಾರದಿಂದ ಉತ್ತರದಾಯಿತ್ವವನ್ನು ಕೇಳದೆ ಪೀಠಾಧಿಪತಿಗಳು ವಿಧೇಯಕಗಳನ್ನು ಅಂಗೀಕರಿಸಲು ನಿರ್ಣಯಿಸಿದಾಗ ಅದು ಸಂಕಟವನ್ನುಂಟುಮಾಡುತ್ತದೆ’ ಎಂದು ಹೇಳಿದ್ದಾರೆ.

ಸದಸ್ಯರ ಅಮಾನತು ನಿರ್ಧಾರದ ಮೂಲಕ 146 ಸಂಸದರ ಧ್ವನಿಯನ್ನು ಸರ್ಕಾರ ಅಡಗಿಸುತ್ತಿದೆ. ಡಿಸೆಂಬರ್ 14 ರಂದು ನಡೆದ ಭದ್ರತಾ ಲೋಪ ಘಟನೆ ಬಗ್ಗೆ ಸಂಸದರ ಅಮಾನತುಗೊಳಿಸುವುದಕ್ಕೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಪ್ರತಿಕ್ರಿಯೆ ಕೇಳಲಾಗಿತ್ತು. ಆದರೆ, ಸದನದಲ್ಲಿ ಸಚಿವರು ಹೇಳಿಕೆಯನ್ನು ನೀಡಲಿಲ್ಲ. ಬದಲಿಗೆ ಅವರು ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದರು. ಅವರು ಪ್ರಜಾಪ್ರಭುತ್ವ ಮಂದಿರವನ್ನು ಅಪಹಾಸ್ಯ ಮಾಡಿರುವುದು ವಿಷಾದನೀಯವಾದದ್ದು’ ಎಂದು ಹೇಳಿದ್ದಾರೆ.

‘ರಾಜ್ಯಸಭೆಗೆ ಗೃಹ ಸಚಿವರು ಹಾಜರಾಗುವುದಕ್ಕೂ ಮುನ್ನ ಹೆಚ್ಚಿನ ಸಂಖ್ಯೆಯ ವಿಪಕ್ಷದ ಸಂಸದರನ್ನು ಅಮಾನತುಗೊಳಿಸಲಾಗುವುದು ಎಂದು ಕೇಂದ್ರ ಸಚಿವರೊಬ್ಬರು ವಿರೋಧ ಪಕ್ಷದ ನಾಯಕರಿಗೆ ಮೊದಲೆ ತಿಳಿಸಿದ್ದರು. ಇಂತಹ ಬೆದರಿಕೆಗಳ ಕುರಿತು ಸಭಾಧ್ಯಕ್ಷಕರು ಪರಿಶೀಲಿಸಬೇಕೆಂದು ನಾವು ಬಯಸುತ್ತೇವೆ’ ಎಂದು ಮನವಿ ಮಾಡಿದ್ದಾರೆ.

‘ದೇಶದ ಗಡಿಯಲ್ಲಿ ಚೀನಾ ಅತಿಕ್ರಮಣ, ಮಣಿಪುರದಲ್ಲಿ ಅಶಾಂತಿ ಸೇರಿದಂತೆ ಹಲವು ಗಂಭೀರ ವಿಚಾರಗಳ ಕುರಿತ ಚರ್ಚೆಯಿಂದ ಸರ್ಕಾರ ನುಣುಚಿಕೊಂಡಿರುವುದನ್ನು ಸಭಾಧ್ಯಕ್ಷರು ಗಮನಿಸಬೇಕು. ನೀವು ಸದನದ ಕಾವಲುಗಾರರಾಗಿದ್ದು, ಸದನದ ಘನತೆ ಕಾಪಾಡಬೇಕು, ಸಂಸದೀಯ ಸವಲತ್ತುಗಳನ್ನು ಕಾಪಾಡಬೇಕು. ಸಂಸತ್ತಿನಲ್ಲಿ ಕಲಾಪ, ಚರ್ಚೆ ಮತ್ತು ಉತ್ತರದ ಮೂಲಕ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡುವ ಹಕ್ಕು ಜನರಿಗಿದೆ’ ಎಂದು ಖರ್ಗೆ ಪ್ರತಿಪಾದಿಸಿದ್ದಾರೆ.

ಸಂಸತ್ತಿನ ಘನತೆ ರಕ್ಷಿಸುವಲ್ಲಿ ತಾವು ಮುಂಚೂಣಿಯಲ್ಲಿರಬೇಕು. ಆದರೆ, ಚರ್ಚೆಯಿಲ್ಲದೆ ಮಸೂದೆಗಳನ್ನು ಅಂಗೀಕರಿಸಿದ್ದಕ್ಕಾಗಿ ಮತ್ತು ಸರ್ಕಾರದಿಂದ ಉತ್ತರದಾಯಿತ್ವವನ್ನು ಕೇಳದಿದ್ದಕ್ಕಾಗಿ ಸಭಾಧ್ಯಕ್ಷ ಮೇಲೆ ಅಸಮಾಧಾನವಿದೆ. ಸದನದಲ್ಲಿ ಕಲಾಪ ಮುಂದುವರೆಯಬೇಕೆಂಬ ಸಭಾಧ್ಯಕ್ಷ ಮಾತನ್ನು ನಾನು ಒಪ್ಪುತ್ತೇನೆ. ಆದರೆ, ಸದನದಲ್ಲಿ ಚರ್ಚೆ ನಡೆಸಲು ಸರ್ಕಾರ ಉತ್ಸುಕವಾಗಿರದಿದ್ದರೆ, ಚರ್ಚೆಗಳಿಗೆ ಉತ್ತರ ಸಿಗುವುದಿಲ್ಲ ಎಂದು’ ಕಾಂಗ್ರೆಸ್ ಅಧ್ಯಕ್ಷರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; INDIA ಮೈತ್ರಿಕೂಟಕ್ಕೆ BSP? ಒಕ್ಕೂಟ ತ್ಯಜಿಸುವ ಬೆದರಿಕೆ ಹಾಕಿದ ಅಖಿಲೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...